Wednesday, October 23, 2013

23-10-13ರಂದು ಬೆಂಗಳೂರಿನ ಹೊರವಲಯದಲ್ಲಿ ಆಯೋಜಿಸಿದ್ದ ‘ರಂಗಕಹಳೆ’ ಮಕ್ಕಳ ಮನೆ ಕಾಯ೯ಕ್ರಮ.

23-10-2013ರಂದು ಬೆಂಗಳೂರಿನ ಹೊರವಲಯದಲ್ಲಿ ಆಯೋಜಿಸಿದ್ದ ‘ರಂಗಕಹಳೆ’ ಮಕ್ಕಳ ಮನೆ ಕಾಯ೯ಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮಿನ್ ಮಟ್ಟು ಅವರು ಸಸಿ ನೆಡುತ್ತಿರುವುದು.   
‘ರಂಗಕಹಳೆ’ ಮಕ್ಕಳ ಮನೆಯ ಸ್ಟುಡಿಯೋ ಉದ್ಘಾಟಿಸಿ ಮಾತನಾಡುತ್ತಿರುವುದು.
23-10-2013ರಂದು ಬೆಂಗಳೂರಿನ ಹೊರವಲಯದಲ್ಲಿ ಆಯೋಜಿಸಿದ್ದ ‘ರಂಗಕಹಳೆ’ ಕಾಯ೯ಕ್ರಮದಲ್ಲಿ ಮಾತನಾಡುತ್ತಿರುವುದು.

Sunday, October 6, 2013

06/10/2013 ತುಮಕೂರಿನ ಜನಪರ ಸಂಘಟನೆಗಳ ಒಕ್ಕೂಟವು ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಅಭಿನಂದನಾ ಸಮಾರಂಭ

6 ಅಕ್ಟೋಬರ್ 2013ರಂದು ತುಮಕೂರಿನ ಜನಪರ ಸಂಘಟನೆಗಳ ಒಕ್ಕೂಟವು ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿ ಮಾನ್ಯರು.
6 ಅಕ್ಟೋಬರ್ 2013ರಂದು ತುಮಕೂರಿನ ಜನಪರ ಸಂಘಟನೆಗಳ ಒಕ್ಕೂಟವು ಆಯೋಜಿಸಿದ್ದ ವಿಚಾರ ಸಂಕಿರಣ ಮತ್ತು ಅಭಿನಂದನಾ ಸಮಾರಂಭದಲ್ಲಿ "ಪ್ರಜಾಪ್ರಭುತ್ವದ ಬಲಸಂವರ್ಧನೆಯಲ್ಲಿ ನಾಗರೀಕರ ಪಾತ್ರ" ವಿಷಯದ ಕುರಿತು ಮಾತನಾಡುತ್ತಿರುವುದು.



ಇದೇ ಸಂದಭ೯ದಲ್ಲಿ ಅಡ್ವೊಕೇಟ್ ಜನರಲ್ ಪ್ರೊ.ರವಿವಮ೯ಕುಮಾರ್ ಅವರನ್ನು ಸನ್ಮಾನಿಸಲಾಯಿತು.

Thursday, October 3, 2013

ಕೇರಳವೆಂಬ `ಹುಚ್ಚಾಸ್ಪತ್ರೆ'ಯಲ್ಲಿ ವಿವೇಕ ಬಿತ್ತಿದ ಗುರು

ವಾತಾ೯ಭಾರತಿಯ ದಿನಪತ್ರಿಕೆಯ 11ನೇ ವರ್ಷದ ವಿಶೇಷ ಸಂಚಿಕೆಯಲ್ಲಿ ಪ್ರಕಟಗೊಂಡ ಲೇಖನ.


     ಕನಾ೯ಟಕದ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಕೋಮುವಾದಿಗಳ ವಿರುದ್ದದ ಜಾತ್ಯತೀತರ ಗೆಲುವು ಎಂದು ವ್ಯಾಖ್ಯಾನಿಸುವವರಿದ್ದಾರೆ. ಇಲ್ಲ ಇದು ಒಂದು ಪಕ್ಷ ಸೋತು ಇನ್ನೊಂದು ಪಕ್ಷ ಗೆದ್ದ ಸಾಮಾನ್ಯ ರಾಜಕೀಯ ಬದಲಾವಣೆ ಎಂದು ಸರಳೀಕರಿಸುವವರೂ ಇದ್ದಾರೆ. ವಾಸ್ತವ ಎಲ್ಲೋ ಈ ಎರಡು ಅಭಿಪ್ರಾಯಗಳ ಮಧ್ಯೆ ಇದ್ದ ಹಾಗಿದೆ. ಇಂತಹ ಭಿನ್ನ ಅಭಿಪ್ರಾಯಗಳೇನಿದ್ದರೂ ಈ ಚುನಾವಣೆಯಲ್ಲಿ ನೆಲಕಚ್ಚಿದ ಕೋಮುವಾದಿ ರಾಜಕಾರಣ ಮತ್ತೆ ಜೀವಪಡೆಯದಂತೆ ನೋಡಿಕೊಳ್ಳುವ ಹೊಣೆ ರಾಜ್ಯದ ಎಲ್ಲ ಪ್ರಜ್ಞಾವಂತರ ಮೇಲಿದೆ. ಇದು ಸಾಧ್ಯವಾಗಬೇಕಾದರೆ 'ಕೋಮುವಾದ ರಾಜಕಾರಣ'ಕ್ಕೆ ವಿರುದ್ದವಾಗಿ 'ಸಾಮಾಜಿಕ ನ್ಯಾಯ'ದ ರಾಜಕಾರಣವನ್ನು ಕಟ್ಟುವ ಕೆಲಸ ನಡೆಸಬೇಕಾಗಿದೆ. ಈ ಮೂಲಕ ಕೋಮುವಾದ ರಾಜಕಾರಣ ಮಾಡುತ್ತಾ ಬಂದವರೂ ಅನಿವಾರ್ಯವಾಗಿ 'ಸಾಮಾಜಿಕ ನ್ಯಾಯ'ದ ರಾಜಕೀಯದ ಆಟದ ನಿಯಮಗಳನ್ನೇ ಪಾಲಿಸುವಂತೆ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಸಬೇಕಾಗಿದೆ.

     'ಸಾಮಾಜಿಕ ನ್ಯಾಯ'ದ ರಾಜಕಾರಣಕ್ಕೆ ದಾರಿತೋರಿಸಬಲ್ಲ ಅನೇಕ ಯಶಸ್ವಿ ಚಿಂತನೆಗಳ ಮಾದರಿಗಳು ನಮ್ಮ ಮುಂದಿವೆ. ಇವರಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್, ರಾಮಮನೋಹರ ಲೋಹಿಯಾ ಚಿಂತನೆಯ ಮಾದರಿಗಳ ಬಗ್ಗೆ ವಿಸ್ತೃತವಾದ ಚಚೆ೯ ಕನಾ೯ಟಕದಲ್ಲಿ ನಡೆದಿವೆ. ರಾಜ್ಯದಲ್ಲಿ ಹೆಚ್ಚು ಚಚೆ೯ಗೊಳಗಾಗದ ಇನ್ನೊಂದು ಮಾದರಿ ಕೇರಳದ ಸಮಾಜ ಸುಧಾರಕ ನಾರಾಯಣ ಗುರುಗಳ ಚಿಂತನೆಯದ್ದು. ನಾವಿಂದು ಕಾಣುತ್ತಿರುವ ಪುರೋಗಾಮಿ ಮತ್ತು ಪ್ರಗತಿಗಾಮಿ ಕೇರಳದ ರೂವಾರಿ ನಾರಾಯಣ ಗುರುಗಳು. ಅವರ ಪ್ರವೇಶಕ್ಕೆ ಮುನ್ನ ಹಿಂದೂ ಸಮಾಜದ ಸುಧಾರಣೆಯ ಪ್ರಯತ್ನದಲ್ಲಿದ್ದ ಸ್ವಾಮಿ ವಿವೇಕಾನಂದರೇ ಕೇರಳ ರಾಜ್ಯ ಒಂದು ಹುಚ್ಚಾಸ್ಪತ್ರೆ' ಎಂದು ಕೈಚೆಲ್ಲಿ ಹೋಗಿದ್ದರು. ಜಾತಿವ್ಯವಸ್ಥೆ ಆ ರೀತಿಯ ಭೀಕರ ಮನೋರೋಗಿಗಳನ್ನು ಅಲ್ಲಿ ಸೃಷ್ಟಿಸಿತ್ತು. ದೇವಸ್ಥಾನ ಪ್ರವೇಶ ದೂರವೇ ಉಳಿಯಿತು. ಅದರ ಎದುರಿನ ರಸ್ತೆಯಲ್ಲಿ ಕೂಡಾ ಅಸ್ಪೃಶ್ಯರು ನಡೆದಾಡುವಂತಿರಲಿಲ್ಲ. ಮಹಾತ್ಮ ಗಾಂಧೀಜಿ ಮತ್ತು ನಾರಾಯಣ ಗುರುಗಳ ನೇತೃತ್ವದಲ್ಲಿ ನಡೆದ ಐತಿಹಾಸಿಕ ವೈಕಂ ಸತ್ಯಾಗ್ರಹ ನಡೆದದ್ದು ದೇವಸ್ಥಾನ ಪ್ರವೇಶಕ್ಕಾಗಿ ಅಲ್ಲ, ಅದರ ಮುಂಭಾಗದ ರಸ್ತೆಯಲ್ಲಿ ನಡೆದಾಡುವ ಸ್ವಾತಂತ್ರ್ಯಕ್ಕಾಗಿ ಎಂಬುದು ಗಮನಾರ್ಹ. ಒಂದೆಡೆ ಮೂಡನಂಬಿಕೆ,ಕಂದಾಚಾರಗಳು, ಇನ್ನೊಂದೆಡೆ ಮೇಲ್ವರ್ಗದವರ ದೌರ್ಜನ್ಯದಿಂದ ಅಲ್ಲಿ ಬಹುಸಂಖ್ಯೆಯಲ್ಲಿರುವ ತಳಸಮುದಾಯ ನಲುಗಿಹೋಗಿತ್ತು.

     ಆದರೆ, ಇದೇ ಕೇರಳ ಇಂದು ದೇಶದಲ್ಲಿಯೇ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಪ್ರಗತಿಪರ ಚಿಂತಕರಿರುವ ರಾಜ್ಯ. ಪ್ರಜಾಸತಾತ್ಮಕವಾಗಿ ಆಯ್ಕೆಯಾದ ದೇಶದ ಮೊದಲ ಹಾಗೂ ಜಗತ್ತಿನ ಎರಡನೇ ಕಮ್ಯೂನಿಸ್ಟ್ ಸಕಾ೯ರ ಅಸ್ತಿತ್ವಕ್ಕೆ ಬಂದದ್ದು ಕೇರಳದಲ್ಲಿ. ದೇಶ ವಿಭಜನೆ ಕಾಲದಲ್ಲಿ ಉತ್ತರ ಭಾರತ ಕೋಮುದಳ್ಳುರಿಯಲ್ಲಿ ಹತ್ತಿ ಉರಿಯುತ್ತಿದ್ದಾಗ ಶೇ.18ಕ್ಕೂ ಹೆಚ್ಚು ಮುಸ್ಲಿಂ ಜನಸಂಖ್ಯೆ ಇರುವ ಕೇರಳ ಶಾಂತವಾಗಿತ್ತು. ಅಡ್ವಾನಿಯವರ ರಥಯಾತ್ರೆಯ ನಂತರ ದೇಶಾದ್ಯಂತ ಕೋಮುಗಲಭೆ ಭುಗಿಲೆದ್ದಾಗಲೂ ಅಲ್ಲಿ ಯಾವ ಅಹಿತಕರ ಘಟನೆಗಳು ನಡೆಯಲಿಲ್ಲ. ದಕ್ಷಿಣದ ರಾಜ್ಯಗಳಲ್ಲಿ ಪ್ರಯಾಸಪಟ್ಟು, ಪ್ರವೇಶ ಪಡೆದ ಬಿಜೆಪಿಯನ್ನು ಈಗಲೂ ಹೊಸಲಿನಾಚೆ ನಿಲ್ಲಿಸಿರುವ ರಾಜ್ಯ ಕೇರಳ. ಕೇವಲ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ನಡೆದ ಈ ಸಾಮಾಜಿಕ ಮತ್ತು ರಾಜಕೀಯ ಬದಲಾವಣೆಗೆ ಕಾರಣಗಳನ್ನು ಶೋಧಿಸುತ್ತಾ ಹೋದರೆ ನಮ್ಮೆದುರು ನಿಧಾನವಾಗಿ ನಾರಾಯಣ ಗುರು ಎಂಬ ಸಂತ ನಡೆಸಿದ್ದ ಧಾಮಿ೯ಕ ಚಳುವಳಿ ತೆರೆದುಕೊಳ್ಳುತ್ತದೆ. ನಾರಾಯಣ ಗುರುಗಳು ಹುಟ್ಟಿ ಸರಿಯಾಗಿ ನೂರು ವರ್ಷಗಳ ಅವಧಿಯಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಕಮ್ಯುನಿಸ್ಟ್ ಸಕಾ೯ರ ಅಸ್ತಿತ್ವಕ್ಕೆ ಬಂತೆಂಬುದು ಉಲ್ಲೇಖನೀಯ. ನಾರಾಯಣ ಗುರುಗಳು ಪ್ರಾರಂಭಿಸಿದ ಧಾಮಿ೯ಕ ಸುಧಾರಣಾ ಚಳವಳಿಯನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಅವರ ಕಾರ್ಯತಂತ್ರ ಉಳಿದ ಸಮಾಜ ಸುಧಾರಕರಿಗಿಂತ ಯಾಕೆ ಭಿನ್ನವಾಗಿತ್ತು ಎಂಬ ಪ್ರಶ್ನೆಗಳಿಗೆ ಈ ಹಿನ್ನೋಟದಲ್ಲಿ ಉತ್ತರ ಇದೆ.

     ಒಂದು ಚಳವಳಿಯ ಸೋಲು-ಗೆಲುವು, ಅದರ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ನೆಲಗಳನ್ನು ಅವಲಂಭಿಸಿರುತ್ತೇ. ನಾರಾಯಣ ಗುರು ಚಳವಳಿಯ ಎಲ್ಲಾ ಮಗ್ಗಲುಗಳನ್ನು ಈ ರೀತಿ ಸಮಾಜ ವಿಜ್ಞಾನದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸುವ ಪ್ರಯತ್ನ ಕನ್ನಡದಲ್ಲಿ ನಡೆದಿಲ್ಲ. ಈ ರೀತಿಯ ಅಧ್ಯಯನದ ಕೊರತೆಯಿಂದಾಗಿಯೇ ನಾರಾಯಣ ಗುರು ಒಬ್ಬರದ್ದೇ ವೈಭವೀಕರಣ ನಡೆದು ಆ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನಾರಾಯಣ ಗುರುಗಳ, ಅನೇಕ ಅನುಯಾಯಿಗಳ ಪರಿಚಯ ಹೊರಜಗತ್ತಿಗೆ ಆಗಿಲ್ಲ.

   
ನಾರಾಯಣ ಗುರು ಚಳವಳಿ, ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯಿತು.ಮೊದಲನೆಯದು ಡಾ.ಪಲ್ಪು ನೇತೃತ್ವದ ಸಾಮಾಜಿಕ ಜಾಗೃತಿ, ಎರಡನೇಯದ್ದು ನಾರಾಯಣ ಗುರು ನೇತೃತ್ವದ ಸಾಮಾಜಿಕ ಸುಧಾರಣೆ, ಮೂರನೆಯದ್ದು ಕುಮಾರನ್ ಆಶಾನ್ ನೇತೃತ್ವದ ಸಕಾ೯ರಿ ಶಾಲೆಗಳಲ್ಲಿ ಪ್ರವೇಶಕ್ಕಾಗಿ ನಡೆದ ಚಳವಳಿ, ನಾಲ್ಕನೇಯದ್ದು ಟಿ.ಕೆ ಮಾಧವನ್ ನೇತೃತ್ವದಲ್ಲಿ ದೇವಾಲಯಗಳ ಪ್ರವೇಶ ಮತ್ತು ಅಸ್ಪೃಶ್ಯತೆಯ ವಿರುದ್ಧ ನಡೆದ ಚಳವಳಿ ಹಾಗೂ ಕೊನೆಯದ್ದು, ಸಿ.ಕೇಶವನ್ ನೇತೃತ್ವದಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆದ ಹೋರಾಟ. ಈ ಎಲ್ಲಾ ಹೋರಾಟಗಳು ನಾರಾಯಣ ಗುರುಗಳ ಸಿದ್ಧಾಂತ ನೆಲೆಗಟ್ಟಿನ ಮೇಲೆಯೇ ನಡೆದಿವೆ.

     ಧಾಮಿ೯ಕ ಸುಧಾರಣೆಯ ಮೂಲಕ ಪ್ರಾರಂಭಗೊಂಡ ನಾರಾಯಣ ಗುರು ಚಳವಳಿ ಕಾಲ ಸರಿದಂತೆ ಶೈಕ್ಷಣಿಕ, ಆಥಿ೯ಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಾ ಹೋಗಿದ್ದು ಆಕಸ್ಮಿಕವಲ್ಲ, ಅದು ಗುರುಗಳೇ ರೂಪಿಸಿದ ಕಾರ್ಯ ತಂತ್ರವೇನೋ ಎಂಬ ಅನುಮಾನ ಮೂಡುತ್ತದೆ.. ಸಮಾಜದ ಅಮೂಲಾಗ್ರ ಬದಲಾವಣೆ ಎಂದರೆ, ಪ್ರಮುಖವಾಗಿ ಆಥಿ೯ಕ ಮತ್ತು ಸಾಮಾಜಿಕ ಬದಲಾವಣೆ ಎಂಬುದನ್ನು ನಾರಾಯಣ ಗುರು ಅರಿತಿದ್ದರು. ಇಂತಹ ಬದಲಾವಣೆಗೆ ಸಮುದಾಯದ ಮನಸ್ಸನ್ನು ಸಿದ್ದಗೊಳಿಸುವ ಪ್ರಾಥಮಿಕ ಕಾರ್ಯವನ್ನು ಅವರು ದೇವಾಲಯಗಳ ಸ್ಥಾಪನೆ ಮೂಲಕ ಮಾಡಿದರು.

     ಅಸ್ಪೃಶ್ಯತೆಯ ವಿರುದ್ಧದ ಹೋರಾಟಗಳಲ್ಲಿ ದೇವಸ್ಥಾನ ಪ್ರವೇಶ ಚಳವಳಿಯದ್ದು ಪ್ರಮುಖ ಪಾತ್ರವಾದರೆ, ನಾರಾಯಣ ಗುರುಗಳು ಅದನ್ನೇ ಕೈಬಿಟ್ಟಿದ್ದರು. ಅವರು ಅವಣಿ೯ಯರ ಒಡೆತನದ ದೇವಾಲಯ ಪ್ರವೇಶಿಸಲಿಲ್ಲ. ಅದನ್ನು ಬಹಿಷ್ಕರಿಸಿದರು. ಮತ್ತು ಅವಣಿ೯ಯ ದೇವಾಲಯಗಳನ್ನು ಸ್ಥಾಪಿಸಿದರು. ಆದರೆ, ಅವರು ಮತ್ತೊಂದು ಧರ್ಮವನ್ನು ಕೂಡ ಸ್ಥಾಪಿಸಲು ಹೋಗಲಿಲ್ಲ.

     ಮೊದಲು ದೇವಸ್ಥಾನ ಪ್ರವೇಶ ಚಳವಳಿ ನಡೆಸದೆ, ದೇವಸ್ಥಾನ ನಿಮಿ೯ಸುವ ಅವರ ಕಾರ್ಯತಂತ್ರ ಎರಡು ರೀತಿಯಲ್ಲಿ ಅವರಿಗೆ ನೆರವಾಯಿತು. ದೇವಸ್ಥಾನ ಪ್ರವೇಶ ಹೋರಾಟಕ್ಕೆ ಎದುರಾಗುವ ಪ್ರತಿಭಟನೆಯನ್ನು ಎದುರಿಸುವ ಸಂಘಟನಾ ಶಕ್ತಿ ಅಸ್ಪೃಶ್ಯರಲ್ಲಿ ಆಗಿನ್ನೂ ಇರಲಿಲ್ಲ ಎಂದು ನಾರಾಯಣ ಗುರುಗಳಿಗೆ ತಿಳಿದಿತ್ತು. ನಾರಾಯಣ ಗುರು ಮೊದಲ ದೇವಸ್ಥಾನ ಸ್ಥಾಪಿಸಿದ ಮೂವತ್ತಾರು ವರ್ಷಗಳ ನಂತರ ದೇವಾಲಯಗಳ ಮುಂಭಾಗದ ರಸ್ತೆಗಳಲ್ಲಿ ನಡೆಯುವ ಹಕ್ಕಿಹಾಗಿ ನಡೆದ ವೈಕಂ ಸತ್ಯಾಗ್ರಹಕ್ಕೆ ಎದುರಾದ ಪ್ರತಿಭಟನೆಯನ್ನು ನೋಡಿದರೆ, ಇದು ಸ್ಪಷ್ಟವಾಗುತ್ತದೆ.

     ದೇವಸ್ಥಾನದ ಸ್ಥಾಪನೆಯನ್ನು ಪ್ರಶ್ನಿಸಿದ ಪುರೋಹಿತರಿಗೆ ನಾನು ಸ್ಥಾಪಿಸಿದ್ದು ಈಳವರ ಶಿವ ಎಂಬ ಮಾಮರ್ಿಕ ಉತ್ತರ ಕೊಟ್ಟು ಗುರುಗಳು ಯುದ್ದಕ್ಕೆ ಬಂದ ಅವರನ್ನು ಶಸ್ತ್ರಪ್ರಯೊಗವಿಲ್ಲದೆಯೇ ನಿಶ್ಯಸ್ತ್ರಗೊಳಿಸಿದರು. ಅದೇ ರೀತಿ, ಸಹಸ್ರಾರು ವರ್ಷಗಳಿಂದ ತಮ್ಮಿಂದ ದೂರವೇ ಉಳಿದಿದ್ದ ದೇವಸ್ಥಾನಗಳಿಗೆ ಪ್ರವೇಶಿಸಲು ಅಡ್ಡಿಯಾಗುವ ಸಾಂಪ್ರದಾಯಿಕ ಮನಸ್ಸಿನ ಹಿಂಜರಿಕೆ ಹಾಗೂ ಭೀತಿಯಿಂದಲೂ ಕೆಳವರ್ಗದ ಜನರನ್ನು ಅವರು ಮುಕ್ತಗೊಳಿಸಿದರು. ದೇವಾಲಯಕ್ಕೆ ಹೋಗುವ ಹಕ್ಕು ನಿಮಗಿಲ್ಲವಾದರೆ, ದೇವಾಲಯವನ್ನೇ ನಮ್ಮಲ್ಲಿಗೆ ತರುತ್ತೇನೆ ಎಂದು ಅಸ್ಪೃಶ್ಯರಿಗೆ ಪೂಜೆಯ ಹಕ್ಕನ್ನು ನಡುವ ಮೂಲಕ ಅವರಲ್ಲಿ ಸ್ವಾಭಿಮಾನ ಜಾಗೃತಿಗೆ ಕಾರಣರಾದರು.

     ದೇವಸ್ಥಾನಗಳ ಸ್ಥಾಪನೆ ಅಂದಿನ ಪುರೋಹಿತಶಾಹಿಗೆ ಅಘಾತಕಾರಿಯಾದ ಹೊಡೆತ, ಭಕ್ತ ಸಮೂಹದಲ್ಲಿ ದೈಹಿಕವಾಗಿ ದೂರವೇ ಉಳಿದಿದ್ದ ಮೂರನೇ ಎರಡರಷ್ಟಿದ್ದ ಕೆಳವರ್ಗದ ಜನರು ಮಾನಸಿಕವಾಗಿ ಕೂಡ ದೂರವೇ ಉಳಿದರೆ, ದೇವಸ್ಥಾನಗಳ ಹುಂಡಿ ತುಂಬುವುದು ಹೇಗೆ? ಅದರ ಮೂಲಕ ಉದರ ತುಂಬುವುದು ಹೇಗೆ ? ಎಂಬ ಭೀತಿ ಅವರನ್ನಾವರಿಸಿತ್ತು. ನಾರಾಯಣ ಗುರುಗಳ ನಂತರ ಕೇರಳದಲ್ಲಿ ಸವಣರ್ಿಯ ದೇವಾಲಯಗಳ ಆದಾಯದಲ್ಲಿ ಗಣನೀಯ ಕುಸಿತ ಕಂಡುಬಂದಿರುವುದು ದಾಖಲೆಯಲ್ಲಿದೆ.

     ನಾರಾಯಣ ಗುರುಗಳು ಎಂದೂ ಹಿಂದೂ ಧರ್ಮವನ್ನು ಪೆರಿಯಾರ್, ಅಂಬೇಡ್ಕರ್ರವರಂತೆ ಸಾರಾಸಗಟಾಗಿ ತಿರಸ್ಕರಿಸಲಿಲ್ಲ. ಅವರು ತಮ್ಮ ಜೀವನದುದ್ದಕ್ಕೂ ಧಾಮರ್ಿಕ ಪುನರುತ್ಥಾನದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ದೇವನೂರು ಮಹಾದೇವ ಅವರ ಮಾತೊಂದು ನೆನಪಿಗೆ ಬರುತ್ತದೆ.

      ಹಿಂದೂ ಧರ್ಮ ಎಂಬ ಮನೆಯೊಳಗೆ ಭಿನ್ನವಾದ ಜಾತಿ ತಾರತಮ್ಯದ ಕಂಬಗಳನ್ನು ಒಳಗೊಳಗೆ ಕುಯ್ಯುವಂತೆ ಗಾಂಧೀಜಿ ಕಾಣಿಸಿದರೆ, ಅಂಬೇಡ್ಕರ್ ಹೊರಗಿನಿಂದ ಆ ಅಸಮಾನತೆಯ ಮನೆಗೆ ಕಲ್ಲೆಸೆಯುವಂತೆ ಕಾಣುತ್ತಾರೆ ಎಂದು ಗಾಂಧೀ ಮತ್ತು ಅಂಬೇಡ್ಕರ್ ಅವರ ಸೈದ್ಧಾಂತಿಕ ಸಂಘರ್ಷವನ್ನು ಪ್ರಸ್ತಾಪಿಸುತ್ತಾ ದೇವನೂರು ಹೇಳುತ್ತಾರೆ.

      ಗಾಂಧೀ ಆ ಕೆಲಸ ಮಾಡಿರುವ ಬಗ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಾರಾಯಣ ಗುರುಗಳ ಧಾಮಿ೯ಕ ಸುಧಾರಣಾವಾದಿ ಚಳವಳಿ ಮಾತ್ರ ಈ ಕಂಬ ಕುಯ್ಯುವ ಕೆಲಸವನ್ನು ಮಾಡಿದೆ. ಅವರದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ಅವರ ಹೋರಾಟದ ಎಲ್ಲಾ ಕಾರ್ಯತಂತ್ರಗಳನ್ನು ಅವಲೋಕಿಸುತ್ತಾ ಬಂದರೆ, ಅವರಲ್ಲೊಬ್ಬ ಚತುರ ರಾಜಕಾರಣಿ ಇದ್ದನೆಂಬುದು ಸ್ಪಷ್ಟವಾಗುತ್ತದೆ. ಅವರು ಸಮಾಜ ಸುಧಾರಕನ ಕೆಲಸ ಮಾಡಲಿಕ್ಕೆಂದೇ ಸನ್ಯಾಸಿಯ ಪಾತ್ರವನ್ನು ಧರಿಸಿದರೇನೋ ಎಂಬ ಅನುಮಾನ ಬರುತ್ತದೆ. ಕೋಮುವಾದಿ ರಾಜಕಾರಣವನ್ನು ಎದುರಿಸಲು ಇಂದು ಬೇಕಾಗಿರುವುದು ಇಂತಹ ನಾಯಕತ್ವ.

