Showing posts with label Mumbai. Show all posts
Showing posts with label Mumbai. Show all posts

Sunday, September 18, 2016

ಆಫ್ ಕಿ ಅದಾಲತ್'



ಮುಂಬೈನಲ್ಲಿ ಭಯೋತ್ಪಾದಕರು ದಾಳಿ ನಡೆಸಿದಾಗ 'ಇಂಡಿಯಾ ಟಿವಿ' ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಜತೆ ನಡೆಸಿದ್ದ ' ಆಫ್ ಕಿ.ಅದಾಲತ್'
ಪ್ರಶ್ನೆ:.೨೬/೧೧ ನಡೆದ ಕಾಲದಲ್ಲಿ ನೀವಿದ್ದರೆ ಏನು ಮಾಡ್ತಿದ್ದೀರಿ?
ಮೋದಿ: ನಾನು ಗುಜರಾತ್ ನಲ್ಲಿ ಏನು ಮಾಡಿದ್ದೇನೋ ಅದನ್ನೇ ಮಾಡ್ತಿದ್ದೆ. ನಾನು ವಿಳಂಬ ಮಾಡ್ತಿರಲಿಲ್ಲ.
- ನಾನು ಈಗಲೂ ಹೇಳ್ತಿದ್ದೇನೆ, ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡ್ಬೇಕು. ಲವ್ ಲೆಟರ್ ಬರೆಯೊದನ್ನು ನಿಲ್ಲಿಸ್ಬೇಕು.
- ಪಾಕಿಸ್ತಾನ ನಮ್ಮ ಮೇಲೆ ದಾಳಿ ನಡೆಸಿ ಓಡಿಹೋಗುತ್ತೆ. ಪ್ರಣಬ್ ಮುಖರ್ಜಿ ಅಮೆರಿಕಾಕ್ಕೆ ಹೋಗಿ ' ಒಬಾಮ, ಒಬಾಮ' ಎಂದು ಅಳುತ್ತಾರೆ.
- ಹೋಗುವುದಿದ್ದರೆ ಪಾಕಿಸ್ತಾನಕ್ಕೆ ಹೋಗಿ ಅಮೆರಿಕಾಕ್ಕೆ ಯಾಕೆ ಹೋಗ್ತೀರಿ?
- ಅಮೆರಿಕಾಕ್ಕೆ ಪತ್ರ ಬರೆಯುವುದಂತೆ, ಅವರು ಪ್ರಶ್ನೆ ಕೇಳುವುದಂತೆ, ನಾವು ಉತ್ತರಕೊಡುವುದಂತೆ. ನಿಲ್ಲಿಸಿ, ಇದನ್ನೆಲ್ಲ...
https://www.facebook.com/dinesh.amin.353/videos/10206056012674464/

