Sunday, July 31, 2016

ನನಗೆ ಮಾಧ್ಯಮ ಕ್ಷೇತ್ರದಲ್ಲಿ ಯಾರು ರೋಲ್ ಮಾಡೆಲ್ ಅಂತ ಕೇಳಿದರೆ ಅದು ಬಾಬಾಸಾಹೇಬ್ ಅಂಬೇಡ್ಕರ್.

(ಬೆಂಗಳೂರಿನಲ್ಲಿ ಎಸ್‍.ಸಿ.-ಎಸ್.ಟಿ. ಸಂಪಾದಕರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿನ ಭಾಷಣದ ಬರಹ ರೂಪ)
-ಎನ್. ರವಿಕುಮಾರ್. ಶಿವಮೊಗ್ಗ
ನನಗೆ ಮಾಧ್ಯಮ ಕ್ಷೇತ್ರದಲ್ಲಿ ಯಾರು ರೋಲ್ ಮಾಡೆಲ್ ಅಂತ ಕೇಳಿದರೆ ಅದು ಬಾಬಾಸಾಹೇಬ್ ಅಂಬೇಡ್ಕರ್. ಇದನ್ನು ಬಹಳ ಸಂದರ್ಭಗಳಲ್ಲಿ ಹೇಳಿದ್ದೇನೆ ಮತ್ತೇ ಅದನ್ನೆ ಹೇಳುತ್ತೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ, ದಲಿತರ ನಾಯಕ, ಏನೆಲ್ಲಾ ಹೇಳುತ್ತಾರೆ. ಅದರ ಜೊತೆ ಅವರೊಬ್ಬ ಪತ್ರಕರ್ತರೂ ಆಗಿದ್ದರು ಎಂಬುದನ್ನು ನಾವು ಮರೆತಿದ್ದೇವೆ. ೧೯೨೦ ರಲ್ಲಿ ಮೂಕ ನಾಯಕ ಪತ್ರಿಕೆಯನ್ನು ಅವರು ಪ್ರಾರಂಭ ಮಾಡುತ್ತಾರೆ. ಅದರ ಎಡಿಟೋರಿಯಲ್ ಗಳ ಒಂದು ಪುಸ್ತಕ ಬಂದಿದೆ. ಅದನ್ನು ನಾನೇ ಧಾರವಾಡದಲ್ಲಿ ಬಿಡುಗಡೆ ಮಾಡಿದ್ದೆ. ಗಣೇಶ ಕದಂ ಅವರು ಈ ಪುಸ್ತಕವನ್ನು ಇಂಗ್ಲೀಷ್‍ ನಿಂದ ಕನ್ನಡಕ್ಕೆ ಅನುವಾದಿಸಿದ್ದಾರೆ. ಮೂಕನಾಯಕ ಪತ್ರಿಕೆಯ ಎಡಿಟೋರಿಯಲ್ ನ ಘೋಷವಾಕ್ಯ ಹೀಗಿದೆ:  “ ಹೀಗೇಕೆ ನಾನು ಸಂಕೋಚ ಪಡಬೇಕು. ಯಾವುದೇ ಹಿಂಜರಿಕೆಯಿಲ್ಲದೆ ನಾನು ಮಾತನಾಡುವೆ. ಮೂಕರ ನೋವುಗಳನ್ನು ಯಾರೂ ಅರಿಯರು, ಮಾತನಾಡಲು ಸಂಕೋಚ ಪಟ್ಟುಕೊಂಡರೆ ಏಳಿಗೆ ಸಾಧ್ಯವಿಲ್ಲ”. ೧೮೭೩ ರಲ್ಲಿ ಜ್ಯೋತಿ ಬಾಪುಲೆ ಅವರು ಸತ್ಯಶೋಧಕ ಸಮಾಜವನ್ನು ಸ್ಥಾಪನೆ ಮಾಡುತ್ತಾರೆ . ಅದರ ನಂತರ ೧೮೭೭ ರಲ್ಲಿ ಅವರು ’ದೀನಬಂಧು’ ಪತ್ರಿಕೆ ಯನ್ನು ಪ್ರಾರಂಭ ಮಾಡುತ್ತಾರೆ. ದಲಿತ ಪತ್ರಿಕೋದ್ಯಮದ ಇತಿಹಾಸ ಅಲ್ಲಿಂದ ಇದು ಪ್ರಾರಂಭವಾಗುತ್ತದೆ ಎಂಬ ಕಾರಣಕ್ಕಾಗಿ ಇದನ್ನು ನೆನೆಪಿಸಿಕೊಳ್ಳುತ್ತೇನೆ. ಅದರ ನಂತರ ಶಿವರಾಂ ಜನಾಬ್ ಕಾಂಬ್ಳೆ ’ಸೋಮವಂಶಕ್ಷತ್ರೀಯ’ ಪತ್ರಿಕೆಯನ್ನು ಪ್ರಾರಂಭ ಮಾಡ್ತಾರೆ.