     ಅವರು ದೇವಸ್ಥಾನ ಪ್ರವೇಶಾವಕಾಶದ ಬಗ್ಗೆ ಎಂದೂ ಗಂಭೀರವಾಗಿ ಪ್ರಯತ್ನ ನಡೆಸಲಿಲ್ಲ. ಅವರು ಸಾವಿನ ಎಂಟು ವರ್ಷಗಳ ನಂತರ ಕೇರಳ ಸರಕಾರ ದೇವಾಲಯ ಪ್ರವೇಶ ಘೋಷಣೆಯನ್ನು ಹೊರಡಿಸಿತ್ತು. ಆಗಲೇ ನಾರಾಯಣ ಗುರುಗಳು ಕೇರಳ, ಮದ್ರಾಸ್ ಮತ್ತು ಮಂಗಳೂರಿನಲ್ಲಿಯೂ ದೇವಸ್ಥಾನಗಳನ್ನು ಸ್ಥಾಪಿಸಿದ್ದರು. ನೂರಾರು ಗುರುಮಂದಿರ ಹಾಗೂ ಆಶ್ರಮಗಳು ಪ್ರಾರಂಭವಾಗಿದ್ದವು.

     ದೇವಸ್ಥಾನಗಳ ಬಗೆಗಿನ ಅವರ ಪರಿಕಲ್ಪನೆಯೇ ಕ್ರಾಂತಿಕಾರಿಯಾದುದು. ಅರವಿಪುರಂನಲ್ಲಿ ಲಿಂಗಸ್ಥಾಪನೆ ಮಾಡಿದ ಗುರುಗಳು ತಮ್ಮ ಕೊನೆಯ ಪ್ರತಿಷ್ಠಾಪನೆಯನ್ನು ಕಳವಂ ಕೋಡಂ ನಲ್ಲಿ ಕನ್ನಡಿಯೊಂದನ್ನು ಸ್ಥಾಪಿಸುವ ಮೂಲಕ ನಡೆಸಿದರು. ಅದರ ನಡುವೆ ಒಂದೆಡೆ ಸತ್ಯ, ಧರ್ಮ, ಶಾಂತಿ, ದಯೆ ಎಂಬ ಸಂದೇಶವನ್ನು ಸಾರುವ ಲಕವನ್ನಷ್ಟೇ ಸ್ಥಾಪಿಸಿದರೆ, ಕರಮಕ್ಕು ಎಂಬಲ್ಲಿ ನಂದಾ ದೀಪವನ್ನಷ್ಟೇ ಹಚ್ಚಿದರು. ಕೊನೆಗಾಲದಲ್ಲಿ ಶಿವಗಿರಿಯಲ್ಲಿ ಅವರ ಚಿಂತನೆಯ ಮೂಲಧಾತುವಾದ ಅರಿವು ಸಂಕೇತವಾಗಿ ಸರಸ್ವತಿಯ ಮೂತಿ೯ಯನ್ನು ಪ್ರತಿಷ್ಠಾಪಿಸಿದರೆ, ಶಂಕರಾಚಾರ್ಯರು ಹುಟ್ಟೂರಿಗೆ ಸಮೀಪದ ಅಲ್ವಾಯಿನಲ್ಲಿ ನಿಮಿ೯ಸಿದ ಅದ್ವೆತಾಶ್ರಮದಲ್ಲಿ ಮೂತಿ೯ಯನ್ನೇ ಸ್ಥಾಪಿಸಲಿಲ್ಲ. ಕೊನೆಗಾಲದಲ್ಲಿ ದೇವಸ್ಥಾನಗಳ ಸ್ಥಾಪನೆ ನಿಲ್ಲಿಸಿ ಎಂದು ಅನುಯಾಯಿಗಳಿಗೆ ಕರೆ ನಡಿದರು. ನಾರಾಯಣ ಗುರುಗಳು ತಮ್ಮ ಚಳವಳಿ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬಳಸುತ್ತಾ ಬಂದುದ್ದನ್ನು ಕಾಣಬಹುದು. ಅದು ಸನಾತನ ಧಮಾ೯ವಲಂಭಿಗಳ ಆಶಯಕ್ಕೆ ತದ್ವಿರುದ್ದವಾದದು. ದೇವಾಲಯಗಳ ಪೂಜೆ-ಹವನ-ಹೋಮಗಳಲ್ಲಿ ಮುಳುಗಿ ವ್ಯಾಪಾರಿ ಕೇಂದ್ರಗಳಾಗುವ ಬದಲಿಗೆ ಅವುಗಳನ್ನು ಸಾಮೂಹಿಕ ಪ್ರಾರ್ಥನಾ ಮಂದಿರವಾಗಿ ಉಳಿಸಬೇಕೆಂದು ಅವರು ಬಯಸಿದ್ದರು. ಈ ದೃಷ್ಟಿಯಿಂದ ಅವರ ದೇವಾಲಯದ ಪರಿಕಲ್ಪನೆ ಮಸೀದಿ, ಚಚೆ೯ಗಳಿಗೆ ಹೆಚ್ಚು ಹತ್ತಿರವಾಗಿತ್ತು. ದೇವಸ್ಥಾನಗಳ ಭಕ್ತಿ ಪೀಠವಾಗುವದರ ಜೊತೆಯಲ್ಲಿ ಅಧ್ಯಯನ ಕೇಂದ್ರವಾಗಬೇಕು. ಉದ್ಯಾನ, ವಾಚನಾಲಯಗಳನ್ನೊಳಗೊಂಡು ಅವು ಸ್ವಚ್ಛ ಪರಿಸರದಲ್ಲಿ ನಿಮಾ೯ಣಗೊಳ್ಳಬೇಕು ಎಂದು ಅವರು ಹೇಳುತ್ತಿದ್ದರು. ಅವರು ಸ್ಥಾಪಿಸಿದ ಎಲ್ಲಾ ದೇವಾಲಯಗಳು ಈ ಅಭಿಪ್ರಾಯವನ್ನೇ ಬಿಂಬಿಸುತ್ತದೆ.

    ನಾರಾಯಣ ಗುರುಗಳದ್ದು ಮುಖಾಮುಖಿ ಹೋರಾಟವಲ್ಲ. ಅವರು ವೈದಿಕಶಾಹಿ ಏಕಸ್ವಾಮ್ಯಕ್ಕೆ ನೇರ ಸವಾಲು ಹಾಕಲಿಲ್ಲ. ಅದರ ಬದಲಿಗೆ ವೈದಿಕ ಆಧಿಪತ್ಯದ ಬೇರುಗಳನ್ನೇ ಅಲ್ಲಾಡಿಸಿದರು. ಸಂಸ್ಕೃತವನ್ನು ಸಂಪೂರ್ಣವಾಗಿ ತಿರಸ್ಕರಿಸದೇ ಅದನ್ನು ಅಧ್ಯಯನ ಮಾಡಿ ಶೂದ್ರರೂ ಅದನ್ನು ಕಲಿತು ಅರಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟರು. ವೇದಾಧ್ಯಯನಕ್ಕೆ ಜಾತಿ ಅಸ್ಪಶ್ಯವಲ್ಲ ಎಂದು ಸಾರಿದ ಗುರುಗಳು ಶಂಕರಾಚಾರ್ಯರ ಅದ್ವೈತ ವೇದಾಂತವನ್ನು ಕಲಿತರು. ಆತ್ಮೋಪದೇಶ ಶತಕಂ ಸೇರಿದಂತೆ ಹಲವಾರು ಸಂಸ್ಕೃತ ಗ್ರಂಥಗಳನ್ನು ಬರೆದರು. ಬ್ರಹ್ಮಸೂತ್ರದ ವಿಶ್ಲೇಷಣೆ ಮಾಡಿದ ಮೊದಲ ಅಸ್ಪೃಶ್ಯ ಅವರು.

     ದೇವಸ್ಥಾನಗಳಷ್ಟೇ ಸ್ಥಾಪಿಸದೆ ಅಲ್ಲಿ ಅರ್ಚಕರಾಗಿ ಕೆಳವರ್ಗದ ಜಾತಿ ಜನರನ್ನೇ ನೇಮಿಸಿದರು. ಅವರ ತರಬೇತಿಗಾಗಿ ಶಿವಗಿರಿಯಲ್ಲಿ ಬ್ರಹ್ಮ ಮೀಮಾಂಸ ಶಾಲೆಗಳನ್ನು ತೆರೆದು ಬ್ರಹ್ಮ ವಿದ್ಯೆ ಕಲಿಸಿದರು. ಅವರಿಂದ ಸ್ಥಾಪನೆಗೊಂಡ ಬ್ರಹ್ಮ ವಿದ್ಯಾ ಕೇಂದ್ರದಲ್ಲಿ ಈಳವರಲ್ಲದೆ, ಪುಲಯ, ಪರಯ ಮೊದಲಾದ ಇನ್ನತರ ಕೆಳಜಾತಿಯ ಜನರಲ್ಲದೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರೂ ಆಗಮಶಾಸವನ್ನೊಳಗೊಂಡಂತೆ ವೇದಾಧ್ಯಯನ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಲ್ಲವರ ಜಾತಿಯ ಮದುವೆಯನ್ನು ಬಿಲ್ಲವ ಅರ್ಚಕರೇ ಮಾಡುತ್ತಿದ್ದಾರೆ. ಅವರೆಲ್ಲರೂ ಮೂಲತಃ ಶಿವಗಿರಿಯಲ್ಲಿ ತರಬೇತಿ ಪಡೆದವರು. ಆದರೆ, ಈಗ ಬಿಲ್ಲವ ಸಮುದಾಯದಲ್ಲಿಯೂ ಬೆಳೆಯುತ್ತಿರುವ ನವಬ್ರಾಹ್ಮಣರಿಗೆ ಬಿಲ್ಲವ ಅರ್ಚಕರು ಪಥ್ಯವಾಗುವುದಿಲ್ಲ ಎಂಬುದು ಬೇರೆ ಮಾತು.

     ಅರವಿಪುರಂನಲ್ಲಿ ದೇವಾಲಯ ಸ್ಥಾಪನೆ ನಂತರ 1961 ರಲ್ಲಿ 'ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ' ಸ್ಥಾಪನೆಯಾಗುವ ವರೆಗೆ ಕೇರಳ ರಾಜ್ಯ ಮಾತ್ರವಲ್ಲ ತಮಿಳುನಾಡು ಮತ್ತು ಮಂಗಳೂರಿಗೂ ಭೇಟಿ ನೀಡಿ ದೇವಾಲಯಗಳನ್ನು ಸ್ಥಾಪಿಸಿದರು. ಕೆಳವರ್ಗದ ಜನರಲ್ಲಿದ್ದ ಮೂಡನಂಬಿಕೆ ಮತ್ತು ದುಂದುವೆಚ್ಚದ ಅಂಧ ಸಂಪ್ರದಾಯಗಳನ್ನು ಕಿತ್ತೊಗೆಯಲು ಹೋರಾಟ ನಡೆಸಿದರು. ವಿವಾಹಗಳನ್ನು ಸರಳಗೊಳಿಸಿದರು. ವಿವಾಹಕ್ಕೆ ಮಾಡುವ ದುಂದು ವೆಚ್ಚಗಳನ್ನು ವೃದ್ಧಾಪ್ಯದ ದಿನಗಳಿಗಾಗಿ ಉಳಿತಾಯ ಮಾಡುವಂತೆ ಸಲಹೆ ನೀಡಿದರು. ಸಹಭೋಜನಕ್ಕೆ ಪ್ರೋತ್ಸಾಹ ನೀಡಿದರು. 'ಮದ್ಯವನ್ನು ಮಾಡಬೇಡಿ, ಮಾರಬೇಡಿ ಮತ್ತು ಕುಡಿಯಬೇಡಿ' ಎಂದು ಹೇಳುವ ಮೂಲಕ ಮದ್ಯಪಾನದ ವಿರುದ್ಧ ವ್ಯಾಪಕ ಚಳವಳಿಯನ್ನೇ ನಡೆಸಿದರು. ಇದರಿಂದ ಸಾಂಪ್ರದಾಯಿಕವಾಗಿ ಸೇಂದಿ ತೆಗೆಯುವ ವೃತ್ತಿಯನ್ನು ಮಾಡುತ್ತಿದ್ದ ಈಳವರು ಆ ವೃತ್ತಿಯನ್ನು ತ್ಯಜಿಸಿ, ಬೇರೆ ವೃತ್ತಿ ಕೈಗೆತ್ತಿಕೊಳ್ಳುವಂತಾಯಿತು. ಈ ಎಲ್ಲಾ ಸುಧಾರಣೆಗಳನ್ನು ಅವರು ಮೊದಲು ತಮ್ಮ ಶ್ರೀಮಂತ ಅನುಯಾಯಿಗಳ ಮನೆಯಲ್ಲಿಯೇ ಮಾಡಿದರು. 'ತಾಳಿಕೆಟ್ಟು', 'ತಿರುಂಡಕಳಿ' ಮೊದಲಾದ ಅಂಧಸಂಪ್ರದಾಯಗಳನ್ನು ಆಚರಿಸುವ ಮತ್ತು ಆಡಂಬರದ ಮದುವೆಗಳನ್ನು ಮಾಡುವ ಶ್ರೀಮಂತ ಅನುಯಾಯಿಗಳ ಮನೆಗಳನ್ನೇ ಬಹಿಷ್ಕರಿಸಿದರು.

     1916ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಸ್ಥಾಪನೆಯ ಮೂಲಕ ನಾರಾಯಣ ಗುರು ಚಳವಳಿ ಸಂಘರ್ಷದ ಹಾದಿಗೆ ಇಳಿಯಿತು. ಆಗ ಅವರಿಗೆ ಜೊತೆಯಾದವರು ಡಾ.ಪಲ್ಪು, ಪಲ್ಪು ಮತ್ತು ಅವರಣ್ಣ ವೇಲು ಇಬ್ಬರೂ ಕೇರಳದ ಜಾತಿ ವ್ಯವಸ್ಥೆಗೆ ಬಲಿಯಾಗಿ ಹುಟ್ಟೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಎರಡೂ ಸಿಗದೆ, ಊರು ಬಿಟ್ಟು ಹೋದವರು.ವೇಲು ಈಳವ ಜನಾಂಗದ ಮೊದಲ ಪದವೀಧರ. ಆತ ಮದ್ರಾಸ್ನಲ್ಲಿಯೇ ಕಲಿತು, ಅಲ್ಲಿಯೇ ಸಕಾ೯ರಿ ನೌಕರಿ ಸೇರಿದರೆ, ಪಲ್ಪು ಮದ್ರಾಸ್ನಲ್ಲಿ ಓದಿ ಮೈಸೂರಿನಲ್ಲಿ ಸಕಾ೯ರಿ ವೈದ್ಯರಾಗುತ್ತಾರೆ. ಈಳವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ಕೋರುವ ಮೊದಲ ಮನವಿಯನ್ನು ತಿರುವಾಂಕೂರಿನ ದಿವಾನರಿಗೆ ಅಪಿ೯ಸುವ ಮೂಲಕ ಡಾ.ಪಲ್ಪು ತನ್ನ ಹೋರಾಟ ಆರಂಭಿಸುತ್ತಾರೆ. ತಿರುವಾಂಕೂರಿನ ದಿವಾನರು, ವೈಸ್ರಾಯ್, ಬ್ರಿಟಿಷ್ ಪಾಲಿ೯ಮೆಂಟ್, ಕಾಂಗ್ರೇಸ್ ಪಕ್ಷ ಹಾಗೂ ಇಂಗ್ಲೀಷ್ ದಿನಪತ್ರಿಕೆಗಳಿಗೆ ಈಳವರ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಅವರು ಸತತ ಪ್ರಯತ್ನ ನಡೆಸುತ್ತಾರೆ. ಅದಕ್ಕೆ ನಿರೀಕ್ಷಿತ ಫಲ ಸಿಗದಾಗ, ಬೆಂಗಳೂರಿನಲ್ಲಿ ಡಾ.ಪಲ್ಪು ಸ್ವಾಮಿ ವಿವೇಕಾನಂದರನ್ನು ಭೇಟಿಯಾಗುತ್ತಾರೆ. ಕೇರಳದ ಪರಿಸ್ಥಿತಿಯ ಸಂಪೂರ್ಣ ಅರಿವಿದ್ದ ವಿವೇಕಾನಂದರು "ಆದ್ಯಾತ್ಮಿಕ ನಾಯಕರೊಬ್ಬರ ನೇತೃತ್ವದಲ್ಲಿ ಸಾಮಾಜಿಕ ಚಳವಳಿಯನ್ನು ಹುಟ್ಟುಹಾಕಿದರೆ, ಮಾತ್ರ ಕೇರಳದಲ್ಲಿ ಪರಿವರ್ತನೆ ಸಾಧ್ಯ" ಎನ್ನುತ್ತಾರೆ. ಅಲ್ಲಿಂದ ಕೇರಳಕ್ಕೆ ಹಿಂದಿರುಗಿದ ಡಾ.ಪಲ್ಪು ನಾರಾಯಣ ಗುರುಗಳನ್ನು ಭೇಟಿ ಮಾಡುತ್ತಾರೆ. ಈ ಭೇಟಿಗೆ ಐತಿಹಾಸಿಕ ಮಹತ್ವವಿದೆ. ಇಬ್ಬರ ಮಿಲನದಿಂದಲೇ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಸ್ಥಾಪನೆಯಾಗುತ್ತದೆ. ಈಳವರಲ್ಲಿ 'ಧಾಮರ್ಿಕ ಮತ್ತು ಜಾತ್ಯಾತೀತ ಶಿಕ್ಷಣ ಹಾಗೂ ಉದ್ಯಮಶೀಲ ಮನೋಭಾವನೆ'ಯನ್ನು ಬೆಳೆಸುವುದು ಇದರ ಉದ್ದೇಶವಾಗಿತ್ತು.

   
ಈ ಹಂತದಲ್ಲಿ ಕುಮಾರ ಆಶಾನ್ ಇವರಿಬ್ಬರ ಜೊತೆಯಾಗುತ್ತಾರೆ. ಮೂಲತಃ ಕವಿ ಮತ್ತು ಲೇಖಕನಾಗಿದ್ದ ಆಶಾನ್ ತನ್ನ ಕಾವ್ಯ ಪ್ರತಿಭೆ, ಬರಹ, ಭಾಷಣಗಳ ಮೂಲಕ ಚಳವಳಿಗೆ ಜೀವ ತುಂಬಿದರು. ಅವರ ಸಂಪಾದಕತ್ವದ ವಿವೇಕೋದಯಂ ಪತ್ರಿಕೆ ಚಳವಳಿಯ ಮುಖವಾಣಿಯಾಗಿತ್ತು.

      ಎಸ್ಎನ್ಡಿಪಿ ನೇತೃತ್ವದಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಅನ್ಯಾಯದ ವಿರುದ್ಧದ ಹೋರಾಟದ ಕಣಕ್ಕಿಳಿದ ಈಳವರು ಆಗಲೇ ಧಾಮಿ೯ಕ ಚಳುವಳಿಯಿಂದಾಗಿ ಸಾಕಷ್ಟು ಜಾಗೃತರಾಗಿದ್ದರು. ತಮ್ಮದೇ ದೇವಾಲಯಗಳು ಅವರ ಸಂಘಟನೆಗೆ ಶಕ್ತಿ ತುಂಬಿದ್ದವು. ಎಸ್ಎನ್ಡಿಪಿ ಕೈಗಾರಿಕಾ ಸಮ್ಮೇಳನ ಮತ್ತು ಮಹಿಳಾ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿತ್ತು. ಹಲವಾರು ಯುವಕರು ಮದ್ರಾಸ್ ಬೆಂಗಳೂರಿಗೆ ಹೋಗಿ ಇಂಗ್ಲೀಷ್ ಆಯುವೇ೯ದ ವ್ಯಾಸಾಂಗ ಮಾಡಿ ಬಂದಿದ್ದರು.

      ನಾರಾಯಣ ಗುರುಗಳ ದೂರದಶಿ೯ತ್ವ ಮತ್ತು ಕಾರ್ಯತಂತ್ರ ಅರಿವಾಗುವುದು ಇಲ್ಲಿ. ದೇವಸ್ಥಾನ ಪ್ರವೇಶಕ್ಕೆ ಅವರು ಹೋರಾಟ ನಡೆಸಲಿಲ್ಲ. ಬದಲಿಗೆ ಅವರೇ ದೇವಸ್ಥಾನಗಳನ್ನು ಸ್ಥಾಪಿಸಿದರು. ಆದರೆ, ಶಾಲೆಗಳ ಸ್ಥಾಪನೆಗೆ ಆಡಳಿತದ ಅನುಮತಿ ಬೇಕಿತ್ತು. ಅದಕ್ಕಾಗಿ ಸಕಾ೯ರಿ ಶಾಲೆಗಳ ಪ್ರವೇಶದ ಹಕ್ಕಿನ ಹೋರಾಟಕ್ಕೆ ಅವರು ಚಾಲನೆ ನೀಡಿದರು. ಶಾಲೆಗಳ ಪ್ರವೇಶಕ್ಕಾಗಿ ಎಸ್ಎನ್ಡಿಪಿ ಹೋರಾಟ ಪ್ರಾರಂಭಿಸಿದರೂ ಅದು ಅಷ್ಟೊಂದು ಸರಳವಾಗಿರಲಿಲ್ಲ. ಈಳವರಲ್ಲಿ ಬೆಳೆಯುತ್ತಿರುವ ಜಾಗೃತಿ ನಂಬೂದಿರಿ ಮತ್ತು ನಾಯರ್ ಜನಾಂಗದಲ್ಲಿ ದ್ವೇಷದ ಕಿಚ್ಚು ಹತ್ತಿಸಿತ್ತು. ದೇವಸ್ಥಾನ ಸ್ಥಾಪನೆಯ ಕಾಲದಲ್ಲಿ ಎದುರಾಗದ ವಿರೋಧ ಈಗ ದಟ್ಟವಾಗತೊಡಗಿತ್ತು. ಎಸ್ಎನ್ಡಿಪಿ ಚಳವಳಿಯಲ್ಲಿ ಈ ಕಾಲ ನಿಣಾ೯ಯಕವಾದದ್ದು. ಆಗ ಎಲ್ಲೆಡೆ ನಾಯರ್-ಈಳವರ ಸಂಘರ್ಷ ನಡೆಯುತ್ತದೆ. ಈಳವರ ಮೇಲೆ ಬಹಿರಂಗವಾಗಿ ದೌರ್ಜನ್ಯವೆಸಗಲಾಗುತ್ತದೆ. ಎಸ್ಎನ್ಡಿಪಿಯನ್ನು ಬೆಂಬಲಿಸುವ ಪತ್ರಿಕೆಗಳ ಕಚೇರಿಯನ್ನು ಸುಟ್ಟು ಹಾಕಲಾಗುತ್ತದೆ.

     ಚಳವಳಿಯ ಒತ್ತಡಕ್ಕೆ ಮಣಿದ ತಿರುವಾಂಕೂರು ದಿವಾನರು ಈಳವರಿಗೆ ಅವರದ್ದೇ ಶಾಲೆಗಳನ್ನು ಸ್ಥಾಪಿಸಲು ಅನುಮತಿ ನೀಡುತ್ತಾರೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಜಾತಿ ಜನರಿಗೆ ಮುಕ್ತ ಪ್ರವೇಶ ನೀಡುವ ಮಸೂದೆ ಜಾರಿಗೆ ಬರುತ್ತದೆ. ನಾರಾಯಣ ಗುರು ಚಳವಳಿಯಲ್ಲಿ ದೇವಸ್ಥಾನ ಸ್ಥಾಪನೆಗಿಂತಲೂ ಮುಖ್ಯವಾದ ಘಟನೆಯಿದು. ಇದು ಕುಮಾರ ಆಶಾನ್ ಮತ್ತು ಡಾ.ಪಲ್ಪು ಅವರ ನಾಯಕತ್ವದ ಜಯ. ಆದರೆ, ಸಕಾ೯ರಿ ಸೇವೆಗೆ ಹಿಂದುಳಿದ ಜಾತಿ ಸೇರುವ ಅವಕಾಶವನ್ನು ಕೊನೆಗೂ ತಮ್ಮ ಜೀವಮಾನದಲ್ಲಿ ನಾರಾಯಣ ಗುರುಗಳಿಗೆ ಕಾಣಲಾಗುವುದಿಲ್ಲ. 1936ರಲ್ಲಿ ಸಕಾ೯ರ ಲೋಕಸೇವಾ ಆಯೋಗವನ್ನು ಸ್ಥಾಪಿಸಿ, ಉನ್ನತ ಹುದ್ದೆಗಳನ್ನು ಹೊರತುಪಡಿಸಿ, ಹಿಂದುಳಿದವರಿಗೆ ಶೇ.40ರಷ್ಟು ಮೀಸಲಾತಿಯನ್ನು ನೀಡುತ್ತದೆ.

     ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರದಲ್ಲಿನ ಮೀಸಲಾತಿ ಈಳವ ಜನಾಂಗದಲ್ಲಿ ಎರಡೂ ವರ್ಗಗಳ ಬುದ್ಧಿಜೀವಿಗಳ ಸೃಷ್ಟಿಗೆ ಕಾರಣವಾಯಿತು. ಸಾಹಿತಿಗಳು, ಪತ್ರಕರ್ತರು, ಶಿಕ್ಷಕರು ಮತ್ತು ಧಾಮಿ೯ಕ ನಾಯಕರದ್ದು ಒಂದು ಗುಂಪಾದರೆ, ವೈದ್ಯರು, ವಕೀಲರು, ಉದ್ಯಮಿಗಳು, ಆಡಳಿತಾಧಿಕಾರಿಗಳು ಮತ್ತು ರಾಜಕಾರಣಿಗಳು ಇನ್ನೊಂದು ಗುಂಪಿನಲ್ಲಿದ್ದರು. ಕೇರಳದಲ್ಲಿ ಶಿಕ್ಷಣದ ಪ್ರಸಾರದಲ್ಲಿ ಆರ್.ಶಂಕರ್ ಅವರದ್ದು ನಿಣಾ೯ಯಕ ಪಾತ್ರ. ಇವರು ಸ್ಥಾಪಿಸಿದ್ದ "ಶ್ರೀ ನಾರಾಯಣ ಟ್ರಸ್ಟ್" 1952ರಲ್ಲಿಯೇ ನೂರಾರು ಶಾಲೆ, ಪಾಲಿಟೆಕ್ನಿಕ್, ಶಿಕ್ಷಕ ತರಬೇತಿ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ಹೊಂದಿದ್ದವು. ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಈಳವರು ಅಭಿವೃದ್ಧಿ ಹೊಂದಿದ್ದರು. ಎಸ್ಎನ್ಡಿಯ ಮೊದಲ ಅಧಿವೇಶನದ ಕಾಲದಲ್ಲಿಯೇ ನಾರಾಯಣ ಗುರುಗಳು ಕೈಗಾರಿಕಾ ಸಮ್ಮೇಳನವನ್ನು ನಡೆಸಿದ್ದರು. ಆನಂತರ ಅದು ವಾಷ೯ಕ ಕಾರ್ಯಕ್ರಮವಾಯಿತು. ತೆಂಗಿನನಾರು ಉದ್ದಿಮೆ ಜನಪ್ರಿಯವಾಗತೊಡಗಿದ್ದು ಅದೇ ಕಾಲದಲ್ಲಿ. ಪ್ರತಿ ದೇವಾಲಯ, ಆಶ್ರಮ ಮತ್ತು ಮಂದಿರಗಳಲ್ಲಿ ತೆಂಗು ನಾರಿನ ಉದ್ದಿಮೆಯ ಘಟಕಗಳನ್ನು ಸ್ಥಾಪಿಸುವಂತೆ ಅವರು ಪ್ರೇರೆಪಿಸಿದ್ದರು. ಈಗ ತೆಂಗುನಾರಿನ ಉದ್ದಿಮೆಯಲ್ಲಿ ಕೇರಳ ದೇಶದಲ್ಲಿಯೇ ಏಕಸ್ವಾಮ್ಯವನ್ನು ಪಡೆದಿದೆ.

     ಈ ಹಂತದಲ್ಲಿ ಎಸ್ಎನ್ಡಿಪಿ ಮುಂದಿನ ಹೋರಾಟವನ್ನು ರಾಜಕೀಯ ಪ್ರಾತಿನಿದ್ಯಕ್ಕಾಗಿ ಕೇಂದ್ರಿಕರಿಸುತ್ತದೆ. ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾಗುತ್ತವೆ. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ರು ಮತ್ತು ಶೇ.18ರಷ್ಟಿದ್ದ ಮುಸ್ಲಿಂರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ.