Wednesday, September 14, 2016

ಸಾಮಾಜಿಕ ಸುಧಾರಣೆಯ ಹರಿಕಾರ ನಾರಾಯಣ ಗುರು

ಪ್ರಸಕ್ತ ವರ್ಷದಿಂದ ನಾರಾಯಣ ಗುರು ಜಯಂತಿಯನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಅಚರಿಸಲು ನಿರ್ಧರಿಸಿದೆ. ಈ ಕಾರಣದಿಂದಾಗಿ ರಾಜ್ಯದ ಹಲವು ಭಾಗಗಳಿಂದ ಸ್ನೇಹಿತರು ನಾರಾಯಣ ಗುರುಗಳ ಬಗ್ಗೆ ನನ್ನಿಂದ ಮಾಹಿತಿ ಕೇಳುತ್ತಿದ್ದಾರೆ. ನಿಜವಾದ ನಾರಾಯಣ ಗುರುಗಳನ್ನು ಪರಿಚಯಿಸುವ ಪುಸ್ತಕಗಳು ಮಲೆಯಾಳಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನೂರಾರು ಸಂಖ್ಯೆಯಲ್ಲಿ ಬಂದಿವೆ. ಆದರೆ ಕನ್ನಡದಲ್ಲಿ ಅಂತಹ ಪುಸ್ತಕಗಳಿಲ್ಲ. ಅಂತಹದ್ದೊಂದು ಪುಸ್ತಕ ಬರೆಯಬೇಕೆಂಬ ನನ್ನ ಬಹುದಿನಗಳ ಕನಸು ನನಸಾಗಿಲ್ಲ. ಈ ಹಿನ್ನೆಲೆಯಲ್ಲಿ 2000ನೇ ವರ್ಷದಲ್ಲಿ ಮುಂಬೈನ ವಿಚಾರಸಂಕಿರಣದಲ್ಲಿ ಮಾಡಿದ ಭಾಷಣವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ. ಇದು ನಾರಾಯಣ ಗುರುಗಳನ್ನು ವೈಭವಿಕರಿಸದೆ ಅವರು ನಡೆಸಿದ್ದ ಧಾರ್ಮಿಕ,ಸಾಮಾಜಿಕ ಮತ್ತು ಶೈಕ್ಷಣಿಕ ಚಳುವಳಿಯ ಸ್ಥೂಲಚಿತ್ರವನ್ನು ನೀಡಿದೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ಇದನ್ನು ಓದಿ ಮತ್ತೆ ಶೇರ್ ಮಾಡಿ.
--------------------------------------------------------------------------------------------------------------
19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು. ಇವು ಮಹಿಳೆಯರು ಮತ್ತು ಶೋಷಿತರಿಗಾಗುತ್ತಿರುವ ಅನ್ಯಾಯದ ವಿರುದ್ದ ದನಿ ಎತ್ತಿದವು.ಸತಿಪದ್ದತಿ, ವಿಧವಾ ವಿವಾಹ, ವರದಕ್ಷಿಣಿ, ಮೊದಲಾದ ಬಹುಮಟ್ಟಿಗೆ ಮೇಲ್ಜಾತಿ ಸಮಾಜದಲ್ಲಿನ ಅದರಲ್ಲಿ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಸಾಮಾಜಿಕ ಅನಿಷ್ಟಗಳ ನಿವಾರಣೆ, ಈ ಚಳವಳಿಗಳ ಮುಖ್ಯ ಉದ್ದೇಶವಾಗಿತ್ತು. ಆರ್ಯ ಸಮಾಜ ಪ್ರಾರಂಭಿಸಿದ್ದ 'ಶುದ್ಧಿ ಚಳವಳಿ' ಯನ್ನು ಗಮಿಸಿದರೆ, ಕೆಳವರ್ಗದ ಜನ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವದನ್ನು ತಪ್ಪಿಸುವುದು ಕೂಡ ಈ ಚಳವಳಿಗಳ ಮುಖ್ಯ ಉದ್ದೇಶವಾಗಿತ್ತೋ ಏನೋ ಎಂಬ ಅನುಮಾನ ಕೂಡಾ ಮೂಡುತ್ತದೆ. ಈ ಚಳವಳಿಗಳು ಕೈಗೆತ್ತಿಕೊಂಡ ಬಹಳಷ್ಟು ಸಮಸ್ಯೆಗಳು ತಳಸಮುದಾಯದ ಜ್ವಲಂತ ಸಮಸ್ಯೆಯಾಗಿರಲಿಲ್ಲ.
ಅದೇ ಕಾಲಕ್ಕೆ ಕೆಳವರ್ಗದಿಂದಲೇ ಮೂಡಿ ಬಂದ ನಾಯಕರು, ವರ್ಣಾಶ್ರಮ ವ್ಯವಸ್ಥೆಯನ್ನು ಪ್ರಶ್ನಿಸುವ ಚಳವಳಿಗಳ ನೇತೃತ್ವ ವಹಿಸಿದ್ದರು. ಒರಿಸ್ಸಾದಲ್ಲಿ ಮಹಿಮಾ ಸ್ವಾಮಿ ಎಂಬುವವರ ನೇತೃತ್ವದಲ್ಲಿ ಆದಿವಾಸಿಗಳು ತಮಗೆ ಪ್ರವೇಶವಿಲ್ಲವೆಂಬ ಕಾರಣಕ್ಕೆ ಪುರಿಯ ಜಗನ್ನಾಥ ದೇವಾಲಯವನ್ನು ಸುಡಲು ಪ್ರಯತ್ನಿಸಿದ್ದರು.
ಕೊನೆಗೆ ಮಹಿಮಾ ಸ್ವಾಮಿ 1850ರಲ್ಲಿ ಮಹಿಮಾ ಧರ್ಮ ಎಂಬ ಹೊಸಧರ್ಮವನ್ನೇ ಬೋಧಿಸಿದ. ಅದೇ ಕಾಲಕ್ಕೆ ಮಧ್ಯಪ್ರದೇಶದ ಛತ್ತೀಸಘಡದ ಅಸ್ಪೃಶ್ಯರ ಒಂದು ಪಂಗಡವಾಗಿದ್ದ ಚಮ್ಮಾರರಲ್ಲಿ ಸತ್ನಮ್ ಪಂಥ ಹುಟ್ಟಿಕೊಂಡಿತ್ತು. ಅವರು ಪ್ರತಿಭಟನೆಯ ಅಂಗವಾಗಿ ತಾವೇ ಜನಿವಾರ ಹಾಕಿಕೊಳ್ಳತೊಡಗಿದ್ದರು.
1873ರಲ್ಲಿ ಪುಲೆ, ಸತ್ಯಶೋಧಕ ಸಮಾಜದ ಮೂಲಕ ಜಾತಿನಾಶ, ಮಹಿಳಾ ವಿಮೋಚನೆಯ ಕಾರ್ಯ ಪ್ರಾರಂಭಿಸಿದ್ದರು. ಕೋಲ್ಲಾಪುರದ ಸಾಹು ಮಹಾರಾಜರು, ನ್ಯಾಯಾಲಯಗಳಲ್ಲಿನ ಹುದ್ದೆಗಳಲ್ಲಿ ಶೇ.50ರಷ್ಟನ್ನು ಬ್ರಾಹ್ಮಣೇತರರಿಗೆ ಮೀಸಲಿಟ್ಟಿದ್ದರು. ತಮಿಳು ನಾಡಿನಲ್ಲಿ ಪೆರಿಯಾರ್ ಅವರ ಸ್ವಾಭಿಮಾನ ಚಳವಳಿಗೆ ರಂಗ ಸಜ್ಜಾಗತೊಡಗಿತ್ತು. ಸತ್ಯಶೋಧಕ ಸಮಾಜ, ಮಹಿಮಾ ಧರ್ಮ, ಸತ್ನಾಂ ಪಂಥ, ಪೆರಿಯಾರ್ ಅವರ ಸ್ವಾಭಿಮಾನ ಚಳವಳಿ ಅಲ್ಲಿನ ಸಮಾಜಗಳಲ್ಲಿ ಯಾವ ರೀತಿಯ ಕಂಪನಗಳನ್ನು ಉಂಟು ಮಾಡಿತ್ತೋ, ಅಂತಹದ್ದೇ ಒಂದು ಸ್ಪೋಟಕ ಸ್ಥಿತಿ 1888ರಲ್ಲಿ ನಾರಾಯಣ ಗುರುಗಳು ಅರವಿಪುರಂ ನಲ್ಲಿ ಶಿವದೇವಾಲಯ ಸ್ಥಾಪಿಸಿದಾಗ, ಕೇರಳದ ಹಿಂದೂ ಸಮಾಜದಲ್ಲಿ ನಿರ್ಮಾಣವಾಗಿತ್ತು.
ಅದೂ ಶಂಕರಚಾರ್ಯರು ಹುಟ್ಟಿದ ನಾಡಿನಲ್ಲಿ ಅಸ್ಪೃಶ್ಯನೊಬ್ಬ, ಅಸ್ಪೃಶ್ಯರಿಗಾಗಿ ನಿರ್ಮಿಸಿದ್ದ ‘ ಸ್ಪೃಶ್ಯ’ ದೇವರ ದೇವಾಲಯ.
ಮೊದಲ ದೇವಾಲಯ ಸ್ಥಾಪನೆಯ ನಂತರದ 48ವರ್ಷಗಳ ಕಾಲ ಅಲ್ಲಿನ ಶೋಷಿತರ ಕೊರಳ ದನಿಯಾಗಿ ಮೂಡಿ ಬಂದ ಸುಧಾರಣಾ ಚಳವಳಿ ಕೇರಳದ , ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಗಳ ಚಿತ್ರವನ್ನೇ ಬದಲಾಯಿಸಿಬಿಟ್ಟಿತು.
ಈ ಚಳವಳಿಯ ಮೊದಲ 40ವರ್ಷಗಳಲ್ಲಿ ನಾರಾಯಣ ಗುರುಗಳು ಜೊತೆಯಲ್ಲಿದ್ದುಕೊಂಡೇ ಮಾರ್ಗದರ್ಶನ ನೀಡಿದರೆ, ಅವರ ಸಾವಿನ ನಂತರ ಸುಮಾರು ಎಂಟು ವರ್ಷಗಳ ಹೋರಾಟಕ್ಕೆ ಅವರ ತತ್ವಗಳೇ ಚಳವಳಿಯ ದಾರಿಗೆ ಬೆಳಕಾಗಿತ್ತು. ಅಸ್ಪೃಶ್ಯರಿಗೂ ದೇವಸ್ಥಾನ ಪ್ರವೇಶ ಅವಕಾಶ ನಡುವ 'ದೇವಾಲಯ ಪ್ರವೇಶ' ಘೋಷಣೆ ಹೊರಬಿದ್ದಾಗ ಅದನ್ನು ನೋಡಲು ನಾರಾಯಣ ಗುರುಗಳು ಜೀವಂತವಿರಲಿಲ್ಲ.
ಒಂದು ಚಳವಳಿಯ ಸೋಲು-ಗೆಲುವು, ಅದರ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ನೆಲೆಗಳನ್ನು ಅವಲಂಭಿಸಿರುತ್ತದೆ. ನಾರಾಯಣ ಗುರು ಚಳವಳಿಯ ಎಲ್ಲಾ ಮಗ್ಗುಲುಗಳನ್ನು ಈ ರೀತಿಯ ಸಮಾಜ ವಿಜ್ಞಾನದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸುವ ಪ್ರಯತ್ನ ನಡೆದದ್ದು ಕಡಿಮೆ. ಈ ರೀತಿಯ ಅಧ್ಯಯನದ ಕೊರತೆಯಿಂದಾಗಿಯೇ ನಾರಾಯಣ ಗುರು ಅವರನ್ನು ವೈಯಕ್ತಿಕವಾಗಿ ವೈಭವೀಕರಿಸಿ ಅವರನ್ನು ದೇವರು ಮಾಡಿ ಊರೆಲ್ಲ ಗುಡಿಗಳನ್ನು ಕಟ್ಟಲಾಗಿದೆ. ಗುರುಗಳನ್ನು ದೇವರು ಮಾಡುವ ಭರದಲ್ಲಿ ಅವರ ನೇತೃತ್ವದ ಸುಧಾರಣಾವಾದಿ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ, ಅನೇಕ ಅನುಯಾಯಿಗಳ ಪರಿಚಯ ಹೊರಜಗತ್ತಿಗೆ ಆಗಿಲ್ಲ.
ನಾರಾಯಣ ಗುರು ಚಳವಳಿ, ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯಿತು.
ಮೊದಲನೆಯದು ಡಾ.ಪಲ್ಪು ನೇತೃತ್ವದ ಸಾಮಾಜಿಕ ಜಾಗೃತಿ, ಎರಡನೇಯದು, ನಾರಾಯಣ ಗುರು ನೇತೃತ್ವದ ಸಾಮಾಜಿಕ ಸುಧಾರಣೆ, ಮೂರನೆಯದು ಕುಮಾರನ್ ಆಶಾನ್ ನೇತೃತ್ವದ ಶಾಲೆಗಳಲ್ಲಿ ಪ್ರವೇಶಕ್ಕಾಗಿ ನಡೆದ ಚಳವಳಿ, ನಾಲ್ಕನೆಯದು ಟಿ.ಕೆ ಮಾಧವನ್ ನೇತೃತ್ವದಲ್ಲಿ ದೇವಾಲಯಗಳ ಪ್ರವೇಶ ಮತ್ತು ಅಸ್ಪೃಶ್ಯತೆಯ ವಿರುದ್ಧ ನಡೆದ ಚಳವಳಿ ಹಾಗೂ ಕೊನೆಯದಾಗಿ, ಸಿ.ಕೇಶವನ್ ನೇತೃತ್ವದಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆದ ಹೋರಾಟ. ಈ ಎಲ್ಲಾ ಹೋರಾಟಗಳು ನಾರಾಯಣ ಗುರುಗಳ ಸಿದ್ಧಾಂತ ನೆಲೆಗಟ್ಟಿನ ಮೇಲೆಯೇ ನಡೆದಿವೆ.
ಧಾರ್ಮಿಕ ಸುಧಾರಣೆಯ ಮೂಲಕ ಪ್ರಾರಂಭಗೊಂಡ ನಾರಾಯಣ ಗುರು ಚಳವಳಿ ಕಾಲ ಸರಿದಂತೆ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಾ ಹೋಗಿದ್ದು ಕೇವಲ ಆಕಸ್ಮಿಕವಿರಲಾರದು. ಅದು ನಾರಾಯಣ ಗುರುಗಳೇ ರೂಪಿಸಿದ ಕಾರ್ಯ ತಂತ್ರವಾಗಿರಬಹುದು ಎಂದು ನಂಬಲಿಕ್ಕೆ ಹಲವು ಕಾರಣಗಳು ಅವರ ಚಿಂತನೆಗಳಲ್ಲಿಯೇ ಸಿಗುತ್ತವೆ.
ಸಮಾಜದ ಅಮೂಲಾಗ್ರ ಬದಲಾವಣೆ ಎಂದರೆ, ಪ್ರಮುಖವಾಗಿ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆ ಎಂಬುದನ್ನು ನಾರಾಯಣ ಗುರು ಅರಿತಿದ್ದರು. ಇಂತಹ ಬದಲಾವಣೆಗೆ ಸಮುದಾಯದ ಮನಸ್ಸನ್ನು ಸಿದ್ದಗೊಳಿಸುವ ಪ್ರಾಥಮಿಕ ಕಾರ್ಯವನ್ನು ಅವರು ದೇವಾಲಯಗಳ ಸ್ಥಾಪನೆ ಮೂಲಕ ಪ್ರಾರಂಭಿಸಿದ್ದರು.
ನಾರಾಯಣ ಗುರುಗಳ ಮಹತ್ವ ಅರಿಯಬೇಕಾದರೆ, ಅವರಿಗಿಂತ ಹಿಂದಿನ ಕೇರಳದ ಸಾಮಾಜಿಕ ಸ್ಥಿತಿಯ ಸ್ಥೂಲ ಚಿತ್ರಣ ತಿಳಿದುಕೊಳ್ಳುವುದು ಅನಿವಾರ್ಯ. ದರಿದ್ರರಲ್ಲಿ, ರೋಗಿಗಳಲ್ಲಿ ದೇವರನ್ನು ಕಾಣಬೇಕೆಂದು ಹೇಳಿದ ವಿವೇಕಾನಂದರು ‘ಕೇರಳ ಮನೋರೋಗಿಗಳ ಆಸ್ಪತ್ರೆ’ ಎಂದು ಹೇಳಿ ಕೈಚೆಲ್ಲಿ ಹೋಗಿದ್ದರು.
ಜಾತಿ ವ್ಯವಸ್ಥೆ ಆ ರೀತಿಯ ಭೀಕರ ಮನೋರೋಗಿಗಳನ್ನು ಅಲ್ಲಿ ಸೃಷ್ಟಿಸಿತ್ತು. ದೇವಸ್ಥಾನ ಪ್ರವೇಶ ದೂರವೇ ಉಳಿಯಿತು. ಅದರ ಎದುರಿನ ರಸ್ತೆಯಲ್ಲಿಯೂ ಅಸ್ಪೃಶ್ಯರು ನಡೆದುಕೊಂಡು ಹೋಗುವಂತಿರಲಿಲ್ಲ. ಗಾಂಧೀಜಿ ಮತ್ತು ನಾರಾಯಣ ಗುರು ಮಾರ್ಗದರ್ಶನದಲ್ಲಿಯೇ ನಡೆದ ಐತಿಹಾಸಿಕ ವೈಕಂ ಸತ್ಯಾಗ್ರಹ ನಡೆದದ್ದು ದೇವಸ್ಥಾನ ಪ್ರವೇಶಕ್ಕಾಗಿ ಅಲ್ಲ, ಅದರ ಮುಂಭಾಗದ ರಸ್ತೆಯಲ್ಲಿ ನಡೆದಾಡುವ ಸ್ವಾತಂತ್ರ್ಯಕ್ಕಾಗಿ ಎಂಬುದು ಗಮನಾರ್ಹ.
ಕೆಳಜಾತಿ ಜನರು ಮಧ್ಯಾಹ್ನದ ಬಿಸಿಲಿನಲ್ಲಿ ಮಾತ್ರ ಹೊರಗಡೆ ಬರಬೇಕಿತ್ತು. ಯಾಕೆಂದರೆ, ಉಳಿದ ಸಮಯಗಳಲ್ಲಿ ಉದ್ದಕ್ಕೆ ಚಾಚಿಕೊಳ್ಳುವ ನೆರಳು ಎದುರಿಗೆ ಬರುವ ಸವರ್ಣೀಯರ ಮೇಲೆ ಬಿದ್ದು ಅವರ ಮಡಿ ಕೆಡಬಹುದೆಂಬ ಭಯ. ತಳಸಮುದಾಯದ ಜನ ಕಾಲಿಗೆ ಚಪ್ಪಲಿ, ತಲೆಗೆ ವಸ್ತ್ರ ಹಾಕುವಂತಿರಲಿಲ್ಲ. ಸರ್ಕಾರವೇ ನಡೆಸುವ ಶಾಲೆಗಳಿಗೆ ಈಳವರಿಗೆ ಪ್ರವೇಶ ಇರಲಿಲ್ಲ, ಸರ್ಕಾರಿ ಉದ್ಯೋಗ ಸೇರಲು ಅವರಿಗೆ ಅವಕಾಶ ಇರಲಿಲ್ಲ. ಸಾರ್ವಜನಿಕ ಕೆರೆ-ಬಾವಿಗಳ ನೀರನ್ನು ಅವರು ಬಳಸಲಿಕ್ಕೆ ಅವಕಾಶ ನಿರಾಕರಿಸಲಾಗಿತ್ತು.
ಬ್ಯಾಂಕ್ ಅಂಚೆ ಕಛೇರಿಗಳ ಒಳಗೆ ಸವರ್ಣಿಯರಿದ್ದರೆ, ಒಳ ಪ್ರವೇಶಿಸುವಂತಿರಲಿಲ್ಲ. ಕಥಕ್ಕಳಿಯಂತಹ ನೃತ್ಯದಲ್ಲಿ ಅವರು ದೇವರುಗಳ ಪಾತ್ರ ಮಾಡುವಂತಿರಲಿಲ್ಲ. ಅವರು ಮಹಡಿ ಮನೆಯಲ್ಲಿ ವಾಸಿಸುವಂತಿರಲಿಲ್ಲ. ಈಳವರು ತಮ್ಮ ಮನೆಗಳನ್ನು ‘ಕುಡಿ’ಗಳೆಂದು ಕರೆಯಬೇಕಿತ್ತು. ನಾಯರ್ ಗಳು ತಮ್ಮ ಮನೆಗಳನ್ನು ವೀಡು ಎನ್ನುತ್ತಿದ್ದರೆ ನಂಬೂದಿರಿಗಳು ಇಲ್ಲಂ ಎನ್ನುತ್ತಿದ್ದರು.
ಕೆಳ ವರ್ಗದ ಮಹಿಳೆಯರ ಸ್ಥಿತಿ ಇನ್ನೂ ನರಕ ಸದೃಶ್ಯ. ಅವರು ಎದೆಯ ಮೇಲೆ ಬಟ್ಟೆ ಧರಿಸುವಂತಿರಲಿಲ್ಲ. ಇದನ್ನು ಪ್ರತಿಭಟಿಸಿದ ಕೆಳಜಾತಿಯ ಸ್ವಾಭಿಮಾನಿ ಮಹಿಳೆಯೊಬ್ಬರು, ತನ್ನ ಸ್ತನಗಳನ್ನೇ ಕುಯ್ದು ಅರ್ಪಿಸಿ, ಪ್ರಾಣಾರ್ಪಣೆ ಮಾಡಿದ ಹೃದಯವಿಧ್ರಾವಕ ಘಟನೆ ಅಲ್ಲಿ ನಡೆದಿತ್ತು. 1814 ರಲ್ಲಿ ರಾಜ್ಯ ಸರ್ಕಾರ ಈಳವ ಮಹಿಳೆಯರಿಗೆ ರವಿಕೆ ಬಳಸಲು ಈಳವ ಮಹಿಳೆಯರಿಗೆ ಅವಕಾಶ ನೀಡಿತ್ತು. ಆದರೆ ಅವರು ಸಾಂಪ್ರದಾಯಿಕ ಬಟ್ಟೆಗಳನ್ನು ಧರಿಸುವಂತಿರಲಿಲ್ಲ. ಇದರಿಂದ ಪ್ರೇರಿತರಾಗಿ ಈಳವ ಮಹಿಳೆಯರು ಎದೆ ತುಂಬಾ ಬಟ್ಟೆ ಹಾಕುತ್ತಿರುವುದು ನಾಯರ್ ಮತ್ತು ಇತರ ಜಾತಿಗಳಲ್ಲಿ ಒಂದು ಬಗೆಯ ಅಸಹನೆಗೆ ಕಾರಣವಾಗಿತ್ತು.