            ೧೯೧೬ ಕೊಲಂಬಿಯಾ ವಿಶ್ವವಿದ್ಯಾನಿಲಯ, ಲಂಡನ್ ಸ್ಕೂಲ್ ಆಫ್ ಏಕಾನಮಿಕ್ಸ್ನಲ್ಲಿ ವ್ಯಾಸಂಗ ಮುಗಿಸಿ ಅಂಬೇಡ್ಕರ್ ಅವರು ವಾಪಾಸ್ ಬಂದ ಮೇಲೆ ’ಮೂಕನಾಯಕ’ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ದಲಿತರ ಬೆಳವಣಿಗೆಯ ಪ್ರಕ್ರಿಯೆಗೆ ಅನುಗುಣವಾಗಿ ಅಂಬೇಡ್ಕರ್ ಪ್ರಾರಂಭಿಸಿದ ಪತ್ರಿಕೆಗಳ ಹೆಸರಿವೆ.. ಮೊದಲನೇಯದು ಮೂಕನಾಯಕ, ಎರಡನೇಯದು ಬಹಿಷ್ಕೃತ ಭಾರತ ಮೂರನೇಯದು ಪ್ರಬುಧ್ಧ ಭಾರತ. ಅಂಬೇಡ್ಕರ್ ಅವರು ಒಬ್ಬ ಪತ್ರಕರ್ತರಾಗಿ ಸಾವಿರಾರು ಪುಟಗಳನ್ನು ಬರೆದಿದ್ದಾರೆ. ಬಹುಶಃ ಮಹಾತ್ಮ ಗಾಂಧಿಗೆ ಅವರೊಬ್ಬ ಒಳ್ಳೆಯ ಕಾಂಪಿಟೀಟರ್ . ಮಹಾತ್ಮ ಗಾಂಧೀಜಿ ಕೂಡ ಒಬ್ಬ ಪತ್ರಕರ್ತರಾಗಿದ್ದರು. ಅವರ ಹರಿಜನ ಪತ್ರಿಕೆ , ಯಂಗ್ ಇಂಡಿಯಾ ಪತ್ರಿಕಾಗಳನ್ನು ಸಂಪಾದಿಸುತ್ತಿದ್ದುದು ನಿಮಗೆ ಗೊತ್ತಿದೆ. ಆದರೆ ಹರಿಜನ ಪತ್ರಿಕೆ ಮತ್ತು ಯಂಗ್ ಇಂಡಿಯಾ ಪತ್ರಿಕೆ ಬಗ್ಗೆ  ನಡೆದಷ್ಟು ಚರ್ಚೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಾರಂಭ ಮಾಡಿದ ಪತ್ರಿಕೆಗಳ ಬಗ್ಗೆ ಆಗುತ್ತಿಲ್ಲ. ನನಗೆ ತಿಳಿದ ಮಟ್ಟಿಗೆ ’ಮೂಕನಾಯಕ’ದ ಬಹಳಷ್ಟು ಎಡಿಟೋರಿಯಲ್ ಗಳು ಸಂಕಲನ ರೂಪದಲ್ಲಿ ಹಿಂದಿ-ಮರಾಠಿ ಭಾಷೆಗಳಲ್ಲಿ ಬಂದಿದೆ. ಆದರೆ ಕನ್ನಡಕ್ಕೆ ಹೆಚ್ಚು ಬಂದಿಲ್ಲ. ಇದೀಗ ಸರ್ಕಾರ ಪ್ರಕಟಿಸಿರುವ ಅಂಬೇಡ್ಕರ್ ಅವರ ೨೫ ಸಂಪುಟಗಳಲ್ಲೂ ಈ ಪತ್ರಿಕೆಗಳ ಉಲ್ಲೇಖ ನನಗೆ  ಕಾಣಲಿಲ್ಲ. ಮೂಕ ನಾಯಕದಲ್ಲಿನ ಸಂಪಾದಕೀಯಗಳನ್ನು ಓದುತ್ತಾ ಹೋದರೆ ಆ ಕಾಲದ ರಾಜಕೀಯ, ಸಾಮಾಜಿಕ ಇತಿಹಾಸದ ದರ್ಶನ ಕೂಡ ನಮಗೆ ಆಗುತ್ತದೆ.
          ೧೯೧೬ ರಲ್ಲಿ ಅವರು ಅಂಬೇಡ್ಕರ್ ಅವರು ಕೊಲಂಬಿಯ ವಿಶ್ವವಿದ್ಯಾನಿಲಯದಿಮದ ವ್ಯಾಸಾಂಗ ಮುಗಿಸಿದಾಗ ಅವರಿಗೆ ಒಂದು ಬೀಳ್ಕೋಡುಗೆ ಸಮಾರಂಭವನ್ನು ಏರ್ಪಡಿಸಿದ್ದರು. ಆಗ ಆ ವಿದ್ಯಾರ್ಥಿಗಳು ಅಂಬೇಡ್ಕರ್ ಅವರಿಗೆ ಹೇಳ್ತಾರೆ. ’ನೀನು ಅಮೆರಿಕಾದ ಕಪ್ಪುಜನರ ಮುಕ್ತಿಗಾಗಿ ಶ್ರಮಿಸಿದ BOOKER t Washington’ ಆಗಬೇಕು ಎಂದು ಆಗ ಸಹಪಾಠಿಗಳು ಹೇಳಿದ್ದರಂತೆ. ಬಹುಶಃ ಅಂಬೇಡ್ಕರ್ ಅವರ ಮನಸ್ಸಿನಲ್ಲಿ ಇದೇ ಇತ್ತೇನೋ.....ಗೊತ್ತಿಲ್ಲ, ಪತ್ರಿಕೆ ಸಾಮಾಜಿಕ ಪರಿವರ್ತನೆಯ ಒಂದು ಸಾಧನ ಎಂಬುದನ್ನು ಅವರು ಅದಾಗಲೆ ತಿಳಿದುಕೊಂಡಿದ್ದರು. ಅದಕ್ಕಾಗಿ ಯೇ ಅವರು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಷ್ಟೊಂದು ಮಹತ್ವಕೊಟ್ಟರು ಎಂದು ನನಗನಿಸುತ್ತಿದೆ.
ಪ್ರಜಾವಾಣಿ ದಲಿತ ಸಂಚಿಕೆಯೊಂದನ್ನು ತಂದಾಗ ರಾಜ್ಯದಲ್ಲಿಯೇ ಏಕೆ ದೇಶದಲ್ಲಿಯೇ ಸಂಚಲನ ಆಗಿತ್ತು. ಆ ಕೆಲಸದಲ್ಲಿ ಪಾಲ್ಗೊಂಡ ನನಗೆ ಹೆಮ್ಮೆ ಇದೆ. ಆ ಪ್ರಯತ್ನಕ್ಕೆ ಪ್ರೇರಣೆಯಾದ ಕಾರಣ ಕುತೂಹಲಕಾರಿಯಾಗಿದೆ. 2000ನೇ ವರ್ಷದಲ್ಲಿ ರಾಬಿನ್ ಜಾಫ್ರಿ ಎಂಬ ಪತ್ರಕರ್ತ ಭಾರತದ ಮಾಧ್ಯಮ ಕ್ರಾಂತಿ ಎಂಬ ಪುಸ್ತಕ ಬರೆದು ಭಾರತದ ಮಾಧ್ಯಮ ಕ್ಷೇತ್ರದಲ್ಲಿ ದಲಿತರ ಪ್ರಾತಿನಿಧ್ಯ ನಗಣ್ಯವೆನಿಸುವಷ್ಟು ಕಡಿಮೆ ಎಂದು ಎಚ್ಚರಿಸಿದ್ದರು. ಅದಕ್ಕಿಂತ ಮೊದಲು ಅಂದರೆ 1996ರಲ್ಲಿಯೇ  ವಾಷಿಂಗ್ ಟನ್ ಪೋಸ್ಟ್ ನ ಭಾರತೀಯ ವರದಿಗಾರ ಕೆನ್ನೆತ್ ಜೆ.ಕೂಪರ್ ಭಾರತೀಯ ಮಾಧ್ಯಮದಲ್ಲಿ ದಲಿತರನ್ನು ಹುಡುಕುವ ಪ್ರಯತ್ನ ನಡೆಸಿದ್ದ. ದೆಹಲಿಯಲ್ಲಿ ರಾಬಿನ್ ಜಾಪ್ರಿಯವರ ಭಾಷಣವನ್ನು ಕೇಳಿದ ಪ್ರಜಾವಾಣಿ ಸಂಪಾದಕರು ದಲಿತರೇ ಒಂದು ದಿನದ ಮಟ್ಟಿಗೆ ಸಂಪಾದಕರಾಗಿ ದಲಿತ ಸಂಚಿಕೆಯನ್ನು ರೂಪಿಸುವ ಯೋಜನೆ ಹಾಕಿದ್ದರು.