     ಐದು ರೂ. ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು. ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದಿರಿಗಳ ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನೇ ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ "ಸಂಯುಕ್ತ ರಾಜಕೀಯ ಸಂಘಟನೆ"ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿತ್ತು. ಈ ಹೋರಾಟಕ್ಕೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಕೇರಳದಲ್ಲಿ ಇಂದು ನಾವು ಕಾಣುತ್ತಿರುವ ರಾಜಕೀಯ ಜಾಗೃತಿಗೆ ಇದು ಮೂಲ ಕಾರಣ.

      ಕೇರಳದ ಕಮ್ಯೂನಿಸ್ಟ್ ಪಕ್ಷವನ್ನು ನಾರಾಯಣ ಗುರು ಚಳವಳಿಯ ಮುಂದುವರೆದ ಭಾಗವೆನ್ನಬಹುದು. ಅಧಿಕೃತವಾಗಿ ನಾರಾಯಣ ಗುರು ಚಳವಳಿಗೆ ಎಸ್ಎನ್ಡಿಪಿಯೇ ಉತ್ತರಾಧಿಕಾರವನ್ನು ಪಡೆದಿದ್ದರೂ ಅದು ಕಮ್ಯೂನಿಸ್ಟ್ ಚಳವಳಿಗೆ ನಾಂದಿಯಾಗಿದ್ದನ್ನು ಇತಿಹಾಸ ಹೇಳುತ್ತದೆ. ಈ ಬೆಳವಣಿಗೆಗೆ ಮುಖ್ಯವಾಗಿ ಕಾರಣಕರ್ತರಾದವರು ಸಹೋದರ ಅಯ್ಯಪ್ಪನ್.ಪ್ರಗತಿಪರ ಚಿಂತನೆಯ, ನೇರನಡೆನುಡಿಯ ಅಯ್ಯಪ್ಪನ್ ಹುಟ್ಟಿನಿಂದಲೇ ಹೋರಾಟಗಾರ ಮತ್ತು ಅಪ್ರತಿಮ ಧೈರ್ಯಶಾಲಿ. ಜಾತಿ ಶ್ರೇಣಿಯಲ್ಲಿ ಈಳವರಿಗಿಂತ ಕೆಳಗಿದ್ದ ಪುಲಯರ ಜೊತೆ ತಮ್ಮೂರಿನಲ್ಲಿ ಸಹಭೋಜನ ಮಾಡಿಸಿ ಜಾತಿಯಿಂದ ಬಹಿಷ್ಕೃತನಾದ ಅಯ್ಯಪ್ಪನ್ ಜಾತಿ ನಿಮೂ೯ಲನೆಯ ಪ್ರಬಲ ಪ್ರತಿಪಾದಕ. ಅಯ್ಯಪ್ಪನ್ ಅವರನ್ನು ಗುರುತಿಸಿದ ಗುರುಗಳು ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡುವ ಉದ್ದೇಶ ಹೊಂದಿದ್ದರಂತೆ. ಮೂಲತಃ ನಾಸ್ತಿಕನಾದ ಅಯ್ಯಪ್ಪನ್ "ಸ್ವತಂತ್ರ ಸಮುದಾಯ ಪ್ರತಿಷ್ಠಾನ"ವನ್ನು ಸ್ಥಾಪಿಸಿ ಸಹೋದರ ಎನ್ನುವ ಪತ್ರಿಕೆ ಪ್ರಾರಂಭಿಸಿ ಜಾತಿ ವಿನಾಶ ಚಳವಳಿಯನ್ನು ನಡೆಸುತ್ತಿದ್ದರು. ಅವರನ್ನು ಪುಲಯರ ಅಯ್ಯಪ್ಪನ್ ಎಂದು ಜನ ಗೇಲಿ ಮಾಡುತ್ತಿದ್ದರಂತೆ.

     ನಾರಾಯಣ ಗುರುಗಳ ಸಾವಿನ ನಂತರ ಪರಸ್ಪರ ಭಿನ್ನ ವಿಚಾರಧಾರೆಯನ್ನು ಹೊಂದಿದ್ದ ನಾಯಕರು ಎಸ್ಎನ್ಡಿಪಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನ ಪಟ್ಟಿದ್ದರು. ಮೊದಲನೆಯದಾಗಿ ಮೇಲ್ಜಾತಿ ಜನರ ವೈರಿ ಎಂದು ಬಗೆಯಲಾದ ಬ್ರಿಟಿಷರನ್ನು ಸ್ನೇಹಿತರೆಂದು ತಿಳಿದುಕೊಂಡಿದ್ದ ಮಿತವಾದಿ ಕೃಷ್ಣನ್, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವ ಮೂಲಕವೇ ಈಳವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದ ಕಾಂಗ್ರೇಸ್ ಒಲವಿನ ಟಿ.ಕೆ ಮಾಧವನ್ ಮತ್ತು ಸಿ.ಕೇಶವನ್, ಸಮಾಜವಾದಿ ಮತ್ತು ಪುರೋಗಾಮಿ ವಿಚಾರಧಾರೆಯ ಸಹೋದರ ಅಯ್ಯಪ್ಪನ್ ಅವರ ಸಮಾಜವಾದಿ-ಪುರೋಗಾಮಿ ವಿಚಾರಧಾರೆಗಳನ್ನು ಮೇಳೈಸಲು ಯತ್ನಿಸುತ್ತಿದ್ದ ಇನ್ನೊಂದು ಗುಂಪು ಇದರಲ್ಲಿ ಪ್ರಮುಖವಾದವುಗಳು. ಈ ಕೊನೆಯ ಗುಂಪು ನಂತರದ ದಿನಗಳಲ್ಲಿ ಕಮ್ಯೂನಿಸ್ಟ್ ಪಕ್ಷ ಅಸ್ತಿತ್ವಕ್ಕೆ ಬರಲು ಕಾರಣವಾಯಿತು.

     1937ರಲ್ಲಿ ಕೇರಳದಲ್ಲಿ ಕಮ್ಯೂನಿಷ್ಟ ಪಕ್ಷ ಪಿ.ಕೃಷ್ಣಪಿಳ್ಳೆ ಮತ್ತು ಇ.ಎಂ.ಎಸ್ ನಂಬೂದಿರಿ ಪಾಡ್ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಎಸ್ಎನ್ಡಿಪಿಯ ಅಯ್ಯಪ್ಪನ್, ದಾಮೋದರನ್, ಸುಕುಮಾರನ್ ಮೊದಲಾದವರು ಕಮ್ಯೂನಿಸ್ಟ್ ಪಕ್ಷವನ್ನು ಬೆಂಬಲಿಸುತ್ತಿದ್ದರೆ ಸಿ.ಕೇಶವನ್, ಟಿ.ಕೆ ಮಾಧವನ್ ಮತ್ತು ಆರ್.ಶಂಕರ್ ಕಾಂಗ್ರೇಸ್ ಒಲವುಳ್ಳವರಾಗಿದ್ದರು. ವಿಪರ್ಯಾಸವೆಂದರೆ ಎಸ್.ಎನ್.ಡಿ.ಪಿ ಚಳವಳಿಯಿಂದ ಜಾಗೃತರಾದ ಕೆಳವರ್ಗದ ಜನಸಮೂಹ ಎಡಪಕ್ಷಗಳ ಕಡೆ ಆಕಷರ್ತರಾಗಿದ್ದರು. ಅವರಲ್ಲಿ ಭೂ ಹೀನ ಕಾಮಿ೯ಕರು, ಗೇಣಿದಾರರು, ಸೇಂದಿ ತೆಗೆಯುವವರು, ಪ್ಲಾಂಟೇಷನ್ ಕಾಮಿ೯ಕರು, ಗೇರುಬೀಜ ಕಾಖಾ೯ನೆ ಕಾಮಿ೯ಕರು ಮೊದಲಾದವರಿದ್ದರು. ಆ ವರ್ಗಗಳಲ್ಲಿ ಸಕ್ರಿಯವಾಗಿದ್ದ ಕಾಮಿ೯ಕರ ಸಂಘಟನೆಗಳು ಮಾತ್ರ ಕಮ್ಯೂನಿಸ್ಟ್ ಪಕ್ಷಕ್ಕೆ ಸೇರಿದ್ದಾಗಿತ್ತು.

     ಕಮ್ಯೂನಿಷ್ಟ್ ಪಕ್ಷದಲ್ಲಿ ನಾಯಕತ್ವ ಮಾತ್ರ ಈಳವ, ಪುಲಯ, ಪರವರ ಕೈಗೆ ಬರಲಿಲ್ಲ. ಅದು ನಂಬೂದಿರಿ, ನಾಯರ್ ಕೈಯಲ್ಲಿ ಭದ್ರವಾಗಿಯೇ ಉಳಿದಿದೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದ ಹಿರಿಯ ನಾಯಕಿ ಕೆ.ಆರ್ ಗೌರಿ ಅವಕಾಶವಂಚಿತರಾಗಿದ್ದು ಇದಕ್ಕೆ ಒಂದು ಉದಾಹರಣೆ.

     ಕಾಂಗ್ರೇಸ್ ಪಕ್ಷವು ಈಳವರಿಗೆ ರಾಜಕೀಯ ಅಧಿಕಾರವನ್ನು ನೀಡಿತು. 1951ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿ.ಕೇಶವನ್ ಮುಖ್ಯಮಂತ್ರಿಯಾದರು. 1962ರಲ್ಲಿ ಆರ್. ಶಂಕರ್ ಮುಖ್ಯಮಂತ್ರಿಯಾದರು. 1971ರಲ್ಲಿ ಅಲ್ಲಿನ ವಿಧಾನಸಭೆಯಲ್ಲಿ 28 ಈಳವ ಶಾಸಕರಿದ್ದರು. ಇಂದು ಕೂಡಾ ಕೇರಳದಲ್ಲಿ ಎಸ್.ಎನ್. ಡಿ.ಪಿ ಮತ್ತು ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಾಲಯಗಳು ಹಾಗೂ ಸನ್ಯಾಸಿ ಸಂಘದ ಮೇಲೆ ನಿಯಂತ್ರಣ ಸ್ಥಾಪಿಸಲು ಕಾಂಗ್ರೇಸ್ ಮತ್ತು ಎಡಪಕ್ಷಗಳ ನಡುವೆ ಸಂಘರ್ಷ ನಡೆಯುತ್ತಿದೆ. ಎಸ್.ಎನ್.ಡಿ.ಪಿ, ಶ್ರೀ ನಾರಾಯಣ ಟ್ರಸ್ಟ್ ಮತ್ತು ಸನ್ಯಾಸಿ ಸಂಘ ಇಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.

     ಮೇಲ್ಜಾತಿ ಜನರೂ ಸೇರಿದಂತೆ, ಎಲ್ಲ ವರ್ಗಗಳೊಳಗಿನಿಂದಲೂ ಸುಧಾರಣೆಯ ಧ್ವನಿ ಏಳುವಂತೆ ಮಾಡಿದ್ದು ನಾರಾಯಣಗುರು ಚಳವಳಿಯ ಇನ್ನೊಂದು ಸಾಧನೆ. ನಾಯರ್ ಸೇವಾ ಸಂಘ, ಪುಲಯ ಮಹಾಜನ ಸಭಾ ಮತ್ತು ನಂಬೂದಿರಿಗಳ ಯೋಗಕ್ಷೇಮ ಸಭಾಗಳು ಎಸ್.ಎನ್.ಡಿ.ಪಿ ಮಾದರಿಯಲ್ಲಿಯೇ ತಮ್ಮ ಜನಾಂಗಗಳ ಸುಧಾರಣೆಗೆ ಪ್ರಯತ್ನ ನಡೆಸಿದವು. ಸುಧಾರಣಾ ಚಳವಳಿಯಲ್ಲಿ ಭಾಗವಹಿಸಿದ್ದ ನಂಬೂದಿರಿ ಯುವಕರು ಬಹುಬೇಗನೆ ಕಮ್ಯೂನಿಸ್ಟ್ ಪಕ್ಷದತ್ತ ಆಕಷ೯ತರಾದರು. ಮುಂದೆ ಕಮ್ಯುನಿಸ್ಟ್ ಪಕ್ಷದ ನಾಯಕತ್ವ ನಂಬೂದಿರಿ, ನಾಯರ್ಗಳ ಪಾಲಾಗಿ ಇತಿಹಾಸ ಮರುಕಳಿಸಿದ್ದನ್ನು ಕಾಣಬಹುದು.

     ನಾರಾಯಣ ಗುರು ಚಳವಳಿ ಕೇರಳದಲ್ಲಿ ನಡೆಯದೇ ಹೋಗಿದ್ದರೆ, ಏನಾಗುತ್ತಿತ್ತು ಎಂಬ ಪ್ರಶ್ನೆಗೆ ರಾಜಗೋಪಾಲಚಾರಿ ಅವರು ಆ ಚಳವಳಿ ನಡೆಯುತ್ತಿದ್ದ ಕಾಲದಲ್ಲಿಯೇ ಉತ್ತರ ನೀಡಿದ್ದರು. ತಿರುವಾಂಕೂರು ಸಂಸ್ಥಾನದ ದಿವಾನರು ದೇವಸ್ಥಾನ ಪ್ರವೇಶ ಘೋಷಣೆ ಹೊರಡಿಸಲು ವಿಳಂಬ ಮಾಡುತ್ತಿದ್ದನ್ನು ಕಂಡ ರಾಜಗೋಪಾಲಾಚಾರಿಯವರು ದಿವಾನರಿಗೆ ಪತ್ರ ಬರೆದು "ನಾರಾಯಣ ಗುರುಗಳ ಸುಧಾರಣಾ ಚಳವಳಿ ನಡೆಯದಿದ್ದರೆ, ಕೇರಳದಲ್ಲಿನ ಅರ್ಧಕ್ಕೂ ಹೆಚ್ಚಿನ ಜನಸಂಖ್ಯೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿ ಹೋಗುತ್ತಿದ್ದರು" ಎಂದು ಎಚ್ಚರಿಸಿದ್ದರು. ಕೇರಳದ ಆಗಿನ ಸ್ಥಿತಿಯಲ್ಲಿ ಈ ಎಚ್ಚರಿಕೆ ಉತ್ಪ್ರೇಕ್ಷೆ ಆಗಿರಲಿಲ್ಲ. ವಾಸ್ಕೋಡಗಾಮ ಮೊದಲು ಬಂದಿಳಿದ ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಉಳಿದೆಲ್ಲಾ ಕಡೆಗಳಿಗಿಂತ ಹೆಚ್ಚು ಕ್ರೀಯಾಶೀಲವಾಗಿದ್ದವು. ನಾರಾಯಣಗುರುಗಳ ಪ್ರವೇಶವಾಗುವ ಮೊದಲು ಅಲ್ಲಿ ಜಾತಿ ಆಧಾರಿತ ದೌರ್ಜನ್ಯದಿಂದ ಬೇಸತ್ತ ಕೆಳವರ್ಗದ ಜನ ಸಾಮೂಹಿಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ, ದೇಶದಲ್ಲಿ ಅತಿಹೆಚ್ಚು ಕ್ರಿಶ್ಚಿಯನ್ ಜನಸಂಖ್ಯೆ ಇರುವ ರಾಜ್ಯ ಕೇರಳ. ಅಲ್ಲಿ ಶೇ.24ರಷ್ಟು ಕ್ರಿಶ್ಚಿಯನ್ರು ಇರುವುದು ಈ ಮತಾಂತರಕ್ಕೆ ಸಾಕ್ಷಿ.

     ನಾರಾಯಣ ಗುರುಗಳ ಚಳವಳಿಯುದ್ದಕ್ಕೂ ಹಲವಾರು ಬಾರಿ ತಮ್ಮ ಅನುಯಾಯಿಗಳಿಂದಲೆ ಮತಾಂತರದ ಬೆದರಿಕೆಯನ್ನು ಎದುರಿಸಿದ್ದರು. ವೈಕಂ ಸತ್ಯಾಗ್ರಹದ ಕಾಲದಲ್ಲಿ ಮತ್ತು ಅದಕ್ಕಿಂತ ಮೊದಲು ಮತಾಂತರದ ವಿಚಾರ ಮತ್ತೇ ಎಸ್.ಎನ್.ಡಿ.ಪಿಯಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಗುರುಗಳ ಪ್ರಮುಖ ಶಿಷ್ಯರಲ್ಲಿ ಸಿ.ವಿ ಕುಂಜುರಾಮನ್ ಕ್ರಿಶ್ಚಿಯನ್ ಮತಾಂತರವನ್ನು ಪ್ರತಿಪಾದಿಸುತ್ತಿದ್ದರೆ, ಸಹೋದರ ಅಯ್ಯಪ್ಪನ್ ಮತ್ತು ಸಿ.ಕೃಷ್ಣನ್ ಬೌದ್ಧ ಧರ್ಮದ ಪರ ಒಲವು ತೋರಿಸಿದ್ದರು. ಕುಮಾರ ಆಶಾನ್ ಕೂಡ ಬೌದ್ಧ ಧರ್ಮದ ಕಡೆ ಆಕಷರ್ಿತರಾಗಿದ್ದರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ಟಿ.ಕೆ ಮಾಧವನ್ ಮತಾಂತರವನ್ನೇ ವಿರೋಧಿಸುತ್ತಿದ್ದರು.

      ಎಸ್.ಎನ್.ಡಿ.ಪಿ ಅಸ್ತಿತ್ವವನ್ನೇ ಅಲುಗಾಡಿಸಿದ ಈ ವಿವಾದ ನಾರಾಯಣ ಗುರುಗಳಿಗೆ ಒಂದು ಸವಾಲಾಗಿತ್ತು. ತಕ್ಷಣ ಸ್ವಾಮಿಗಳು ಅಲ್ವಾಯಿಯಲ್ಲಿ 1924 ಪೆಬ್ರುವರಿಯಲ್ಲಿ ಎರಡು ದಿನಗಳ ಸರ್ವಧರ್ಮ ಸಮ್ಮೇಳನ ನಡೆಸಿದರು. ಈ ಸಮ್ಮೇಳನ ನಡೆಯುತ್ತಿರುವುದು "ತರ್ಕ ನಡೆಸುವದಕ್ಕಾಗಲಿ, ಗೆಲ್ಲುವುದಕ್ಕಾಗಲಿ ಅಲ್ಲ. ಪರಸ್ಪರ ತಿಳಿದುಕೊಳ್ಳುವುದು ಮತ್ತು ತಿಳಿಸಿಕೊಡುವುದು ಇದರ ಉದ್ದೇಶ" ಎಂದು ನಾರಾಯಣ ಗುರುಗಳು ಘೋಷಿಸಿದ್ದರು. ಸ್ವಾಮಿಗಳು "ಒಂದು ಜಾತಿ, ಒಂದು ಮತ, ಒಂದೇ ದೇವರು" ಎಂಬ ಸಂದೇಶ ಸಾರಿದರು. ಮನುಷ್ಯ ಬದಲಾದರೆ, ಜಾತಿ ಬದಲಾಯಿಸಬೇಕಾದ ಅಗತ್ಯ ಇಲ್ಲವೆಂದು ಅವರು ಹಿಂದೂ ಧರ್ಮದ ನಾಯಕರನ್ನು ಉದ್ದೇಶಿಸಿ ಹೇಳಿದರು. ಮತಾಂತರದ ವಿವಾದ ಅಲ್ಲಿಗೆ ತಣ್ಣಗಾಯಿತು.

    
ಕೇರಳದಿಂದಾಚೆಗೆ ತಮಿಳುನಾಡು ಹಾಗೂ ಕನರ್ಾಟಕದ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತು ಪಡಿಸಿದರೆ, ಬೇರೆಡೆ ನಾರಾಯಣ ಗುರು ಚಳವಳಿ ಹೆಚ್ಚು ಪರಿಚಿತವಲ್ಲ. ನಾರಾಯಣ ಗುರುಗಳ ಶಿಷ್ಯರೇ ಆದ ಡಾ.ಪಲ್ಪು ಅವರ ಮಗ ನಟರಾಜ ಗುರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುಗಳ ಚಿಂತನೆಯ ಪ್ರಸಾರ ಮಾಡಿದರು. ಅವರು ಶಿವಗಿರಿಯ ಸಮೀಪ ಸ್ಥಾಪಿಸಿರುವ ಈಸ್ಟ್ವೆಸ್ಟ್ ವಿಶ್ವವಿದ್ಯಾಲಯವಿದೆ. ಆದರೆ, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನೂರಾರು ಗುರುಮಂದಿರಗಳಲ್ಲಿ ಅವರಿಗಾಗಿಯೇ ಕಟ್ಟಿದ ದೇವಾಲಯಗಳಲ್ಲಿ ನಾರಾಯಣ ಗುರುಗಳ ಆರಾಧನೆ-ಭಜನೆಗಳು ಕೂಡ ನಾರಾಯಣನೆಂಬ ಈ "ನರ"ನ ಸಾಧನೆಯ ನೈಜ ಚಿತ್ರಣ ನೀಡಲು ವಿಫಲವಾಗಿವೆ. ಸಾವಿರಾರು ವರ್ಷಗಳಿಂದ ಬೇರುಬಿಟ್ಟ ವೈದಿಕಷಾಹಿ, ಫ್ಯಾಸಿಸ್ಟ್ ಶಕ್ತಿ ತನ್ನನ್ನು ಪ್ರಶ್ನಿಸಿದವರನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಸಾಧ್ಯವಾಗದಿದ್ದರೆ, ತನ್ನೊಳಗೆ ಜೀಣಿ೯ಸಿಕೊಂಡು ಬಿಡುತ್ತದೆ. ಬುದ್ಧ ವಿಷ್ಣುವಿನ ಅವತಾರವಾದ, ಬಸವಣ್ಣ ನಂದಿಯಾದ ದುರಂತವೇ ನಾರಾಯಣ ಗುರುಗಳಿಗಾಗಿದೆ. ಸನ್ಯಾಸಿಯಾದ ದಿನದಿಂದ ಸಾವಿನವರೆಗೂ ಕೇರಳದ ಅತ್ಯಂತ ಕೀಳು ಜಾತಿಯವರೆನಿಸಿದ ಪುಲಯ ಜನಾಂಗದ ಅಡಿಗೆಯವನಿಂದಲೇ ಕೈತುತ್ತು ತಿಂದು ಬದುಕಿದ ನಾರಾಯಣ ಗುರುಗಳು ಇಂದು ಈಳವ - ಬಿಲ್ಲವ ಜಾತಿ ಜನರ ನಾಯಕನಾಗಿಬಿಟ್ಟಿದ್ದಾರೆ.

     ವಿದ್ಯೆಯಿಂದ ಸ್ವತಂತ್ರರಾಗಿರಿ ಎಂದ ಗುರುಗಳ ಚಿಂತನೆಯನ್ನು ವಿದ್ಯೆ ಎಂದರೆ, ಅಕಾಡೆಮಿಕ್ ಶಿಕ್ಷಣ ಎಂದು ತಿಳಿದ ಕಾರಣದಿಂದಾಗಿಯೇ ಅವರ ಅನುಯಾಯಿಗಳೆನಿಸಿಕೊಂಡವರಲ್ಲಿ ಬಹಳಷ್ಟು ಮಂದಿ ಇಂದಿಗೂ ಬೌದ್ಧಿಕ ದಾಸ್ಯದಿಂದ ಮುಕ್ತವಾಗಿಲ್ಲ. ಹಾಗಿಲ್ಲದಿದ್ದರೆ, ವಣಾ೯ಶ್ರಮ ವ್ಯವಸ್ಥೆಗೆ ಸವಾಲಾಗಿ ನಾರಾಯಣ ಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ ಸ್ಥಾಪಿಸಿದ್ದ ದೇವಾಲಯವನ್ನು ಜೀಣೋ೯ದ್ಧಾರಗೊಳಿಸಿದ ಅವರ ಅನುಯಾಯಿಗಳು, ಅದನ್ನು ವಣಾ೯ಶ್ರಮ ವ್ಯವಸ್ಥೆಯನ್ನು ಪ್ರತಿಪಾದಿಸುವ ಶೃಂಗೇರಿ ಮಠದ ಸ್ವಾಮಿಗಳಿಂದ ಉದ್ಘಾಟನೆ ಮಾಡಿಸುತ್ತಿರಲಿಲ್ಲ. ಒಂದು ಜಾತಿ, ಒಂದು ಮತ, ಒಂದೇ ದೇವರು ಎಂದು ಸಾರಿದ ನಾರಾಯಣ ಗುರುಗಳು ಒಂದು ಜಾತಿಯ ಮಂದಿರಗಳಲ್ಲಿ ಬಂಧಿಯಾಗುತ್ತಿರಲಿಲ್ಲ. ಈ 'ಭಕ್ತಸಮೂಹ', 'ಭಜನಾಮಂಡಳಿ'ಗಳಿಂದ ನಾರಾಯಣ ಗುರುಗಳನ್ನು ಬಿಡುಗಡೆಗೊಳಿಸಿ ಅವರನ್ನು ಎಲ್ಲರಿಗೂ ಸಲ್ಲುವ ಗುರುಗಳನ್ನಾಗಿ ಮಾಡಬೇಕಾಗಿದೆ. ಈ ಮೂಲಕವೇ ಕೋಮುವಾದಿ ರಾಜಕಾರಣಕ್ಕೆ ಪ್ರತಿಯಾಗಿ 'ಸಾಮಾಜಿಕ ನ್ಯಾಯದ' ರಾಜಕಾರಣವನ್ನು ರೂಪಿಸುವ ಕಾರ್ಯ ನಡೆಯಬೇಕಾಗಿದೆ. ಇದು 'ಹಿಂದುತ್ವದ ಪ್ರಯೋಗಶಾಲೆ' ಎಂಬ ಕುಖ್ಯಾತಿಗೆ ಈಡಾದ ದಕ್ಷಿಣಕನ್ನಡದಿಂದಲೇ ಪ್ರಾರಂಭವಾಗಬೇಕು.

 

Sunday, September 29, 2013

06-03-2012ರಂದು ಟಿವಿ9 ಸುದ್ದಿವಾಹಿನಿಯಲ್ಲಿ ಉತ್ತರ ಪ್ರದೇಶ, ಉತ್ತರಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳ ಚುನಾವಣಿ ಫಲಿತಾಂಶದ ಕುರಿತ ಚಚೆ೯


07-03-2012ರಂದು ಟಿವಿ9 ಸುದ್ದಿವಾಹಿನಿಯಲ್ಲಿ ಉತ್ತರ ಪ್ರದೇಶ, ಉತ್ತರಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳ ಚುನಾವಣಿ ಫಲಿತಾಂಶದ ಕುರಿತ ಚಚೆ೯


07-03-2012ರಂದು ಟಿವಿ9 ಸುದ್ದಿವಾಹಿನಿಯಲ್ಲಿ ಉತ್ತರ ಪ್ರದೇಶ, ಉತ್ತರಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳ ಚುನಾವಣಿ ಫಲಿತಾಂಶದ ಕುರಿತ ಚಚೆ೯


09-05-2013 ಟಿವಿ 9 ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡ ವಿಶೇಷ ಕಾರ್ಯಕ್ರಮದಲ್ಲಿ ಚುನಾವಣಾ ಫಲಿತಾಂಶದ ವಿಶ್ಲೇಷಣಿ


ಜನಶ್ರೀ ವಾಹಿನಿಯಲ್ಲಿ ಪ್ರಸಾರಗೊಂಡ ‘ಬದಲಾಗುತ್ತಿದೆಯಾ ಬಿಜೆಪಿ ಹೈಕಮಾಂಡ್ ’ ಕಾಯ೯ಕ್ರಮದಲ್ಲಿ ಚಚೆ೯


17-09-2012 ಟಿವಿ 9 ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡ `ದಾರಿ ಯಾವುದಯ್ಯ' ವಿಶೇಷ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮುಂದಿನ ನಡೆ ಕುರಿತು ವಿಶ್ಲೇಷಣಿ


07-05-2013 ಟಿವಿ 9 ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡ `ನಿಮ್ಮ ತೀಪು೯' ವಿಶೇಷ ಕಾರ್ಯಕ್ರಮದಲ್ಲಿ ಚುನಾವಣಾ ಫಲಿತಾಂಶದ ವಿಶ್ಲೇಷಣಿ


28-02-2013 ಟಿವಿ 9 ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡ `ಆಪರೇಷನ್ ಹಸ್ತ' ಕಾರ್ಯಕ್ರಮ


04-05-2013 ಟಿವಿ 9 ಸುದ್ದಿವಾಹಿನಿಯಲ್ಲಿ ಪ್ರಸಾರಗೊಂಡ ನಾ ಕಂಡಂತೆ..