ಅವರು ಹೂ ಮುಡಿಯುವಂತಿರಲಿಲ್ಲ. ಎಷ್ಟೋ ಕಡೆಗಳಲ್ಲಿ ಮದುವೆಯ ಮೊದಲು ರಾತ್ರಿಗಳನ್ನು ಊರಿನ ನಂಬೂದಿರಿ ನಾಯಕರ ಜೊತೆಯಲ್ಲಿ ಕಳೆಯಬೇಕಿತ್ತು.
ಇವೆಲ್ಲದರ ಜೊತೆಗೆ ನೂರೆಂಟು ಮೂಡನಂಬಿಕೆಗಳು ಮತ್ತು ದುಂದುವೆಚ್ಚದ ಸಂಪ್ರದಾಯಗಳನ್ನು ಅವರು ಕುತ್ತಿಗೆಗೆ ಗಂಟು ಹಾಕಲಾಗಿತ್ತು. ಮೈ ನೆರೆಯುವ ಮೊದಲೇ, ಯಾವುದಾದರೂ ಒಬ್ಬ ವ್ಯಕ್ತಿಯಿಂದ ತಾಳಿ ಕಟ್ಟಿಸುವ, "ತಾಳಿಕೆಟ್ಟು ಕಲ್ಯಾಣಂ" ಎಂಬ ಬಾಲ್ಯ ವಿವಾಹಗಿಂತಲೂ ಅಮಾನವನೀಯವಾದ ಸಂಪ್ರದಾಯವೊಂದು ಕೇರಳದಲ್ಲಿತ್ತು. ಬಾಲ್ಯ ವಿವಾಹದಲ್ಲಿ ಕನಿಷ್ಟ ಮದುವೆಯ ಒಪ್ಪಂದವಿತ್ತು. ಇಲ್ಲಿ ಅದೊಂದು ಅಣಕು ಮದುವೆ. ಮೈ ನೆರೆದಿದ್ದನ್ನು ಊರಿಗೆಲ್ಲ ಘೋಷಿಸುವ "ತಿರುಂಡಕಲಿ" ಗರ್ಭಿಣಿಯಾದ ಕೂಡಲೇ "ಪುಲೂಕೂಡಿ" ಎಂಬ ಸೀಮಂತ ನಡೆಸುವ ಸಂಪ್ರದಾಯ ಆಡಂಭರದ ಮದುವೆ ಈ ಸಂಪ್ರದಾಯಗಳ ಕಾರಣದಿಂದಾಗಿಯೇ ಈಳವ ಕುಟುಂಬಗಳು ವಂಶ ಪಾರಂಪರ್ಯವಾಗಿ ನಂಬೂದಿರಿ ನಾಯರ್ಗಳ ಸಾಲಗಾರರಾಗಿ ಜೀತದ ಜೀವನ ಸಾಗಿಸಬೇಕಾಗಿತ್ತು.
ಆದರೆ, ಇದೇ ಕೇರಳ ಹಿಂದೂ ದೇಶದಲ್ಲಿಯೇ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಪ್ರಗತಿಪರ ಚಿಂತಕರಿರುವ ರಾಜ್ಯ. ಪ್ರಜಾಸತಾತ್ಮಕವಾಗಿ ಆಯ್ಕೆಯಾದ ದೇಶದ ಮೊದಲ ಹಾಗೂ ಜಗತ್ತಿನ ಎರಡನೇ ಕಮ್ಯನಿಸ್ಟ್ ಸರ್ಕಾರ ಅಸ್ತಿತ್ವಕ್ಕೆ ಬಂದದ್ದು ಕೇರಳದಲ್ಲಿ. ದೇಶ ವಿಭಜನೆ ಕಾಲದಲ್ಲಿ ಉತ್ತರ ಭಾರತ ಕೋಮುದಳ್ಳುರಿಯಲ್ಲಿ ಹೊತ್ತಿ ಉರಿಯುತ್ತಿದ್ದಾಗ ಶೇ.18ಕ್ಕೂ ಹೆಚ್ಚು ಮುಸ್ಲಿಂ ಜನಸಂಖ್ಯೆಯೇ ಇರುವ ಕೇರಳ ಶಾಂತವಾಗಿತ್ತು.
ಅಡ್ವಾನಿಯವರ ರಥಯಾತ್ರೆಯ ನಂತರ ದೇಶಾದ್ಯಂತ ಕೋಮುವಾದಿ ಚಟುವಟಿಕೆಗಳ ಭುಗಿಲೆದ್ದಾಗಲೂ ಇಲ್ಲಿ, ಯಾವ ಗಲಭೆಗಳು ನಡೆಯಲಿಲ್ಲ.
ದಕ್ಷಿಣದ ರಾಜ್ಯಗಳಲ್ಲಿ ಪ್ರಯಾಸಪಟ್ಟು, ಪ್ರವೇಶ ಪಡೆದ ಬಿಜೆಪಿಯನ್ನು ಈಗಲೂ ಹೊಸಲಿನಾಚೆ ನಿಲ್ಲಿಸಿರುವ ರಾಜ್ಯ ಕೇರಳ. ಇದು ಕೇವಲ ನಾರಾಯಣ ಗುರುಗಳು ಹುಟ್ಟಿ ಸರಿಯಾಗಿ ನೂರು ವರ್ಷಗಳ ಅವಧಿಯಲ್ಲಿ ನಡೆದ ಬದಲಾವಣೆ. ಅದೇ ನೂರು ವರ್ಷಗಳ ನಂತರ ಕೇರಳದಲ್ಲಿ ಮೊದಲ ಬಾರಿಗೆ ಕಮ್ಯೂನಷ್ಟ ಸರ್ಕಾರ ಅಸ್ತಿತ್ವಕ್ಕೆ ಬಂತೆಂಬುದು ಉಲ್ಲೇಖನಿಯ.
ನಾರಾಯಣ ಗುರುಗಳು ಪ್ರಾರಂಭಿಸಿದ ಧಾರ್ಮಿಕ ಸುಧಾರಣಾ ಚಳವಳಿಯನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಆಗ ಅವರ ಕಾರ್ಯತಂತ್ರ ಉಳಿದ ಸಮಾಜ ಸುಧಾರಕರಿಗಿಂತ ಹೇಗೆ ಭಿನ್ನವಾಗಿತ್ತು ಎಂಬ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ. ಅಸ್ಪೃಶ್ಯತೆಯ ವಿರುದ್ಧದ ಹೋರಾಟಗಳಲ್ಲಿ ದೇವಸ್ಥಾನ ಪ್ರವೇಶ ಚಳವಳಿಯದ್ದು ಪ್ರಮುಖ ಪಾತ್ರವಾದರೆ, ನಾರಾಯಣ ಗುರುಗಳು ಅದನ್ನೇ ಕೈಬಿಟ್ಟಿದ್ದರು. ಅವರು ಸವರ್ಣಿಯರ ಒಡೆತನದ ದೇವಾಲಯ ಪ್ರವೇಶಿಸಲಿಲ್ಲ. ಅದನ್ನು ಬಹಿಷ್ಕರಿಸಿದರು. ಮತ್ತು ಅವರ್ಣೀಯರರ ದೇವಾಲಯಗಳನ್ನು ಸ್ಥಾಪಿಸಿದರು. ಆದರೆ, ಅವರು ಮತ್ತೊಂದು ಧರ್ಮವನ್ನು ಕೂಡ ಸ್ಥಾಪಿಸಲು ಹೋಗಲಿಲ್ಲ.
ಮೊದಲು ದೇವಸ್ಥಾನ ಪ್ರವೇಶ ಚಳವಳಿ ನಡೆಸದೆ, ದೇವಸ್ಥಾನ ನಿರ್ಮಿಸುವ ಅವರ ಕಾರ್ಯತಂತ್ರ ಎರಡು ರೀತಿಯಲ್ಲಿ ಅವರಿಗೆ ನೆರವಾಯಿತು. ದೇವಸ್ಥಾನ ಪ್ರವೇಶ ಹೋರಾಟಕ್ಕೆ ಎದುರಾಗುವ ಪ್ರತಿಭಟನೆಯನ್ನು ಎದುರಿಸುವ ಸಂಘಟನಾ ಶಕ್ತಿ ಆಗಿನ್ನೂ ಕೇರಳದ ತಳಸಮುದಾಯಕ್ಕೆ ಇರಲಿಲ್ಲ ಎಂದು ನಾರಾಯಣ ಗುರುಗಳಿಗೆ ತಿಳಿದಿತ್ತು. ಮುಂದೆ ಮೂವತ್ತಾರು ವರ್ಷಗಳ ನಂತರ ದೇವಾಲಯಗಳ ಮುಂಭಾಗದ ರಸ್ತೆಗಳಲ್ಲಿ ನಡೆಯುವ ಹಕ್ಕಿಗಾಗಿ ನಡೆದ ವೈಕಂ ಸತ್ಯಾಗ್ರಹಕ್ಕೆ ಎದುರಾದ ಪ್ರತಿಭಟನೆಯನ್ನು ನೋಡಿದರೆ, ಇದು ಸ್ಪಷ್ಟವಾಗುತ್ತದೆ.
ದೇವಸ್ಥಾನದ ಸ್ಥಾಪನೆಯನ್ನು ಪ್ರಶ್ನಿಸಿದ ಪುರೋಹಿತರಿಗೆ ನಾನು ಸ್ಥಾಪಿಸಿದ್ದು ಈಳವರ ಶಿವ ಎಂಬ ಮಾರ್ಮಿಕ ಉತ್ತರ ಕೊಟ್ಟು ಗುರುಗಳು ಯುದ್ದಕ್ಕೆ ಬಂದ ವರನ್ನು ಶಸ್ತ್ರಪ್ರಯೊಗವಿಲ್ಲದೆಯೇ ನಿಶಸ್ತ್ರಗೊಳಿಸಿದರು. ಅದೇ ರೀತಿ, ಸಹಸ್ರಮಾನಗಳಿಂದ ತಮ್ಮಿಂದ ದೂರವೇ ಉಳಿದಿದ್ದ ದೇವಸ್ಥಾನಗಳಿಗೆ ಪ್ರವೇಶಿಸಲು ಅಡ್ಡಿಯಾಗುವ ಸಾಂಪ್ರದಾಯಿಕ ಮನಸ್ಸಿನ ಹಿಂಜರಿಕೆ ಹಾಗೂ ಭೀತಿಯಿಂದಲೂ ಕೆಳವರ್ಗದ ಜನರನ್ನು ಅವರು ಮುಕ್ತಗೊಳಿಸಿದರು. ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ, ದೇವಾಲಯವನ್ನೇ ನಿಮ್ಮಲ್ಲಿಗೆ ತರುತ್ತೇನೆ ಎಂದು ಅಸ್ಪೃಶ್ಯರಿಗೆ ಪೂಜೆಯ ಹಕ್ಕನ್ನು ನೀಡುವ ಮೂಲಕ ಅವರಲ್ಲಿ ಸ್ವಾಭಿಮಾನ ಜಾಗೃತಿಗೆ ಕಾರಣರಾದರು.
ದೇವಸ್ಥಾನಗಳ ಸ್ಥಾಪನೆ ಅಂದಿನ ಪುರೋಹಿತಶಾಹಿಗೆ ಅಘಾತಕಾರಿಯಾದ ಹೊಡೆತ, ದೈಹಿಕವಾಗಿ ದೂರವೇ ಉಳಿದಿದ್ದ ಮೂರನೇ ಎರಡರಷ್ಟಿದ್ದ ಕೆಳವರ್ಗದ ಜನರು ಮಾನಸಿಕವಾಗಿ ಕೂಡ ದೂರವೇ ಉಳಿದರೆ, ಹುಂಡಿ ತುಂಬುವುದು ಹೇಗೆ? ಅದರ ಮೂಲಕ ಉದರ ತುಂಬುವುದು ಹೇಗೆ ? ಎಂಬ ಭೀತಿ ಅವರನ್ನಾವರಿಸಿತ್ತು. ನಾರಾಯಣ ಗುರುಗಳ ನಂತರ ಕೇರಳದಲ್ಲಿ ಸವರ್ಣೀಯರ ದೇವಾಲಯಗಳ ಆದಾಯದಲ್ಲಿ ಗಣನಯ ಕುಸಿತ ಕಂಡುಬಂದಿರುವುದು ದಾಖಲೆಯಲ್ಲಿದೆ.
ನಾರಾಯಣ ಗುರುಗಳು ಎಂದೂ ಹಿಂದೂ ಧರ್ಮವನ್ನು ಪುಲೆ, ಪೆರಿಯಾರ್, ಅಂಬೇಡ್ಕರ್ ಅವರಂತೆ ಸಾರಾಸಗಟಾಗಿ ತಿರಸ್ಕರಿಸಲಿಲ್ಲ. ಆ ವಿಚಾರದಲ್ಲಿ ಅವರು ಬಸವಣ್ಣನ ತತ್ವಗಳಿಗೆ ಹತ್ತಿರವಾಗಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಧಾರ್ಮಿಕ ಪುನರುತ್ಥಾನದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ದೇವನೂರು ಮಹಾದೇವ ಅವರ ಮಾತೊಂದು ನೆನಪಿಗೆ ಬರುತ್ತದೆ.
ಹಿಂದೂ ಧರ್ಮ ಎಂಬ ಮನೆಯೊಳಗೆ ಭಿನ್ನವಾದ ಜಾತಿ ತಾರತಮ್ಯದ ಕಂಬಗಳನ್ನು ಒಳಗೊಳಗೆ ಕುಯ್ಯುವಂತೆ ಗಾಂಧೀಜಿ ಕಾಣಿಸಿದರೆ, ಅಂಬೇಡ್ಕರ್ ಹೊರಗಿನಿಂದ ಆ ಅಸಮಾನತೆಯ ಮನೆಗೆ ಕಲ್ಲೆಸೆಯುವಂತೆ ಕಾಣುತ್ತಾರೆ ಎಂದು ಗಾಂಧೀ ಮತ್ತು ಅಂಬೇಡ್ಕರ್ ಅವರ ಸೈದ್ಧಾಂತಿಕ ಸಂಘರ್ಷವನ್ನು ಪ್ರಸ್ತಾಪಿಸುತ್ತಾ ದೇವನೂರು ಹೇಳುತ್ತಾರೆ.
ಗಾಂಧೀ ಆ ಕೆಲಸ ಮಾಡಿರುವ ಬಗ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಾರಾಯಣ ಗುರುಗಳ ಧಾರ್ಮಿಕ ಸುಧಾರಣಾವಾದಿ ಚಳವಳಿ ಮಾತ್ರ ಈ ಕಂಬ ಕುಯ್ಯುವ ಕೆಲಸವನ್ನು ಮಾಡಿದೆ. ಅವರದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ಅವರ ಹೋರಾಟದ ಎಲ್ಲಾ ಕಾರ್ಯತಂತ್ರಗಳನ್ನು ಅವಲೋಕಿಸುತ್ತಾ ಬಂದರೆ, ಅವರಲ್ಲೊಬ್ಬ ಚತುರ ರಾಜಕಾರಣಿ ಇದ್ದನೆಂಬುದು ಸ್ಪಷ್ಟವಾಗುತ್ತದೆ. ಅವರು ಸಮಾಜ ಸುಧಾರಕನ ಕೆಲಸ ಮಾಡಲಿಕ್ಕೆಂದೇ ಸನ್ಯಾಸಿಯ ಪಾತ್ರವನ್ನು ಧರಿಸಿದರೇನೋ ಎಂಬ ಅನುಮಾನ ಬರುತ್ತದೆ.
ಅವರು ದೇವಸ್ಥಾನ ಪ್ರವೇಶಾವಕಾಶದ ಬಗ್ಗೆ ಎಂದೂ ಗಂಭೀರವಾಗಿ ಪ್ರಯತ್ನ ನಡೆಸಲಿಲ್ಲ. ಅವರು ಸಾವಿನ ಎಂಟು ವರ್ಷಗಳ ನಂತರ ಕೇರಳ ಸರಕಾರ ದೇವಾಲಯ ಪ್ರವೇಶ ಘೋಷಣೆಯನ್ನು ಹೊರಡಿಸಿತ್ತು. ಆಗಲೇ ನಾರಾಯಣ ಗುರುಗಳು ಕೇರಳ, ಮದ್ರಾಸ್ ಮತ್ತು ಮಂಗಳೂರಿನಲ್ಲಿಯೂ ದೇವಸ್ಥಾನಗಳನ್ನು ಸ್ಥಾಪಿಸಿದ್ದರು. ನೂರಾರು ಗುರುಮಂದಿರ ಹಾಗೂ ಆಶ್ರಮಗಳು ಪ್ರಾರಂಭವಾಗಿದ್ದವು.