ರಾಬಿನ್ ಜಾಫ್ರಿ , ಕೆನ್ನೆತ್ ಕೂಪರ ಮೊದಲಾದವರ ಕಾಲದಲ್ಲಿಯೇ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದಲಿತ ಸಮುದಾಯಕ್ಕೆ ಸೇರಿರುವ ಸಂಪಾದಕರಾಗಲಿ ನೀತಿ-ನಿರ್ಧಾರ ಗಳನ್ನು ಕೈಗೊಳ್ಳುವಂತಹ ಸ್ಥಾನಗಳಲ್ಲಿ ಕೂತವರಲ್ಲಿ ಯಾರೂ ದಲಿತರಿಲ್ಲ ಎನ್ನುವುದು ಈ ಸಮೀಕ್ಷೆಯಲ್ಲಿ ವ್ಯಕ್ತವಾಗುತ್ತದೆ. ಮಾಧ್ಯಮಗಳಲ್ಲಿ ದಲಿತರಿಗೆ ಪ್ರಾತಿನಿಧ್ಯ ಕೊಡಬೇಕು ಎಂದಾಗ “ ಓ... ದಲಿತರಿಗೆ ಪತ್ರಿಕೋದ್ಯಮದಲ್ಲಿ ಕೂಡಾ ಮೀಸಲಾತಿ ಬೇಕಾ ಎಂದು ನನ್ನನ್ನು ಬಹಳ ಮಂದಿ ಕೇಳಿದವರಿದ್ದಾರೆ. ಆದರೆ ಒಂದು ಆತ್ಮಾವಲೋಕನ ನಡೆಯಬೇಕಲ್ಲ. ರಾಬಿನ್ ಜಾಫ್ರಿ, ಕೆನ್ನೆತ್ ಕೂಪರ್ ಮೊದಲಾದ ಪತ್ರಕರ್ತ ಒಂದು ಆತ್ಮಾವಲೋಕನವನ್ನು ನಡೆಸುತ್ತಾರೆ. ಇವತ್ತು ಕರ್ನಾಕಟದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬಗ್ಗೆ ಮಾಧ್ಯಮ ಯಾವ ರೀತಿಯಲ್ಲಿ ವರ್ತಿಸುತ್ತಿದೆಯೋ, ಅದೇ ರೀತಿಯ ವರ್ತನೆಗಳನ್ನು ಆ ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಬಿಎಸ್ಪಿ ಬಗ್ಗೆ ಮಾಧ್ಯಮ ವ್ಯಕ್ತಪಡಿಸುತ್ತಿತ್ತು.
            ಈಗಲೂ ಕನ್ನಡ ಮಾಧ್ಯಮಗಳಲ್ಲಿ ದಲಿತರಿಗೆ ಅಗತ್ಯಪ್ರಮಾಣದಷ್ಟು ಪ್ರಾತಿನಿಧ್ಯ ಇಲ್ಲ. ನಮ್ಮಲ್ಲಿರೋ ಹಿರಿಯ ಪತ್ರಕರ್ತರೆಂದರೆ ಇಬ್ಬರು. ಒಬ್ಬರು ಶಿವಾಜಿಗಣೇಶನ್, ಇನ್ನೊಬ್ಬರು ಡಿ.ಉಮಾಪತಿ. ಶಿವಾಜಿ ಗಣೇಶನ್ ಅವರು ಸಹಾಯಕ ಸಂಪಾದಕರಾಗಿ ನಿವೃತ್ತಿಯಾಗಿದ್ದಾರೆ. ಇನ್ನೂ ಉಪಮಾಪತಿ ಅವರು ಸಂಪಾದಕರಾಗಬೇಕೆಂಬುದು ನಮ್ಮೆಲ್ಲರ ಆಶಯ. ಆಗ್ತಾರೋ ಇಲ್ಲವೆ ಇಲ್ಲವೋ ಗೊತ್ತಿಲ್ಲ. ಯಾಕೆ ಆಗುತ್ತಿಲ್ಲ? ನೀವು ಇವತ್ತಿನ ೧೦೦ ಪ್ರಾಮಿನೆಂಟ್ ಕವಿಗಳ ಪಟ್ಟಿ ಮಾಡಿದರೆ ಅದರಲ್ಲಿ ಮೆಜಾರಿಟಿ ದಲಿತ ಕವಿಗಳಿರುತ್ತಾರೆ. ನೂರು ಕನ್ನಡದ ಪ್ರಮುಖ  ಕವಿಗಳ ಪಟ್ಟಿ ಮಾಡಿದರೆ ಅದರಲ್ಲಿ ಮೆಜಾರಿಟಿ ದಲಿತ ಕವಿಗಳಾಗಿರುತ್ತಾರೆ.ಆದರೆ ನೀವು ನೂರು ಪ್ರಾಮಿನೆಂಟ್ ಪತ್ರಕರ್ತರನ್ನು ಪಟ್ಟಿ ಮಾಡಿದರೆ ಅದರಲ್ಲಿ ಒಂದು ಕೈಯಿಂದ ಎಣಿಸುವಷ್ಟು ಪತ್ರಕರ್ತರು ಇರುವುದಿಲ್ಲ ಏಕೆ? ಪತ್ರಕರ್ತರಿಗೆ ಮುಖ್ಯವಾಗಿ ಬೇಕಾಗಿರುವುದು ಬರವಣಿಗೆಯ ಕಲೆ. ಅದೇನು ರಾಕೆಟ್ ಸೈನ್ಸ್ ಅಲ್ಲ. ಹಾಗಾದರೆ ಯಾಕೆ ದಲಿತರಿಲ್ಲ? ಇವತ್ತು  ದಲಿತ ಪತ್ರಕರ್ತರು ಸಣ್ಣ ಪತ್ರಿಕೆಗಳಲ್ಲಿ ಸೇರಿಕೊಂಡಿದ್ದಾರೆ. ನಮ್ಮ ರವಿಕುಮಾರ್ (ಎನ್. ರವಿಕುಮಾರ್ ಸಂಪಾದಕರು ’ಶಿವಮೊಗ್ಗ ಟೆಲೆಕ್ಸ್’ಕನ್ನಡ ದಿನಪತ್ರಿಕೆ) ಅಂತಹವರು ಯಾವುದೇ ಮುಖ್ಯವಾಹಿನಿಯ ಪತ್ರಿಕೆಯಲ್ಲಿ ಕೆಲಸ ಮಾಡುವ ಅರ್ಹತೆ ಉಳ್ಳವರು. ನನಗೆ ಸ್ನೇಹಿತರು ಅವರು ನನಗೆ ಗೊತ್ತು ಅವರ ಮಾತು, ಬರವಣಿಗೆ ನೋಡಿದ್ದೇನೆ. ಆದರೆ ಮುಖ್ಯವಾಹಿನಿ ಪತ್ರಿಕೆಗೆ ಬರಲು ಅವರಿಗೆ ಆಗುತ್ತಿಲ್ಲ. ನನಗೆ ಇಂತಹ ಐವತ್ತು ಮಂದಿ ದಲಿತ ಪತ್ರಕರ್ತರುಗಳು ಗೊತ್ತಿದ್ದಾರೆ. ಆದರೆ ಅವರು ಮುಖ್ಯವಾಹಿನಿ ಪತ್ರಿಕೆಗಳಿಗೆ ಬರಲು ಆಗುತ್ತಿಲ್ಲ ಯಾಕೇ?