Saturday, September 28, 2013

28/09/2013 ರಾಜ್ಯಮಟ್ಟದ ವಿಚಾರ ಸಂಕಿರಣ: ತಿಪಟೂರು

ನಡೆನುಡಿ ಸಂಯುಕ್ತಾಶ್ರಯದಲ್ಲಿ ನಡೆದ ‘ನಾಡು ಕಂಡ ಮೂವರು ದಾಶ೯ನಿಕ ನಾಯಕರು’ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದ ಅತಿಥಿ ಮಾನ್ಯರು.

ನಡೆನುಡಿ ಸಂಯುಕ್ತಾಶ್ರಯದಲ್ಲಿ ನಡೆದ ‘ನಾಡು ಕಂಡ ಮೂವರು ದಾಶ೯ನಿಕ ನಾಯಕರು’ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ದೇವರಾಜ್ ಅರಸು ಅವರ ಕುರಿತು ಮಾತನಾಡುತ್ತಿರುವುದು.


Sunday, September 1, 2013

ನಾರಾಯಣ ಗುರುಗಳ ಚಳವಳಿ

(13ನೇ ಫೆಬ್ರುವರಿ 2000ದಂದು ತೃತೀಯ ಗೋರೆಗಾಂವ್ ವಿಚಾರಭಾರತಿ ಸಮ್ಮೇಳನದಲ್ಲಿ "ಸುಧಾರಣಾವಾದಿಗಳು ಮತ್ತು ಚಳವಳಿಗಳು" ಎಂಬ ಗೋಷ್ಟಿಯಲ್ಲಿ "ನಾರಾಯಣ ಗುರುಗಳ ಚಳವಳಿ"ಗಳ ಕುರಿತು ದಿನೇಶ್ ಅಮಿನ್ ಮಟ್ಟು ಅವರು ಮಂಡಿಸಿದ ಪ್ರಬಂಧ.)

ಇಂಡಿಯಾ ದೇಶದ ಧಾಮರ್ಿಕ ಪರಂಪರೆಯಷ್ಟೇ ಧೀರ್ಘವಾದದ್ದು ಅದಕ್ಕೆ ಎದುರಾಗಿ ಬಂದ ಪ್ರತಿಭಟನಾ ಚಳವಳಿಗಳ ಪರಂಪರೆ. ಬುದ್ಧ, ಬಸವನಂದ ಪ್ರಾರಂಭಗೊಂಡು ಭಕ್ತಿಪಂಥದ ಮೂಲಕ ಮುಂದುವರೆದು ಜ್ಯೋತಿಬಾ ಪುಲೆ, ನಾರಾಯಣ ಗುರು, ಪೆರಿಯಾರ್, ಅಂಬೇಡ್ಕರ್, ಗಾಂಧಿ, ಲೋಹಿಯಾವರೆಗೆ ನಡೆದುಕೊಂಡು ಬಂದ ಈ ಚಳವಳಿಗಳಲ್ಲಿ ಪ್ರತಿಭಟನೆಯ ಭಿನ್ನ ಅಭಿವ್ಯಕ್ತಿಗಳನ್ನು ಕಾಣಬಹುದು. ಧರ್ಮ ಸಮಾಜವನ್ನು ಜಡಗೊಳಿಸಿದಾಗೆಲ್ಲ ಅದಕ್ಕೆ ಚಲನಶೀಲತೆಯನ್ನು ತಂದು ಕೊಟ್ಟದ್ದು ಈ ಚಳವಳಿಗಳು.
 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ರಾಯ, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು. ಇವು ಮಹಿಳೆಯರು ಮತ್ತು ಶೋಷಿತರಿಗಾಗುತ್ತಿರುವ ಅನ್ಯಾಯದ ವಿರುದ್ದ, ಧನ ಎತ್ತಿದವು.
 ಸತಿಪದ್ದತಿ, ವಿಧವಾ ವಿವಾಹ, ವರದಕ್ಷಿಣಿ, ಮೊದಲಾದ ಬಹುಮಟ್ಟಿಗೆ ಮೇಲ್ಜಾತಿ ಸಮಾಜದಲ್ಲಿನ ಅದರಲ್ಲಿ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ ಸಾಮಾಜಿಕ ಅನಷ್ಟಗಳ ನವಾರಣಿ, ಈ ಚಳವಳಿಗಳ ಮುಖ್ಯ ಉದ್ದೇಶವಾಗಿತ್ತು. ಆರ್ಯ ಸಮಾಜ ಪ್ರಾರಂಭಿಸಿದ್ದ 'ಶುದ್ಧಿ ಚಳವಳಿ' ಯನ್ನು ಗಮಿಸಿದರೆ, ಕೆಳವರ್ಗದ ಜನ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವದನ್ನು ತಪ್ಪಿಸುವುದು ಕೂಡ ಈ ಚಳವಳಿಗಳ ಮುಖ್ಯ ಉದ್ದೇಶವಾಗಿತ್ತು. ಈ ಚಳವಳಿ ಕೈಗೆತ್ತಿಕೊಂಡ ಬಹಳಷ್ಟು ಸಮಸ್ಯೆಗಳು ಕೆಳವರ್ಗದ ಜನರ ಜ್ವಲಂತ ಸಮಸ್ಯೆಯಾಗಿರಲಿಲ್ಲ.
 ಅದೇ ಕಾಲಕ್ಕೆ ಕೆಳವರ್ಗದಿಂದಲೇ ಮೂಡಿ ಬಂದ ನಾಯಕರು, ವಣರ್ಾಶ್ರಮ ವ್ಯವಸ್ಥೆಯನ್ನು ಪ್ರಶ್ನಿಸುವ ಚಳವಳಿಗಳ ನೇತೃತ್ವ ವಹಿಸಿದ್ದರು. ಒರಿಸ್ಸಾದಲ್ಲಿ ಮಹಿಮಾ ಸ್ವಾಮಿ ಎಂಬುವವರ ನೇತೃತ್ವದಲ್ಲಿ ಆದಿವಾಸಿಗಳು ತಮಗೆ ಪ್ರವೇಶವಿಲ್ಲವೆಂಬ ಕಾರಣಕ್ಕೆ ಪುರಿಯ ಜಗನ್ನಾಥ ದೇವಾಲಯವನ್ನು ಸುಡಲು ಪ್ರಯತ್ನಿಸಿದರು.
 ಕೊನೆಗೆ ಮಹಿಮಾ ಸ್ವಾಮಿ 1850ರಲ್ಲಿ ಮಹಿಮಾ ಧರ್ಮವನ್ನು ಭೋಧಿಸಿದ. ಅದೇ ಕಾಲಕ್ಕೆ ಮಧ್ಯಪ್ರದೇಶದ ಛತ್ತೀಸಘಡದ ಅಸ್ಪೃಶ್ಯರ ಒಂದು ಪಂಗಡವಾಗಿದ್ದ ಚಮ್ಮಾರರಲ್ಲಿ ಸತ್ನಮ್ ಪಂಥ ಹುಟ್ಟಿಕೊಂಡಿದೆ. ಅವರು ಪ್ರತಿಭಟನೆಯ ಅಂಗವಾಗಿ ತಾವೇ ಜನವಾರ ಹಾಕಿಕೊಳ್ಳತೊಡಗಿದರು. 1873ರಲ್ಲಿ ಪುಲೆ, ಸತ್ಯಶೋಧಕ ಸಮಾಜದ ಮೂಲಕ ಜಾತಿನಾಶ, ಮಹಿಳಾ ವಿಮೋಚನೆಯ ಕಾರ್ಯ ಪ್ರಾರಂಭಿಸಿದರು. ಕೋಲ್ಲಾಪುರದ ಸಾಹು ಮಹಾರಾಜರು, ನ್ಯಾಯಾಲಯಗಳಲ್ಲಿನ ಹುದ್ದೆಗಳಲ್ಲಿ ಶೇ.50ರಷ್ಟನ್ನು ಬ್ರಾಹ್ಮಣೇತರರಿಗೆ ಮೀಸಲಿಟ್ಟಿದ್ದರು. ತಮಿಳು ನಾಡಿನಲ್ಲಿ ಪೆರಿಯಾರ್ ಅವರ ಸ್ವಾಭಿಮಾನ ಚಳವಳಿಗೆ ರಂಗ ಸಜ್ಜಾಗತೊಡಗಿತ್ತು. ಸತ್ಯಶೋಧಕ ಸಮಾಜ, ಮಹಿಮಾ ಧರ್ಮ, ಸತ್ನಾಂ ಪಂಥ, ಪೆರಿಯಾರ್ ಅವರ ಸ್ವಾಭಿಮಾನ ಚಳವಳಿ ಅಲ್ಲಿನ ಸಮಾಜಗಳಲ್ಲಿ ಯಾವ ರೀತಿಯ ಕಂಪನಗಳನ್ನು ಉಂಟು ಮಾಡಿತ್ತೋ, ಅಂತಹದ್ದೇ ಒಂದು ಸ್ಪೋಟಕ ಸ್ಥಿತಿ 1888ರಲ್ಲಿ ನಾರಾಯಣ ಗುರುಗಳು ಅರವಿಪುರಂ ನಲ್ಲಿ ಶಿವದೇವಾಲಯ ಸ್ಥಾಪಿಸಿದಾಗ, ಕೇರಳದ ಹಿಂದೂ ಸಮಾಜದಲ್ಲಿ ನಿಮರ್ಾಣವಾಯಿತು.
 ಅದು ಶಂಕರಚಾರ್ಯರು ಹುಟ್ಟಿದ ನಾಡಿನಲ್ಲಿ ಅಸ್ಪೃಶ್ಯನೊಬ್ಬ, ಅಸ್ಪೃಶ್ಯರಿಗಾಗಿ ನಿಮರ್ಿಸಿದ ಸ್ಪೃಶ್ಯ ದೇವರ ದೇವಾಲಯ.
 ಮೊದಲ ದೇವಾಲಯ ಸ್ಥಾಪನೆಯ ನಂತರದ 48ವರ್ಷಗಳ ಕಾಲ ಅಲ್ಲಿನ ಶೋಷಿತರ ಕೊರಳ ದನಿಯಾಗಿ ಮೂಡಿ ಬಂದ ಸುಧಾರಣಾ ಚಳವಳಿ ಕೇರಳದ ಧಾಮರ್ಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ಕ್ಷೇತ್ರಗಳ ಚಿತ್ರವನ್ನೇ ಪಲ್ಲಟಗೊಳಿಸಿತ್ತು.
 ಈ ಚಳವಳಿಯ ಮೊದಲ 40ವರ್ಷಗಳಲ್ಲಿ ನಾರಾಯಣ ಗುರುಗಳು ಜೊತೆಯಲ್ಲಿದ್ದುಕೊಂಡೇ ಮಾರ್ಗದರ್ಶನ ನೀಡಿದರೆ, ಅವರ ಸಾವಿನ ನಂತರ 8ವರ್ಷಗಳ ಹೋರಾಟಕ್ಕೆ ಅವರ ತತ್ವಗಳೇ ಚಳವಳಿಯ ದಾರಿಗೆ ಬೆಳಕಾಗಿತ್ತು. ದಲಿತರಿಗೂ ದೇವಸ್ಥಾನ ಪ್ರವೇಶ ಅವಕಾಶ ನಡುವ 'ದೇವಾಲಯ ಪ್ರವೇಶ' ಘೋಷಣೆ ಹೊರಬಿದ್ದಾಗ ಆ ದಿನವನ್ನು ನೋಡಲು ನಾರಾಯಣ ಗುರುಗಳು ಜೀವಂತವಿರಲಿಲ್ಲ.
 ಒಂದು ಚಳವಳಿಯ ಸೋಲು-ಗೆಲುವು, ಅದರ ಸಿದ್ದಾಂತ, ಸಂಘಟನೆ ಮತ್ತು ಹೋರಾಟದ ನೆಲಗಳನ್ನು ಅವಲಂಭಿಸಿರುತ್ತೇ. ನಾರಾಯಣ ಗುರು ಚಳವಳಿಯ ಎಲ್ಲಾ ಮಗ್ಗಲುಗಳನ್ನು ಈ ರೀತಿ ಸಮಾಜ ವಿಜ್ಞಾನದ ಹಿನ್ನೆಲೆಯಲ್ಲಿ ಅಧ್ಯಯನ ನಡೆಸುವ ಪ್ರಯತ್ನ ಕನ್ನಡದಲ್ಲಿ ನಡೆದಿಲ್ಲ. ಈ ರೀತಿಯ ಅಧ್ಯಯನದ ಕೊರತೆಯಿಂದಾಗಿಯೇ ನಾರಾಯಣ ಗುರು ಒಬ್ಬರದ್ದೇ ವೈಭವೀಕರಣ ನಡೆದು ಆ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ನಾರಾಯಣ ಗುರುಗಳ, ಅನೇಕ ಅನುಯಾಯಿಗಳ ಪರಿಚಯ ಹೊರಜಗತ್ತಿಗೆ ಆಗಿಲ್ಲ.
ನಾರಾಯಣ ಗುರು ಚಳವಳಿ, ಪ್ರಮುಖವಾಗಿ 5ಹಂತಗಳಲ್ಲಿ ನಡೆಯಿತು.
 ಮೊದಲನೇಯದು ಡಾ.ಪಲ್ಪು ನೇತೃತ್ವದ ಸಾಮಾಜಿಕ ಜಾಗೃತಿ, ಎರಡನೇಯದ್ದು ನಾರಾಯಣ ಗುರು ನೇತೃತ್ವದ ಸಾಮಾಜಿಕ ಸುಧಾರಣೆ, ಮೂರನೆಯದ್ದು ಕುಮಾರನ್ ಆಶಾನ್ ನೇತೃತ್ವದ ಸಕರ್ಾರಿ ಶಾಲೆಗಳಲ್ಲಿ ಪ್ರವೇಶಕ್ಕಾಗಿ ನಡೆದ ಚಳವಳಿ, ನಾಲ್ಕನೇಯದ್ದು ಟಿ.ಕೆ ಮಾಧವನ್ ನೇತೃತ್ವದಲ್ಲಿ ದೇವಾಲಯಗಳ ಪ್ರವೇಶ ಮತ್ತು ಅಸ್ಪೃಶ್ಯತೆಯ ವಿರುದ್ಧ ನಡೆದ ಚಳವಳಿ ಹಾಗೂ ಕೊನೆಯದ್ದು, ಸಿ.ಕೇಶವನ್ ನೇತೃತ್ವದಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕಾಗಿ ನಡೆದ ಹೋರಾಟ. ಈ ಎಲ್ಲಾ ಹೋರಾಟಗಳು ನಾರಾಯಣ ಗುರುಗಳ ಸಿದ್ಧಾಂತ ನೆಲೆಗಟ್ಟಿನ ಮೇಲೆಯೇ ನಡೆದಿವೆ.
 ಧಾಮರ್ಿಕ ಸುಧಾರಣೆಯ ಮೂಲಕ ಪ್ರಾರಂಭಗೊಂಡ ನಾರಾಯಣ ಗುರು ಚಳವಳಿ ಕಾಲ ಸರಿದಂತೆ ಶೈಕ್ಷಣಿಕ, ಆಥರ್ಿಕ ಮತ್ತು ರಾಜಕೀಯ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಾ ಹೋಗಿದ್ದು ಕೇವಲ ಆಕಸ್ಮಿಕವಲ್ಲ. ಅದು ನಾರಾಯಣ ಗುರುಗಳೇ ರೂಪಿಸಿದ ಕಾರ್ಯ ತಂತ್ರವಾಗಿತ್ತು. ಸಮಾಜದ ಅಮೂಲಾಗ್ರ ಬದಲಾವಣೆ ಎಂದರೆ, ಪ್ರಮುಖವಾಗಿ ಆಥರ್ಿಕ ಮತ್ತು ಸಾಮಾಜಿಕ ಬದಲಾವಣೆ ಎಂಬುದನ್ನು ನಾರಾಯಣ ಗುರು ಅರಿತಿದ್ದರು. ಇಂತಹ ಬದಲಾವಣೆಗೆ ಸಮುದಾಯದ ಮನಸ್ಸನ್ನು ಸಿದ್ದಗೊಳಿಸುವ ಪ್ರಾಥಮಿಕ ಕಾರ್ಯವನ್ನು ಅವರು ದೇವಾಲಯಗಳ ಸ್ಥಾಪನೆ ಮೂಲಕ ಮಾಡಿದರು.
 ನಾರಾಯಣ ಗುರುಗಳ ಮಹತ್ವ ಅರಿಯಬೇಕಾದರೆ, ಅವರಿಗಿಂತ ಹಿಂದಿನ ಕೇರಳದ ಸ್ಥಿತಿಯ ಸ್ಥೂಲ ಚಿತ್ರಣ ತಿಳಿದುಕೊಳ್ಳುವುದು ಅನವಾರ್ಯ. ದರಿದ್ರರಲ್ಲಿ, ರೋಗಿಗಳಲ್ಲಿ ದೇವರನ್ನು ಕಾಣಬೇಕೆಂದು ಹೇಳಿದ ವಿವೇಕಾನಂದರು ಕೇರಳ ಮನೋರೋಗಿಗಳ ಆಸ್ಪತ್ರೆ ಎಂದು ಹೇಳಿ ಕೈಚೆಲ್ಲಿ ಹೋಗಿದ್ದರು.
 ಜಾತಿ ವ್ಯವಸ್ಥೆ ಆ ರೀತಿಯ ಭೀಕರ ಮನೋರೋಗಿಯನ್ನು ಅಲ್ಲಿ ಸೃಷ್ಟಿಸಿತು. ದೇವಸ್ಥಾನ ಪ್ರವೇಶ ದೂರವೇ ಉಳಿಯಿತು. ಆದರೆ, ಎದುರಿನ ರಸ್ತೆಯಲ್ಲಿಯೂ ಅಸ್ಪೃಶ್ಯರು ನಡೆಯುವಂತಿರಲಿಲ್ಲ. ಗಾಂಧೀಜಿ ಮತ್ತು ನಾರಾಯಣ ಗುರು ಮಾರ್ಗದರ್ಶನದಲ್ಲಿಯೇ ನಡೆದ ಐತಿಹಾಸಿಕ ವೈಕಂ ಸತ್ಯಾಗ್ರಹ ನಡೆದದ್ದು ದೇವಸ್ಥಾನ ಪ್ರವೇಶಕ್ಕಾಗಿ ಅಲ್ಲ, ಅದರ ಮುಂಭಾಗದ ರಸ್ತೆಯಲ್ಲಿ ನಡೆದಾಡುವ ಸ್ವಾತಂತ್ರ್ಯಕ್ಕಾಗಿ ಎಂಬುದು ಗಮನಾರ್ಹ.
 ಕೆಳಜಾತಿ ಜನರು ಮಧ್ಯಾಹ್ನದ ಬಿಸಿಲಿನಲ್ಲಿ ಮಾತ್ರ ಹೊರಗಡೆ ಬರಬೇಕಿತ್ತು. ಯಾಕೆಂದರೆ, ಉಳಿದ ಸಮಯಗಳಲ್ಲಿ ಉದ್ದಕ್ಕೆ ಚಾಚಿಕೊಳ್ಳುವ ನೆರಳು ಎದುರಿಗೆ ಬರುವ ಸವಣರ್ಿಯರ ಮೇಲೆ ಬಿದ್ದು ಅಪವಿತ್ರವಾಗುವ ಭಯ. ಆತ ಕಾಲಿಗೆ ಚಪ್ಪಲಿ, ತಲೆಗೆ ವಸ್ತ್ರ ಹಾಕುವಂತಿರಲಿಲ್ಲ. ಬ್ಯಾಂಕ್ ಅಂಚೆ ಕಛೇರಿಗಳ ಒಳಗೆ ಸವಣರ್ೀಯರಿದ್ದರೆ, ಒಳ ಪ್ರವೇಶಿಸುವಂತಿರಲಿಲ್ಲ. ಕಥಕ್ಕಳಿಯಂತಹ ನೃತ್ಯದಲ್ಲಿ ಅವರು ದೇವರುಗಳ ಪಾತ್ರ ಮಾಡುವಂತಿರಲಿಲ್ಲ.
 ಕೆಳ ವರ್ಗದ ಮಹಿಳೆಯರ ಸ್ಥಿತಿ ಇನ್ನೂ ನರಕ ಸದೃಶ್ಯ. ಅವರು ಎದೆಯ ಮೇಲೆ ಬಟ್ಟೆ ಧರಿಸುವಂತಿರಲಿಲ್ಲ. ಇದನ್ನು ಪ್ರತಿಭಟಿಸಿದ ಸ್ವಾಭಿಮಾನಿ ಮಹಿಳೆಯೊಬ್ಬರು, ತನ್ನ ಸ್ತನಗಳನ್ನೇ ಕುಯ್ದು ಅಪರ್ಿಸಿ, ಪ್ರಾಣಾರ್ಪಣೆ ಮಾಡಿದ ಹೃದಯವಿಧ್ರಾವಕ ಘಟನೆ ಅಲ್ಲಿ ನಡೆದಿತ್ತು. ಅವರು ಹೂ ಮುಡಿಯುವಂತಿರಲಿಲ್ಲ. ಎಷ್ಟೋ ಕಡೆಗಳಲ್ಲಿ ಮದುವೆಯ ಮೊದಲು ರಾತ್ರಿಗಳನ್ನು ಊರಿನ ನಂಬೂದರಿ ನಾಯಕರ ಜೊತೆಯಲ್ಲಿ ಕಳೆಯಬೇಕಿತ್ತು.
 ಇವೆಲ್ಲದರ ಜೊತೆಗೆ ನೂರೆಂಟು ಮೂಡನಂಬಿಕೆಗಳು ಮತ್ತು ದುಂದುವೆಚ್ಚದ ಇಂತಹ ಸಂಪ್ರದಾಯಗಳನ್ನು ಅವರು ಕುತ್ತಿಗೆಗೆ ಗಂಟು ಹಾಕಲಾಗಿತ್ತು. ಮೈ ನೆರೆಯುವ ಮೊದಲೇ, ಯಾವುದಾದರೂ ಒಬ್ಬ ವ್ಯಕ್ತಿಯಿಂದ ತಾಳಿ ಕಟ್ಟಿಸುವ, "ತಾಳಿಕೆಟ್ಟು ಕಲ್ಯಾಣಂ" ಎಂಬ ಬಾಲ್ಯ ವಿವಾಹಗಿಂತಲೂ ಅಮಾನವನೀಯವಾದ ಸಂಪ್ರದಾಯವೊಂದು ಕೇರಳದಲ್ಲಿತ್ತು. ಬಾಲ್ಯ ವಿವಾಹದಲ್ಲಿ ಕನಿಷ್ಟ ಮದುವೆಯ ಒಪ್ಪಂದವಿತ್ತು. ಇಲ್ಲಿ ಅದೊಂದು ಅಣಕು ಮದುವೆ. ಮೈ ನೆರದದ್ದನ್ನು ಊರಿಗೆಲ್ಲ ಘೋಷಿಸುವ "ತಿರುಂಡಕಲಿ" ಗಭರ್ೀಣಿಯಾದ ಕೂಡಲೇ "ಪುಲೂಕೂಡಿ" ಎಂಬ ಸೀಮಂತ ನಡೆಸುವ ಸಂಪ್ರದಾಯ ಆಡಂಭರದ ಮದುವೆ ಈ ಸಂಪ್ರದಾಯಗಳ ಕಾರಣದಿಂದಾಗಿಯೇ ಈಳವ ಜನ ವಂಶ ಪಾರಂಪರ್ಯವಾಗಿ ನಂಬೂದಿರಿ ನಾಯರ್ಗಳ ಸಾಲಗಾರರಾಗಿ ಜೀತದ ಜೀವನ ಸಾಗಿಸಬೇಕಾಗಿತ್ತು. ಆದರೆ, ಇದೇ ಕೇರಳ ಹಿಂದೂ ದೇಶದಲ್ಲಿಯೇ ಅತ್ಯಂತ ಹೆಚ್ಚು ಸಾಕ್ಷರತೆ ಇರುವ ಮತ್ತು ಪ್ರಗತಿಪರ ಚಿಂತಕರಿರುವ ಪ್ರಜಾಸತಾತ್ಮಕವಾಗಿ ಆಯ್ಕೆಯಾದ ದೇಶದ ಮೊದಲ ಹಾಗೂ ಜಗತ್ತಿನ ಎರಡನೇ ಕಮ್ಯೂನಿಷ್ಟ ಸಕರ್ಾರ ಅಸ್ತಿತ್ವಕ್ಕೆ ಬಂದದ್ದು ಕೇರಳದಲ್ಲಿ. ದೇಶ ವಿಭಜನೆ ಕಾಲದಲ್ಲಿ ಉತ್ತರ ಭಾರತ ಕೋಮುದಳ್ಳುರಿಯಲ್ಲಿ ಹತ್ತಿ ಉರಿಯುತ್ತಿದ್ದಾಗ ಶೇ.18ಕ್ಕೂ ಹೆಚ್ಚು ಮುಸ್ಲಿಂ ಜನಸಂಖ್ಯೆಯೇ ಇರುವ ಕೇರಳ ಶಾಂತವಾಗಿತ್ತು.
ಅಡ್ವಾನಿಯವರ ರಥಯಾತ್ರೆಯ ನಂತರ ದೇಶಾದ್ಯಂತ ಕೋಮುವಾದಿ ಚಟುವಟಿಕೆಗಳ ಬುಗಿಲೆದ್ದಾಗಲೂ ಇಲ್ಲಿ, ಯಾವ ಗಲಭೆಗಳು ನಡೆಯಲಿಲ್ಲ.
 ದಕ್ಷಿಣದ ರಾಜ್ಯಗಳಲ್ಲಿ ಪ್ರಯಾಸಪಟ್ಟು, ಪ್ರವೇಶ ಪಡೆದ ಬಿಜೆಪಿಯನ್ನು ಈಗಲೂ ಹೊಸಲಿನಾಚೆ ನಲ್ಲಿಸಿರುವ ರಾಜ್ಯ ಕೇರಳ. ಇದು ಕೇವಲ ನೂರು ವರ್ಷಗಳ ಅವಧಿಯಲ್ಲಿ ನಡೆದ ಬದಲಾವಣೆ. ನಾರಾಯಣ ಗುರುಗಳು ಹುಟ್ಟಿ ಸರಿಯಾಗಿ ನೂರು ವರ್ಷಗಳ ಅವಧಿಯಲ್ಲಿ ನಡೆದ ಬದಲಾವಣೆ. ಅದೇ ನೂರು ವರ್ಷಗಳ ನಂತರ ಕೇರಳದಲ್ಲಿ ಮೊದಲ ಬಾರಿಗೆ ಕಮ್ಯೂನಷ್ಟ ಸಕರ್ಾರ ಅಸ್ತಿತ್ವಕ್ಕೆ ಬಂತೆಂಬುದು ಉಲ್ಲೇಖನಯ. ನಾರಾಯಣ ಗುರುಗಳು ಪ್ರಾರಂಭಿಸಿದ ಧಾಮರ್ಿಕ ಸುಧಾರಣಾ ಚಳವಳಿಯನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗುತ್ತದೆ. ಅವರ ಕಾರ್ಯತಂತ್ರ ಉಳಿದ ಸಮಾಜ ಸುಧಾರಕರಿಗಿಂತ ಯಾಕೆ ಭಿನ್ನವಾಗಿತ್ತು ಎಂಬ ಪ್ರಶ್ನೆಗಳಿಗೆ ಈ ಹಿನ್ನೋಟದಲ್ಲಿ ಉತ್ತರ ಇದೆ. ಅಸಶ್ಯತೆಯ ವಿರುದ್ಧದ ಹೋರಾಟಗಳಲ್ಲಿ ದೇವಸ್ಥಾನ ಪ್ರವೇಶ ಚಳವಳಿಯದ್ದು ಪ್ರಮುಖ ಪಾತ್ರವಾದರೆ, ನಾರಾಯಣ ಗುರುಗಳು ಅದನ್ನೇ ಕೈಬಿಟ್ಟಿದ್ದರು. ಅವರು ಸವಣರ್ೀಯರ ಒಡೆತನದ ದೇವಾಲಯ ಪ್ರವೇಶಿಸಲಿಲ್ಲ. ಅದನ್ನು ಬಹಿಷ್ಕರಿಸಿದರು. ಮತ್ತು ಅವಣರ್ಿಯ ದೇವಾಲಯಗಳನ್ನು ಸ್ಥಾಪಿಸಿದರು. ಆದರೆ, ಅವರು ಮತ್ತೊಂದು ಧರ್ಮವನ್ನು ಕೂಡ ಸ್ಥಾಪಿಸಲು ಹೋಗಲಿಲ್ಲ.
ಮೊದಲು ದೇವಸ್ಥಾನ ಪ್ರವೇಶ ಚಳವಳಿ ನಡೆಸದೆ, ದೇವಸ್ಥಾನ ನಮರ್ಿಸುವ ಅವರ ಕಾರ್ಯತಂತ್ರ ಎರಡು ರೀತಿಯಲ್ಲಿ ಅವರಿಗೆ ನೆರವಾಯಿತು. ದೇವಸ್ಥಾನ ಪ್ರವೇಶ ಹೋರಾಟಕ್ಕೆ ಎದುರಾಗುವ ಪ್ರತಿಭಟನೆಯನ್ನು ಎದುರಿಸುವ ಸಂಘಟನಾ ಶಕ್ತಿ ಆಗಿನ್ನೂ ಇರಲಿಲ್ಲ ಎಂದು ನಾರಾಯಣ ಗುರುಗಳಿಗೆ ತಿಳಿದಿತ್ತು. ಮುಂದೆ ಮೂವತ್ತಾರು ವರ್ಷಗಳ ನಂತರ ದೇವಾಲಯಗಳ ಮುಂಭಾಗದ ರಸ್ತೆಗಳಲ್ಲಿ ನಡೆಯುವ ಹಕ್ಕಿಹಾಗಿ ನಡೆದ ವೈಕಂ ಸತ್ಯಾಗ್ರಹಕ್ಕೆ ಎದುರಾದ ಪ್ರತಿಭಟನೆಯನ್ನು ನೋಡಿದರೆ, ಇದು ಸ್ಪಷ್ಟವಾಗುತ್ತದೆ.
ದೇವಸ್ಥಾನದ ಸ್ಥಾಪನೆಯನ್ನು ಪ್ರಶ್ನಿಸಿದ ಪುರೋಹಿತರಿಗೆ ನಾನು ಸ್ಥಾಪಿಸಿದ್ದು ಈಳವರ ಶಿವ ಎಂಬ ಮಾಮರ್ಿಕ ಉತ್ತರ ಕೊಟ್ಟು ಗುರುಗಳು ಯುದ್ದಕ್ಕೆ ಬಂದ ಅವರನ್ನು ಶಸಪ್ರಯೊಗವಿಲ್ಲದೆಯೇ ನಶಸಗೊಳಿಸಿದರು. ಅದೇ ರೀತಿ, ಸಹಸ್ರಮಾನಗಳಿಂದ ತಮ್ಮಿಂದ ದೂರವೇ ಉಳಿದಿದ್ದ ದೇವಸ್ಥಾನಗಳಿಗೆ ಪ್ರವೇಶಿಸಲು ಅಡ್ಡಿಯಾಗುವ ಸಾಂಪ್ರದಾಯಿಕ ಮನಸ್ಸಿನ ಹಿಂಜರಿಕೆ ಹಾಗೂ ಭೀತಿಯಿಂದಲೂ ಕೆಳವರ್ಗದ ಜನರನ್ನು ಅವರು ಮುಕ್ತಗೊಳಿಸಿದರು. ದೇವಾಲಯಕ್ಕೆ ಹೋಗುವ ಹಕ್ಕು ನಮಗಿಲ್ಲವಾದರೆ, ದೇವಾಲಯವನ್ನೇ ನಮ್ಮಲ್ಲಿಗೆ ತರುತ್ತೇನೆ ಎಂದು ಅಸ್ಪಶ್ಯರಿಗೆ ಪೂಜೆಯ ಹಕ್ಕನ್ನು ನಡುವ ಮೂಲಕ ಅವರಲ್ಲಿ ಸ್ವಾಭಿಮಾನ ಜಾಗೃತಿಗೆ ಕಾರಣರಾದರು.
ದೇವಸ್ಥಾನಗಳ ಸ್ಥಾಪನೆ ಅಂದಿನ ಪುರೋಹಿತಶಾಹಿಗೆ ಅಘಾತಕಾರಿಯಾದ ಹೊಡೆತ, ಭಕ್ತ ಸಮೂಹದಲ್ಲಿ ದೈಹಿಕವಾಗಿ ದೂರವೇ ಉಳಿದಿದ್ದ ಮೂರನೇ ಎರಡರಷ್ಟಿದ್ದ ಕೆಳವರ್ಗದ ಜನರು ಮಾನಸಿಕವಾಗಿ ಕೂಡ ದೂರವೇ ಉಳಿದರೆ, ಹುಂಡಿ ತುಂಬುವುದು ಹೇಗೆ? ಅದರ ಮೂಲಕ ಉದರ ತುಂಬುವುದು ಹೇಗೆ ? ಎಂಬ ಭೀತಿ ಅವರನ್ನಾವರಿಸಿತ್ತು. ನಾರಾಯಣ ಗುರುಗಳ ನಂತರ ಕೇರಳದಲ್ಲಿ ಸವಣರ್ಿಯ ದೇವಾಲಯಗಳ ಆದಾಯದಲ್ಲಿ ಗಣನಯ ಕುಸಿತ ಕಂಡುಬಂದಿರುವುದು ದಾಖಲೆಯಲ್ಲಿದೆ.
ನಾರಾಯಣ ಗುರುಗಳು ಎಂದೂ ಹಿಂದೂ ಧರ್ಮವನ್ನು ಪುಲೆ, ಪೆರಿಯಾರ್, ಅಂಬೇಡ್ಕರ್ರವರಂತೆ ಸಾರಾಸಗಟಾಗಿ ತಿರಸ್ಕರಿಸಲಿಲ್ಲ. ಆ ವಿಚಾರದಲ್ಲಿ ಅವರು ಬಸವಣ್ಣನ ತತ್ವಗಳಿಗೆ ಹತ್ತಿರವಾಗಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಧಾಮರ್ಿಕ ಪುನರುತ್ಥಾನದ ಬಗ್ಗೆ ಮಾತನಾಡುತ್ತಿದ್ದರು. ಇಲ್ಲಿ ದೇವನೂರು ಮಹಾದೇವ ಅವರ ಮಾತೊಂದು ನೆನಪಿಗೆ ಬರುತ್ತದೆ.
ಹಿಂದೂ ಧರ್ಮ ಎಂಬ ಮನೆಯೊಳಗೆ ಭಿನ್ನವಾದ ಜಾತಿ ತಾರತಮ್ಯದ ಕಂಬಗಳನ್ನು ಒಳಗೊಳಗೆ ಕುಯ್ಯುವಂತೆ ಗಾಂಧೀಜಿ ಕಾಣಿಸಿದರೆ, ಅಂಬೇಡ್ಕರ್ ಹೊರಗಿನಂದ ಆ ಅಸಮಾನತೆಯ ಮನೆಗೆ ಕಲ್ಲೆಸೆಯುವಂತೆ ಕಾಣುತ್ತಾರೆ ಎಂದು ಗಾಂಧೀ ಮತ್ತು ಅಂಬೇಡ್ಕರ್ ಅವರ ಸೈದ್ಧಾಂತಿಕ ಸಂಘರ್ಷವನ್ನು ಪ್ರಸ್ತಾಪಿಸುತ್ತಾ ದೇವನೂರು ಹೇಳುತ್ತಾರೆ.
ಗಾಂಧೀ ಆ ಕೆಲಸ ಮಾಡಿರುವ ಬಗ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ನಾರಾಯಣ ಗುರುಗಳ ಧಾಮರ್ಿಕ ಸುಧಾರಣಾವಾದಿ ಚಳವಳಿ ಮಾತ್ರ ಈ ಕಂಬ ಕುಯ್ಯುವ ಕೆಲಸವನ್ನು ಮಾಡಿದೆ. ಅವರದ್ದು ಸಂಘರ್ಷದ ಹಾದಿಯಾಗಿರಲಿಲ್ಲ. ಅವರ ಹೋರಾಟದ ಎಲ್ಲಾ ಕಾರ್ಯತಂತ್ರಗಳನ್ನು ಅವಲೋಕಿಸುತ್ತಾ ಬಂದರೆ, ಅವರಲ್ಲೊಬ್ಬ ಚತುರ ರಾಜಕಾರಣಿ ಇದ್ದನೆಂಬುದು ಸ್ಪಷ್ಟವಾಗುತ್ತದೆ. ಅವರು ಸಮಾಜ ಸುಧಾರಕನ ಕೆಲಸ ಮಾಡಲಿಕ್ಕೆಂದೇ ಸನ್ಯಾಸಿಯ ಪಾತ್ರವನ್ನು ಧರಿಸಿದರೇನೋ ಎಂಬ ಅನುಮಾನ ಬರುತ್ತದೆ.