ದೇವಸ್ಥಾನಗಳ ಬಗೆಗಿನ ಅವರ ಪರಿಕಲ್ಪನೆಯೇ ಕ್ರಾಂತಿಕಾರಿಯಾದುದು. ಅರವಿಪುರಂನಲ್ಲಿ ಲಿಂಗಸ್ಥಾಪನೆ ಮಾಡಿದ ಗುರುಗಳು ತಮ್ಮ ಕೊನೆಯ ಪ್ರತಿಷ್ಠಾಪನೆಯನ್ನು ಕಳವಂ ಕೋಡಂ ನಲ್ಲಿ ಕನ್ನಡಿಯೊಂದನ್ನು ಸ್ಥಾಪಿಸುವ ಮೂಲಕ ನಡೆಸಿದರು. ಅದರ ನಡುವೆ ಒಂದೆಡೆ ‘ಸತ್ಯ, ಧರ್ಮ, ಶಾಂತಿ, ದಯೆ’ ಎಂಬ ಸಂದೇಶವನ್ನು ಸಾರುವ ಫಲಕವನ್ನಷ್ಟೇ ಸ್ಥಾಪಿಸಿದರೆ, ಕರಮಕ್ಕು ಎಂಬಲ್ಲಿ ನಂದಾ ದೀಪವನ್ನಷ್ಟೇ ಹಚ್ಚಿದರು. ಕೊನೆಗಾಲದಲ್ಲಿ ಶಿವಗಿರಿಯಲ್ಲಿ ಅವರು ‘ಅರಿವು’ ಎನ್ನುವ ಅವರ ಚಿಂತನೆಯ ಮೂಲಧಾತುವಿನ ಸಂಕೇತವಾಗಿ ಸರಸ್ವತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿದರೆ, ಶಂಕರಾಚಾರ್ಯರ ಹುಟ್ಟೂರಿಗೆ ಸಮೀಪದ ಅಲ್ವಾಯಿನ ಅದ್ವೆತಾಶ್ರಮದಲ್ಲಿ ಮೂರ್ತಿಯನ್ನೇ ಸ್ಥಾಪಿಸಲಿಲ್ಲ. ಕೊನೆಗಾಲದಲ್ಲಿ ದೇವಸ್ಥಾನಗಳ ಸ್ಥಾಪನೆ ನಿಲ್ಲಿಸಿ ಎಂದು ಅನುಯಾಯಿಗಳಿಗೆ ಕರೆ ನಡಿದರು. ನಾರಾಯಣ ಗುರುಗಳು ತಮ್ಮ ಚಳವಳಿ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬಳಸುತ್ತಾ ಬಂದುದ್ದನ್ನು ಕಾಣಬಹುದು. ಅದು ಸನಾತನ ಧರ್ಮಾವಲಂಭಿಗಳ ಆಶಯಕ್ಕೆ ತದ್ವಿರುದ್ದವಾದದು. ದೇವಾಲಯಗಳ ಪೂಜೆ-ಹವನ-ಹೋಮಗಳಲ್ಲಿ ಮುಳುಗಿ ವ್ಯಾಪಾರಿ ಕೇಂದ್ರಗಳಾಗುವ ಬದಲಿಗೆ ಅವುಗಳನ್ನು ಸಾಮೂಹಿಕ ಪ್ರಾರ್ಥನಾ ಮಂದಿರವಾಗಿ ಉಳಿಸಬೇಕೆಂದು ಅವರು ಬಯಸಿದ್ದರು. ಈ ದೃಷ್ಟಿಯಿಂದ ಅವರ ದೇವಾಲಯದ ಪರಿಕಲ್ಪನೆ ಮಸೀದಿ, ಚರ್ಚ್ ಗಳಿಗೆ ಹೆಚ್ಚು ಹತ್ತಿರವಾಗಿತ್ತು. ದೇವಸ್ಥಾನಗಳ ಭಕ್ತಿ ಪೀಠವಾಗುವದರ ಜೊತೆಯಲ್ಲಿ ಅಧ್ಯಯನ ಕೇಂದ್ರವಾಗಬೇಕು. ಉದ್ಯಾನ, ವಾಚನಾಲಯಗಳನ್ನೊಳಗೊಂಡು ಅವು ಸ್ವಚ್ಛ ಪರಿಸರದಲ್ಲಿ ನಿರ್ಮಾಣಗೊಳ್ಳಬೇಕು ಎಂದು ಅವರು ಹೇಳುತ್ತಿದ್ದರು. ಅವರು ಸ್ಥಾಪಿಸಿದ ಎಲ್ಲಾ ದೇವಾಲಯಗಳು ಈ ಆಶಯವನ್ನೇ ಬಿಂಬಿಸುತ್ತದೆ.
ನಾರಾಯಣ ಗುರುಗಳದ್ದು ಮುಖಾಮುಖಿ ಹೋರಾಟವಲ್ಲ. ಅವರು ವೈದಿಕ ಶಾಹಿ ಏಕಸ್ವಾಮ್ಯಕ್ಕೆ ನೇರ ಸವಾಲು ಹಾಕಲಿಲ್ಲ. ಅದರ ಬದಲಿಗೆ ವೈದಿಕ ಅಧಿಪತ್ಯದ ಬೇರುಗಳನ್ನೇ ಅಲ್ಲಾಡಿಸಿದರು. ಸಂಸ್ಕೃತವನ್ನು ಸಂಪೂರ್ಣವಾಗಿ ತಿರಸ್ಕರಿಸದೇ ಅದನ್ನು ಅಧ್ಯಯನ ಮಾಡಿ ಶೂದ್ರರೂ ಅದನ್ನು ಕಲಿತು ಅರಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟರು. ವೇದಾಧ್ಯಯನಕ್ಕೆ ಜಾತಿ ಅಸ್ಪೃಶ್ಯವಲ್ಲ ಎಂದು ಸಾರಿದ ಗುರುಗಳು ಶಂಕರಾಚಾರ್ಯರ ಅದ್ವೈತ ವೇದಾಂತವನ್ನು ಕಲಿತರು. ಆತ್ಮೋಪದೇಶ ಶತಕಂ ಸೇರಿದಂತೆ ಹಲವಾರು ಸಂಸ್ಕೃತ ಗ್ರಂಥಗಳನ್ನು ಬರೆದರು. ಬ್ರಹ್ಮಸೂತ್ರದ ವಿಶ್ಲೇಷಣೆ ಮಾಡಿದ ಮೊದಲ ಅಸ್ಪೃಶ್ಯ ಅವರು.
ದೇವಸ್ಥಾನಗಳಷ್ಟೇ ಸ್ಥಾಪಿಸದೆ ಅಲ್ಲಿ ಅರ್ಚಕರಾಗಿ ಕೆಳವರ್ಗದ ಜಾತಿ ಜನರನ್ನೇ ನೇಮಿಸಿದರು. ಅವರ ತರಬೇತಿಗಾಗಿ ಶಿವಗಿರಿಯಲ್ಲಿ ಬ್ರಹ್ಮ ಮೀಮಾಂಸ ಶಾಲೆಗಳನ್ನು ತೆರೆದು ಬ್ರಹ್ಮ ವಿದ್ಯೆ ಕಲಿಸಿದರು. ಅವರಿಂದ ಸ್ಥಾಪನೆಗೊಂಡ ಬ್ರಹ್ಮ ವಿದ್ಯಾ ಕೇಂದ್ರದಲ್ಲಿ ಈಳವರಲ್ಲದೆ, ಪುಲಯ, ಪರಯ ಮೊದಲಾದ ಇನ್ನತರ ಕೆಳಜಾತಿಯ ಜನರಲ್ಲದೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರೂ ಆಗಮಶಾಸವನ್ನೊಳಗೊಂಡಂತೆ ವೇದಾಧ್ಯಯನ ಮಾಡಲು ಅವಕಾಶ ಕಲ್ಪಿಸಿದ್ದರು. ದಕ್ಷಿಣ ಕನ್ನಡದಲ್ಲಿ ಈಗಲೂ ಬಿಲ್ಲವರ ಜಾತಿಯ ಮದುವೆಯನ್ನು ಬಿಲ್ಲವ ಅರ್ಚಕರೇ ಮಾಡುತ್ತಿದ್ದಾರೆ. ಅವರೆಲ್ಲರೂ ಮೂಲತಃ ಶಿವಗಿರಿಯಲ್ಲಿ ತರಬೇತಿ ಪಡೆದವರು. ಆದರೆ, ಈಗ ಅವರಲ್ಲಿಯೂ ಬೆಳೆಯುತ್ತಿರುವ ನವಬ್ರಾಹ್ಮಣರಿಗೆ ಬಿಲ್ಲವ ಅರ್ಚಕರು ಪಥ್ಯವಾಗುವುದಿಲ್ಲ ಎಂಬುದು ಬೇರೆ ಮಾತು.
ಅರವೀಪುರಂನಲ್ಲಿ ದೇವಾಲಯ ಸ್ಥಾಪನೆ ನಂತರ 1961 ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗ ಸ್ಥಾಪನೆಯಾಗುವ ವರೆಗೆ ಕೇರಳ ರಾಜ್ಯ ಮಾತ್ರವಲ್ಲ ತಮಿಳುನಾಡು ಮತ್ತು ಮಂಗಳೂರಿಗೂ ಭೇಟಿ ನೀಡಿ ದೇವಾಲಯಗಳನ್ನು ಸ್ಥಾಪಿಸಿದರು. ಕೆಳವರ್ಗದ ಜನರಲ್ಲಿದ್ದ ಮೂಡನಂಬಿಕೆ ಮತ್ತು ದುಂದುವೆಚ್ಚದ ಅಂಧ ಸಂಪ್ರದಾಯಗಳನ್ನು ಕಿತ್ತೊಗೆಯಲು ಹೋರಾಟ ನಡೆಸಿದರು. ವಿವಾಹಗಳನ್ನು ಸರಳಗೊಳಿಸಿದರು. ವಿವಾಹಕ್ಕೆ ಮಾಡುವ ದುಂದು ವೆಚ್ಚಗಳನ್ನು ವೃದ್ಧಾಪ್ಯದ ದಿನಗಳಿಗಾಗಿ ಉಳಿತಾಯ ಮಾಡುವಂತೆ ಸಲಹೆ ನಡಿದರು. ಸಹಭೋಜನಕ್ಕೆ ಪ್ರೋತ್ಸಾಹ ನೀಡಿದರು. ಮದ್ಯವನ್ನು ಮಾಡಬೇಡಿ, ಮಾರಬೇಡಿ ಮತ್ತು ಕುಡಿಯಬೇಡಿ ಎಂದು ಹೇಳುವ ಮೂಲಕ ಮದ್ಯಪಾನದ ವಿರುದ್ಧ ವ್ಯಾಪಕ ಚಳವಳಿಯನ್ನೇ ನಡೆಸಿದರು. ಇದರಿಂದ ಸಾಂಪ್ರದಾಯಿಕವಾಗಿ ಸೇಂದಿ ತೆಗೆಯುವ ವೃತ್ತಿಯನ್ನು ಮಾಡುತ್ತಿದ್ದ ಈಳವರು ಆ ವೃತ್ತಿಯನ್ನು ತ್ಯಜಿಸಿ, ಬೇರೆ ವೃತ್ತಿ ಕೈಗೆತ್ತಿಕೊಳ್ಳುವಂತಾಯಿತು.
ಈ ಎಲ್ಲಾ ಸುಧಾರಣೆಗಳನ್ನು ಅವರು ಮೊದಲು ತಮ್ಮ ಶ್ರೀಮಂತ ಅನುಯಾಯಿಗಳ ಮನೆಯಲ್ಲಿಯೇ ಮಾಡಿದರು. ತಾಳಿಕೆಟ್ಟು, ತಿರುಂಡಕಳಿ ಮೊದಲಾದ ಸಂಪ್ರದಾಯಗಳನ್ನು ಆಚರಿಸುವ ಆಡಂಬರದ ಮದುವೆಗಳನ್ನು ಮಾಡುವ ಶ್ರೀಮಂತ ಅನುಯಾಯಿಗಳ ಮನೆಗಳನ್ನೇ ಬಹಿಷ್ಕರಿಸಿದರು.
1916ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗ ಸ್ಥಾಪನೆಯ ಮೂಲಕ ನಾರಾಯಣ ಗುರು ಚಳವಳಿ ಸಂಘರ್ಷದ ಹಾದಿಗೆ ಇಳಿಯಿತು. ಆಗ ಅವರಿಗೆ ಜೊತೆಯಾದವರು ಡಾ.ಪಲ್ಪು, ಪಲ್ಪು ಮತ್ತು ಅವರಣ್ಣ ವೇಲು ಇಬ್ಬರೂ ಕೇರಳದ ಜಾತಿ ವ್ಯವಸ್ಥೆಗೆ ಬಲಿಯಾಗಿ ಹುಟ್ಟೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಎರಡೂ ಸಿಗದೆ, ಊರು ಬಿಟ್ಟು ಹೋದವರು.
ವೇಲು ಈಳವ ಜನಾಂಗದ ಮೊದಲ ಪದವೀ ಧರ. ಆತ ಮದ್ರಾಸ್ ನಲ್ಲಿಯೇ ಕಲಿತು, ಅಲ್ಲಿಯೇ ಸರ್ಕಾರಿ ನೌಕರಿ ಸೇರಿದರೆ, ಪಲ್ಪು ಮದ್ರಾಸ್ ನಲ್ಲಿ ಓದಿ ಮೈಸೂರಿನಲ್ಲಿ ಸರ್ಕಾರಿ ವೈದ್ಯರಾಗುತ್ತಾರೆ. ಈಳವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ಕೋರುವ ಮೊದಲ ಮನವಿಯನ್ನು ತಿರುವಾಂಕೂರಿನ ದಿವಾನರಿಗೆ ಅರ್ಪಿಸು ಮೂಲಕ ಡಾ.ಪಲ್ಪು ತನ್ನ ಹೋರಾಟ ಆರಂಭಿಸುತ್ತಾರೆ. ತಿರುವಾಂಕೂರಿನ ದಿವಾನರು, ಭಾರತದ ಆಗಿನ ವೈಸ್ ರಾಯ್, ಬ್ರಿಟಿಷ್ ಪಾರ್ಲಿಮೆಂಟ್, ಕಾಂಗ್ರೆಸ್ ಪಕ್ಷ ಹಾಗೂ ಇಂಗ್ಲೀಷ್ ದಿನಪತ್ರಿಕೆಗಳಿಗೆ ಈಳವರ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಅವರು ಸತತ ಪ್ರಯತ್ನ ನಡೆಸುತ್ತಾರೆ.
ಅದಕ್ಕೆ ನಿರೀಕ್ಷಿತ ಫಲ ಸಿಗದಾಗ, ಬೆಂಗಳೂರಿನಲ್ಲಿ ಡಾ.ಪಲ್ಪು ಸ್ವಾಮಿ ವಿವೇಕಾನಂದರನ್ನು ಭೇಟಿಯಾಗುತ್ತಾರೆ. ಕೇರಳದ ಪರಿಸ್ಥಿತಿಯ ಸಂಪೂರ್ಣ ಅರಿವಿದ್ದ ವಿವೇಕಾನಂದರು "ಆಧ್ಯಾತ್ಮಿಕ ನಾಯಕರೊಬ್ಬರ ನೇತೃತ್ವದಲ್ಲಿ ಸಾಮಾಜಿಕ ಚಳವಳಿಯನ್ನು ಹುಟ್ಟುಹಾಕಿದರೆ, ಮಾತ್ರ ಕೇರಳದಲ್ಲಿ ಪರಿವರ್ತನೆ ಸಾಧ್ಯ" ಎನ್ನುತ್ತಾರೆ. ಅಲ್ಲಿಂದ ಕೇರಳಕ್ಕೆ ಹಿಂದಿರುಗಿದ ಡಾ.ಪಲ್ಪು ನಾರಾಯಣ ಗುರುಗಳನ್ನು ಭೇಟಿ ಮಾಡುತ್ತಾರೆ. ಈ ಭೇಟಿಗೆ ಐತಿಹಾಸಿಕ ಮಹತ್ವವಿದೆ.
ಇಬ್ಬರ ಮಿಲನದಿಂದಲೇ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಸ್ಥಾಪನೆಯಾಗುತ್ತದೆ. ಈಳವರಲ್ಲಿ ಧಾರ್ಮಿಕ ಮತ್ತು ಜಾತ್ಯತೀತ ಶಿಕ್ಷಣ ಹಾಗೂ ಉದ್ಯಮಶೀಲ ಮನೋಭಾವನೆಯನ್ನು ಬೆಳೆಸುವುದು ಇದರ ಉದ್ದೇಶವಾಗಿತ್ತು.