ನೀವು ’ಯಾಕೆ?’ ಅನ್ನೋದನ್ನು ತಿಳಿದುಕೊಳ್ಳಬೇಕಾದರೆ ೧೯೭೦ ರ ದಶಕದಲ್ಲಿ ಅಮೇರಿಕಾದ ಪರಿಸ್ಥಿತಿಯನ್ನು ನೋಡಬೇಕು. ೧೯೭೮ರಲ್ಲಿ  ಅಮೆರಿಕನ್ ಸೊಸೈಟಿ ಆಫ್ ನ್ಯೂಸ್ ಎಡಿಟರ್ಸ್ ಎಂಬ ಸಂಸ್ಥೆಯೊಂದು ಅಮೆರಿಕಾದಲ್ಲಿ ಮಾಧ್ಯಮದಲ್ಲಿರುವ ಕಪ್ಪು ಜನಾಂಗದ ಪ್ರಾತಿನಿಧ್ಯದ ಬಗ್ಗೆ ಸಮೀಕ್ಷೆ ನಡೆಸಿತ್ತು. ಆ ದೇಶದ ಜನಸಂಖ್ಯೆಯಲ್ಲಿ ಶೇಕಡಾ 36ರಷ್ಟು ಕಪ್ಪು ಜನಾಂಗದವರಿದ್ದರೂ ಮಾಧ್ಯಮ ಕ್ಷೇತ್ರದಲ್ಲಿ ಅವರ ಪ್ರಾತಿನಿಧ್ಯ ಕೇವಲ ಶೇಕಡಾ ನಾಲ್ಕು ಆಗಿತ್ತು. ಯಾಕೆ ಹೀಗಾಗಿದೆ ಎಂದು ಅವಲೋಕನ ಮಾಡಿ ಅವರು ಸುಮ್ಮನೆ ಇರೋದಿಲ್ಲ. ಇದಕ್ಕಾಗಿ ಒಂದು ಯೋಜನೆಯನ್ನು ರೂಪಿಸುತ್ತಾರೆ. 2000ದ ಹೊತ್ತಿಗೆ ಮಾಧ್ಯಮದಲ್ಲಿ ಕಪ್ಪುಜನಾಂಗದ ಪ್ರಾತಿನಿಧ್ಯ ಕನಿಷ್ಟ ಶೇಕಡಾ 20 ಆಗಬೇಕೆಂದು ಅವರು ನಿರ್ಧರಿಸುತ್ತಾರೆ. ಇದಕ್ಕಾಗಿ ಕಪ್ಪುಜನಾಂಗದ ವಿದ್ಯಾರ್ಥಿಗಳಿಗಾಗಿ ಮಾಧ್ಯಮ ಕಚೇರಿಗಳಲ್ಲಿ ತರಬೇತಿ ಶಿಬಿರ, ತಾರತಮ್ಯ ನೀತಿ ನಿವಾರಣೆಗೆ ಕ್ರಮ,ವಿಶೇಷ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತವೆ
೨೦೧೦ಕ್ಕೆ ಮತ್ತೆ ಅವರು ಸರ್ವೆ ಮಾಡುವಾಗ ಕರಿಯರಿಗೆ ಶೇ.೧೪ ಪ್ರಾತಿನಿಧ್ಯ ಇರುತ್ತದೆ. ಈಗ ಅವರು ೨೦೨೦ಕ್ಕೆ ಟಾರ್ಗೇಟ್ ಹಾಕಿಕೊಂಡಿದ್ದಾರೆ. ಇದು ಭಾರತದ ಪತ್ರಿಕೋದ್ಯಮದಲ್ಲಿ ದಲಿತರ ಪಾಲ್ಗೊಳ್ಳುವಿಕೆಗೆನೆರವಾಗುವಂತಹ ಒಳ್ಳೆಯ ಮಾಡೆಲ್ ಎಂದು ಅನಿಸುತ್ತದೆ. ಈ ಉದ್ದೇಶದಿಂದಲೇ ಭಾರತದ ಯಾವ ಯಾವ ಪತ್ರಿಕೆಗಳಲ್ಲಿ ದಲಿತರ ಪ್ರಾತಿನಿಧ್ಯ ಎಷ್ಟೆಷ್ಟು ಪ್ರಮಾಣದಲ್ಲಿದೆ ಎಂದು ಸರ್ವೇ ನಡೆಯಬೇಕಾಗಿದೆ. ಕರ್ನಾಟಕದಲ್ಲೂ ಇಂತಹ ಸರ್ವೇ ನಡೆಯಬೇಕು.  ಮಾಧ್ಯಮಗಳಲ್ಲಿ (ಎಲೆಕ್ಟ್ರಾನಿಕ್, ಮುದ್ರಣ ಮತ್ತು ರೇಡಿಯೋ ಸೇರಿ) ಯಾವ ಸ್ಥಾನಗಳಲ್ಲಿ ದಲಿತರಿದ್ದಾರೆ ಮತ್ತು ಇಲ್ಲದಿದ್ದರೆ ಯಾಕೆ ಇಲ್ಲ.? ಅದಕ್ಕೆ ಪರಿಹಾರವೇನು? ಅನ್ನೋದರ ಬಗ್ಗೆ ಈ ಸಮೀಕ್ಷೆ  ನಡಯಬೇಕು.
          ದಲಿತರಿಗೊಂದು  ಉದ್ಯೋಗ ಕೊಡಬೇಕೆಂದು ಪ್ರಾತಿನಿಧ್ಯ ಕೇಳುತ್ತಿಲ್ಲ. ಇದು ಬಹಳ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು. ದಲಿತರಿಗೆ ಪತ್ರಿಕೆಯಲ್ಲಿ ಪ್ರಾತಿನಿಧ್ಯ ಕೊಟ್ಟಕೂಡಲೆ ದಲಿತರಿಗೊಂದಿಷ್ಟು ಉದ್ಯೋಗ ಸಿಗುತ್ತೇ ಅಂತಲ್ಲ. ನನ್ನ ಉದ್ದೇಶ ಅದಲ್ಲ, ಒಂದು ಪತ್ರಿಕೆ ಪರಿಪೂರ್ಣ ಅನಿಸಬೇಕಾದರೆ ಎಲ್ಲಾ ಸಮುದಾಯದ ಅನುಭವ ಲೋಕಗಳು ಅದರಲ್ಲಿ ವ್ಯಕ್ತವಾಗಬೇಕು. ಇಲ್ಲದಿದ್ದರೆ ಅದು ಪರಿಪೂರ್ಣ ಮಾಧ್ಯಮ ವಾಗಲಾರದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಎಲ್ಲಾ ಅನುಭವ ಲೋಕಗಳು ಬರಬೇಕಾದರೆ ಆ ಅನುಭವ ಲೋಕಗಳಿರುವ ವಿಭಿನ್ನ ಸಮುದಾಯದ ಪ್ರಾತಿನಿಧ್ಯ ಮಾಧ್ಯಮ ಲೋಕದಲ್ಲಿರಬೇಕು. ಇಲ್ಲದಿದ್ದರೆ ಅದು ಅರ್ಥವಾಗುವುದಿಲ್ಲ.