ಅವರು ದೇವಸ್ಥಾನ ಪ್ರವೇಶಾವಕಾಶದ ಬಗ್ಗೆ ಎಂದೂ ಗಂಭೀರವಾಗಿ ಪ್ರಯತ್ನ ನಡೆಸಲಿಲ್ಲ. ಅವರು ಸಾವಿನ ಎಂಟು ವರ್ಷಗಳ ನಂತರ ಕೇರಳ ಸರಕಾರ ದೇವಾಲಯ ಪ್ರವೇಶ ಘೋಷಣೆಯನ್ನು ಹೊರಡಿಸಿತ್ತು. ಆಗಲೇ ನಾರಾಯಣ ಗುರುಗಳು ಕೇರಳ, ಮದ್ರಾಸ್ ಮತ್ತು ಮಂಗಳೂರಿನಲ್ಲಿಯೂ ದೇವಸ್ಥಾನಗಳನ್ನು ಸ್ಥಾಪಿಸಿದ್ದರು. ನೂರಾರು ಗುರುಮಂದಿರ ಹಾಗೂ ಆಶ್ರಮಗಳು ಪ್ರಾರಂಭವಾಗಿದ್ದವು.
ದೇವಸ್ಥಾನಗಳ ಬಗೆಗಿನ ಅವರ ಪರಿಕಲ್ಪನೆಯೇ ಕ್ರಾಂತಿಕಾರಿಯಾದುದು. ಅರವಿಪುರಂನಲ್ಲಿ ಲಿಂಗಸ್ಥಾಪನೆ ಮಾಡಿದ ಗುರುಗಳು ತಮ್ಮ ಕೊನೆಯ ಪ್ರತಿಷ್ಠಾಪನೆಯನ್ನು ಕಳವಂ ಕೋಡಂ ನಲ್ಲಿ ಕನ್ನಡಿಯೊಂದನ್ನು ಸ್ಥಾಪಿಸುವ ಮೂಲಕ ನಡೆಸಿದರು. ಅದರ ನಡುವೆ ಒಂದೆಡೆ ಸತ್ಯ, ಧರ್ಮ, ಶಾಂತಿ, ದಯೆ ಎಂಬ ಸಂದೇಶವನ್ನು ಸಾರುವ ಲಕವನ್ನಷ್ಟೇ ಸ್ಥಾಪಿಸಿದರೆ, ಕರಮಕ್ಕು ಎಂಬಲ್ಲಿ ನಂದಾ ದೀಪವನ್ನಷ್ಟೇ ಹಚ್ಚಿದರು. ಕೊನೆಗಾಲದಲ್ಲಿ ಶಿವಗಿರಿಯಲ್ಲಿ ಅವರ ಚಿಂತನೆಯ ಮೂಲಧಾತುವಾದ ಅರಿವು ಸಂಕೇತವಾಗಿ ಸರಸ್ವತಿಯ ಮೂತರ್ಿಯನ್ನು ಪ್ರತಿಷ್ಠಾಪಿಸಿಸದರೆ, ಶಂಕರಾಚಾರ್ಯರು ಹುಟ್ಟೂರಿಗೆ ಸಮೀಪದ ಅಲ್ವಾಯಿನಲ್ಲಿ  ನಮರ್ಿಸಿ ಅದ್ವೆತಾಶ್ರಮದಲ್ಲಿ ಮೂತರ್ಿಯನ್ನೇ ಸ್ಥಾಪಿಸಲಿಲ್ಲ. ಕೊನೆಗಾಲದಲ್ಲಿ ದೇವಸ್ಥಾನಗಳ ಸ್ಥಾಪನೆ ನಲ್ಲಿಸಿ ಎಂದು ಅನುಯಾಯಿಗಳಿಗೆ ಕರೆ ನಡಿದರು. ನಾರಾಯಣ ಗುರುಗಳು ತಮ್ಮ ಚಳವಳಿ ಉದ್ದಕ್ಕೂ ದೇವಾಲಯಗಳನ್ನು ಸಾಮಾಜಿಕ ಪರಿವರ್ತನೆಯ ಸಾಧನವಾಗಿ ಬಳಸುತ್ತಾ ಬಂದುದ್ದನ್ನು ಕಾಣಬಹುದು. ಅದು ಸನಾತನ ಧಮರ್ಾವಲಂಭಿಗಳ ಆಶಯಕ್ಕೆ ತದ್ವಿರುದ್ದವಾದದು. ದೇವಾಲಯಗಳ ಪೂಜೆ-ಹವನ-ಹೋಮಗಳಲ್ಲಿ ಮುಳುಗಿ ವ್ಯಾಪಾರಿ ಕೇಂದ್ರಗಳಾಗುವ ಬದಲಿಗೆ ಅವುಗಳನ್ನು ಸಾಮೂಹಿಕ ಪ್ರಾರ್ಥನಾ ಮಂದಿರವಾಗಿ ಉಳಿಸಬೇಕೆಂದು ಅವರು ಬಯಸಿದ್ದರು. ಈ ದೃಷ್ಟಿಯಿಂದ ಅವರ ದೇವಾಲಯದ ಪರಿಕಲ್ಪನೆ ಮಸೀದಿ, ಚಚರ್ುಗಳಿಗೆ ಹೆಚ್ಚು ಹತ್ತಿರವಾಗಿತ್ತು. ದೇವಸ್ಥಾನಗಳ ಭಕ್ತಿ ಪೀಠವಾಗುವದರ ಜೊತೆಯಲ್ಲಿ ಅಧ್ಯಯನ ಕೇಂದ್ರವಾಗಬೇಕು. ಉದ್ಯಾನ, ವಾಚನಾಲಯಗಳನ್ನೊಳಗೊಂಡು ಅವು ಸ್ವಚ್ಛ ಪರಿಸರದಲ್ಲಿ ನಮರ್ಾಣಗೊಳ್ಳಬೇಕು ಎಂದು ಅವರು ಹೇಳುತ್ತಿದ್ದರು. ಅವರು ಸ್ಥಾಪಿಸಿದ ಎಲ್ಲಾ ದೇವಾಲಯಗಳು ಈ ಅಭಿಪ್ರಾಯವನ್ನೇ ಬಿಂಬಿಸುತ್ತದೆ.
ನಾರಾಯಣ ಗುರುಗಳದ್ದು ಮುಖಾಮುಖಿ ಹೋರಾಟವಲ್ಲ. ಅವರು ವೈದಿಕ ಶಾಹಿ ಏಕಸ್ವಾಮ್ಯಕ್ಕೆ ನೇರ ಸವಾಲು ಹಾಕಲಿಲ್ಲ. ಅದರ ಬದಲಿಗೆ ವೈದಿಕ ಅಧಿಪತ್ಯದ ಬೇರುಗಳನ್ನೇ ಅಲ್ಲಾಡಿಸಿದರು. ಸಂಸ್ಕೃತವನ್ನು ಸಂಪೂರ್ಣವಾಗಿ ತಿರಸ್ಕರಿಸದೇ ಅದನ್ನು ಅಧ್ಯಯನ ಮಾಡಿ ಶೂದ್ರರೂ  ಅದನ್ನು ಕಲಿತು ಅರಗಿಸಿಕೊಳ್ಳಬಹುದು ಎಂದು ತೋರಿಸಿಕೊಟ್ಟರು. ವೇದಾಧ್ಯಯನಕ್ಕೆ ಜಾತಿ  ಅಸ್ಪಶ್ಯವಲ್ಲ ಎಂದು ಸಾರಿದ ಗುರುಗಳು ಶಂಕರಾಚಾರ್ಯರ ಅಧ್ವೆತಾ ವೇದಾಂತವನ್ನು ಕಲಿತರು. ಆತ್ಮೋಪದೇಶ ಶತಕಂ ಸೇರಿದಂತೆ ಹಲವಾರು ಸಂಸ್ಕೃತ ಗ್ರಂಥಗಳನ್ನು ಬರೆದರು. ಬ್ರಹ್ಮಸೂತ್ರದ ವಿಶ್ಲೇಷಣೆ ಮಾಡಿದ ಮೊದಲ ಅಸ್ಪಶ್ಯರು ಅವರು.
ದೇವಸ್ಥಾನಗಳಷ್ಟೇ ಸ್ಥಾಪಿಸದೆ ಅಲ್ಲಿ ಅರ್ಚಕರಾಗಿ ಕೆಳವರ್ಗದ ಜಾತಿ ಜನರನ್ನೇ ನೇಮಿಸಿದರು. ಅವರ ತರಬೇತಿಗಾಗಿ ಶಿವಗಿರಿಯಲ್ಲಿ ಬ್ರಹ್ಮ ಮೀಮಾಂಸ ಶಾಲೆಗಳನ್ನು ತೆರೆದು ಬ್ರಹ್ಮ ವಿದ್ಯೆ ಕಲಿಸಿದರು. ಅವರಿಂದ ಸ್ಥಾಪನೆಗೊಂಡ ಬ್ರಹ್ಮ ವಿದ್ಯಾ ಕೇಂದ್ರದಲ್ಲಿ ಈಳವರಲ್ಲದೆ, ಪುಲಯ, ಪರಯ ಮೊದಲಾದ ಇನ್ನತರ ಕೆಳಜಾತಿಯ ಜನರಲ್ಲದೆ, ಮುಸ್ಲಿಂ ಮತ್ತು ಕ್ರಿಶ್ಚಿಯನ್ನರೂ ಆಗಮಶಾಸವನ್ನೊಳಗೊಂಡಂತೆ ವೇದಾಧ್ಯಯನ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಈಗಲೂ ಬಿಲ್ಲವರ ಜಾತಿಯ ಮದುವೆಯನ್ನು ಬಿಲ್ಲವ ಅರ್ಚಕರೇ ಮಾಡುತ್ತಿದ್ದಾರೆ. ಅವರೆಲ್ಲರೂ ಮೂಲತಃ ಶಿವಗಿರಿಯಲ್ಲಿ ತರಬೇತಿ ಪಡೆದವರು. ಆದರೆ, ಈಗ ಅವರಲ್ಲಿಯೂ ಬೆಳೆಯುತ್ತಿರುವ ನವಬ್ರಾಹ್ಮಣರಿಗೆ ಬಿಲ್ಲವ ಅರ್ಚಕರು ಪಥ್ಯವಾಗುವುದಿಲ್ಲ ಎಂಬುದು ಬೇರೆ ಮಾತು.
ಅರವೀಪುರಂನಲ್ಲಿ ದೇವಾಲಯ ಸ್ಥಾಪನೆ ನಂತರ 1961 ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗ ಸ್ಥಾಪನೆಯಾಗುವವರಿಗೆ ಕೇರಳ ರಾಜ್ಯ ಮಾತ್ರವಲ್ಲ ತಮಿಳುನಾಡು ಮತ್ತು ಮಂಗಳೂರಿಗೂ ಭೇಟಿ ನಡಿ ದೇವಾಲಯಗಳನ್ನು ಸ್ಥಾಪಿಸಿದರು. ಕೆಳವರ್ಗದ ಜನರಲ್ಲಿದ್ದ ಮೂಡನಂಬಿಕೆ ಮತ್ತು ದುಂದುವೆಚ್ಚದ ಅಂಧ ಸಂಪ್ರದಾಯಗಳನ್ನು ಕಿತ್ತೊಗೆಯಲು ಹೋರಾಟ ನಡೆಸಿದರು. ವಿವಾಹಗಳನ್ನು ಸರಳಗೊಳಿಸಿದರು. ವಿವಾಹಕ್ಕೆ ಮಾಡುವ ದುಂದು ವೆಚ್ಚಗಳನ್ನು ವೃದ್ಧಾಪ್ಯದ ದಿನಗಳಿಗಾಗಿ ಉಳಿತಾಯ ಮಾಡುವಂತೆ ಸಲಹೆ ನಡಿದರು. ಸಹಭೋಜನಕ್ಕೆ ಪ್ರೋತ್ಸಾಹ ನಡಿದರು. ಮಧ್ಯವನ್ನು ಮಾಡಬೇಡಿ, ಮಾರಬೇಡಿ ಮತ್ತು ಕುಡಿಯಬೇಡಿ ಎಂದು ಹೇಳುವ ಮೂಲಕ ಮಧ್ಯಪಾನದ ವಿರುದ್ಧ ವ್ಯಾಪಕ ಚಳವಳಿಯನ್ನೇ ನಡೆಸಿದರು. ಇದರಿಂದ ಸಾಂಪ್ರದಾಯಿಕವಾಗಿ ಸೇಂದಿ ತೆಗೆಯುವ ವೃತ್ತಿಯನ್ನು ಮಾಡುತ್ತಿದ್ದ ಈಳವರು ಆ ವೃತ್ತಿಯನ್ನು ತ್ಯಜಿಸಿ, ಬೇರೆ ವೃತ್ತಿ ಕೈಗೆತ್ತಿಕೊಳ್ಳುವಂತಾಯಿತು.
ಈ ಎಲ್ಲಾ ಸುಧಾರಣೆಗಳನ್ನು ಅವರು ಮೊದಲು ತಮ್ಮ ಶ್ರೀಮಂತ ಅನುಯಾಯಿಗಳ ಮನೆಯಲ್ಲಿಯೇ ಮಾಡಿದರು. ತಾಳಿಕೆಟ್ಟು, ತಿರುಂಡಕಳಿ ಮೊದಲಾದ ಸಂಪ್ರದಾಯಗಳನ್ನು ಆಚರಿಸುವ ಆಡಂಬರದ ಮದುವೆಗಳನ್ನು ಮಾಡುವ ಶ್ರೀಮಂತ ಅನುಯಾಯಿಗಳ ಮನೆಗಳನ್ನೇ ಬಹಿಷ್ಕರಿಸಿದರು.
 1916ರಲ್ಲಿ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗ ಸ್ಥಾಪನೆಯ ಮೂಲಕ ನಾರಾಯಣ ಗುರು ಚಳವಳಿ ಸಂಘರ್ಷದ ಹಾದಿಗೆ ಇಳಿಯಿತು. ಆಗ ಅವರಿಗೆ ಜೊತೆಯಾದವರು ಡಾ.ಪಲ್ಪು,  ಪಲ್ಪು ಮತ್ತು ಅವರಣ್ಣ ವೇಲು ಇಬ್ಬರೂ ಕೇರಳದ ಜಾತಿ ವ್ಯವಸ್ಥೆಗೆ ಬಲಿಯಾಗಿ ಹುಟ್ಟೂರಿನಲ್ಲಿ ಶಿಕ್ಷಣ ಮತ್ತು ಉದ್ಯೋಗ ಎರಡೂ ಸಿಗದೆ,  ಊರು ಬಿಟ್ಟು ಹೋದರು.
 ವೇಲು ಈಳವ ಜನಾಂಗದ ಮೊದಲ ಪದವೀ ಧರ. ಆತ ಮದ್ರಾಸ್ನಲ್ಲಿಯೇ ಕಲಿತು, ಅಲ್ಲಿಯೇ ಸಕರ್ಾರಿ ನೌಕರಿ ಸೇರಿದರೆ, ಪಲ್ಪು ಮದ್ರಾಸ್ನಲ್ಲಿ ಓದಿ ಮೈಸೂರಿನಲ್ಲಿ ಸಕರ್ಾರಿ ವೈದ್ಯರಾಗುತ್ತಾರೆ. ಈಳವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಆಗುತ್ತಿರುವ ಅನ್ಯಾಯವನ್ನು ತಪ್ಪಿಸಬೇಕೆಂದು ಕೋರುವ ಮೊದಲ ಮನವಿಯನ್ನು ತಿರುವಾಂಕೂರಿನ ದಿವಾನರಿಗೆ ಅಪರ್ಿಸುವ ಮೂಲಕ ಡಾ.ಪಲ್ಪು ತನ್ನ ಹೋರಾಟ ಆರಂಭಿಸುತ್ತಾರೆ. ತಿರುವಾಂಕೂರಿನ ದಿವಾನರು, ವೈಸ್ರಾಯ್, ಬ್ರಿಟಿಷ್ ಪಾಲರ್ಿಮೆಂಟ್, ಕಾಂಗ್ರೇಸ್ ಪಕ್ಷ ಹಾಗೂ ಇಂಗ್ಲೀಷ್ ದಿನಪತ್ರಿಕೆಗಳಿಗೆ ಈಳವರ ಸ್ಥಿತಿಯನ್ನು ಮನವರಿಕೆ ಮಾಡಿಕೊಡಲು ಅವರು ಸತತ ಪ್ರಯತ್ನ ನಡೆಸುತ್ತಾರೆ.
 ಅದಕ್ಕೆ ನಿರೀಕ್ಷಿತ ಫಲ ಸಿಗದಾಗ, ಬೆಂಗಳೂರಿನಲ್ಲಿ ಡಾ.ಪಲ್ಪು ಸ್ವಾಮಿ ವಿವೇಕಾನಂದರನ್ನು ಭೇಟಿಯಾಗುತ್ತಾರೆ. ಕೇರಳದ ಪರಿಸ್ಥಿತಿಯ ಸಂಪೂರ್ಣ ಅರಿವಿದ್ದ ವಿವೇಕಾನಂದರು "ಆದ್ಯಾತ್ಮಿಕ ನಾಯಕರೊಬ್ಬರ ನೇತೃತ್ವದಲ್ಲಿ ಸಾಮಾಜಿಕ ಚಳವಳಿಯನ್ನು ಹುಟ್ಟುಹಾಕಿದರೆ, ಮಾತ್ರ ಕೇರಳದಲ್ಲಿ ಪರಿವರ್ತನೆ ಸಾಧ್ಯ" ಎನ್ನುತ್ತಾರೆ. ಅಲ್ಲಿಂದ ಕೇರಳಕ್ಕೆ ಹಿಂದಿರುಗಿದ ಡಾ.ಪಲ್ಪು ನಾರಾಯಣ ಗುರುಗಳನ್ನು ಭೇಟಿ ಮಾಡುತ್ತಾರೆ. ಈ ಭೇಟಿಗೆ ಐತಿಹಾಸಿಕ ಮಹತ್ವವಿದೆ.
 ಇಬ್ಬರ ಮಿಲನದಿಂದಲೇ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ ಸ್ಥಾಪನೆಯಾಗುತ್ತದೆ. ಈಳವರಲ್ಲಿ ಧಾಮರ್ಿಕ ಮತ್ತು ಜಾತ್ಯಾತೀತ ಶಿಕ್ಷಣ ಹಾಗೂ ಉದ್ಯಮಶೀಲ ಮನೋಭಾವನೆಯನ್ನು ಬೆಳೆಸುವುದು ಇದರ ಉದ್ದೇಶವಾಗಿತ್ತು.
 ಈ ಹಂತದಲ್ಲಿ ಕುಮಾರನು ಆಶಾನ್ ಇವರಿಬ್ಬರ ಜೊತೆಯಾಗುತ್ತಾರೆ. ಮೂಲತಃ ಕವಿ ಮತ್ತು ಲೇಖಕನಾದ ಆಶಾನ್ ತನ್ನ ಕಾವ್ಯ ಪ್ರತಿಭೆ, ಬರಹ, ಭಾಷಣಗಳ ಮೂಲಕ ಚಳವಳಿಗೆ ಜೀವ ತುಂಬಿದರು. ಅವರ ಸಂಪಾದಕತ್ವದ ವಿವೇಕೋದಯಂ ಪತ್ರಿಕೆ ಚಳವಳಿಯ ಮುಖವಾಣಿಯಾಗಿತ್ತು.
 ಎಸ್ಎನ್ಡಿಪಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿನ ಅನ್ಯಾಯದ ವಿರುದ್ಧದ ಹೋರಾಟದ ಕಣಕ್ಕಿಳಿದ ಈಳವರು, ಸಾಕಷ್ಟು ಜಾಗೃತರಾಗಿದ್ದರು. ತಮ್ಮದೇ ದೇವಾಲಯಗಳು ಅವರ ಸಂಘಟನೆಗೆ ಶಕ್ತಿ ತುಂಬಿದ್ದವು. ಎಸ್ಎನ್ಡಿಪಿ ಕೈಗಾರಿಕಾ ಸಮ್ಮೇಳನ ಮತ್ತು ಮಹಿಳಾ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿತ್ತು. ಹಲವಾರು ಯುವಕರು ಮದ್ರಾಸ್ ಬೆಂಗಳೂರಿಗೆ ಹೋಗಿ ಇಂಗ್ಲೀಷ್ ಆಯುವರ್ೇದ ವ್ಯಾಸಾಂಗ ಮಾಡಿ ಬಂದಿದ್ದರು.
 ನಾರಾಯಣ ಗುರುಗಳ ದೂರದಶರ್ಿತ್ವ ಮತ್ತು ಕಾರ್ಯತಂತ್ರ ಅರಿವಾಗುವುದು ಇಲ್ಲಿ. ದೇವಸ್ಥಾನ ಪ್ರವೇಶಕ್ಕೆ ಅವರು ಹೋರಾಟ ನಡೆಸಲಿಲ್ಲ. ಬದಲಿಗೆ ಅವರೇ ದೇವಸ್ಥಾನಗಳನ್ನು ಸ್ಥಾಪಿಸಿದರು. ಆದರೆ, ಶಾಲೆಗಳ ಸ್ಥಾಪನೆಗೆ ಆಡಳಿತದ ಅನುಮತಿ ಬೇಕಿತ್ತು. ಅದಕ್ಕಾಗಿ ಸಕರ್ಾರಿ ಶಾಲೆಗಳ ಪ್ರವೇಶದ ಹಕ್ಕಿನ ಹೋರಾಟಕ್ಕೆ ಅವರು ಚಾಲನೆ ನೀಡಿದರು.
 ಶಾಲೆಗಳ ಪ್ರವೇಶಕ್ಕಾಗಿ ಎಸ್ಎನ್ಡಿಪಿ ಹೋರಾಟ ಪ್ರಾರಂಭಿಸಿದರೂ ಅದು ಅಷ್ಟೊಂದು ಸರಳವಾಗಿರಲಿಲ್ಲ. ಈಳವರಲ್ಲಿ ಬೆಳೆಯುತ್ತಿರುವ ಜಾಗೃತಿ ನಂಬೂದರಿ ಮತ್ತು ನಾಯಕ್ ಜನಾಂಗದಲ್ಲಿ ದ್ವೇಷದ ಕಿಚ್ಚು ಹತ್ತಿಸಿತು. ದೇವಸ್ಥಾನ ಸ್ಥಾಪನೆಯ ಕಾಲದಲ್ಲಿ ಎದುರಾಗದ ವಿರೋಧ ಈಗ ದಟ್ಟವಾಗತೊಡಗಿತ್ತು. ಎಸ್ಎನ್ಡಿಪಿ ಚಳವಳಿಯಲ್ಲಿ ಈ ಕಾಲ ನಿಣರ್ಾಯಕವಾದದ್ದು. ಈಗ ಎಲ್ಲೆಡೆ ನಾಯರ್-ಈಳವರ ಸಂಘರ್ಷ ನಡೆಯುತ್ತದೆ. ಈಳವ ಮಹಿಳೆಯರ ಮೇಲೆ ಬಹಿರಂಗವಾಗಿ ದೌರ್ಜನ್ಯವೆಸಗಲಾಗುತ್ತದೆ. ಎಸ್ಎನ್ಡಿಪಿಯನ್ನು ಬೆಂಬಲಿಸುವ ಪತ್ರಿಕೆಗಳ ಕಚೇರಿಯನ್ನು ಸುಟ್ಟು ಹಾಕಲಾಗುತ್ತದೆ.
 ಚಳವಳಿಯ ಒತ್ತಡಕ್ಕೆ ಮಣಿದ ತಿರುವಾಂಕೂರು ದಿವಾನರು ಈಳವರಿಗೆ ಅವರದ್ಧೆ ಶಾಲೆಗಳನ್ನು ಸ್ಥಾಪಿಸಲು ಅನುಮತಿ ನೀಡುತ್ತಾರೆ. ಸರಕಾರಿ ಶಾಲೆಗಳಲ್ಲಿ ಎಲ್ಲಾ ಜಾತಿ ಜನರಿಗೆ ಮುಕ್ತ ಪ್ರವೇಶ ನೀಡುವ ಮಸೂದೆ ಜಾರಿಗೆ ಬರುತ್ತದೆ. ನಾರಾಯಣ ಗುರು ಚಳವಳಿಯಲ್ಲಿ ದೇವಸ್ಥಾನ ಸ್ಥಾಪನೆಗಿಂತಲೂ ಮುಖ್ಯವಾದ ಘಟನೆಯಿದು. ಇದು ಕುಮಾರನ್ ಆಶಾನ್ ಮತ್ತು ಡಾ.ಪಲ್ಪು ಅವರ ನಾಯಕತ್ವದ ಜಯ. ಆದರೆ, ಸಕರ್ಾರಿ ಸೇವೆಗೆ ಸೇರುವ ಅವಕಾಶವನ್ನು ಕೊನೆಗೂ ತಮ್ಮ ಜೀವಮಾನದಲ್ಲಿ ನಾರಾಯಣ ಗುರುಗಳಿಗೆ ಕಾಣಲಾಗುವುದಿಲ್ಲ. 1936ರಲ್ಲಿ ಸಕರ್ಾರ ಲೋಕಸೇವಾ ಆಯೋಗವನ್ನು ಸ್ಥಾಪಿಸಿ, ಉನ್ನತ ಹುದ್ದೆಗಳನ್ನು ಹೊರತುಪಡಿಸಿ, ಹಿಂದುಳಿದವರಿಗೆ ಶೇ.40ರಷ್ಟು ಮೀಸಲಾತಿಯನ್ನು ನೀಡುತ್ತದೆ.
 ಶಿಕ್ಷಣ ಮತ್ತು ಉದ್ಯೋಗದ ಕ್ಷೇತ್ರದಲ್ಲಿನ ಮೀಸಲಾತಿ ಈಳವ ಜನಾಂಗದಲ್ಲಿ ಎರಡೂ ವರ್ಗಗಳ ಬುದ್ಧಿಜೀವಿಗಳ ಸೃಷ್ಟಿಗೆ ಕಾರಣವಾಯಿತು. ಸಾಹಿತಿಗಳು, ಪತ್ರಕರ್ತರು, ಶಿಕ್ಷಕರು ಮತ್ತು ಧಾಮರ್ಿಕ ನಾಯಕರದ್ದು ಒಂದು ಗುಂಪಾದರೆ, ವೈದ್ಯರು, ವಕೀಲರು, ಉದ್ಯಮಿಗಳು, ಆಡಳಿತಾಧಿಕಾರಿಗಳು ಮತ್ತು ರಾಜಕಾರಣಿಗಳು ಇನ್ನೊಂದು ಗುಂಪಿನಲ್ಲಿದ್ದರು. ಕೇರಳದಲ್ಲಿ ಶಿಕ್ಷಣದ ಪ್ರಸಾರದಲ್ಲಿ ಆರ್.ಶಂಕರ್ ಅವರದ್ದು ನಿಣರ್ಾಯಕ ಪಾತ್ರ. ಇವರು ಸ್ಥಾಪಿಸಿದ್ದ "ಶ್ರೀ ನಾರಾಯಣ ಟ್ರಸ್ಟ್" 1952ರಲ್ಲಿಯೇ ನೂರಾರು ಶಾಲೆ, ಪಾಲಿಟೆಕ್ನಿಕ್, ಶಿಕ್ಷಕ ತರಬೇತಿ ಸಂಸ್ಥೆ ಮತ್ತು ಆಸ್ಪತ್ರೆಗಳನ್ನು ಹೊಂದಿದ್ದವು.
 ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರದಲ್ಲಿ ಈಳವರು ಅಭಿವೃದ್ಧಿ ಹೊಂದಿದ್ದರು. ಎಸ್ಎನ್ಡಿಯ ಮೊದಲ ಅಧಿವೇಶನದ ಕಾಲದಲ್ಲಿಯೇ ನಾರಾಯಣ ಗುರುಗಳು ಕೈಗಾರಿಕಾ ಸಮ್ಮೇಳನವನ್ನು ನಡೆಸಿದ್ದರು. ಆನಂತರ ಅದು ವಾಷರ್ಿಕ ಕಾರ್ಯಕ್ರಮವಾಯಿತು. ತೆಂಗಿನನಾರು ಉದ್ದಿಮೆ ಜನಪ್ರಿಯವಾಗತೊಡಗಿದ್ದು ಅದೇ ಕಾಲದಲ್ಲಿ. ಪ್ರತಿ ದೇವಾಲಯ, ಆಶ್ರಮ ಮತ್ತು ಮಂದಿರಗಳಲ್ಲಿ ತೆಂಗು ನಾರಿನ ಉದ್ದಿಮೆಯ ಘಟಕಗಳನ್ನು ಸ್ಥಾಪಿಸುವಂತೆ ಅವರು ಪ್ರೇರೆಪಿಸಿದ್ದರು. ಈಗ ತೆಂಗುನಾರಿನ ಉದ್ದಿಮೆಯಲ್ಲಿ ಕೇರಳ ದೇಶದಲ್ಲಿಯೇ ಏಕಸ್ವಾಮ್ಯವನ್ನು ಪಡೆದಿದೆ.
 ಈ ಹಂತದಲ್ಲಿ ಎಸ್ಎನ್ಡಿಪಿ ಮುಂದಿನ ಹೋರಾಟವನ್ನು ರಾಜಕೀಯ ಪ್ರಾತಿನಿದ್ಯಕ್ಕಾಗಿ ಕೇಂದ್ರಿಕರಿಸುತ್ತದೆ. ಈ ಹೋರಾಟದಲ್ಲಿ ಅವರಿಗೆ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಜನಾಂಗಗಳು ಜೊತೆಯಾಗುತ್ತವೆ. ಈ ಮೂರು ಜನಾಂಗಗಳ ಒಟ್ಟು ಜನಸಂಖ್ಯೆ ತಿರುವಾಂಕೂರು ಸಂಸ್ಥಾನದ ಒಟ್ಟು ಜನಸಂಖ್ಯೆಯ ಮೂರನೇ ಎರಡರಷ್ಟಿತ್ತು. ತಿರುವಾಂಕೂರು ಸಂಸ್ಥಾನದಲ್ಲಿ 1888ರಲ್ಲಿಯೇ ವಿಧಾನಸಭೆ ರಚನೆಯಾಗಿ ಚುನಾವಣೆಗಳು ನಡೆಯುತ್ತಾ ಬಂದಿದ್ದರೂ, 1935ರವರೆಗೆ ನಡೆದ 15 ಚುನಾವಣೆಗಳಲ್ಲಿ ಶೇ.26ರಷ್ಟಿದ್ದ ಈಳವರಲ್ಲಿ ಒಬ್ಬರೂ ಕೂಡ ಆಯ್ಕೆಯಾಗಿರಲಿಲ್ಲ. ಶೇ.22ರಷ್ಟಿದ್ದ ಕ್ರಿಶ್ಚಿಯನ್ರು ಮತ್ತು ಶೇ.18ರಷ್ಟಿದ್ದ ಮುಸ್ಲಿಂರ ಪ್ರಾತಿನಿಧ್ಯ ಮೂರು-ನಾಲ್ಕರ ಗಡಿ ದಾಟಿರಲಿಲ್ಲ.
 5ರೂ. ತೆರಿಗೆ ನೀಡುವವರು ಮಾತ್ರ ಮತದಾನದ ಹಕ್ಕು ಪಡೆದಿರುವುದು ಈ ಅನ್ಯಾಯಕ್ಕೆ ಕಾರಣವಾಗಿತ್ತು. ಆ ಕಾಲದ ಭೂಒಡೆತನ ಬಹುಪಾಲು ನಾಯರ್ ಮತ್ತು ನಂಬೂದರಿಗಳ ಕೈಯಲ್ಲಿದ್ದ ಕಾರಣ ಉಳಿದ ಜನಾಂಗ ಮತದಾನದ ಹಕ್ಕನ್ನೇ ಪಡೆಯುವುದು ಅಸಾಧ್ಯವಾಗಿತ್ತು. ಇದನ್ನು ಪ್ರತಿಭಟಿಸಲೆಂದೇ ಮೂರು ಜನಾಂಗಗಳು ಕೂಡಿ "ಸಂಯುಕ್ತ ರಾಜಕೀಯ ಸಂಘಟನೆ"ಯನ್ನು ರಚಿಸಿಕೊಂಡು 1935ರ ಚುನಾವಣೆಯನ್ನು ಬಹಿಷ್ಕರಿಸಿತು. ಈ ಹೋರಾಟದ ಕಾವಿಗೆ ಮಣಿದ ತಿರುವಾಂಕೂರು ಸಂಸ್ಥಾನ ಜಾತಿ ಪ್ರಮಾಣಕ್ಕೆ ಅನುಗುಣವಾಗಿ ರಾಜಕೀಯ ಮೀಸಲಾತಿ ಘೋಷಿಸಿತು. ಆದರೆ, ಈ ರಾಜಕೀಯ ಚಳವಳಿ ಮುಂದಿನ ದಿನಗಳಲ್ಲಿ ಕೇರಳದ ರಾಜಕೀಯ ಸ್ಥಿತ್ಯಂತರಗಳಿಗೆ ಕಾರಣವಾದಂತೆಯೇ ಎಸ್ಎನ್ಡಿಪಿ ಸಂಘಟನೆಯಲ್ಲಿ ಬಿರುಕು ಮೂಡಲು ಕೂಡ ಕಾರಣವಾಗಿದ್ದು ಮಾತ್ರ ದುರಂತ.
 1936ರಲ್ಲಿ ಎಸ್ಎನ್ಡಿಪಿ ಸಂಘಟನಾ ಜಾಲ ವ್ಯಾಪಕವಾಗಿ ಹರಡಿತ್ತು. ಅದರ ಹತ್ತು ಯೂನಿ ಯನ್ಗಳು, 245 ಶಾಖೆಗಳು ಸ್ಥಾಪನೆಯಾಗಿದ್ದವು. 50,000ಕ್ಕೂ ಹೆಚ್ಚಿನವರು ಅದರ ಸಕ್ರೀಯ ಸದಸ್ಯರಾಗಿದ್ದರು. ಎಸ್ಎನ್ಡಿಪಿಯ ಮುಖ್ಯ ಉದ್ದೇಶ ಗಳು ಈಡೇರಿದ್ದವು. ರಾಜ್ಯದ ಅತಿ ಹೆಚ್ಚು ಜನಸಂಖ್ಯೆ ಜಾತಿಯೊಂದರ ಸಂಘಟನೆಯ ಮೇಲೆ ರಾಜಕೀಯ ನಾಯಕರ ಕಣ್ಣು ಬಿದ್ದಿತ್ತು. ಸಂಘಟನೆಯಲ್ಲಿದ್ದ ಅನೇಕರ ಲ್ಲಿ ರಾಜಕೀಯ ಆಕಾಂಕ್ಷೆಗಳು ಹುಟ್ಟಿಕೊಂಡಿದ್ದವು.