ಈ ಹಂತದಲ್ಲಿ ಕುಮಾರ ಆಶಾನ್ ಇವರಿಬ್ಬರ ಜೊತೆಯಾಗುತ್ತಾರೆ. ಮೂಲತಃ ಕವಿ ಮತ್ತು ಲೇಖಕನಾದ ಆಶಾನ್ ತನ್ನ ಕಾವ್ಯ, ಬರಹ, ಭಾಷಣಗಳ ಮೂಲಕ ಚಳವಳಿಗೆ ಜೀವ ತುಂಬಿದವರು. ಅವರ ಸಂಪಾದಕತ್ವದ ವಿವೇಕೋದಯಂ ಪತ್ರಿಕೆ ಚಳವಳಿಯ ಮುಖವಾಣಿಯಾಗಿತ್ತು.
ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಅನ್ಯಾಯದ ವಿರುದ್ಧದ ಹೋರಾಟದ ಕಣಕ್ಕಿಳಿದ ಈಳವರು, ಆಗಲೇ ಸಾಕಷ್ಟು ಜಾಗೃತರಾಗಿದ್ದರು. ತಮ್ಮದೇ ದೇವಾಲಯಗಳು ಅವರ ಸಂಘಟನೆಗೆ ಶಕ್ತಿ ತುಂಬಿದ್ದವು. ಎಸ್ಎನ್ ಡಿಪಿ ಕೈಗಾರಿಕಾ ಸಮ್ಮೇಳನ ಮತ್ತು ಮಹಿಳಾ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿತ್ತು. ಹಲವಾರು ಯುವಕರು ಮದ್ರಾಸ್ ಬೆಂಗಳೂರಿಗೆ ಹೋಗಿ ಇಂಗ್ಲೀಷ್ ಮತ್ತು ಆಯುರ್ವೇದ ವ್ಯಾಸಂಗ ಮಾಡಿ ಬಂದಿದ್ದರು.
ನಾರಾಯಣ ಗುರುಗಳ ದೂರದರ್ಶಿತ್ವ ಮತ್ತು ಕಾರ್ಯತಂತ್ರ ಅರಿವಾಗುವುದು ಇಲ್ಲಿ. ದೇವಸ್ಥಾನ ಪ್ರವೇಶಕ್ಕೆ ಅವರು ಹೋರಾಟ ನಡೆಸಲಿಲ್ಲ. ಬದಲಿಗೆ ಅವರೇ ದೇವಸ್ಥಾನಗಳನ್ನು ಸ್ಥಾಪಿಸಿದರು. ಆದರೆ ಅದೇ ರೀತಿ ಅವರು ಸ್ವತಂತ್ರವಾಗಿ ಶಾಲೆಗಳನ್ನು ಸ್ಥಾಪಿಸಲು ಸಾಧ್ಯ ಇರಲಿಲ್ಲ, ಶಾಲೆಗಳ ಸ್ಥಾಪನೆಗೆ ಸರ್ಕಾರದ ಅನುಮತಿ ಬೇಕಿತ್ತು. ಅದಕ್ಕಾಗಿ ಸರ್ಕಾರಿ ಶಾಲೆಗಳ ಪ್ರವೇಶದ ಹಕ್ಕಿನ ಹೋರಾಟಕ್ಕೆ ಅವರು ಚಾಲನೆ ನೀಡಿದರು.
ಶಾಲೆಗಳ ಪ್ರವೇಶಕ್ಕಾಗಿ ಎಸ್ಎನ್ ಡಿಪಿ ಹೋರಾಟ ಪ್ರಾರಂಭಿಸಿದರೂ ಅದು ಅಷ್ಟೊಂದು ಸರಳವಾಗಿರಲಿಲ್ಲ. ಈಳವರಲ್ಲಿ ಬೆಳೆಯುತ್ತಿರುವ ಜಾಗೃತಿ ನಂಬೂದಿರಿ ಮತ್ತು ನಾಯಕ್ ಜನಾಂಗದಲ್ಲಿ ದ್ವೇಷದ ಕಿಚ್ಚು ಹತ್ತಿಸಿತ್ತು. ದೇವಸ್ಥಾನ ಸ್ಥಾಪನೆಯ ಕಾಲದಲ್ಲಿ ಎದುರಾಗದ ವಿರೋಧ ಶಾಲೆಗಳ ಪ್ರವೇಶದ ಹಕ್ಕಿನ ಚಳುವಳಿಗೆ ಎದುರಾಗಿತ್ತು. ಎಸ್ಎನ್ ಡಿಪಿ ಚಳವಳಿಯಲ್ಲಿ ಈ ಕಾಲ ನಿರ್ಣಾಯಕವಾದದ್ದು. ಆಗ ಎಲ್ಲೆಡೆ ನಾಯರ್-ಈಳವರ ಸಂಘರ್ಷ ನಡೆಯುತ್ತದೆ. ಈಳವ ಮಹಿಳೆಯರ ಮೇಲೆ ಬಹಿರಂಗವಾಗಿ ದೌರ್ಜನ್ಯವೆಸಗಲಾಗುತ್ತದೆ. ಎಸ್ಎನ್ ಡಿಪಿಯನ್ನು ಬೆಂಬಲಿಸುವ ಪತ್ರಿಕೆಗಳ ಕಚೇರಿಯನ್ನು ಸುಟ್ಟು ಹಾಕಲಾಗುತ್ತದೆ.
ಚಳವಳಿಯ ಒತ್ತಡಕ್ಕೆ ಮಣಿದ ತಿರುವಾಂಕೂರು ದಿವಾನರು ಈಳವರಿಗೆ ಅವರದ್ಧೆ ಶಾಲೆಗಳನ್ನು ಸ್ಥಾಪಿಸಲು ಅನುಮತಿ ನೀಡುತ್ತಾರೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಜಾತಿ ಜನರಿಗೆ ಮುಕ್ತ ಪ್ರವೇಶ ನೀಡುವ ಮಸೂದೆ ಜಾರಿಗೆ ಬರುತ್ತದೆ. ನಾರಾಯಣ ಗುರು ಚಳವಳಿಯಲ್ಲಿ ದೇವಸ್ಥಾನ ಸ್ಥಾಪನೆಗಿಂತಲೂ ಮುಖ್ಯವಾದ ಘಟನೆ ಇದು. ಇದು ಮುಖ್ಯವಾಗಿ ಕುಮಾರನ್ ಆಶಾನ್ ಮತ್ತು ಡಾ.ಪಲ್ಪು ಅವರ ನಾಯಕತ್ವದ ಜಯ. ಆದರೆ, ಶೂದ್ರರು ಸರ್ಕಾರಿ ಸೇವೆಗೆ ಸೇರುವ ಅವಕಾಶವನ್ನು ಕೊನೆಗೂ ತಮ್ಮ ಜೀವಮಾನದಲ್ಲಿ ನಾರಾಯಣ ಗುರುಗಳಿಗೆ ಕಾಣಲಾಗುವುದಿಲ್ಲ. 1936ರಲ್ಲಿ ಸರ್ಕಾರ ಲೋಕಸೇವಾ ಆಯೋಗವನ್ನು ಸ್ಥಾಪಿಸಿ, ಉನ್ನತ ಹುದ್ದೆಗಳನ್ನು ಹೊರತುಪಡಿಸಿ, ಹಿಂದುಳಿದವರಿಗೆ ಶೇ.40ರಷ್ಟು ಮೀಸಲಾತಿಯನ್ನು ನೀಡುತ್ತದೆ. ಅಷ್ಟರಲ್ಲಿ ಗುರುಗಳು ಇಹಲೋಕವನ್ನು ತ್ಯಜಿಸಿದ್ದರು.
ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರದಲ್ಲಿನ ಮೀಸಲಾತಿ ಈಳವ ಜನಾಂಗದಲ್ಲಿ ಎರಡೂ ವರ್ಗಗಳ ಬುದ್ಧಿಜೀವಿಗಳ ಸೃಷ್ಟಿಗೆ ಕಾರಣವಾಯಿತು. ಸಾಹಿತಿಗಳು, ಪತ್ರಕರ್ತರು, ಶಿಕ್ಷಕರು ಮತ್ತು ಧಾರ್ಮಿಕ ನಾಯಕರದ್ದು ಒಂದು ಗುಂಪಾದರೆ, ವೈದ್ಯರು, ವಕೀಲರು, ಉದ್ಯಮಿಗಳು, ಆಡಳಿತಾಧಿಕಾರಿಗಳು ಮತ್ತು ರಾಜಕಾರಣಿಗಳು ಇನ್ನೊಂದು ಗುಂಪಿನಲ್ಲಿದ್ದರು. ಕೇರಳದಲ್ಲಿ ಶಿಕ್ಷಣದ ಪ್ರಸಾರದಲ್ಲಿ ಆರ್.ಶಂಕರ್ ಅವರದ್ದು ನಿರ್ಣಾಯಕ ಪಾತ್ರ. ಇವರು ಸ್ಥಾಪಿಸಿದ್ದ "ಶ್ರೀ ನಾರಾಯಣ ಟ್ರಸ್ಟ್" 1952ರಲ್ಲಿಯೇ ನೂರಾರು ಶಾಲೆ, ಪಾಲಿಟೆಕ್ನಿಕ್, ಶಿಕ್ಷಕ ತರಬೇತಿ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ಹೊಂದಿದ್ದವು.
ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಈಳವರು ಅಭಿವೃದ್ಧಿ ಹೊಂದಿದ್ದರು. ಎಸ್ಎನ್ ಡಿಪಿಯ ಮೊದಲ ಅಧಿವೇಶನದ ಕಾಲದಲ್ಲಿಯೇ ನಾರಾಯಣ ಗುರುಗಳು ಕೈಗಾರಿಕಾ ಸಮ್ಮೇಳನವನ್ನು ನಡೆಸಿದ್ದರು. ಆನಂತರ ಅದು ವಾರ್ಷಿಕ ಕಾರ್ಯಕ್ರಮವಾಯಿತು. ತೆಂಗಿನನಾರು ಉದ್ದಿಮೆ ಜನಪ್ರಿಯವಾಗತೊಡಗಿದ್ದು ಅದೇ ಕಾಲದಲ್ಲಿ. ಪ್ರತಿ ದೇವಾಲಯ, ಆಶ್ರಮ ಮತ್ತು ಮಂದಿರಗಳಲ್ಲಿ ತೆಂಗು ನಾರಿನ ಉದ್ದಿಮೆಯ ಘಟಕಗಳನ್ನು ಸ್ಥಾಪಿಸುವಂತೆ ಅವರು ಪ್ರೇರೆಪಿಸಿದ್ದರು. ಈಗ ತೆಂಗುನಾರಿನ ಉದ್ದಿಮೆಯಲ್ಲಿ ಕೇರಳ ದೇಶದಲ್ಲಿಯೇ ಏಕಸ್ವಾಮ್ಯವನ್ನು ಪಡೆದಿದೆ.
ಈ ಹಂತದಲ್ಲಿ ಎಸ್ಎನ್ ಡಿಪಿ ಮುಂದಿನ ಹೋರಾಟವನ್ನು ರಾಜಕೀಯ ಪ್ರಾತಿನಿದ್ಯಕ್ಕಾಗಿ ಕೇಂದ್ರಿಕರಿಸುತ್ತದೆ. ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾಗುತ್ತವೆ. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ ಮತ್ತು ಶೇ.18ರಷ್ಟಿದ್ದ ಮುಸ್ಲಿಮರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ.
ಐದು ರೂಪಾಯಿ ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು. ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನು ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ "ಸಂಯುಕ್ತ ರಾಜಕೀಯ ಸಂಘಟನೆ"ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿದವು. ಈ ಹೋರಾಟದ ಕಾವಿಗೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಆದರೆ, ಈ ರಾಜಕೀಯ ಚಳವಳಿ ಮುಂದಿನ ದಿನಗಳಲ್ಲಿ ಕೇರಳದ ರಾಜಕೀಯ ಸ್ಥಿತ್ಯಂತರಗಳಿಗೆ ಕಾರಣವಾದಂತೆಯೇ ಎಸ್ಎನ್ ಡಿಪಿ ಸಂಘಟನೆಯಲ್ಲಿ ಬಿರುಕು ಮೂಡಲು ಕೂಡ ಕಾರಣವಾಗಿದ್ದು ಮಾತ್ರ ದುರಂತ.
1936ರಲ್ಲಿ ಎಸ್ಎನ್ಡಿಪಿ ಸಂಘಟನಾ ಜಾಲ ವ್ಯಾಪಕವಾಗಿ ಹರಡಿತ್ತು. ಅದರ ಹತ್ತು ಯೂನಿ ಯನ್ ಗಳು, 245 ಶಾಖೆಗಳು ಸ್ಥಾಪನೆಯಾಗಿದ್ದವು. 50,000ಕ್ಕೂ ಹೆಚ್ಚಿನವರು ಅದರ ಸಕ್ರಿಯ ಸದಸ್ಯರಾಗಿದ್ದರು. ಎಸ್ಎನ್ ಡಿಪಿಯ ಮುಖ್ಯ ಉದ್ದೇಶ ಗಳು ಈಡೇರಿದ್ದವು. ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಾತಿಯೊಂದರ ಸಂಘಟನೆಯ ಮೇಲೆ ರಾಜಕೀಯ ನಾಯಕರ ಕಣ್ಣು ಬಿದ್ದಿತ್ತು. ಸಂಘಟನೆಯಲ್ಲಿದ್ದ ಅನೇಕರಲ್ಲಿ ರಾಜಕೀಯ ಆಕಾಂಕ್ಷೆಗಳು ಹುಟ್ಟಿಕೊಂಡಿದ್ದವು.
ನಾರಾಯಣ ಗುರುಗಳ ಸಾವಿನ ನಂತರ ಪರಸ್ಪರ ಭಿನ್ನ ವಿಚಾರಧಾರೆಯನ್ನು ಹೊಂದಿದ್ದ ನಾಯಕರು ಎಸ್ಎನ್ ಡಿಪಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನ ಪಟ್ಟರು. ಮೊದಲನೆಯದಾಗಿ ಮೇಲ್ಜಾತಿ ಜನರ ವೈರಿ ಎಂದು ಬಗೆಯಲಾದ ಬ್ರಿಟಿಷರನ್ನು ಸ್ನೇಹಿತರೆಂದು ತಿಳಿದುಕೊಂಡಿದ್ದ ಮಿತವಾದಿ ಕೃಷ್ಣನ್, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವ ಮೂಲಕವೇ ಈಳವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದ ಕಾಂಗ್ರೆಸ್ ಒಲವಿನ ಟಿ.ಕೆ ಮಾಧವನ್ ಮತ್ತು ಸಿ.ಕೇಶವನ್, ಸಮಾಜವಾದಿ ಮತ್ತು ಪುರೋಗಾಮಿ ವಿಚಾರಧಾರೆಯ ಸಹೋದರ ಅಯ್ಯಪ್ಪನ್ ಅವರ ಸಮಾಜವಾದಿ-ಪುರೋಗಾಮಿ ವಿಚಾರಧಾರೆಗಳನ್ನು ಮೇಳೈಸಲು ಯತ್ನಿಸುತ್ತಿದ್ದ ಇನ್ನೊಂದು ಗುಂಪು ಇದರಲ್ಲಿ ಪ್ರಮುಖವಾದವುಗಳು. ಈ ಕೊನೆಯ ಗುಂಪನ್ನೇ ಕಮ್ಯೂನಿಸ್ಟ್ ರೆಂದು ಕರೆಯಲಾಗುತ್ತಿತ್ತು.