ಈ ದೇಶದಲ್ಲಿ ೧೬ ನಿಮಿಷಗಳಿಗೊಮ್ಮೆ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ ಪ್ರತಿದಿನ ನಾಲ್ವರು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತೆ, ಪ್ರತಿವಾರ ೧೬ ದಲಿತರ ಕಗ್ಗೊಲೆ ನಡೆಯುತ್ತಿದೆ. ನ್ಯಾನಷನಲ್ ಕ್ರೈಂ ಬ್ಯೂರೋ ಅಂಕಿಅಂಶಗಳನ್ನು ನೋಡಿದ್ರೆ ಗೊತ್ತಾಗುತ್ತದೆ. ಆದರೆ ನಿರ್ಭಯ ಅತ್ಯಾಚಾರ ದೇಶಾದ್ಯಂತ ಆದಾಗ ಅದೇ ವರ್ಷ ೧೨೭೦ ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು. ಈ ದೇಶದಲ್ಲಿ ಅದು ಸುದ್ದಿಯಾಗಿತ್ತಾ? ನಿರ್ಭಯ ಅತ್ಯಾಚಾರ ನಡೆದ ಒಂದು ವಾರದಲ್ಲೆ ಹರಿಯಾಣದಲ್ಲಿ ಇಬ್ಬರು ದಲಿತ ಮಹಿಳೆಯರ ಮೇಲೆ ಅತ್ಯಾಚಾರ ನಡೆಯಿತು. ಅದು ಎಲ್ಲಿ ವರದಿಯಾಯಿತು? ಇಷ್ಟೊಂದು ಸಂಖ್ಯೆಯಲ್ಲಿ ದೌರ್ಜನ್ಯಗಳು ನಡೆದಾಗ ಅದು ಏಕೆ ವರದಿಯಾಗಲಿಲ್ಲ? ಈ ಕಾರಣಕ್ಕಾಗಿಯೇ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರ್ಗದವರು ಮಾಧ್ಯಮ ಕ್ಷೇತ್ರಕ್ಕೆ ಬರಬೇಕು. ಏಕೆಂದರೆ ಅವರಿಗೊಂದು ಅನುಭವ ಲೋಕವಿದೆ. ಉದಾಹರಣೆಗೆ : ಕಂಬಾಲಪಲ್ಲಿ ಯಂತಹ ಘಟನೆ ಒಬ್ಬ ಸಾಮಾನ್ಯ ಪತ್ರಕರ್ತನಿಗೆ ಸುದ್ದಿ ಅಷ್ಟೇ. ಅವನು ಅಲ್ಲಿ ಹೋಗಿ ಘಟನೆಯನ್ನು ವೈಭವೀಕರಿಸುತ್ತಾನೆ. ರಕ್ತದೋಕುಳಿ ಹರಿದಿತ್ತು, ರುಂಡ, ಮುಂಡಗಳು ಉರುಳಾಡಿದ್ದವು, ಕಣ್ಣೀರ ಧಾರೆ ಹರಿದಿತ್ತು ಎಂದೆಲ್ಲ ಅಲ್ಲಿಗೆ ಹೋಗಿ ವರದಿ ಮಾಡಿರುತ್ತಾನೆ.
ಆದರೆ, ಒಬ್ಬ ದಲಿತ ವರದಿ ಮಾಡಲು ಹೋದರೆ ಅಂತಹದ್ದೊಂದು ಘಟನೆಗೆ ಕಾರಣ ಏನು ಎನ್ನುವುದನ್ನು ವಿವರಿಸುತ್ತಾ ಹೋಗುತ್ತಾನೆ. ಕಂಬಾಲಪಲ್ಲಿ ಎಂಬುದು ರಾತ್ರಿ ಹಗಲಾಗುವುದರೊಳಗೆ ನಡೆದ ಘಟನೆಯಲ್ಲ, ಅದಕ್ಕೊಂದು ಇತಿಹಾಸವಿದೆ, ಆ ಇತಿಹಾಸದ ಕಾರಣಕ್ಕಾಗಿಯೇ ಕಂಬಾಲಪಲ್ಲಿ  ನಡೆದಿದೆ.. ಈ ದೇಶದಲ್ಲಿ ಇಂತಹ ದೌರ್ಜನ್ಯಗಳಿಗೆ ಒಂದು ಇತಿಹಾಸವಿದೆ. ಒಂದು ಕೋಮುಗಲಭೆಯನ್ನು ಒಬ್ಬ ಮುಸ್ಲೀಂ ಪತ್ರಕರ್ತ ವರದಿ ಮಾಡುವಾಗಲೂ ಈ ವ್ಯತ್ಯಾಸವನ್ನು ಕಾಣಬಹುದು. ಇಂತಹ ಘಟನೆಗಳನ್ನು ವೈಭವಿಕರೀಸದೆ, ರೋಚಕತೆಯ ನ್ನು ತುಂಬದೆ ತನ್ನ ಅನುಭವದೊಂದಿಗೆ ವರದಿಮಾಡುತ್ತಾನೆ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ’ಮೂಕನಾಯಕ’ ಪತ್ರಿಕೆಯನ್ನು ಯಾಕೆ ಮಾಡಬೇಕಾಯಿತೆಂದರೆ ಆ ಕಾಲದಲ್ಲಿ ಬೇರೆ ಪತ್ರಿಕೆಗಳಲ್ಲಿ ದಲಿತರ ಧ್ವನಿ ಅವರಿಗೆ ಕಾಣಲಿಲ್ಲ. ಎಲ್ಲರೂ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಕೊಂಡಿದ್ದಾಗ  ಮೊದಲ ಬಾರಿಗೆ ಅದಕ್ಕೆ ರೆಬೆಲ್ ಆಗಿ ತಮ್ಮ ಅಭಿಪ್ರಾಯವನ್ನು ಮಂಡಿಸಿದವರು ಅಂಬೇಡ್ಕರ್. ರಾಜಕೀಯ ಸ್ವಾತಂತ್ರ್ಯಕ್ಕಿಂತ ಸಾಮಾಜಿಕ ಸ್ವಾತಂತ್ರ್ಯ ಬರಬೇಕು ಎಂದು ಗಟ್ಟಿ ಧ್ವನಿಯಲ್ಲಿ ಹೇಳಿದವರು ಅವರು. ಆಗ ನಾವು ಯಾರೂ ಕಿವಿಗೊಡಲಿಲ್ಲ. ಅದರ ಪರಿಣಾಮ ನಾವು ಈಗ ಅನುಭವಿಸುತ್ತಿದ್ದೇವೆ. ರಾಜಕೀಯ ಸ್ವಾತಂತ್ರ್ಯ ಎಂಬುದು ಈಗ Farce (ಪ್ರಹಸನ) ಆಗಿಬಿಟ್ಟಿದೆ. ಇವತ್ತು ಏಕೆಂದರೆ ಆರ್ಥಿಕ ಸ್ವಾತಂತ್ರ್ಯವಿಲ್ಲದೆ, ಸಾಮಾಜಿಕ ಸ್ವಾತಂತ್ರ್ಯವಿಲ್ಲದೆ ರಾಜಕೀಯ ಸ್ವಾತಂತ್ರ್ಯದ ಗತಿ ಏನಾಗಬಹುದು ಎಂಬುದನ್ನು ಆ ಕಾಲದಲ್ಲೆ ಅಂಬೇಡ್ಕರ್ ಅವರು ಒಬ್ಬ ದೊಡ್ಡ ದಾರ್ಶನಿಕನಂತೆ ಹೇಳಿದ್ದರು. ಆ ದನಿ ಆಗ ಯಾರಿಗೂ ಕೇಳಲಿಲ್ಲ. ’ಒಂದು ಮತ ಕ್ಕೆ ಒಂದು ಮೌಲ್ಯ’ ಅಂತ ಹೇಳಿದ್ದು ಆಗ ಯಾರಿಗೂ ಅರ್ಥ ಆಗಲಿಲ್ಲ ಇವತ್ತು ಗೊತ್ತಾಗುತ್ತಿದೆ. ಅದಾನಿ, ಅಂಬಾನಿ ಮತಕ್ಕೂ, ಬಡಬೋರೆಗೌಡನ ಒಂದು ಮತ್ತಕ್ಕೂ ನೀವು ಹೋಲಿಕೆ ಮಾಡಲಿಕ್ಕೆ ಸಾಧ್ಯವಿಲ್ಲ. ಇವತ್ತು ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಕಾರ್ಪೋರೇಟ್ ಪತ್ರಿಕೋದ್ಯಮ ಪ್ರವೇಶವಾಗಿದೆ. ಈ ದೇಶದಲ್ಲಿ ೮೨ ಸಾವಿರ ಪತ್ರಿಕೆಗಳಿವೆ, ಸುಮಾರು ೧೨೦ ಸುದ್ದಿ ಟಿ.ವಿ ಚಾನಲ್‌ಗಳಿವೆ. ೧೨೦೦ ರೇಡಿಯೋಗಳಿವೆ. ಇಷ್ಟು ದೊಡ್ಡ ಮಾಧ್ಯಮ ಸಮೂಹದ ಮಾಲೀಕತ್ವ ಕೇವಲ ನೂರು ಮಂದಿ ಕೈಯಲ್ಲಿದೆ.
          ಇವತ್ತಿನ ಮಾಧ್ಯಮ ಕ್ಷೇತ್ರಕ್ಕೆ , ಪತ್ರಿಕೆಗಳಿಗೆ , ಚಾನಲ್‌ಗಳಿಗೆ ಓದುಗರು ಬೇಕಾಗಿಲ್ಲ. ಅವರಿಗೆ Potential buyers ಗಳು ಬೇಕಾಗಿದ್ದಾರೆ. ಅವರ ಪತ್ರಿಕೆಗಳಲ್ಲಿ, ಚಾನಲ್ ಗಳಲ್ಲಿ ಜಾಹೀರಾತು ಏನು ಬರುತ್ತೇ .ಟಿವಿ, ಫ್ರೀಡ್ಜ್ , ಬಟ್ಟೆ ಮತ್ತೊಂದು... ಅವುಗಳನ್ನು ಕೊಳ್ಳಲಿಕ್ಕೆ ಸಾಮರ್ಥ್ಯವಿರುವ ಓದುಗರು ಬೇಕಾಗಿದ್ದಾರೆ. ಅದರ ಅರ್ಥ ಅವರ Potential buyers ಹುಡುಕಾಟದಲ್ಲಿ ಇದ್ದಾರೆ ವಿನಃ, ಒಬ್ಬ ಸಾಮಾನ್ಯ ಓದುಗನ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏಕೆಂದರೆ ಇವತ್ತು ಜಾಹೀರಾತು ಇಲ್ಲದೆ ಪತ್ರಿಕೆಗಳನ್ನು, ಚಾನಲ್ ಗಳನ್ನು ನಡಸಲಿಕ್ಕೆ ಸಾಧ್ಯವಿಲ್ಲ. ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದ ಬಹಳ ನೇರ ನುಡಿಯ ಮಾರ್ಕೇಂಡೇಯ ಕಾಟ್ಜು ಅವರು ಒಂದು ಮಾತನ್ನು ಹೇಳಿದ್ದರು. ಐಶ್ವರ್ಯ ರೈಗೆ ಮದುವೆ ಆದರೆ , ಗಂಡನ ಜೊತೆ ಜಗಳ ಆದ್ರೆ, ಅತ್ತೆ ಮನೆಯನ್ನು ಬಿಟ್ಟು ಬಂದ್ರೆ, ಅದು ಮೊದಲ ಪುಟದ ದೊಡ್ಡ ಸುದ್ದಿಯಾಗುತ್ತೆ. ನಿಮ್ಮ ಚಾನಲ್ ಗಳಲ್ಲಿ ಬ್ರೇಕಿಂಗ್ ನ್ಯೂಸ್ ಆಗುತ್ತೆ. ಆದರೆ ಯಾವುದೋ ತಾಯಿಯ ಬಡ ಮಗು ಅಪೌಷ್ಠಿಕತೆ ಯಿಂದ ಸತ್ತರೆ u will just bury that news inside the page ಯಾಕ ಹೀಗೆ ಅಂತ ಅವರು ಕೇಳಿದ್ರು .