 ನಾರಾಯಣ ಗುರುಗಳ ಸಾವಿನ ನಂತರ ಪರಸ್ಪರ ಭಿನ್ನ ವಿಚಾರಧಾರೆಯನ್ನು ಹೊಂದಿದ್ದ ನಾಯಕರು ಎಸ್ಎನ್ಡಿಪಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನ ಪಟ್ಟರು. ಮೊದಲನೆಯದಾಗಿ ಮೇಲ್ಜಾತಿ ಜನರ ವೈರಿ ಎಂದು ಬಗೆಯಲಾದ ಬ್ರಿಟೀಷ್ರನ್ನು ಸ್ನೇಹಿತರೆಂದು ತಿಳಿದುಕೊಳ್ಳಲಾದ ಮಿತವಾದಿ ಕೃಷ್ಣನ್, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸುವ ಮೂಲಕವೇ ಈಳವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಹೇಳುತ್ತಿದ್ದ ಕಾಂಗ್ರೇಸ್ ಒಲವಿನ ಟಿ.ಕೆ ಮಾಧವನ್ ಮತ್ತು ಸಿ.ಕೇಶವನ್, ಸಮಾಜವಾದಿ ಮತ್ತು ಪುರೋಗಾಮಿ ವಿಚಾರಧಾರೆಯ ಸಹೋದರ ಅಯ್ಯಪ್ಪನ್ ಅವರ ಸಮಾಜವಾದಿ-ಪುರೋಗಾಮಿ ವಿಚಾರಧಾರೆಗಳನ್ನು ಮೇಳೈಸಲು ಯತ್ನಿಸುತ್ತಿದ್ದ ಇನ್ನೊಂದು ಗುಂಪು ಇದರಲ್ಲಿ ಪ್ರಮುಖವಾದವುಗಳು. ಈ ಕೊನೆಯ ಗುಂಪನ್ನೇ ಕಮ್ಯೂನಿಷ್ಟರೆಂದು ಕರೆಯಲಾಗುತ್ತಿತ್ತು.
 ಕೇರಳದ ಕಮ್ಯೂನಿಷ್ಟ ಪಕ್ಷವನ್ನು ನಾರಾಯಣ ಗುರು ಚಳವಳಿಯ ಮುಂದುವರೆದ ಭಾಗವೆನ್ನಬಹುದು. ಅಧಿಕೃತವಾಗಿ ನಾರಾಯಣ ಗುರು ಚಳವಳಿಗೆ ಎಸ್ಎನ್ಡಿಪಿಯೇ ಉತ್ತರಾಧಿಕಾರವನ್ನು ಪಡೆದಿದ್ದರೂ ಅದು ಕಮ್ಯೂನಿಷ್ಟ ಚಳವಳಿಗೆ ನಾಂದಿಯಾಗಿದ್ದನ್ನು ಇತಿಹಾಸ ಹೇಳುತ್ತದೆ. ಈ ಬೆಳವಣಿಗೆಗೆ ಮುಖ್ಯವಾಗಿ ಕಾರಣಕರ್ತರಾದವರು ಸಹೋದರ ಅಯ್ಯಪ್ಪನ್.
 ಪ್ರಗತಿಪರ ಚಿಂತನೆಯ, ನೇರನಡೆನುಡಿಯ ಅಯ್ಯಪ್ಪನ್ ಹುಟ್ಟಿನಿಂದಲೇ ಹೋರಾಟಗಾರ ಮತ್ತು ಅಪ್ರತಿಮ ಧೈರ್ಯಶಾಲಿ. ಜಾತಿ ಶ್ರೇಣಿಯಲ್ಲಿ ಈಳವರಿಗಿಂತ ಕೆಳಗಿದ್ದ ಪುಲಯರ ಜೊತೆ ತಮ್ಮೂರಿನಲ್ಲಿ ಸಹಭೋಜನ ಮಾಡಿಸಿ ಜಾತಿಯಿಂದ ಬಹಿಷ್ಕೃತನಾದ ಅಯ್ಯಪ್ಪನ ಜಾತಿ ನಿಮರ್ೂಲನೆಯ ಪ್ರಬಲ ಪ್ರತಿಪಾದಕ. ಅಯ್ಯಪ್ಪನ್ ಅವರನ್ನು ಗುರುತಿಸಿದ ಗುರುಗಳು ಅವರನ್ನು ತನ್ನ ಉತ್ತರಾಧಿಕಾರಿಯನ್ನಾಗಿ ಮಾಡುವ ಉದ್ಧೇಶ ಹೊಂದಿದ್ದರಂತೆ. ಮೂಲತಃ ನಾಸ್ತಿಕನಾದ ಅಯ್ಯಪ್ಪನ್ "ಸ್ವತಂತ್ರ ಸಮುದಾಯ ಪ್ರತಿಷ್ಠಾನ"ವನ್ನು ಸ್ಥಾಪಿಸಿ ಸಹೋದರ ಎನ್ನುವ ಪತ್ರಿಕೆ ಪ್ರಾರಂಭಿಸಿ ಜಾತಿ ವಿನಾಶ ಚಳವಳಿಯನ್ನು ನಡೆಸುತ್ತಿದ್ದರು. ಅವರನ್ನು ಪುಲಯರ ಅಯ್ಯಪ್ಪನ್ ಎಂದು ಗೇಲಿ ಮಾಡುತ್ತಿದ್ದರಂತೆ.
 1937ರಲ್ಲಿ ಕೇರಳದಲ್ಲಿ ಕಮ್ಯೂನಿಷ್ಟ ಪಕ್ಷ ಪಿ.ಕೃಷ್ಣಪಿಳ್ಳೆ ಮತ್ತು ಇ.ಎಂ.ಎಸ್ ನಂಬೂದಿರಿ ಪಾಡ್ ನೇತೃತ್ವದಲ್ಲಿ ಸ್ಥಾಪನೆಯಾಯಿತು. ಅಯ್ಯಪ್ಪನ್, ದಾಮೋದರನ್, ಸುಕುಮಾರನ್ ಮೊದಲಾದವರು ಕಮ್ಯೂನಿಷ್ಟ್ ಪಕ್ಷವನ್ನು ಬೆಂಬಲಿಸುತ್ತಿದ್ದರೆ ಆ ಕಾಲದ, ಎಸ್.ಎನ್.ಡಿ.ಪಿ ಯ ನಾಯಕರಾದ ಸಿ.ಕೇಶವನ್, ಟಿ.ಕೆ ಮಾಧವನ್ ಮತ್ತು ಆರ್.ಶಂಕರ್ ಕಾಂಗ್ರೇಸ್ ಒಲವುಳ್ಳವರಾಗಿದ್ದರು. ವಿಪರ್ಯಾಸವೆಂದರೆ ಎಸ್.ಎನ್.ಡಿ.ಪಿ ಚಳವಳಿಯಿಂದ ಜಾಗೃತರಾದ ಕೆಳವರ್ಗದ ಜನಸಮೂಹ ಎಡಪಕ್ಷಗಳ ಕಡೆ ಆಕಷರ್ಿತರಾಗಿದ್ದರು. ಅವರಲ್ಲಿ ಭೂ ಹೀನ ಕಾಮರ್ಿಕರು ಗೇಣಿದಾರರು ಸೇಂದಿ ತೆಗೆಯುವವರು, ಪ್ಲಾಂಟೇಷನ್ ಕಾಮರ್ಿಕರು, ಗೇರುಬೀಜ ಕಾಖರ್ಾನೆ ಕಾಮರ್ಿಕರು ಮೊದಲಾದವರಿದ್ದರು. ಆ ವರ್ಗಗಳಲ್ಲಿ ಸಕ್ರೀಯವಾಗಿದ್ದ ಕಾಮರ್ಿಕರ ಸಂಘಟನೆಗಳು ಕಮ್ಯೂನಿಷ್ಟ್ ಪಕ್ಷವನ್ನು ಬೆಂಬಲಿಸಿದವು.
 ಆದರೆ, ಕಮ್ಯೂನಿಷ್ಟ್ ಪಕ್ಷದಲ್ಲಿ ನಾಯಕತ್ವ ಮಾತ್ರ ಈಳವ, ಪುಲಯ, ಪರವರ ಕೈಗೆ ಬರಲಿಲ್ಲ. ಅದು ನಂಬೂದಿರಿ ನಾಯಕ್ ಕೈಯಲ್ಲಿ ಭದ್ರವಾಗಿಯೇ ಉಳಿದಿದೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಪಡೆದಿದ್ದ ಹಿರಿಯ ನಾಯಕಿ ಕೆ.ಆರ್ ಗೌರಿಯವರನ್ನು ವ್ಯವಸ್ಥಿತ ಸಂಚಿನಿಂದ ಪಕ್ಷದಿಂದ ಹೊರಹಾಕಿದ್ದು ಆ ಕಾಲಘಟ್ಟದಲ್ಲಿನ ಉದಾಹರಣೆಗಳಾಗಿದ್ದವು.
 ಕಾಂಗ್ರೇಸ್ ಪಕ್ಷವು ಈಳವರಿಗೆ ರಾಜಕೀಯ ಅಧಿಕಾರವನ್ನು ನೀಡಿತು. 1951ರ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದಾಗ ಸಿ.ಕೇಶವನ್ ಮುಖ್ಯಮಂತ್ರಿಯಾದರು. 1962ರಲ್ಲಿ ಆರ್. ಶಂಕರ್ ಮುಖ್ಯಮಂತ್ರಿಯಾದರು. 1971ರಲ್ಲಿ ಅಲ್ಲಿನ ವಿಧಾನಸಭೆಯಲ್ಲಿ 28 ಈಳವ ಶಾಸಕರಿದ್ದರು. ಇಂದು ಕೂಡಾ ಕೇರಳದಲ್ಲಿ ಎಸ್.ಡಿ.ಪಿ ಮತ್ತು ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಾಲಯಗಳು ಹಾಗೂ ಸನ್ಯಾಸಿ ಸಂಘದ ಮೇಲೆ ನಿಯಂತ್ರಣ ಸ್ಥಾಪಿಸಲು ಕಾಂಗ್ರೇಸ್ ಮತ್ತು ಎಡಪಕ್ಷಗಳ ನಡುವೆ ಸಂಘರ್ಷ ನಡೆಯುತ್ತಿದೆ. ಎಸ್.ಎನ್.ಡಿ.ಪಿ, ಶ್ರೀ ನಾರಾಯಣ ಟ್ರಸ್ಟ್ ಮತ್ತು ಸನ್ಯಾಸಿ ಸಂಘ ಇಂದು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಹೊಂದಿದೆ.
 ಹಿಂದಿನ ಚುನಾವಣಿಯಲ್ಲಿ ಅಧಿಕಾರ ಕಳೆದುಕೊಂಡ  ಸನ್ಯಾಸಿ ಸಂಘದ ಮುಖ್ಯಸ್ಥರಾದ ಸ್ವಾಮಿಗಳು ಅಧಿಕಾರ ಬಿಟ್ಟುಕೊಡದಾಗ ಎ.ಕೆ ಆಂಟೋನಿ ಸಕರ್ಾರ ಅಲ್ಲಿ ಆಡಳಿತಾಧಿಕಾರಿಯನ್ನು ನೇಮಿಸಿತು. ಅವರಿಗೆ ಅಧಿಕಾರ ಹಸ್ತಾಂತರ ಮಾಡಲು ನಿರಾಕರಿಸಿದ ಸ್ವಾಮಿಗಳು ಮುಸ್ಲಿಂ ಉಗ್ರಗಾಮಿಗಳ ನೆರವು ಪಡೆದು ಮಠದೊಳಗೆ ಬಂದೂಕು-ಬಾಂಬುಗಳನ್ನು ಶೇಖರಿಸಿಟ್ಟು ಪ್ರತಿರೋಧ ವ್ಯಕ್ತಪಡಿಸಿದರು. ನಾರಾಯಣ ಗುರು ಚಳವಳಿ ಅವರ ಮರಣಾ ನಂತರದ 60 ವರ್ಷಗಳಲ್ಲಿ ತಲುಪಿರುವ ದುರಂತ ಸ್ಥಿತಿ ಇದು.
 ಮೇಲ್ಜಾತಿ ಜನರೂ ಸೇರಿದಂತೆ, ಎಲ್ಲ ವರ್ಗಗಳೊಳಗಿನಿಂದಲೂ ಸುಧಾರಣೆಯ ಧ್ವನಿ ಏಳುವಂತೆ ಮಾಡಿದ್ದು ನಾರಾಯಣಗುರು ಚಳವಳಿಯ ಇನ್ನೊಂದು ಸಾಧನೆ. ನಾಯರ್ ಸೇವಾ ಸಂಘ, ಪುಲಯ ಮಹಾಜನ ಸಭಾ ಮತ್ತು ನಂಬೂದಿರಿಗಳ ಯೋಗಕ್ಷೇಮ ಸಭಾಗಳು ಎಸ್.ಎನ್.ಡಿ.ಪಿ ಮಾದರಿಯಲ್ಲಿಯೇ ತಮ್ಮ ಜನಾಂಗಗಳ ಸುಧಾರಣೆಗೆ ಪ್ರಯತ್ನ ನಡೆಸಿದವು. ಸುಧಾರಣಾ ಚಳವಳಿಯಲ್ಲಿ ಭಾಗವಹಿಸಿದ್ದ ನಂಬೂದಿರಿ ಯುವಕರು ಬಹುಬೇಗನೆ ಕಮ್ಯೂನಿಷ್ಟ ಪಕ್ಷದತ್ತ ಆಕಷರ್ಿತರಾದರು. ಮುಂದೆ ಕಮ್ಯೂನಿಷ್ಟ ಪಕ್ಷದ ನಾಯಕತ್ವ ನಂಬೂದಿರಿ, ನಾಯರ್ಗಳ ಪಾಲಾಗಿ ಇತಿಹಾಸ ಮರುಕಳಿಸಿದ್ದನ್ನು ಕಾಣಬಹುದು.
 ನಾರಾಯಣ ಗುರು ಚಳವಳಿ ಕೇರಳದಲ್ಲಿ ನಡೆಯದೇ ಹೋಗಿದ್ದರೆ, ಏನಾಗುತ್ತಿತ್ತು ಎಂಬ ಪ್ರಶ್ನೆಗೆ ರಾಜಗೋಪಾಲಚಾರಿ ಅವರು ಆ ಚಳವಳಿ ನಡೆಯುತ್ತಿದ್ದ ಕಾಲದಲ್ಲಿಯೇ ಉತ್ತರ ನೀಡಿದ್ದರು. ತಿರುವಾಂಕೂರು ಸಂಸ್ಥಾನದ ದಿವಾನರು ದೇವಸ್ಥಾನ ಪ್ರವೇಶ ಘೋಷಣೆ ಹೊರಡಿಸಲು ವಿಳಂಬ ಮಾಡುತ್ತಿದ್ದನ್ನು ಕಂಡ ರಾಜಗೋಪಾಲಾಚಾರಿಯವರು ದಿವಾನರಿಗೆ ಪತ್ರ ಬರೆದು "ನಾರಾಯಣ ಗುರುಗಳ ಸುಧಾರಣಾ ಚಳವಳಿ ನಡೆಯದಿದ್ದರೆ, ಕೇರಳದಲ್ಲಿನ ಅರ್ಧಕ್ಕೂ ಹೆಚ್ಚಿನ ಜನಸಂಖ್ಯೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿ ಹೋಗುತ್ತಿದ್ದರು" ಎಂದು ಎಚ್ಚರಿಸಿದರು. ಕೇರಳದ ಆಗಿನ ಸ್ಥಿತಿಯಲ್ಲಿ ಈ ಎಚ್ಚರಿಕೆ ಉತ್ಪ್ರೇಕ್ಷೆ ಆಗಿರಲಿಲ್ಲ.
 ವಾಸ್ಕೋಡಗಾಮ ಮೊದಲು ಬಂದಿಳಿದ ಕೇರಳದಲ್ಲಿ ಕ್ರಿಶ್ಚಿಯನ್ ಮಿಷನರಿಗಳು ಉಳಿದೆಲ್ಲಾ ಕಡೆಗಳಿಗಿಂತ ಹೆಚ್ಚು ಕ್ರೀಯಾಶೀಲವಾಗಿದ್ದವು. ನಾರಾಯಣಗುರುಗಳ ಪ್ರವೇಶವಾಗುವ ಮೊದಲು ಅಲ್ಲಿ ಜಾತಿ ಆಧಾರಿತ ದೌರ್ಜನ್ಯದಿಂದ ಬೇಸತ್ತ ಕೆಳವರ್ಗದ ಜನ ಸಾಮೂಹಿಕವಾಗಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿದರೆ, ದೇಶದಲ್ಲಿ ಅತಿಹೆಚ್ಚು ಕ್ರಿಶ್ಚಿಯನ್ ಜನಸಂಖ್ಯೆ ಇರುವ ರಾಜ್ಯ ಕೇರಳ. ಅಲ್ಲಿ ಶೇ.24ರಷ್ಟು ಕ್ರಿಶ್ಚಿಯನ್ರು ಇರುವುದು ಈ ಮತಾಂತರಕ್ಕೆ ಸಾಕ್ಷಿ.
 ನಾರಾಯಣ ಗುರುಗಳ ಚಳವಳಿಯುದ್ದಕ್ಕೂ ಹಲವಾರು ಬಾರಿ ತಮ್ಮ ಅನುಯಾಯಿಗಳಿಂದಲೆ ಮತಾಂತರದ ಬೆದರಿಕೆಯನ್ನು ಎದುರಿಸಿದ್ದರು. ವೈಕಂ ಸತ್ಯಾಗ್ರಹದ ಕಾಲದಲ್ಲಿ ಮತ್ತು ಅದಕ್ಕಿಂತ ಮೊದಲು ಮತಾಂತರದ ವಿಚಾರ ಮತ್ತೇ ಎಸ್.ಎನ್.ಡಿ.ಪಿಯಲ್ಲಿ ದೊಡ್ಡ ವಿವಾದ ಸೃಷ್ಟಿಸಿತ್ತು. ಗುರುಗಳ ಪ್ರಮುಖ ಶಿಷ್ಯರಲ್ಲಿ ಸಿ.ವಿ ಕುಂಜುರಾಮನ್ ಕ್ರಿಶ್ಚಿಯನ್ ಮತಾಂತರವನ್ನು ಪ್ರತಿಪಾದಿಸುತ್ತಿದ್ದರೆ, ಸಹೋದರ ಅಯ್ಯಪ್ಪನ್ ಮತ್ತು ಸಿ.ಕೃಷ್ಣನ್ ಬೌದ್ಧ ಧರ್ಮದ ಪರ ಒಲವು ತೋರಿಸಿದ್ದರು. ಕುಮಾರ್ ಆಶಾನ್ ಕೂಡ ಬೌದ್ಧ ಧರ್ಮದ ಕಡೆ ಆಕಷರ್ಿತರಾಗಿದ್ದರೂ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ಟಿ.ಕೆ ಮಾಧವನ್ ಮತಾಂತರವನ್ನೇ ವಿರೋಧಿಸುತ್ತಿದ್ದರು.
 ಎಸ್.ಎನ್.ಡಿ.ಪಿ ಅಸ್ತಿತ್ವವನ್ನೇ ಅಲುಗಾಡಿಸಿದ ಈ ವಿವಾದ ನಾರಾಯಣ ಗುರುಗಳಿಗೆ ಒಂದು ಸವಾಲಾಗಿತ್ತು. ತಕ್ಷಣ ಸ್ವಾಮಿಗಳು ಅಲ್ವಾಯಿಯಲ್ಲಿ 1924 ಪೆಬ್ರುವರಿಯಲ್ಲಿ ಎರಡು ದಿನಗಳ ಸರ್ವಧರ್ಮ ಸಮ್ಮೇಳನ ನಡೆಸಿದರು. ಈ ಸಮ್ಮೇಳನ ನಡೆಯುತ್ತಿರುವುದು "ತರ್ಕ ನಡೆಸುವದಕ್ಕಾಗಲಿ, ಗೆಲ್ಲುವುದಕ್ಕಾಗಲಿ ಅಲ್ಲ. ಪರಸ್ಪರ ತಿಳಿದುಕೊಳ್ಳುವುದು ಮತ್ತು ತಿಳಿಸಿಕೊಡುವುದು ಇದರ ಉದ್ದೇಶ" ಎಂದು ನಾರಾಯಣ ಗುರುಗಳು ಘೋಷಿಸಿದ್ದರು. ಸ್ವಾಮಿಗಳು "ಒಂದು ಜಾತಿ, ಒಂದು ಮತ, ಒಂದೇ ದೇವರು" ಎಂಬ ಸಂದೇಶ ಸಾರಿದರು. ಮನುಷ್ಯ ಬದಲಾದರೆ, ಜಾತಿ ಬದಲಾಯಿಸಬೇಕಾದ ಅಗತ್ಯ ಇಲ್ಲವೆಂದು ಅವರು ಹಿಂದೂ ಧರ್ಮದ ನಾಯಕರನ್ನು ಉದ್ದೇಶಿಸಿ ಹೇಳಿದರು. ಮತಾಂತರದ ವಿವಾದ ಅಲ್ಲಿಗೆ ತಣ್ಣಗಾಯಿತು.
 ಚಳವಳಿಯುದ್ದಕ್ಕೂ ನಾರಾಯಣ ಗುರುಗಳಲ್ಲಿ ಯಾವುದೇ ರೀತಿಯ ಗೊಂದಲ, ಹತಾಶೆ, ನಿರಾಶೆ ಮೂಡಿದ್ದು ಕಾಣುವುದಿಲ್ಲ. ಆದರೆ, ಜೀವನದ ಕೊನೆಯ ಎರಡು ವರ್ಷಗಳಲ್ಲಿ ನಾರಾಯಣ ಗುರುಗಳು ಖಿನ್ನರಾಗಿದ್ದರು. ತಮ್ಮ ಅನುಯಾಯಿಗಳಲ್ಲಿ ಹುಟ್ಟಿಕೊಂಡ ರಾಜಕೀಯ ಆಕಾಂಕ್ಷೆ ಮತ್ತು ಆಸ್ತಿ ಮೇಲೆ ನಿಯಂತ್ರಣಕ್ಕೆ ಅವರು ನಡೆಸುತ್ತಿದ್ದ ಶೀತಲ ಸಮರ ಅವರ ಗಮನಕ್ಕೆ ಬಂದಿತ್ತು. ಇದೇ ಬೇಸರದಿಂದ ಅವರು ಶ್ರೀಲಂಕಾಕ್ಕೆ ಹೋಗಿ ಅಲ್ಲಿಯೇ ಶಾಶ್ವತವಾಗಿ ನೆಲಸಲು ಬಯಸಿದ್ದರು. ಆದರೆ, ಅನುಯಾಯಿಗಳ ಒತ್ತಡಕ್ಕೆ ಮಣಿದು ಹಿಂದಿರುಗಿದರೂ ಅವರು 2ವರ್ಷಗಳಿಗಿಂತ ಹೆಚ್ಚು ಕಾಲ ಬದುಕಲಿಲ್ಲ.
 ನಾರಾಯಣ ಗುರುಗಳು ಚಳವಳಿಗೂ ಹನ್ನೆರಡನೇ ಶತಮಾನದಲ್ಲಿ ಕನರ್ಾಟಕದಲ್ಲಿ ನಡೆದ ಬಸವ ಚಳವಳಿಗೂ ಸಿದ್ಧಾಂತ ಮತ್ತು ಕಾರ್ಯತಂತ್ರಗಳಲ್ಲಿ ಕಂಡುಬರುವ ಹಲವಾರು ಸಾಮ್ಯಗಳು ಇನ್ನೊಂದು ಪ್ರತ್ಯೇಕ ಅಧ್ಯಯನಕ್ಕೆ ವಸ್ತುವಾಗಬಲ್ಲುದು. ಇಬ್ಬರೂ ವಣರ್ಾಶ್ರಮ ವ್ಯವಸ್ಥೆಯನ್ನು ಪ್ರಶ್ನಿಸುತ್ತಲೇ ಧರ್ಮವನ್ನು ಜನಪರಗೊಳಿಸಿ, ಪೂಜಾವಿಧಾನವನ್ನು ಸರಳಗೊಳಿಸುವ ಪ್ರಯತ್ನ ಮಾಡುತ್ತಾರೆ. ಗುರುಗಳು ಬಸವಣ್ಣನವರಂತೆಯೇ ಸವಣರ್ೀಯರ ದೇವಾಲಯಗಳನ್ನು ತಿರಸ್ಕರಿಸಿದರೆ, ಹೊರತು ದೇವರನ್ನಲ್ಲ.
 ಎರಡೂ ಚಳವಳಿಯಲ್ಲಿ ಕಾಣುವ ಪ್ರಜಾಸತಾತ್ಮಕ ಮೌಲ್ಯಗಳು ಅನನ್ಯವಾದುದು. ಮೂಲತಃ ನಾರಾಯಣ ಗುರುಗಳು ಸತ್ಯಾಗ್ರಹದ ಬಗ್ಗೆ ವಿರೋಧ ಹೊಂದಿದ್ದರು. ಅದೊಂದು ಭಾವನಾತ್ಮಕ ಶೋಷಣೆಯೆಂದು  ಹೇಳುತ್ತಿದ್ದರು. ಆದರೆ, ತಮ್ಮ ಶಿಷ್ಯ ಟಿ.ಕೆ ಮಾಧವನ್ ವೈಕಂ ಸತ್ಯಾಗ್ರಹ ಪ್ರಾರಂಭಿಸಿದಾಗ ದೇವಸ್ಥಾನ ಪ್ರವೇಶ ಚಳವಳಿ ಮತ್ತು ಸತ್ಯಾಗ್ರಹ ಎರಡರ ಬಗ್ಗೆ ವಿರೋಧವಿದ್ದರೂ ಅದನ್ನು ಬೆಂಬಲಿಸಿದರು.
 ನಾರಾಯಣ ಗುರುಗಳ ಪ್ರೀತಿಯ ಅನುಯಾಯಿಯಾದ ಸಹೋದರ ಅಯ್ಯಪ್ಪನ್ ಪುಲಯರೊಂದಿಗೆ ಸಹಭೋಜನ ಮಾಡಿ ಜಾತಿಯಿಂದ ತಿರಸ್ಕೃತರಾದಾಗ ಅವರು ಅಯ್ಯಪ್ಪನನ್ನು ಬೆಂಬಲಿಸುತ್ತಾರೆ. ದೇವಾಲಯಗಳ ಸ್ಥಾಪನೆಯನ್ನು ವಿರೋಧಿಸುತ್ತಲೇ ಬಂದ ಅಯ್ಯಪ್ಪನ್ ಕರಮಕೊಂಡಂನಲ್ಲಿ ದೇವಾಲಯ ಸ್ಥಾಪನೆ ಮಾಡಲು  ಬಂದ ಗುರುಗಳ ವಿರುದ್ಧವೇ ಪ್ರತಿಭಟನೆ ಮಾಡುತ್ತಾರೆ. ಅದಕ್ಕೆ ಮಣಿದ ಗುರುಗಳು ಮುಂದೆ ದೇವಾಲಯಗಳ ಸ್ಥಾಪನೆಯನ್ನೇ ನಿಲ್ಲಿಸುತ್ತಾರೆ.
 ಮತಾಂತರ ವಿಷಯದಲ್ಲಿ ಗುರು ಮತ್ತು ಅನುಯಾಯಿಗಳ ನಡುವೆ ಭಿನ್ನಾಭಿಪ್ರಾಯವಿದ್ದರೂ ಕೊನೆಗೆ ಎಲ್ಲರೂ ಗುರುಗಳ ಅಭಿಪ್ರಾಯಕ್ಕೆ ಬದ್ಧರಾಗುತ್ತಾರೆ. ಇಂತಹದ್ದೇ ಬೆಳವಣಿಗೆಗೆಳನ್ನು ಬಸವ ಚಳವಳಿಯೊಳಗೂ ಕಾಣಬಹುದು. ಎರಡೂ ಚಳವಳಿಗಳ ಅನುಯಾಯಿಗಳಲ್ಲಿಯೂ ಸಾಕಷ್ಟು ಹೋಲಿಕೆ ಇದೆ. ಬಸವಣ್ಣನ ಅನುಯಾಯಿಗಳಾದ ಅಲ್ಲಮ, ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಸಿದ್ಧರಾಮೇಶ್ವರ ಹಾಗೂ ನಾರಾಯಣ ಗುರು ಅನುಯಾಯಿಗಳಾದ ಪಲ್ಪು, ಆಶಾನ್, ಅಯ್ಯಪ್ಪನ್ ಮೊದಲಾದವರಲ್ಲಿ ಸಾಮ್ಯಗಳಿವೆ. ಎರಡು ಚಳವಳಿಯ ನಾಯಕರ ಅಂತ್ಯಕ್ಕೂ ಅಷ್ಟೇ ಹೋಲಿಕೆಗಳಿವೆ. ಇಬ್ಬರೂ ಕೊನೆಗಾದಲ್ಲಿ ಅನುಯಾಯಿಗಳ ಮೇಲೆ ನಿಯಂತ್ರಣ ಇಟ್ಟುಕೊಳ್ಳಲಾಗದೆ ಸಂಕಟ ಅನುಭವಿಸುತ್ತಾರೆ. ಸಾವಿನ ನಂತರ ಇಬ್ಬರೂ ಭಕ್ತರ ಕೈಯಲ್ಲಿ ಬಂಧಿಯಾಗಿ ಕಲ್ಲಿನ ಮೂತರ್ಿಗಳಾಗುತ್ತಾರೆ.
 ಕೇರಳದಿಂದಾಚೆಗೆ ತಮಿಳುನಾಡು ಹಾಗೂ ಕನರ್ಾಟಕದ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತು ಪಡಿಸಿದರೆ, ಬೇರೆಡೆ ನಾರಾಯಣ ಗುರು ಚಳವಳಿ ಹೆಚ್ಚು ಪರಿಚಿತವಲ್ಲ. ನಾರಾಯಣ ಗುರುಗಳ ಶಿಷ್ಯರೇ ಆದ ಡಾ.ಪಲ್ಪು ಅವರ ಮಗ ನಟರಾಜ ಗುರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುಗಳ ಚಿಂತನೆಯ ಪ್ರಸಾರ ಮಾಡಿದರು. ಅವರು ಶಿವಗಿರಿಯ ಸಮೀಪ ಸ್ಥಾಪಿಸಿರುವ ಈಸ್ಟ್ವೆಸ್ಟ್ ವಿಶ್ವವಿದ್ಯಾಲಯವಿದೆ. ಆದರೆ, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನೂರಾರು ಗುರುಮಂದಿರಗಳಲ್ಲಿ ಅವರಿಗಾಗಿಯೇ ಕಟ್ಟಿದ ದೇವಾಲಯಗಳಲ್ಲಿ ನಾರಾಯಣ ಗುರುಗಳ ಆರಾಧನೆ-ಭಜನೆಗಳು ಕೂಡ ನಾರಾಯಣನೆಂಬ ಈ "ನರ"ನ ಸಾಧನೆಯ ಬಗ್ಗೆ ತಪ್ಪು ಕಲ್ಪನೆಗಳನ್ನೇ ಬಿತ್ತುತ್ತಿವೆ.
 ಸಾವಿರಾರು ವರ್ಷಗಳಿಂದ ಬೇರುಬಿಟ್ಟ ವೈದಿಕ ಶಾಹಿ, ಪ್ಯಾಸಿಸ್ಟ್ ಶಕ್ತಿ ತನ್ನನ್ನು ಪ್ರಶ್ನಿಸಿದವರನ್ನು ನಾಶ ಮಾಡಲು ಪ್ರಯತ್ನಿಸುತ್ತದೆ. ಸಾಧ್ಯವಾಗದಿದ್ದರೆ, ತನ್ನೊಳಗೆ ಜೀಣರ್ಿಸಿಕೊಂಡು ಬಿಡುತ್ತದೆ. ಬುದ್ಧ ವಿಷ್ಣುವಿನ ಅವತಾರದ ಬಸವಣ್ಣ ನಂದಿಯ ಅವತಾರವಾದ ದುರಂತವೇ ನಾರಾಯಣ ಗುರುಗಳಿಗಾಗಿದೆ. ಸನ್ಯಾಸಿಯಾದ ದಿನದಿಂದ ಸಾವಿನವರೆಗೂ ಕೇರಳದ ಅತ್ಯಂತ ಕೀಳು ಜಾತಿಯವರೆನಿಸಿದ ಪುಲಯ ಜನಾಂಗದ ಅಡಿಗೆಯವನಿಂದಲೆ ಕೈತುತ್ತು ತಿಂದು ಬದುಕಿದ ಈ ಅಪ್ರತಿಮ ಮಾನವತಾವಾದಿ ಇಂದು ಈಳವ - ಬಿಲ್ಲವ ಜಾತಿ ಜನರ ನಾಯಕನಾಗಿಬಿಟ್ಟಿದ್ದಾರೆ.
 ವಿದ್ಯೆಯಿಂದ ಸ್ವತಂತ್ರರಾಗಿರಿ ಎಂದ ಗುರುಗಳ ಚಿಂತನೆಯನ್ನು ವಿದ್ಯೆ ಎಂದರೆ, ಅಕಾಡೆಮಿಕ್ ಶಿಕ್ಷಣ ಎಂದು ತಿಳಿದಷ್ಟೇ ಕಾರಣ. ಅವರ ಅನುಯಾಯಿಗಳೆನಿಸಿಕೊಂಡವರು ಇಂದಿಗೂ ಬೌದ್ಧಿಕ ದಾಸ್ಯದಿಂದ ಮುಕ್ತವಾಗಿಲ್ಲ. ಹಾಗಿಲ್ಲದಿದ್ದರೆ, ವಣರ್ಾಶ್ರಮ ವ್ಯವಸ್ಥೆಗೆ ಸವಾಲಾಗಿ ನಾರಾಯಣ ಗುರುಗಳು ಮಂಗಳೂರಿನಲ್ಲಿ ಸ್ಥಾಪಿಸಿದ ದೇವಾಲಯವನ್ನು ಜೀಣರ್ೋದ್ಧಾರಗೊಳಿಸಿದ ಅವರ ಅನುಯಾಯಿಗಳು, ಅದನ್ನು ವಣರ್ಾಶ್ರಮ ವ್ಯವಸ್ಥೆಯನ್ನು ಇಂದಿಗೂ ಪ್ರತಿಪಾದಿಸುವ ಶೃಂಗೇರಿ ಮಠದ ಸ್ವಾಮಿಗಳಿಂದ ಉದ್ಘಾಟನೆ ಮಾಡಿಸುತ್ತಿರಲಿಲ್ಲ.
 ಒಂದು ಜಾತಿ, ಒಂದು ಮತ, ಒಂದೇ ದೇವರು ಎಂದು ಸಾರಿದ ನಾರಾಯಣ ಗುರುಗಳು ಇಲ್ಲಿ ಒಂದು ಜಾತಿಯ ಮಂದಿರಗಳಲ್ಲಿ ಬಂಧಿಯಾಗಿದ್ದಾರೆ. ಆ ಜಾತಿ ಜನರಾದವರೂ ಗುರುಗಳ ತತ್ವವನ್ನು ಪಾಲಿಸುತ್ತಿದ್ದಾರೆಯೇ? ನಾರಾಯಣ ಗುರುಗಳನ್ನು ಇಂದಿನ ಬಂಧನದಿಂದ ಬಿಡಿಸುವವರ್ಯಾರು?
 ಭಕ್ತಸಮೂಹ, ಭಜನಾ ಮಂಡಳಿಗಳಾಚೆ ನಡೆಯುವ ಈ ರೀತಿಯ ವೈಚಾರಿಕ ಚಚರ್ೆ ಸಂವಾದಗಳು ಮಾತ್ರ ನಾರಾಯಣ ಗುರುಗಳನ್ನು ಈಗಿನ ಬಂಧನದಿಂದ ಬಿಡುಗಡೆಗೊಳಿಸಬಹುದೆಂದು ನಾನು ನಂಬಿದ್ದೇನೆ.
ಮುಗಿಯಿತು..
 