ಕೇರಳದ ಕಮ್ಯೂನಿಸ್ಟ್ ಪಕ್ಷವನ್ನು ನಾರಾಯಣ ಗುರು ಚಳವಳಿಯ ಮುಂದುವರೆದ ಭಾಗವೆಂದು ಹೇಳಲು ಇತಿಹಾಸವೇ ಪುರಾವೆ. ಅಧಿಕೃತವಾಗಿ ನಾರಾಯಣ ಗುರು ಚಳವಳಿಗೆ ಎಸ್ಎನ್ ಡಿಪಿಯೇ ಉತ್ತರಾಧಿಕಾರವನ್ನು ಪಡೆದಿದ್ದರೂ ಅದು ಕಮ್ಯೂನಿಸ್ಟ್ ಚಳವಳಿಗೆ ನಾಂದಿಯಾಗಿದ್ದನ್ನು ಇತಿಹಾಸ ಹೇಳುತ್ತದೆ. ಈ ಬೆಳವಣಿಗೆಗೆ ಮುಖ್ಯವಾಗಿ ಕಾರಣಕರ್ತರಾದವರು ಸಹೋದರ ಅಯ್ಯಪ್ಪನ್.
ಪ್ರಗತಿಪರ ಚಿಂತನೆಯ, ನೇರನಡೆನುಡಿಯ ಅಯ್ಯಪ್ಪನ್ ಹುಟ್ಟಿನಿಂದಲೇ ಹೋರಾಟಗಾರ ಮತ್ತು ಅಪ್ರತಿಮ ಧೈರ್ಯಶಾಲಿ. ಜಾತಿ ಶ್ರೇಣಿಯಲ್ಲಿ ಈಳವರಿಗಿಂತ ಕೆಳಗಿದ್ದ ಪುಲಯರ ಜೊತೆ ತಮ್ಮೂರಿನಲ್ಲಿ ಸಹಭೋಜನ ಮಾಡಿಸಿ ಜಾತಿಯಿಂದ ಬಹಿಷ್ಕೃತನಾದ ಅಯ್ಯಪ್ಪನ್ ಜಾತಿ ನಿರ್ಮೂಲನೆಯ ಪ್ರಬಲ ಪ್ರತಿಪಾದಕ. ಅಯ್ಯಪ್ಪನ್ ಅವರನ್ನು ಗುರುತಿಸಿದ ಗುರುಗಳು ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡುವ ಉದ್ಧೇಶ ಹೊಂದಿದ್ದರಂತೆ. ಮೂಲತಃ ನಾಸ್ತಿಕನಾದ ಅಯ್ಯಪ್ಪನ್ "ಸ್ವತಂತ್ರ ಸಮುದಾಯ ಪ್ರತಿಷ್ಠಾನ"ವನ್ನು ಸ್ಥಾಪಿಸಿ ಸಹೋದರ ಎನ್ನುವ ಪತ್ರಿಕೆ ಪ್ರಾರಂಭಿಸಿ ಜಾತಿ ವಿನಾಶ ಚಳವಳಿಯನ್ನು ನಡೆಸುತ್ತಿದ್ದರು. ಅವರನ್ನು ‘ಪುಲಯರ ಅಯ್ಯಪ್ಪನ್’ ಎಂದು ಜನ ಗೇಲಿ ಮಾಡುತ್ತಿದ್ದರಂತೆ.
1937ರಲ್ಲಿ ಕೇರಳದಲ್ಲಿ ಕಮ್ಯೂನಿಸ್ಟ್ ಪಕ್ಷ ಪಿ.ಕೃಷ್ಣಪಿಳ್ಳೆ ಮತ್ತು ಇ.ಎಂ.ಎಸ್ ನಂಬೂದಿರಿ ಪಾಡ್ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಅಯ್ಯಪ್ಪನ್, ದಾಮೋದರನ್, ಸುಕುಮಾರನ್ ಮೊದಲಾದ ನಾರಾಯಣ ಗುರು ಅನುಯಾಯಿಗಳು ಕಮ್ಯೂನಿಸ್ಟ್ ಪಕ್ಷವನ್ನು ಬೆಂಬಲಿಸುತ್ತಿದ್ದರೆ ಆ ಕಾಲದ, ಎಸ್.ಎನ್.ಡಿ.ಪಿ ಯ ನಾಯಕರಾದ ಸಿ.ಕೇಶವನ್, ಟಿ.ಕೆ ಮಾಧವನ್ ಮತ್ತು ಆರ್.ಶಂಕರ್ ಕಾಂಗ್ರೆಸ್ ಒಲವುಳ್ಳವರಾಗಿದ್ದರು. ವಿಪರ್ಯಾಸವೆಂದರೆ ಎಸ್.ಎನ್.ಡಿ.ಪಿ ಚಳವಳಿಯಿಂದ ಜಾಗೃತರಾದ ಕೆಳವರ್ಗದ ಜನಸಮೂಹ ಎಡಪಕ್ಷಗಳ ಕಡೆ ಆಕರ್ಷಿತರಾಗಿದ್ದರು. ಅವರಲ್ಲಿ ಭೂ ಹೀನ ಕಾರ್ಮಿಕರು ಗೇಣಿದಾರರು ಸೇಂದಿ ತೆಗೆಯುವವರು, ಪ್ಲಾಂಟೇಷನ್ ಕಾರ್ಮಿಕರು, ಗೇರುಬೀಜ ಕಾರ್ಖಾನೆಯ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆ ವರ್ಗಗಳಲ್ಲಿ ಸಕ್ರಿಯವಾಗಿದ್ದ ಕಾರ್ಮಿಕರ ಸಂಘಟನೆಗಳು ಕಮ್ಯೂನಿಸ್ಟ್ ಪಕ್ಷವನ್ನು ಬೆಂಬಲಿಸಿದವು.
ಆದರೆ, ಕಮ್ಯೂನಿಸ್ಟ್ ಪಕ್ಷದಲ್ಲಿ ನಾಯಕತ್ವ ಮಾತ್ರ ಈಳವ, ಪುಲಯ, ಪರವರ ಕೈಗೆ ಬರಲಿಲ್ಲ. ಅದು ನಂಬೂದಿರಿ ನಾಯರ್ ಕೈಯಲ್ಲಿ ಭದ್ರವಾಗಿಯೇ ಉಳಿದುಬಿಟ್ಟಿತ್ತು. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳನ್ನು ಪಡೆದಿದ್ದ ಹಿರಿಯ ನಾಯಕಿ ಕೆ.ಆರ್ ಗೌರಿಯವರನ್ನು ವ್ಯವಸ್ಥಿತ ಸಂಚಿನಿಂದ ಪಕ್ಷದಿಂದ ಹೊರಹಾಕಲಾಯಿತು.
ಕಾಂಗ್ರೆಸ್ ಪಕ್ಷವು ಈಳವರಿಗೆ ರಾಜಕೀಯ ಅಧಿಕಾರವನ್ನು ನೀಡಿತು. 1951ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈಳವರ ನಾಯಕ ಸಿ.ಕೇಶವನ್ ಮುಖ್ಯಮಂತ್ರಿಯಾದರು. 1962ರಲ್ಲಿ ಮತ್ತೊಬ್ಬ ಈಳವ ಆರ್. ಶಂಕರ್ ಮುಖ್ಯಮಂತ್ರಿಯಾದರು. 1971ರಲ್ಲಿ ಅಲ್ಲಿನ ವಿಧಾನಸಭೆಯಲ್ಲಿ 28 ಈಳವ ಶಾಸಕರಿದ್ದರು. ಇಂದು ಕೂಡಾ ಕೇರಳದಲ್ಲಿ ಎಸ್.ಎನ್.ಡಿ.ಪಿ ಮತ್ತು ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಾಲಯಗಳು ಹಾಗೂ ಸನ್ಯಾಸಿ ಸಂಘದ ಮೇಲೆ ನಿಯಂತ್ರಣ ಸ್ಥಾಪಿಸಲು ಕಾಂಗ್ರೆಸ್ ಮತ್ತು ಎಡಪಕ್ಷಗಳ ನಡುವೆ ಸಂಘರ್ಷ ನಡೆಯುತ್ತಿದೆ. ಎಸ್.ಎನ್.ಡಿ.ಪಿ, ಶ್ರೀ ನಾರಾಯಣ ಟ್ರಸ್ಟ್ ಮತ್ತು ಸನ್ಯಾಸಿ ಸಂಘ ಇಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.
ಕೆಲವು ವರ್ಷಗಳ ಹಿಂದೆ ಸನ್ಯಾಸಿ ಸಂಘದ ಮುಖ್ಯಸ್ಥರಾದ ಸ್ವಾಮಿಗಳು ಅಧಿಕಾರ ಬಿಟ್ಟುಕೊಡದಾಗ ಎ.ಕೆ ಆ್ಯಂಟನಿ ಸರ್ಕಾರ ಅಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಿತು. ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಿರಾಕರಿಸಿದ ಸ್ವಾಮಿಗಳು ಮುಸ್ಲಿಂ ಉಗ್ರಗಾಮಿಗಳ ನೆರವು ಪಡೆದು ಮಠದೊಳಗೆ ಬಂದೂಕು-ಬಾಂಬುಗಳನ್ನು ಶೇಖರಿಸಿಟ್ಟು ಪ್ರತಿರೋಧ ವ್ಯಕ್ತಪಡಿಸಿದರು. ನಾರಾಯಣ ಗುರು ಚಳವಳಿ ಅವರ ಮರಣಾ ನಂತರದ 60 ವರ್ಷಗಳಲ್ಲಿ ತಲುಪಿರುವ ದುರಂತ ಸ್ಥಿತಿ ಇದು.
ಮೇಲ್ಜಾತಿ ಜನರೂ ಸೇರಿದಂತೆ, ಎಲ್ಲ ವರ್ಗಗಳೊಳಗಿನಿಂದಲೂ ಸುಧಾರಣೆಯ ಧ್ವನಿ ಏಳುವಂತೆ ಮಾಡಿದ್ದು ನಾರಾಯಣಗುರು ಚಳವಳಿಯ ಇನ್ನೊಂದು ಸಾಧನೆ. ನಾಯರ್ ಸೇವಾ ಸಂಘ, ಪುಲಯ ಮಹಾಜನ ಸಭಾ ಮತ್ತು ನಂಬೂದಿರಿಗಳ ಯೋಗಕ್ಷೇಮ ಸಭಾಗಳು ಎಸ್.ಎನ್.ಡಿ.ಪಿ ಮಾದರಿಯಲ್ಲಿಯೇ ತಮ್ಮ ಜನಾಂಗಗಳ ಸುಧಾರಣೆಗೆ ಪ್ರಯತ್ನ ನಡೆಸಿದವು. ಸುಧಾರಣಾ ಚಳವಳಿಯಲ್ಲಿ ಭಾಗವಹಿಸಿದ್ದ ನಂಬೂದಿರಿ ಯುವಕರು ಬಹುಬೇಗನೆ ಕಮ್ಯೂನಿಸ್ಟ್ ಪಕ್ಷದ ಕಡೆ ಆಕರ್ಷಿತರಾದರು. ಮುಂದೆ ಕಮ್ಯೂನಿಸ್ಟ್ ಪಕ್ಷದ ನಾಯಕತ್ವ ನಂಬೂದಿರಿ, ನಾಯರ್ ಗಳ ಪಾಲಾಗಿ ಇತಿಹಾಸ ಮರುಕಳಿಸಿದ್ದನ್ನು ಕಾಣಬಹುದು.
ನಾರಾಯಣ ಗುರು ಚಳವಳಿ ಕೇರಳದಲ್ಲಿ ನಡೆಯದೇ ಹೋಗಿದ್ದರೆ, ಏನಾಗುತ್ತಿತ್ತು ಎಂಬ ಪ್ರಶ್ನೆಗೆ ರಾಜಗೋಪಾಲಚಾರಿ ಅವರು ಆ ಚಳವಳಿ ನಡೆಯುತ್ತಿದ್ದ ಕಾಲದಲ್ಲಿಯೇ ಉತ್ತರ ನೀಡಿದ್ದರು. ತಿರುವಾಂಕೂರು ಸಂಸ್ಥಾನದ ದಿವಾನರು ದೇವಸ್ಥಾನ ಪ್ರವೇಶ ಘೋಷಣೆ ಹೊರಡಿಸಲು ವಿಳಂಬ ಮಾಡುತ್ತಿದ್ದನ್ನು ಕಂಡ ರಾಜಗೋಪಾಲಾಚಾರಿಯವರು ದಿವಾನರಿಗೆ ಪತ್ರ ಬರೆದು "ನಾರಾಯಣ ಗುರುಗಳ ಸುಧಾರಣಾ ಚಳವಳಿ ನಡೆಯದೆ ಹೋಗಿದ್ದರೆ, ಕೇರಳದಲ್ಲಿನ ಅರ್ಧಕ್ಕೂ ಹೆಚ್ಚಿನ ಜನಸಂಖ್ಯೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿ ಹೋಗುತ್ತಿದ್ದರು" ಎಂದು ಎಚ್ಚರಿಸಿದ್ದರು. ಕೇರಳದ ಆಗಿನ ಸ್ಥಿತಿಯಲ್ಲಿ ಈ ಎಚ್ಚರಿಕೆ ಉತ್ಪ್ರೇಕ್ಷೆ ಆಗಿರಲಿಲ್ಲ.
ವಾಸ್ಕೋಡಗಾಮ ಮೊದಲು ಬಂದಿಳಿದ ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಉಳಿದೆಲ್ಲಾ ಕಡೆಗಳಿಗಿಂತ ಹೆಚ್ಚು ಕ್ರೀಯಾಶೀಲವಾಗಿದ್ದವು. ನಾರಾಯಣಗುರುಗಳ ಪ್ರವೇಶವಾಗುವ ಮೊದಲು ಅಲ್ಲಿ ಜಾತಿ ಆಧಾರಿತ ದೌರ್ಜನ್ಯದಿಂದ ಬೇಸತ್ತ ಕೆಳವರ್ಗದ ಜನ ಸಾಮೂಹಿಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ, ದೇಶದಲ್ಲಿ ಅತಿಹೆಚ್ಚು ಕ್ರಿಶ್ಚಿಯನ್ ಜನಸಂಖ್ಯೆ ಇರುವ ರಾಜ್ಯ ಕೇರಳ. ಅಲ್ಲಿ ಶೇ.24ರಷ್ಟು ಕ್ರಿಶ್ಚಿಯನರು ಇರುವುದು ಈ ಮತಾಂತರಕ್ಕೆ ಸಾಕ್ಷಿ.
ನಾರಾಯಣ ಗುರುಗಳ ಚಳವಳಿಯುದ್ದಕ್ಕೂ ಹಲವಾರು ಬಾರಿ ತಮ್ಮ ಅನುಯಾಯಿಗಳಿಂದಲೇ ಮತಾಂತರದ ಬೆದರಿಕೆಯನ್ನು ಎದುರಿಸಿದ್ದರು. ವೈಕಂ ಸತ್ಯಾಗ್ರಹದ ಕಾಲದಲ್ಲಿ ಮತ್ತು ಅದಕ್ಕಿಂತ ಮೊದಲು ಮತಾಂತರದ ವಿಚಾರ ಎಸ್.ಎನ್.ಡಿ.ಪಿಯಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಗುರುಗಳ ಪ್ರಮುಖ ಶಿಷ್ಯರಲ್ಲಿ ಸಿ.ವಿ ಕುಂಜುರಾಮನ್ ಕ್ರಿಶ್ಚಿಯನ್ ಮತಾಂತರವನ್ನು ಪ್ರತಿಪಾದಿಸುತ್ತಿದ್ದರೆ, ಸಹೋದರ ಅಯ್ಯಪ್ಪನ್ ಮತ್ತು ಸಿ.ಕೃಷ್ಣನ್ ಬೌದ್ಧ ಧರ್ಮದ ಪರ ಒಲವು ತೋರಿಸಿದ್ದರು. ಕುಮಾರ್ ಆಶಾನ್ ಕೂಡ ಬೌದ್ಧ ಧರ್ಮದ ಕಡೆ ಆಕರ್ಷಿತರಾಗಿದ್ದರೂ ಬಹಿರಂಗವಾಗಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ಟಿ.ಕೆ ಮಾಧವನ್ ಮತಾಂತರವನ್ನೇ ವಿರೋಧಿಸುತ್ತಿದ್ದರು.