ಏಕೆಂದರೆ ಅವರು ಪತ್ರಕರ್ತರಲ್ಲ, ಜಡ್ಜ್. ಅವರಿಗೆ ತೀರ್ಪು ಕೊಟ್ಟು ಗೊತ್ತಷ್ಟೇ, ಆದರೆ ನಾನೊಬ್ಬ ಪತ್ರಕರ್ತ. ನನಗೆ ಕಾರಣ ಗೊತ್ತಿದೆ. ಐಶ್ವರ್ಯ ರೈ ಅತ್ತದ್ದು, ನಕ್ಕಿದ್ದು,ಜಗಳ ಮಾಡಿದ್ದು ಎಲ್ಲಾ ವರದಿಯಾದರೆ ಐಶ್ವರ್ಯ ರೈ 25-30 ಪ್ರೊಡೆಕ್ಟ್ ಗಳಿಗೆ ಮಾಡೆಲ್ -ಬ್ರಾಂಡ್ ಅಂಬಾಸಿಡರ್. ಅದೇ ರೀತಿ ಸಚಿನ್ ತೆಂಡೋಲ್ಕರ್ , ವಿರಾಟ್ ಕೋಹ್ಲಿ, ಧೋನಿ ಅವರೆಲ್ಲಾ ಮಾಧ್ಯಮಗಳಲ್ಲಿ ಕಾಣಿಸಿಕೊಳ್ತನೇ ಇರಬೇಕು. ಅವರು ಕಾಣಿಸಿಕೊಂಡರೆ ಅವರು ಮಾಡೆಲ್ ಆಗಿರೋ ವಸ್ತುಗಳು ಓದುಗನ ನೆನಪಿಗೆ ಬರುತ್ತವೆ. ಇದು ’ಟ್ರಿಕ್. ಒಂದು ಬಡ ತಾಯಿಯ ಮಗು ಅಪೌಷ್ಠಿಕತೆಯಿಂದ ಸತ್ತದ್ದನ್ನು ಮೊದಲ ಪುಟದಲ್ಲಿ ಪ್ರಕಟಿಸಿದರೆ ಜನ ಏನಂದು ಕೊಳ್ಳುತ್ತಾರೆ, ಬೆಳಗ್ಗೇನೆ ಇದನ್ನು ಓದಬೇಕಾ? ಅಂತ ಕೇಳ್ತಾರೆ. ಅಷ್ಟೊಂದು ನಮ್ಮ ಮನಸ್ಸು ಅಮಾನವೀಯವಾಗಿದೆ. ಇದು ವಾಸ್ತವ. ನಾನು ಸ್ಪಷ್ಟವಾಗಿ ಹೇಳುತ್ತೇನೆ ಪತ್ರಿಕೆಗಳ ಮಾಲೀಕರನ್ನು ದೂರುವುದಿಲ್ಲ. ಪತ್ರಿಕೆಗಳ ಮಾಲೀಕರು ತಮಗೆ ಗೊತ್ತಿಲ್ಲದ ಹಾಗೇಯೇ ಈ ಟ್ರ್ಯಾಪ್ ನಲ್ಲಿ ಬಿದ್ದು ಬಿಟ್ಟಿದ್ದಾರೆ.
          ಇವತ್ತಿನ ಮಾಧ್ಯಮಗಳ ಬಿಜೆನೆಸ್ ಮಾಡೆಲ್‌ನಲ್ಲಿಯೇ ತಪ್ಪಿದೆ. ನೀವು ೧೦೦ ಕೋಟಿ ರೂ ಇನ್‌ವೆಸ್ಟ್ ಮಾಡಿ ಜಾಹೀರಾತು ಇಲ್ಲದೆ ಪತ್ರಿಕೆ-ಚಾನೆಲ್ ಗಳನ್ನು ನಡೆಸಲಿಕ್ಕೆ ಆಗುವುದಿಲ್ಲ. ಈ ರೀತಿ ಜಾಹಿರಾತಿನ ಮೇಲೆ ಅವಲಂಬಿಸುವಂತಹ ಪರಿಸ್ಥಿತಿಯಲ್ಲಿ ನೀವು ಜನಪರವಾಗಿ ಬರೆಯಲು ಹೇಗೆ ಸಾಧ್ಯ? ದಲಿತರ, ಅಲ್ಪಸಂಖ್ಯಾತರ, ಹಿಂದುಳಿದ ವರ ಪರಧ್ವನಿ ಎತ್ತಲಿಕ್ಕೆ ಹೇಗೆ ಸಾಧ್ಯ? ಇದಕ್ಕೆ ಪರಿಹಾರ ಏನಂತ ಗೊತ್ತಿಲ್ಲ,  ರಿಲಯನ್ಸ್ ನ ಅನಿಲ್ ಅಂಬಾನಿ ಗ್ರೂಪ್ ೫ ರಿಂದ ೧೦ ಸಾವಿರ ಕೋಟಿ ಯನ್ನು ಚಾನಲ್ ಗಳಿಗೆ ಪಂಪ್ ಮಾಡಿದೆ. ಇವತ್ತು ಈ ಟಿವಿ, ಸಿಎನ್‌ಎನ್ ಐಬಿಎನ್ ಸೇರಿದಂತೆ 50ಕ್ಕೂ ಮಿಕ್ಕಿ ಚಾನಲ್ಗ ಳು, ಬೇರೆಬೇರೆ ಪಬ್ಲಕೇಷನ್ ಗಳನ್ನುಅವರು ಖರೀದಿಸಿದ್ದಾರೆ., ಬಿರ್ಲಾ ಗ್ರೂಪ್ ಇಡೀ ಇಂಡಿಯಾ ಟುಡೇಯನ್ನು ವಶಕ್ಕೆ ತೆಗೆದುಕೊಂಡಿದೆ. ಎನ್.ಡಿ.ಟಿವಿಯಲ್ಲಿ ಗ್ರೀನ್ ಟೆಕ್ ಎಂಬ ಸಂಸ್ಥೆ ಬಂಡವಾಳ ಹೂಡಿದೆ, ಇವತ್ತು ಮಾಧ್ಯಮಗಳ ಕಂಪೆನಿಯ ಬೋರ್ಡ್ನಲ್ಲಿ  ಕಾಪೋರೇಟ್ ಕುಳಗಳು ಸ್ಥಾನ ಪಡೆದಿದ್ದಾರೆ. ಇವತ್ತು ಎಲ್ಲಾ ದೊಡ್ಡ ಪತ್ರಿಕೆಗಳಲ್ಲೂ ಇದೇ ಆಗಿದೆ. ಇತ್ತೀಚೆಗೆ ಹಿಂದೂ ಪತ್ರಿಕೆಯಲ್ಲೂ ಆಗಿದೆ. ಪ್ರಜಾವಾಣಿ ಬಹಳ ಹಿಂದೆ ಕುಲದೀಪ್ ನಯ್ಯರ್ ಅವರನ್ನು ಬೋರ್ಡ್ ಡೈರಕ್ಟರ್‌ನ್ನಾಗಿ ಮಾಡಿತ್ತು. ಆದರೆ ಇದೆಲ್ಲಾ ಎಷ್ಟು ಬೇಗ ಚೇಂಜ್ ಆಗ್ತಾ ಇದೆ.