Monday, May 13, 2013

ಜಾತಿ ಮೀರಿ ಯೋಚನೆ ಮಾಡಿದ ರಾಜ್ಯದ ಮತದಾರ

ರ್ನಾಟಕದ ರಾಜಕಾರಣಿಗಳು ಮಾತ್ರವಲ್ಲ ಮತದಾರರೂ ಜಾತಿವಾದಿಗಳು ಎಂಬ ಅಭಿಪ್ರಾಯ ಇತ್ತೀಚಿನ ವರ್ಷಗಳಲ್ಲಿ ದೇಶದಾದ್ಯಂತ ಹರಡಿತ್ತು. ಇದನ್ನು ವಿಶ್ವಾಸಪೂರ್ವಕವಾಗಿ ನಿರಾಕರಿಸುವ ಸ್ಥಿತಿಯಲ್ಲಿ ಕನ್ನಡಿಗರೂ ಇರಲಿಲ್ಲ. ಸಾಮಾನ್ಯವಾಗಿ ಜಾತಿಯನ್ನೇ ಆಧರಿಸಿ ಹುಟ್ಟಿಕೊಂಡ ಪ್ರಾದೇಶಿಕ ಪಕ್ಷಗಳು ಅಧಿಕಾರಕ್ಕೆ ಬಂದ ರಾಜ್ಯಗಳಲ್ಲಿ ಇಂತಹದ್ದೊಂದು ಅಭಿಪ್ರಾಯ ಹುಟ್ಟಿಕೊಳ್ಳುವುದು ಸಹಜ.
ಉದಾಹರಣೆಗೆ ಉತ್ತರಪ್ರದೇಶ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶ ಇತ್ಯಾದಿ. ಆದರೆ ಸಾಮಾನ್ಯವಾಗಿ ರಾಷ್ಟ್ರೀಯ ಪಕ್ಷಗಳ ಸರ್ಕಾರಗಳಿಗೆ `ಜಾತಿವಾದಿ ಸರ್ಕಾರ' ಎಂಬ ಹಣೆಪಟ್ಟಿ ಎಲ್ಲರೂ ಆಡಿಕೊಳ್ಳುವಂತೆ ಅಂಟಿಕೊಳ್ಳುವುದು ಕಡಿಮೆ. ಕರ್ನಾಟಕ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸದೆ ಸದಾ ರಾಷ್ಟ್ರೀಯ ಪಕ್ಷಗಳ ಪರವಾಗಿ ನಿಂತ ರಾಜ್ಯ. ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕದಲ್ಲಿಯೂ ಈ ಆರೋಪ ಕನ್ನಡಿಗರು ನಾಚಿಕೆಪಟ್ಟುಕೊಳ್ಳುವ ರೀತಿಯಲ್ಲಿ ಕೇಳಿಬಂತು. `ನಾವೆಲ್ಲ ಹಿಂದೂ, ಜಾತಿ ಮೀರಿ ನಾವೆಲ್ಲ ಒಂದು' ಎಂಬ ಸಾಮಾಜಿಕ ಮತ್ತು ರಾಜಕೀಯ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಬಂದ ಭಾರತೀಯ ಜನತಾ ಪಕ್ಷದ ಆಳ್ವಿಕೆಯ ಕಾಲದಲ್ಲಿಯೇ ಇದು ಜೋರಾಗಿ ಕೇಳಿಬಂದದ್ದು ವಿಪರ್ಯಾಸ.
ಇದಕ್ಕೆ ಕಾರಣಗಳು ಅನೇಕ. ಬಾಬ್ರಿ ಮಸೀದಿ ಧ್ವಂಸದ ನಂತರ ಎದ್ದ `ಹಿಂದುತ್ವ'ದ ಅಲೆಯ ಮೇಲೇರಿ ರಾಷ್ಟ್ರಮಟ್ಟದಲ್ಲಿ ಬಿಜೆಪಿ ರಾಜಕೀಯವಾಗಿ ಬೆಳೆಯುವ ಸೂಚನೆ ನೀಡಿದಾಗಲೂ 1994ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅದು ಗೆಲ್ಲಲು ಸಾಧ್ಯವಾಗಿದ್ದು 40 ಸ್ಥಾನಗಳನ್ನು ಮಾತ್ರ. ಅದರ ನಂತರದ ಚುನಾವಣೆಯಲ್ಲಿಯೂ ಬಿಜೆಪಿ ಪ್ರಯಾಸಪಟ್ಟು ನಾಲ್ಕು ಸ್ಥಾನಗಳನ್ನಷ್ಟೇ ಹೆಚ್ಚುವರಿಯಾಗಿ ಗಳಿಸಿತ್ತು. ಆಗಲೇ ಬಿಜೆಪಿ ನಾಯಕರು ಕರ್ನಾಟಕದಲ್ಲಿ `ಸೋಷಿಯಲ್ ಎಂಜಿನಿಯರಿಂಗ್' ಹೆಸರಲ್ಲಿ ಜಾತಿ ರಾಜಕಾರಣವನ್ನು ಬಹಿರಂಗವಾಗಿಯೇ ಪ್ರಾರಂಭಿಸಿದ್ದು. ಇದಕ್ಕಾಗಿ ಲಿಂಗಾಯತರಾದ ಬಿ.ಎಸ್.ಯಡಿಯೂರಪ್ಪನವರನ್ನು ನಾಯಕನಾಗಿ ಬಿಂಬಿಸಿದ್ದು. 1999ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ವೀರೇಂದ್ರ ಪಾಟೀಲರ ಪದಚ್ಯುತಿಯಿಂದಾಗಿ ಅಸಮಾಧಾನಕ್ಕೀಡಾದ ಲಿಂಗಾಯತರನ್ನು ಸೆಳೆಯುವ
ಯೋಚನೆ ಕೂಡಾ ಬಿಜೆಪಿಯದ್ದಾಗಿತ್ತು. 79 ಶಾಸಕರನ್ನು ಗೆಲ್ಲಿಸಿದ್ದ 2004ರ ವಿಧಾನಸಭಾ ಚುನಾವಣೆ ಬಿಜೆಪಿಯ ಜಾತಿ ರಾಜಕಾರಣದ ಲೆಕ್ಕಾಚಾರವನ್ನು ಇನ್ನಷ್ಟು ಗಟ್ಟಿಗೊಳಿಸಿತ್ತು. ಎಚ್.ಡಿ.ಕುಮಾರಸ್ವಾಮಿಯವರ ಮೇಲಿನ ವಚನಭ್ರಷ್ಟತೆಯ ಆರೋಪವನ್ನೇ ಪ್ರಧಾನ ಅಸ್ತ್ರವಾಗಿ ಬಳಸಿಕೊಂಡ 2008ರ ಚುನಾವಣೆಯಲ್ಲಿ ಕಣ್ಣಿಗೆ ರಾಚುವ ರೀತಿಯಲ್ಲಿ ಜಾತಿ ರಾಜಕಾರಣ ಮೆರೆದಾಡಿತು. `ಲಿಂಗಾಯತ ಯಡಿಯೂರಪ್ಪನವರಿಗೆ ಆಗಿರುವ ಅನ್ಯಾಯದ ವಿರುದ್ಧ ಸೇಡು ತೀರಿಸಿಕೊಳ್ಳಲೆಂದೇ ಮತ ಹಾಕಿ' ಎಂದು ನೇರವಾಗಿ ಹೇಳುವ ಮಟ್ಟಕ್ಕೆ ಬಿಜೆಪಿ ಚುನಾವಣಾ ಪ್ರಚಾರವನ್ನು ಕೊಂಡೊಯ್ದಿತ್ತು.
ರಾಜ್ಯದ ಮತದಾರರು ಮುಖ್ಯವಾಗಿ ಲಿಂಗಾಯತರು ಬಿಜೆಪಿಯ ಜಾತಿ ಕೂಗಿಗೆ ಓಗೊಟ್ಟರೇನೋ ಎಂದು ಅನುಮಾನ ಮೂಡಿಸುವ ರೀತಿಯಲ್ಲಿ ಫಲಿತಾಂಶವೂ ಹೊರಬಿತ್ತು. ಬಿಜೆಪಿ 110 ಕ್ಷೇತ್ರಗಳಲ್ಲಿ ಜಯಗಳಿಸಿತ್ತು. ಅಲ್ಲಿಂದಲೇ ಬಿಜೆಪಿಯ ಅದರಲ್ಲೂ ಮುಖ್ಯವಾಗಿ ಬಿ.ಎಸ್.ಯಡಿಯೂರಪ್ಪ ಎಂಬ ನಾಯಕನ ಪತನ ಪ್ರಾರಂಭವಾಗಿದ್ದು. ಆ ಚುನಾವಣೆಯಲ್ಲಿ 59 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು ಮಾತ್ರವಲ್ಲ ಅವರಲ್ಲಿ 38 ಶಾಸಕರು ಬಿಜೆಪಿಗೆ ಸೇರಿದವರಾಗಿದ್ದರು. ಅಷ್ಟು ಮಾತ್ರವಲ್ಲ ಒಕ್ಕಲಿಗರು ಮತ್ತು ಮುಸ್ಲಿಮರನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (29), ಹಿಂದುಳಿದ ವರ್ಗ (16) ಹಾಗೂ ಬ್ರಾಹ್ಮಣ (9) ಶಾಸಕರು ಕೂಡಾ ಅತಿಹೆಚ್ಚಿನ ಸಂಖ್ಯೆಯಲ್ಲಿ ಆರಿಸಿಬಂದದ್ದು ಕೂಡಾ ಬಿಜೆಪಿಯಲ್ಲಿ. ಲಿಂಗಾಯತರು ಬಿಜೆಪಿಯಲ್ಲಿರುವ ಲಿಂಗಾಯತ ಅಭ್ಯರ್ಥಿಗಳಿಗೆ ಮಾತ್ರ ಮತ ಹಾಕದೆ ಆ ಪಕ್ಷದಿಂದ ಸ್ಪರ್ಧಿಸಿದ್ದ ಅನ್ಯ ಜಾತಿಯ ಅಭ್ಯರ್ಥಿಗಳಿಗೂ ಮತಹಾಕಿದ್ದು ಇದರಿಂದ ಸ್ಪಷ್ಟ.
ತಮಗೆ ಅನುಕೂಲವಾಗಿರುವ `ಜನಾಭಿಪ್ರಾಯ'ದ ಕುದುರೆಯೇರಿ ಯಡಿಯೂರಪ್ಪನವರೂ ಹೊರಟರು. ಮುಖ್ಯಮಂತ್ರಿಯಾಗುವವರೆಗೆ ರಾಜಾರೋಷವಾಗಿ ತನ್ನನ್ನು ಲಿಂಗಾಯತ ನಾಯಕನೆಂದು ಬಿಂಬಿಸಿಕೊಳ್ಳದೆ ಇದ್ದ ಯಡಿಯೂರಪ್ಪ ನಿಧಾನವಾಗಿ ಆ ಕೆಲಸವನ್ನು ಶುರು ಮಾಡಿದ್ದರು. ಜಾತಿ ನಾಯಕರಾಗುವ ಮೂಲಕ ಯಡಿಯೂರಪ್ಪ ರಾಜಕೀಯ ಪ್ರವೇಶ ಮಾಡಿದವರಲ್ಲ. ಅಧಿಕಾರಕ್ಕೆ ಬರುವವರೆಗೆ ಅಂತಹ ಆರೋಪವೂ ಅವರ ಮೇಲೆ ಇರಲಿಲ್ಲ. ಆರ್‌ಎಸ್‌ಎಸ್‌ನ ನಿಷ್ಠಾವಂತ ಅನುಯಾಯಿಯಾಗಿದ್ದ ಅವರು ಅದು ಬಹಿರಂಗವಾಗಿ ಪ್ರತಿಪಾದಿಸುವ `ಜಾತಿಮೀರಿದ ಧರ್ಮ'ವನ್ನೇ ಹೆಚ್ಚು ನಂಬಿ ರಾಜಕಾರಣ ಮಾಡಿದವರು. ಆದರೆ ಕಳೆದ ಚುನಾವಣೆಯ ಫಲಿತಾಂಶ ಯಡಿಯೂರಪ್ಪನವರ ತಲೆಯನ್ನೂ ತಿರುಗಿಸಿಬಿಟ್ಟಿತು. ಅವರ ಹೃದಯದೊಳಗೆ ಜಾತಿ ಇತ್ತೋ ಇಲ್ಲವೋ ಆದರೆ ಬಹಿರಂಗವಾಗಿ ತಮ್ಮನ್ನು ಲಿಂಗಾಯತರ ನಾಯಕನಾಗಿಯೇ ಬಿಂಬಿಸಿಕೊಳ್ಳುವುದರಲ್ಲಿಯೇ ಯಡಿಯೂರಪ್ಪನವರು ಸಂಭ್ರಮಪಟ್ಟರು. ಇದರಿಂದ ರಾಜಕೀಯವಾಗಿ ಲಾಭವಾಗಲಿದೆ ಎಂಬ ಬೆಂಬಲಿಗರ ಮಾತನ್ನು ನಂಬಿಬಿಟ್ಟರು. ಅಗತ್ಯಕ್ಕಿಂತಲೂ ಹೆಚ್ಚಾಗಿ ವೀರಶೈವ ಮಠಗಳಿಗೆ ಭೇಟಿಕೊಟ್ಟರು. ರಾಜ್ಯದ ಬಜೆಟ್‌ನಲ್ಲಿ ಆ ಮಠಗಳಿಗೆ ಅನುದಾನವನ್ನು ಬೇಕಾಬಿಟ್ಟಿಯಾಗಿ ಹಂಚುವ ಕೆಟ್ಟಸಂಪ್ರದಾಯವನ್ನು ಪ್ರಾರಂಭಿಸಿದರು. ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಎದುರಾದಾಗ ಜಾತಿಯ ಗುರಾಣಿ ಬಳಸಿಕೊಂಡು ಬಚಾವಾಗುವ ಪ್ರಯತ್ನ ಪಟ್ಟರು. ಕೊನೆಗೆ ಅದೇ ಜಾತಿಯನ್ನು ನಂಬಿ ಸ್ವಂತ ಪಕ್ಷವನ್ನೂ ಕಟ್ಟಿದರು.
ಇದನ್ನೆಲ್ಲ ನೋಡುತ್ತಾ ಲಿಂಗಾಯತರಲ್ಲಿದ್ದ `ಪ್ರಜ್ಞಾವಂತ'ರೆನಿಸಿಕೊಂಡವರು ಕೂಡಾ ಜಾತಿ ಬಳಸಿಕೊಂಡೇ ಹೆಚ್ಚು ಖಾಸಗಿಯಾಗಿ, ಸ್ವಲ್ಪ ಬಹಿರಂಗವಾಗಿ ಯಡಿಯೂರಪ್ಪನವರನ್ನು ಸಮರ್ಥಿಸಿಕೊಳ್ಳತೊಡಗಿದರು. ಆ ಸಮಯದಲ್ಲಿಯೇ `ಬೇರೆ ಜಾತಿಗಳ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿಲ್ಲವೇ?' ಎಂಬ ನೀತಿಗೆಟ್ಟ ಸಮರ್ಥನೆಗಳು ಕೇಳಿಬರತೊಡಗಿದ್ದು. ಇಲ್ಲಿಯೇ ನಮ್ಮ ಅನೇಕ ಬುದ್ದಿಜೀವಿಗಳು, ಪ್ರೊಫೆಸರ್‌ಗಳು, ಪತ್ರಕರ್ತರು, ಸಮಾಜವಿಜ್ಞಾನಿಗಳು ಎಡವಿದ್ದು. ಇವರಲ್ಲಿ ಹೆಚ್ಚಿನವರು ಸಾಮಾನ್ಯ ಲಿಂಗಾಯತ ಮತದಾರರ ಅಂತರಾಳವನ್ನು ಅರಿತುಕೊಳ್ಳಲು ವಿಫಲರಾಗಿದ್ದರು. ಮನಸ್ಸಿನೊಳಗೆ ಎಷ್ಟೇ ಜಾತಿಪ್ರೀತಿ ಇದ್ದರೂ ಸಾಮಾನ್ಯವಾಗಿ ಯಾವ ವ್ಯಕ್ತಿ ಕೂಡಾ ತನ್ನನ್ನು ಜಾತಿವಾದಿ ಎಂದು ಕರೆಸಿಕೊಳ್ಳಲು ಇಷ್ಟಪಡುವುದಿಲ್ಲ, ತಾನೊಬ್ಬ ಜಾತ್ಯತೀತ ಎಂದೇ ಹೇಳಿಕೊಳ್ಳುತ್ತಾನೆ. ಈ ನಡವಳಿಕೆಯನ್ನು ಆತ್ಮವಂಚನೆ ಎಂದೂ ಹೇಳಬಹುದು. ಆದರೆ ಸಜ್ಜನರೆಂದು ಅನಿಸಿಕೊಳ್ಳುವವರು ಕನಿಷ್ಠ ಇಷ್ಟರಮಟ್ಟಿಗೆ ಮುಜುಗರವನ್ನು ಇಟ್ಟುಕೊಳ್ಳಬೇಕಾಗುತ್ತದೆ.
ಕಳೆದ ಐದು ವರ್ಷಗಳಲ್ಲಿ ಅಸಹ್ಯಕರವಾಗಿ ವಿಜೃಂಭಿಸತೊಡಗಿದ್ದ ಜಾತಿಯ ಆವುಟವನ್ನು ನೋಡಿದ ನಂತರ ಲಿಂಗಾಯತರು ಮಾತ್ರವಲ್ಲ ಎಲ್ಲ ಜಾತಿಗಳ ಮತದಾರರಲ್ಲಿ ಇಂತಹದ್ದೊಂದು ಮುಜುಗರ ಹುಟ್ಟಿಕೊಂಡದ್ದು ನಿಜ. ಇದನ್ನು ಮೀರುವ ಪ್ರಯತ್ನವನ್ನು ಮತದಾರರು ಮಾಡಿರುವುದು 2013ರ ಫಲಿತಾಂಶದಲ್ಲಿ ಸ್ಪಷ್ಟವಾಗಿ ಪ್ರತಿಫಲಿಸಿದೆ. ಈ ಬಾರಿ ಗೆದ್ದಿರುವ 50 ಲಿಂಗಾಯತ ಶಾಸಕರಲ್ಲಿ 27 ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದವರು. ಬಿಜೆಪಿಯ ಪಾಲು ಕೇವಲ ಹತ್ತು. ಲಿಂಗಾಯತ ಮತದಾರರನ್ನೇ ನಂಬಿ ಪಕ್ಷ ಕಟ್ಟಿದ ಬಿ.ಎಸ್.ಯಡಿಯೂರಪ್ಪನವರು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿದ್ದು ಕೇವಲ ಆರು ಲಿಂಗಾಯತ ಶಾಸಕರನ್ನು. ಜಾತಿ ಮೀರಿದ ಮತದಾನವನ್ನು ಇನ್ನಷ್ಟು ಸ್ಪಷ್ಟಪಡಿಸಿಕೊಳ್ಳಬೇಕಾದರೆ ರಾಜಕೀಯ ಪಕ್ಷಗಳು ಬಿಂಬಿಸಿದ್ದ ಮುಖ್ಯಮಂತ್ರಿ ಅಭ್ಯರ್ಥಿಗಳ ಜಾತಿಗಳನ್ನು ನೋಡಬೇಕು.
`ಲಿಂಗಾಯತ ಇಲ್ಲವೇ ಒಕ್ಕಲಿಗರ ನಾಯಕರ ನೇತೃತ್ವ ಇಲ್ಲದೆ ಇದ್ದರೆ ಅಧಿಕಾರಕ್ಕೆ ಬರಲು ಸಾಧ್ಯ ಇಲ್ಲ' ಎನ್ನುವ ಬಹುದೊಡ್ಡ `ಮಿಥ್' ಅನ್ನು ಕೂಡಾ ಈ ಚುನಾವಣೆ ಒಡೆದುಹಾಕಿದೆ. ಬಿಜೆಪಿ ಮತ್ತು ಕೆಜೆಪಿ ಕ್ರಮವಾಗಿ ಲಿಂಗಾಯತ ನಾಯಕರಾದ ಜಗದೀಶ ಶೆಟ್ಟರ್ ಮತ್ತು ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿಗಳಾಗಿ ಬಿಂಬಿಸಿದ್ದರೆ ಜೆಡಿ (ಎಸ್)ನ ಆಯ್ಕೆ ಎಚ್.ಡಿ.ಕುಮಾರಸ್ವಾಮಿ ಆಗಿದ್ದರು. ಕಾಂಗ್ರೆಸ್ ಪಕ್ಷ ತನ್ನ ಸಂಪ್ರದಾಯದಂತೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಇದ್ದರೂ ಓಟದಲ್ಲಿದ್ದವರು ಹಿಂದುಳಿದ ಜಾತಿಗೆ ಸೇರಿರುವ ಸಿದ್ದರಾಮಯ್ಯ ಮತ್ತು ದಲಿತರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜಿ.ಪರಮೇಶ್ವರ್ ಎನ್ನುವುದು ಮತದಾರರಿಗೆ ಗೊತ್ತಿತ್ತು. ಚುನಾವಣೆಯ ಮೊದಲು ಮಾತ್ರವಲ್ಲ ಫಲಿತಾಂಶದ ನಂತರ ಕೂಡಾ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳೆಂದು ಬಿಂಬಿಸಿಕೊಂಡವರಲ್ಲಿಯೂ ಲಿಂಗಾಯತ ಜಾತಿಗೆ ಸೇರಿರುವ ಗಂಭೀರ ಅಭ್ಯರ್ಥಿಗಳು ಇರಲಿಲ್ಲ ಎನ್ನುವುದನ್ನೂ ಗಮನಿಸಬೇಕಾಗುತ್ತದೆ. ಸಿದ್ದರಾಮಯ್ಯ ತಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮೊದಲ ದಿನದಿಂದಲೇ ಆತ್ಮವಂಚನೆ ಇಲ್ಲದೆ ಹೇಳಿಕೊಂಡು ಬಂದಿದ್ದರು. ಹೀಗಿದ್ದರೂ ಲಿಂಗಾಯತರನ್ನು ಮುಖ್ಯಮಂತ್ರಿ ಅಭ್ಯರ್ಥಿಗಳನ್ನಾಗಿ ಬಿಂಬಿಸಿದ್ದ ಬಿಜೆಪಿ ಮತ್ತು ಕೆಜೆಪಿ ಹಾಗೂ ಒಕ್ಕಲಿಗ ನಾಯಕನನ್ನು ಬಿಂಬಿಸಿದ್ದ ಜೆಡಿ (ಎಸ್) ಪಕ್ಷಗಳನ್ನು ರಾಜ್ಯದ ಜನತೆ ತಿರಸ್ಕರಿಸಿದ್ದು ಮಾತ್ರವಲ್ಲ ಕಾಂಗ್ರೆಸ್ ಪಕ್ಷವನ್ನು ಆರಿಸಿದ್ದನ್ನು ಐತಿಹಾಸಿಕ ಬದಲಾವಣೆ ಎನ್ನದೆ ಬೇರೇನು ಹೇಳಲು ಸಾಧ್ಯ?
ಕಳೆದ ಬಾರಿಯ ಫಲಿತಾಂಶಕ್ಕೆ ತದ್ವಿರುದ್ಧವಾಗಿ ಒಕ್ಕಲಿಗರನ್ನು ಹೊರತುಪಡಿಸಿ ಉಳಿದೆಲ್ಲ ಜಾತಿಗಳಿಗೆ ಸೇರಿದ ಅತೀ ಹೆಚ್ಚಿನ ಶಾಸಕರನ್ನು (ಪರಿಶಿಷ್ಟ ಜಾತಿ-17, ಪರಿಶಿಷ್ಟ ಪಂಗಡ-11, ಹಿಂದುಳಿದ ವರ್ಗ 27, ಮುಸ್ಲಿಮ್-9, ಬ್ರಾಹ್ಮಣ -5, ಕ್ರೈಸ್ತ-2, ಜೈನ-2 ) ಕಾಂಗ್ರೆಸ್ ಹೊಂದಿರುವುದು ಕೂಡಾ ವಿಶೇಷ. ಇದು ರಾಜ್ಯದ ಮತದಾರರು ಜಾತಿ ಮೀರಿದ ಪ್ರಜ್ಞಾವಂತಿಕೆಯಿಂದ ಪ್ರತಿನಿಧಿಗಳನ್ನು ಆಯ್ಕೆ ಮಾಡಿರುವುದಕ್ಕೆ ಸಾಕ್ಷಿ. ಉದಾಹರಣೆಗೆ ಉತ್ತರಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಲಿಂಗಾಯತ ಶಾಸಕರು ಹೆಚ್ಚಿನಸಂಖ್ಯೆಯಲ್ಲಿ ಆರಿಸಿಬರಲು ಲಿಂಗಾಯತ ಮತದಾರರಲ್ಲದೆ ಬೇರೆ ಜಾತಿಗಳ ಮತದಾರರೂ ಹೇಗೆ ಕಾರಣವೋ, ಅದೇ ರೀತಿ ಲಿಂಗಾಯತೇತರ ಶಾಸಕರು ಉಳಿದ ಪಕ್ಷಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿಬರಲಿಕ್ಕೆ ಅವರವರ ಜಾತಿಯ ಮತದಾರರಲ್ಲದೆ ಲಿಂಗಾಯತರೂ ಮತಹಾಕಿದ್ದು ಕಾರಣ. ರಾಜ್ಯದ ಮತದಾರರು ತಮ್ಮ ಜಾತಿಯವರನ್ನೇ ಆಯ್ಕೆ ಮಾಡುವಾಗಲೂ ಅಭ್ಯರ್ಥಿಯ ಅರ್ಹತೆ ಮತ್ತು ಅವರು ಪ್ರತಿನಿಧಿಸುವ ಪಕ್ಷವನ್ನು ಆಧಾರವಾಗಿಟ್ಟುಕೊಂಡಿರುವುದು ಫಲಿತಾಂಶದ ವಿಶ್ಲೇಷಣೆಯಿಂದ ಗೊತ್ತಾಗುತ್ತದೆ.
ಈ ಚುನಾವಣೆಯಲ್ಲಿ ರಾಜ್ಯದ ಮತದಾರರು ಜಾತಿಯನ್ನು ಮಾತ್ರವಲ್ಲ ದುಡ್ಡಿನ ಆಮಿಷವನ್ನು ಕೂಡಾ ಮೀರಲು ಪ್ರಯತ್ನ ಮಾಡಿದ್ದಾರೆ. ಹಿಂದಿನ ಚುನಾವಣೆಯಲ್ಲಿ ಹರಿದಿದ್ದ ದುಡ್ಡಿನ ಹೊಳೆಯಲ್ಲಿ ಮತದಾರರೂ ಕೊಚ್ಚಿಕೊಂಡು ಹೋಗಿದ್ದರು. ಫಲಿತಾಂಶ ಹೊರಬಿದ್ದ ನಂತರ ಪ್ರಾರಂಭವಾದ `ಆಪರೇಷನ್ ಕಮಲ'ಕ್ಕೆ ರಾಜಕಾರಣಿಗಳು ಮಾತ್ರವಲ್ಲ ಮತದಾರರೂ ಬಲಿಯಾಗಿದ್ದರು. ಪಕ್ಷಾಂತರಿ ಶಾಸಕರು ರಾಜೀನಾಮೆ ನೀಡಿ ಮಧ್ಯಂತರ ಚುನಾವಣೆ ಎದುರಿಸಲು ಹೊರಟ ಕಾರಣ ಪಕ್ಷಾಂತರ ನಿಷೇಧ ಕಾಯ್ದೆ ಕೂಡಾ ನಿಷ್ಪ್ರಯೋಜಕವಾಗಿತ್ತು. ಈ ಪಕ್ಷಾಂತರಿಗಳು ಎದುರಿಸಿದ ಮೊದಲ ಮಧ್ಯಂತರ ಚುನಾವಣೆಯಲ್ಲಿಯೇ ಮತದಾರರು ಸೋಲಿಸಿಬಿಟ್ಟಿದ್ದರೆ ರಾಜ್ಯದ ರಾಜಕಾರಣ ಈ ರೀತಿ ಅನೈತಿಕತೆಯ ಕೆಸರಲ್ಲಿ ಹೊರಳಾಡುತ್ತಿರಲಿಲ್ಲ. ಮತದಾರರ ಪ್ರತಿಕ್ರಿಯೆಯಿಂದ ಉತ್ತೇಜಿತರಾದ ಬಿಜೆಪಿ ನಾಯಕರು ಗಣಿಲೂಟಿಕೋರರ ದುಡ್ಡನ್ನುಬಳಸಿಕೊಂಡು `ಯಾರನ್ನಾದರೂ, ಯಾವುದನ್ನಾದರೂ ಖರೀದಿಸಿಬಿಡಬಹುದು' ಎಂಬ ತೀರ್ಮಾನಕ್ಕೆ ಬಂದುಬಿಟ್ಟಿದ್ದರು. ಇದರಿಂದಾಗಿಯೇ ಅಗತ್ಯ ಇಲ್ಲದಿದ್ದರೂ ಶಾಸಕರ `ಖರೀದಿ' ನಡೆದದ್ದು. ಕೆಲವೇ ಕೆಲವು ಮಂದಿ ಆಡುತ್ತಿರುವ ಈ ದುಡ್ಡಿನ ಆಟವನ್ನು ದೂರದಲ್ಲಿ ನಿಂತು ನೋಡುತ್ತಿದ್ದ ಜನ ಅಸಹಾಯಕರಾಗಿದ್ದರು. ಇದಕ್ಕೆ ಕೊನೆಯೇ ಇಲ್ಲವೇ ಎಂದು ಅವರ ಮನಸ್ಸು ರೋದಿಸುತ್ತಿತ್ತೋ ಏನೋ?.
ಆಗಲೇ ಬದಲಾವಣೆಯ ಬಿರುಗಾಳಿ ಬೀಸಲಾರಂಭಿಸಿದ್ದು. ಈಗಿನದ್ದು ಆಗಿನ ಬದಲಾವಣೆಯ ಮುಂದುವರಿದ ಭಾಗ. ಗಣಿಲೂಟಿ ಮಾಡಿದ ಆರೋಪ ಎದುರಿಸುತ್ತಿದ್ದ ಸಚಿವರು ಮಾತ್ರವಲ್ಲ ಸಾಕ್ಷಾತ್ ಮುಖ್ಯಮಂತ್ರಿಗಳೇ ಜೈಲಿಗೆ ಹೋದದ್ದು, ಅಧಿಕಾರವನ್ನು ಕಳೆದುಕೊಂಡದ್ದು... ಎಲ್ಲವೂ ನಡೆದುಹೋಯಿತು. ಇದರ ತಾರ್ಕಿಕ ಅಂತ್ಯ ಎಂಬಂತೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣವಾಗಿ ಮಣ್ಣುಮುಕ್ಕಿ ಬಿಟ್ಟಿದೆ. ಕೇವಲ ಐದು ವರ್ಷಗಳ ಕಿರುಅವಧಿಯಲ್ಲಿ ರಾಜ್ಯದ ಜನತೆ ರಾಜಕಾರಣದ ಈ ಏಳು-ಬೀಳುಗಳಿಗೆ ಸಾಕ್ಷಿಯಾಗಿದ್ದಾರೆ. `ತಪ್ಪು ಮಾಡಿದವರಿಗೆ ಶಿಕ್ಷೆ ಆಗಿಯೇ ಆಗುತ್ತದೆ' ಎಂಬ ಸಾಮಾನ್ಯ ಜನರ ಮುಗ್ಧ ನಂಬಿಕೆ ಹುಸಿಯಾಗಲಿಲ್ಲ. ರಾಜ್ಯದ ಪ್ರಜ್ಞಾವಂತ ಮತದಾರರು ಜಾತಿಯ ದೌರ್ಬಲ್ಯ, ದುಡ್ಡಿನ ಆಮಿಷವನ್ನು ಮೀರಿ ಹೊಸ ಕರ್ನಾಟಕವೊಂದನ್ನು ತೆರೆದಿಟ್ಟಿದ್ದಾರೆ. ಬದಲಾವಣೆಯ ಹೊಸ್ತಿಲಲ್ಲಿ ರಾಜ್ಯ ನಿಂತಿದೆ, ಅದೇ ದಾರಿಯಲ್ಲಿ ಅದನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಸಿದ್ದರಾಮಯ್ಯನವರ ಮೇಲಿದೆ.