ಎಸ್.ಎನ್.ಡಿ.ಪಿ ಅಸ್ತಿತ್ವವನ್ನೇ ಅಲುಗಾಡಿಸಿದ ಈ ವಿವಾದ ನಾರಾಯಣ ಗುರುಗಳಿಗೆ ಒಂದು ಸವಾಲಾಗಿತ್ತು. ತಕ್ಷಣ ಸ್ವಾಮಿಗಳು ಅಲ್ವಾಯಿಯಲ್ಲಿ 1924 ಫೆಬ್ರವರಿಯಲ್ಲಿ ಎರಡು ದಿನಗಳ ಸರ್ವಧರ್ಮ ಸಮ್ಮೇಳನ ನಡೆಸಿದರು. ಈ ಸಮ್ಮೇಳನ ನಡೆಯುತ್ತಿರುವುದು "ತರ್ಕ ನಡೆಸುವದಕ್ಕಾಗಲಿ, ಗೆಲ್ಲುವುದಕ್ಕಾಗಲಿ ಅಲ್ಲ. ಪರಸ್ಪರ ತಿಳಿದುಕೊಳ್ಳುವುದು ಮತ್ತು ತಿಳಿಸಿಕೊಡುವುದು ಇದರ ಉದ್ದೇಶ" ಎಂದು ನಾರಾಯಣ ಗುರುಗಳು ಘೋಷಿಸಿದ್ದರು. ಸ್ವಾಮಿಗಳು "ಒಂದು ಜಾತಿ, ಒಂದು ಮತ, ಒಂದೇ ದೇವರು" ಎಂಬ ಸಂದೇಶ ಸಾರಿದರು. ಮನುಷ್ಯ ಬದಲಾದರೆ, ಜಾತಿ ಬದಲಾಯಿಸಬೇಕಾದ ಅಗತ್ಯ ಇಲ್ಲವೆಂದು ಅವರು ಹಿಂದೂ ಧರ್ಮದ ನಾಯಕರನ್ನು ಉದ್ದೇಶಿಸಿ ಹೇಳಿದರು. ಮತಾಂತರದ ವಿವಾದ ಅಲ್ಲಿಗೆ ತಣ್ಣಗಾಯಿತು.
ಚಳವಳಿಯುದ್ದಕ್ಕೂ ನಾರಾಯಣ ಗುರುಗಳಲ್ಲಿ ಯಾವುದೇ ರೀತಿಯ ಗೊಂದಲ, ಹತಾಶೆ, ನಿರಾಶೆ ಮೂಡಿದ್ದು ಕಾಣುವುದಿಲ್ಲ. ಆದರೆ, ಜೀವನದ ಕೊನೆಯ ಎರಡು ವರ್ಷಗಳಲ್ಲಿ ನಾರಾಯಣ ಗುರುಗಳು ಖಿನ್ನರಾಗಿದ್ದರು. ತಮ್ಮ ಅನುಯಾಯಿಗಳಲ್ಲಿ ಹುಟ್ಟಿಕೊಂಡ ರಾಜಕೀಯ ಆಕಾಂಕ್ಷೆ ಮತ್ತು ಆಸ್ತಿ ಮೇಲೆ ನಿಯಂತ್ರಣಕ್ಕೆ ಅವರು ನಡೆಸುತ್ತಿದ್ದ ಶೀತಲ ಸಮರ ಅವರ ಗಮನಕ್ಕೆ ಬಂದಿತ್ತು. ಇದೇ ಬೇಸರದಿಂದ ಅವರು ಶ್ರೀಲಂಕಾಕ್ಕೆ ಹೋಗಿ ಅಲ್ಲಿಯೇ ಶಾಶ್ವತವಾಗಿ ನೆಲೆಸಲು ಬಯಸಿದ್ದರು. ಆದರೆ, ಅನುಯಾಯಿಗಳ ಒತ್ತಡಕ್ಕೆ ಮಣಿದು ಹಿಂದಿರುಗಿದರೂ ಅವರು ಎರಡು ವರ್ಷಗಳಿಗಿಂತ ಹೆಚ್ಚು ಕಾಲ ಬದುಕಲಿಲ್ಲ.
ನಾರಾಯಣ ಗುರುಗಳು ಚಳವಳಿಗೂ ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆದ ಬಸವ ಚಳವಳಿಗೂ ಸಿದ್ಧಾಂತ ಮತ್ತು ಕಾರ್ಯತಂತ್ರಗಳಲ್ಲಿ ಕಂಡುಬರುವ ಹಲವಾರು ಸಾಮ್ಯಗಳು ಇನ್ನೊಂದು ಪ್ರತ್ಯೇಕ ಅಧ್ಯಯನಕ್ಕೆ ವಸ್ತುವಾಗಬಹುದು. ಇಬ್ಬರೂ ವರ್ಣಾಶ್ರಮ ವ್ಯವಸ್ಥೆಯನ್ನು ಪ್ರಶ್ನಿಸುತ್ತಲೇ ಧರ್ಮವನ್ನು ಜನಪರಗೊಳಿಸಿ, ಪೂಜಾವಿಧಾನವನ್ನು ಸರಳಗೊಳಿಸುವ ಪ್ರಯತ್ನ ಮಾಡಿದವರು. ಎರಡೂ ಚಳವಳಿಯಲ್ಲಿ ಕಾಣುವ ಪ್ರಜಾಸತಾತ್ಮಕ ಮೌಲ್ಯಗಳು ಅನನ್ಯವಾದುದು. ಮೂಲತಃ ನಾರಾಯಣ ಗುರುಗಳು ಸತ್ಯಾಗ್ರಹದ ಬಗ್ಗೆ ವಿರೋಧ ಹೊಂದಿದ್ದರು. ಅದೊಂದು ಭಾವನಾತ್ಮಕ ಶೋಷಣೆಯೆಂದು ಹೇಳುತ್ತಿದ್ದರು. ಆದರೆ, ತಮ್ಮ ಶಿಷ್ಯ ಟಿ.ಕೆ ಮಾಧವನ್ ವೈಕಂ ಸತ್ಯಾಗ್ರಹ ಪ್ರಾರಂಭಿಸಿದಾಗ ದೇವಸ್ಥಾನ ಪ್ರವೇಶ ಚಳವಳಿ ಮತ್ತು ಸತ್ಯಾಗ್ರಹ ಎರಡರ ಬಗ್ಗೆ ವಿರೋಧವಿದ್ದರೂ ಅದನ್ನು ಬೆಂಬಲಿಸಿದರು.
ನಾರಾಯಣ ಗುರುಗಳ ಪ್ರೀತಿಯ ಅನುಯಾಯಿಯಾದ ಸಹೋದರ ಅಯ್ಯಪ್ಪನ್ ಪುಲಯರೊಂದಿಗೆ ಸಹಭೋಜನ ಮಾಡಿ ಜಾತಿಯಿಂದ ತಿರಸ್ಕೃತರಾದಾಗ ಅವರು ಅಯ್ಯಪ್ಪನನ್ನು ಬೆಂಬಲಿಸುತ್ತಾರೆ. ದೇವಾಲಯಗಳ ಸ್ಥಾಪನೆಯನ್ನು ವಿರೋಧಿಸುತ್ತಲೇ ಬಂದ ಅಯ್ಯಪ್ಪನ್ ಕರಮಕೊಂಡಂನಲ್ಲಿ ದೇವಾಲಯ ಸ್ಥಾಪನೆ ಮಾಡಲು ಬಂದ ಗುರುಗಳ ವಿರುದ್ಧವೇ ಪ್ರತಿಭಟನೆ ಮಾಡುತ್ತಾರೆ. ಅದಕ್ಕೆ ಮಣಿದ ಗುರುಗಳು ಮುಂದೆ ದೇವಾಲಯಗಳ ಸ್ಥಾಪನೆಯನ್ನೇ ನಿಲ್ಲಿಸುತ್ತಾರೆ.
ಮತಾಂತರ ವಿಷಯದಲ್ಲಿ ಗುರು ಮತ್ತು ಅನುಯಾಯಿಗಳ ನಡುವೆ ಭಿನ್ನಾಭಿಪ್ರಾಯವಿದ್ದರೂ ಕೊನೆಗೆ ಎಲ್ಲರೂ ಗುರುಗಳ ಅಭಿಪ್ರಾಯಕ್ಕೆ ಬದ್ಧರಾಗುತ್ತಾರೆ. ಇಂತಹದ್ದೇ ಬೆಳವಣಿಗೆಗೆಳನ್ನು ಬಸವ ಚಳವಳಿಯೊಳಗೂ ಕಾಣಬಹುದು. ಎರಡೂ ಚಳವಳಿಗಳ ಅನುಯಾಯಿಗಳಲ್ಲಿಯೂ ಸಾಕಷ್ಟು ಹೋಲಿಕೆ ಇದೆ. ಬಸವಣ್ಣನ ಅನುಯಾಯಿಗಳಾದ ಅಲ್ಲಮ, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಸಿದ್ಧರಾಮೇಶ್ವರ ಹಾಗೂ ನಾರಾಯಣ ಗುರು ಅನುಯಾಯಿಗಳಾದ ಪಲ್ಪು, ಆಶಾನ್, ಅಯ್ಯಪ್ಪನ್ ಮೊದಲಾದವರಲ್ಲಿ ಸಾಮ್ಯಗಳಿವೆ. ಎರಡು ಚಳವಳಿಯ ನಾಯಕರ ಅಂತ್ಯಕ್ಕೂ ಅಷ್ಟೇ ಹೋಲಿಕೆಗಳಿವೆ. ಇಬ್ಬರೂ ಕೊನೆಗಾದಲ್ಲಿ ಅನುಯಾಯಿಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಲಾಗದೆ ಸಂಕಟ ಅನುಭವಿಸುತ್ತಾರೆ. ಸಾವಿನ ನಂತರ ಇಬ್ಬರೂ ಭಕ್ತರ ಕೈಯಲ್ಲಿ ಬಂಧಿಯಾಗಿ ಕಲ್ಲಿನಮೂರ್ತಿಗಳಾಗುತ್ತಾರೆ.
ಕೇರಳದಿಂದಾಚೆಗೆ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತು ಪಡಿಸಿದರೆ, ಬೇರೆಡೆ ನಾರಾಯಣ ಗುರು ಚಳವಳಿ ಹೆಚ್ಚು ಪರಿಚಿತವಲ್ಲ. ನಾರಾಯಣ ಗುರುಗಳ ಶಿಷ್ಯರೇ ಆದ ಡಾ.ಪಲ್ಪು ಅವರ ಮಗ ನಟರಾಜ ಗುರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುಗಳ ಚಿಂತನೆಯ ಪ್ರಸಾರ ಮಾಡಿದರು. ಅವರು ಶಿವಗಿರಿಯ ಸಮೀಪ ಸ್ಥಾಪಿಸಿರುವ ಈಸ್ಟ್ ವೆಸ್ಟ್ ವಿಶ್ವವಿದ್ಯಾಲಯವಿದೆ. ಆದರೆ, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನೂರಾರು ಗುರುಮಂದಿರಗಳಲ್ಲಿ ಅವರಿಗಾಗಿಯೇ ಕಟ್ಟಿದ ದೇವಾಲಯಗಳಲ್ಲಿ ನಾರಾಯಣ ಗುರುಗಳ ಆರಾಧನೆ-ಭಜನೆಗಳು ಕೂಡ ನಾರಾಯಣನೆಂಬ ಈ "ನರ"ನ ಸಾಧನೆಯ ಬಗ್ಗೆ ತಪ್ಪು ಕಲ್ಪನೆಗಳನ್ನೇ ಬಿತ್ತುತ್ತಿವೆ.
ಸಾವಿರಾರು ವರ್ಷಗಳಿಂದ ಬೇರುಬಿಟ್ಟ ವೈದಿಕ ಶಾಹಿ, ಫ್ಯಾಸಿಸ್ಟ್ ಶಕ್ತಿ ತನ್ನನ್ನು ಪ್ರಶ್ನಿಸಿದವರನ್ನು ಮೊದಲು ನಾಶ ಮಾಡಲು ಪ್ರಯತ್ನಿಸುತ್ತದೆ. ಸಾಧ್ಯವಾಗದಿದ್ದರೆ, ತನ್ನೊಳಗೆ ಜೀರ್ಣಿಸಿಕೊಂಡು ಬಿಡುತ್ತದೆ. ಬುದ್ಧ ವಿಷ್ಣುವಿನ ಅವತಾರವಾದ ಬಸವಣ್ಣ ನಂದಿಯ ಅವತಾರವಾದ ದುರಂತವೇ ನಾರಾಯಣ ಗುರುಗಳಿಗಾಗಿದೆ. ಸನ್ಯಾಸಿಯಾದ ದಿನದಿಂದ ಸಾವಿನವರೆಗೂ ಕೇರಳದ ಅತ್ಯಂತ ಕೀಳು ಜಾತಿಯವರೆನಿಸಿದ ಪುಲಯ ಜನಾಂಗದ ಅಡಿಗೆಯವನಿಂದಲೆ ಕೈತುತ್ತು ತಿಂದು ಬದುಕಿದ ಈ ಅಪ್ರತಿಮ ಮಾನವತಾವಾದಿ ಇಂದು ಈಳವ - ಬಿಲ್ಲವ ಜಾತಿ ಜನರ ನಾಯಕನಾಗಿಬಿಟ್ಟಿದ್ದಾರೆ.
ವಿದ್ಯೆಯಿಂದ ಸ್ವತಂತ್ರರಾಗಿರಿ ಎಂದ ಗುರುಗಳ ಚಿಂತನೆಯನ್ನು ವಿದ್ಯೆ ಎಂದರೆ, ಅಕಾಡೆಮಿಕ್ ಶಿಕ್ಷಣ ಎಂದು ತಿಳಿದಷ್ಟೇ ಕಾರಣ. ಅವರ ಅನುಯಾಯಿಗಳೆನಿಸಿಕೊಂಡವರು ಇಂದಿಗೂ ಬೌದ್ಧಿಕ ದಾಸ್ಯದಿಂದ ಮುಕ್ತವಾಗಿಲ್ಲ. ಹಾಗಿಲ್ಲದಿದ್ದರೆ, ವರ್ಣಾಶ್ರಮ ವ್ಯವಸ್ಥೆಗೆ ಸವಾಲಾಗಿ ನಾರಾಯಣ ಗುರುಗಳು ಮಂಗಳೂರಿನಲ್ಲಿ ಸ್ಥಾಪಿಸಿದ ದೇವಾಲಯವನ್ನು ಜೀರ್ಣೋದಯ ಮಾಡಿದ ಅವರ ಅನುಯಾಯಿಗಳು, ಅದನ್ನು ವರ್ಣಾಶ್ರಮ ವ್ಯವಸ್ಥೆಯನ್ನು ಇಂದಿಗೂ ಪ್ರತಿಪಾದಿಸುವ ಶೃಂಗೇರಿ ಮಠದ ಸ್ವಾಮಿಗಳಿಂದ ಉದ್ಘಾಟನೆ ಮಾಡಿಸುತ್ತಿರಲಿಲ್ಲ.
ಒಂದು ಜಾತಿ, ಒಂದು ಮತ, ಒಂದೇ ದೇವರು ಎಂದು ಸಾರಿದ ನಾರಾಯಣ ಗುರುಗಳು ಇಲ್ಲಿ ಒಂದು ಜಾತಿಯ ಮಂದಿರಗಳಲ್ಲಿ ಬಂಧಿಯಾಗಿದ್ದಾರೆ. ಆ ಜಾತಿ ಜನರಾದವರೂ ಗುರುಗಳ ತತ್ವವನ್ನು ಪಾಲಿಸುತ್ತಿದ್ದಾರೆಯೇ? ನಾರಾಯಣ ಗುರುಗಳನ್ನು ಇಂದಿನ ಬಂಧನದಿಂದ ಬಿಡಿಸುವವರ್ಯಾರು?
ಭಕ್ತಸಮೂಹ, ಭಜನಾ ಮಂಡಳಿಗಳಾಚೆ ನಡೆಯುವ ಈ ರೀತಿಯ ವೈಚಾರಿಕ ಚರ್ಚೆ ಸಂವಾದಗಳು ಮಾತ್ರ ನಾರಾಯಣ ಗುರುಗಳನ್ನು ಈಗಿನ ಬಂಧನದಿಂದ ಬಿಡುಗಡೆಗೊಳಿಸಬಹುದೆಂದು ನಾನು ನಂಬಿದ್ದೇನೆ.

Monday, June 8, 2015

Lecture on contemporary cultural shuffles in Karnataka Sangha


News and pics: Rons Bantwal
Daijiworld Media Network – Mumbai (EP)
Mumbai, June 8: “Cultural shuffles always occur in development oriented society. The undivided Dakshina Kannada district is the cradle of several cultures. However there is cultural domination these days which is dangerous” lamented Chief media advisor to the Chief Minister of Karnataka and senior journalist Dinesh Amin Mattu.





He was addressing 'Sahitya Chintana 20', programme recently held by Karnataka Sangha, Mumbai at their Samarasa Bhavana in Mahim west.
Amin who gave a lecture on Contemporary cultural shuffles said that there are several definitions for culture. “It is a subject for debate. It is not easy to reflect culture. Culture is a definition of love of language and life of values. Conflict is not a part of our culture. So may the Indian culture be free from friction”, he suggested.
Dr Vyasaraya Ninjuru, advocate Vasanth Kalakoti, Mamatha Rao, Dr S K Bhavani, Dr Sunitha M Shetty, Mohan Marnad, Sushila Devadiga, Harish K Hejmadi, S T Vijayakumar Thingalaya, Surekha Devadiga, Sadaya, Gopala Trasi and others participated in the discussion programme held later.
Former president of the Sangha, Manohar M Kori presented a shawl and memento to Mattu and honored him. Honorary secretary of the Sangha, Omdas Kannangar welcomed, gave a key note address and compered the programme. Dr Bharathkumar Polipu proposed Vote of thanks.
                                                                                                               (Source: Daijiworld webiste)

Thursday, July 3, 2014

Media advisor to Karnataka CM visits Kannadiga journalists association

News and pics: Rons Bantwal
Daijiworld Media Network- Mumbai (EP)

Mumbai, June 3: “It is sad that many newspapers have closed down as they were being sold at a low cost. It is necessary to encourage the minor regional newspapers. Media should be pro people. Journalists should be the hope of the masses instead of misleading them," said senior journalist and media adviser to the Chief Minister Dinesh Amin Mattu.

"You are bound to succeed if you proceed believing in the history of journalism. While reading is the strength of journalists, questions
are their weapon. However stay away from asking questions in a taunting manner," he added.


Dinesh Amin spoke during his visit to the association of Kannadiga journalists at Santa Cruz east on Saturday morning May 31.

In the meeting presided by Chandrashekar Palethady, president of Kannadiga Journalist's association, senior journalists and columnists
Ravi R Anchan, Gregory L Almeida advisor to the association and businessman Sudhakar Uchil were present on the dais. Paledthady and
other office bearers lauded several decades of service by Dinesh Mattu and felicitated him with a shawl, memento and a bouquet.

"The work of giving suggestions is being considered as a work of revenge these days. In these circumstances, it is heartening to see the
association of journalists recognizing my service of giving suggestions and correcting the society. The land of Mumbai is known
for adventure. It is also a land that gives success to those who struggle. It is ideal for the common man. People prefer such places. It
is a matter of pride to know of an association that is indulged in loving and serving Tulu-Kannadigas. The people here are unity oriented
and they are proceeding with social responsibility," he said.

"In this age when newspapers are unable to be pro readers and people, they owe something to the readers. While only courts and media can create opposition force, newspapers should inform the truth. They should not be sold as a means of misleading information. They should not be controlled by paid news channels. You can contact me for healthy discussions on Maharastra-Karnataka state's media colleagues," he added.

"It is a matter of pride that the association is active for the betterment of journalists. It should develop the novelty in journalism and new journalists. It should think of the middle class people. Let the association identify thoughts on a grass root level and be service oriented," he concluded.

Chandrashekar Palethady in his presidential address emphasized on the need for a newspaper bhavan for the activities of the association.

Rons Bantwal, the honorary secretary gave an introductory speech saying, "May 31, 2014 is a memorable day for the Mumbai- Kannadiga journalism. Well known journalist, columnist and media adviser of Chief Minister Siddaramaiah, Dinesh Amin Mattu has visited the Patrika Bhavan of the Sangha on his own. Mattu was born in Hejmady and passed his primary and high school education there amidst poverty."

Sangha secretary Harish K Hejmady welcomed and compeered the programme. Working committee member Sham M Hande proposed the vote of thanks. Joint secretary Pramnath B Shetty Mundkoor, committee member Gurudatt Poonja Mundkoor, sports committee president Jaya C Bhandary, Vishwanath Amin Niddodi, Ramesh Udyavara, Sridhar Uchil, S Daya, Harry R Sequeira, Arif Kalkatta and Vasanth Poojary were present and participated in the questions and answer session.

                                                                                                                                                              (Source: Daijiworld webiste)