ಇವತ್ತು ಯಾವ ಮಟ್ಟಿಗೆ ವಾಣಿಜ್ಯಿಕರಣ ಆಗಿದೆ ಎಂದರೆ ಒಂದು ಪತ್ರಿಕೆ ಜಾಹೀರಾತಿಗೆ ದುಡ್ಡು ಪಡೆಯದೆ ಅದರ ಬದಲಾಗಿ ಆ ಕಂಪನಿಯ ಷೇರು ಪಡೆದು ಅದನ್ನು ಪ್ರಮೋಟ್ ಮಾಡಿ ಅದರ ಬೆಲೆಯನ್ನು ದುಪ್ಪಟ್ಟು ಮಾಡಿ ಲಾಭ ಪಡೆಯುತ್ತಿದೆ. ಈ ಕ್ರಾಸ್ ಓನರ್ ಶಿಫ್ ಬಗ್ಗೆ ಚರ್ಚೆ ನಡೆಯುತ್ತಿದೆ. ಬೇರೆಬೇರೆ ಉದ್ಯಮಗಳ ಮಾಲೀಕರು ಮಾಧ್ಯಮ ಕ್ಷೇತ್ರದಲ್ಲಿರಬಾರದು. ಮಾಧ್ಯಮ ಕ್ಷೇತ್ರದಲ್ಲಿರುವವರಿಗೆ ಬೇರೆ ಉದ್ಯಮಗಳಲ್ಲಿ ತೊಡಗಿರಬಾರದು ಎಂಬಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಟ್ರಾಯ್ ಧೀರ್ಘವಾದ ವರದಿಯನ್ನು ಕೊಟ್ಟಿದೆ. ಅದು ಕೇಂದ್ರ ಸರ್ಕಾರ ಪರಿಶೀಲನೆಯಲ್ಲಿದೆ. ಭಾರತದಂತಹ ಸಮಾಜದಲ್ಲಿ ಬಹತ್ವ ಮತ್ತು ವೈವಿಧ್ಯತೆಯನ್ನು ಕಾಪಾಡಿಕೊಂಡು ಹೋಗುವ ದೃಷ್ಟಿಯಿಂದ ಪತ್ರಿಕೋದ್ಯಮವನ್ನು ಕೇವಲ ವ್ಯಾಪಾರಿ ದೃಷ್ಟಿಯಿಂದ ನೋಡಬಾರದು. ಹಾಗೆ ನೋಡಿದರೆ ಮಾಧ್ಯಮದ ಮೂಲ ಆಶಯ ಏನಿದೆ ಅದಕ್ಕೆ ಭಂಗ ಉಂಟಾಗುತ್ತದೆ ಎಂದು ಟ್ರಾಯ್ ಹೇಳಿದೆ.
ಆದರೆ, ಇವತ್ತು ಪರಿಸ್ಥಿತಿ ಹಾಗಿಲ್ಲ. ಕಾರ್ಪೋರೇಟ್ ಕಂಪೆನಿಗಳ ಪ್ರವೇಶ ಆಗಿಬಿಟ್ಟಿದೆ. ವೃತ್ತಿ ಉದ್ಯಮವಾಗಿ ಹೋಗಿರುವುದರಿಂದ ಅದರ ಎಲ್ಲಾ ಘೋರ ರೂಪಗಳು ನಮಗೆ ಕಾಣ ಸಿಗುತ್ತಿವೆ. ಮಾಧ್ಯಮದ ಮಾಲೀಕರು ಎಂತಹ ಟ್ರ್ಯಾಪ್‌ನಲ್ಲಿ ಬಿದ್ದಿದ್ದಾರೆ ಎಂದರೆ ಪ್ರಜ್ಞಾ ಪೂರ್ವಕವಾಗಿ ನಾನು ಜನಪರವಾಗಿ ಇರುತ್ತೇನೆ ಎಂದು ನಿರ್ಧಾರ ಮಾಡಿದರೂ ಕೂಡ ಅವರು ಹಾಗೆ ಇರಲು ಆಗುತ್ತಿಲ್ಲ.
ಇವತ್ತು ಒಬ್ಬ ೨೫-೩೦ ಕೋಟಿ ರೂಪಾಯಿ ಬಂಡವಾಳ ಹೂಡಿ ಬಹಳ ಆದರ್ಶ ಇಟ್ಟುಕೊಂಡು ಚಾನಲ್ ಪ್ರಾರಂಭ ಮಾಡುತ್ತಾನೆ. ಆದರೆ ಒಂದೆರಡು ತಿಂಗಳಲ್ಲಿ ಆಗುವ ನಷ್ಟವನ್ನು ತುಂಬಿಸಿಕೊಳ್ಳಲು ಜ್ಯೋತಿಷಿಗಳನ್ನು ತಂದು ಕೂರಿಸುತ್ತಾನೆ. ಇದು ಇವತ್ತಿನ ಪರಿಸ್ಥಿತಿ. ಕಡಿಮೆ ಬಂಡವಾಳದ ಮಾಧ್ಯಮಗಳು ಇದಕ್ಕೆ ಪರಿಹಾರವಾಗಬಲ್ಲದು. ಇವತ್ತು ಬಹಳ ಮಂಡಿ ಲಂಕೇಶರನ್ನು ನೆನಪಿಸಿಕೊಳ್ಳುತ್ತಾರೆ. ಅವರು ಇವತ್ತು ಇದ್ದಿದ್ದರೆ ನನ್ನ ಪ್ರಕಾರ ಅಷ್ಟೊಂದು ಪ್ರಸಾರ ಸಂಖ್ಯೆ ಇರುವ ಪತ್ರಿಕೆಯನ್ನು ನಡೆಸಲಿಕ್ಕೆ ಆಗುತ್ತಿರಲಿಲ್ಲ. ಆಗ ಲಂಕೇಶ್ ಪತ್ರಿಕೆಗೆ ೧ ರೂ. ಇರುವಾಗ ಪ್ರಜಾವಾಣಿಗೆ ೧.೫೦ ರೂ ಇತ್ತು.
ಆದರೆ, ಈಗ ಲಂಕೇಶ್‌ಪತ್ರಿಕೆಗೆ ೧೫ ರೂ.ಗಳಿದ್ದರೆ ಪ್ರಜಾವಾಣಿಗೆ ೪.೫೦ ರೂಪಾಯಿ ಇದೆ. ಗೌರಿ ಲಂಕೇಶ್ ಅವರು ಪತ್ರಿಕೆ ಹೊರತಾಗಿಯೂ ಇತರೆ ಪಬ್ಲಿಕೇಶನ್‌ಗಳಿಂದ ನಷ್ಟವನ್ನು ತೂಗಿಸಿಕೊಳ್ಳುತ್ತಿದ್ದಾರೆ, ಗೌರಿಯವರ ಲಂಕೇಶ್ ಪತ್ರಿಕೆ ಇವತ್ತಿಗೂ ನಷ್ಟದಲ್ಲಿದೆ. ಜಾಹೀರಾತು ಇಲ್ಲದೆ ಪತ್ರಿಕೆ ನಡೆಸುವುದು ಸಾಧ್ಯವೇ ಇಲ್ಲ. ಇದು ಎಲ್ಲಾ ಸಣ್ಣ ಪತ್ರಿಕೆಗಳ ಗೋಳು. ಈ ದೇಶದಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಮಾರಾಟದರ ಇರುವ ವಸ್ತು ಎಂದರೆ ಅದು ’ಪತ್ರಿಕೆ’ ಇದರ ನಷ್ಟವನ್ನು ಜಾಹೀರಾತಿನಿಂದಲೆ ತುಂಬಿಸಿಕೊಳ್ಳಬೇಕಾಗಿದೆ. ಹೀಗಿರುವಾಗ ಜಾಹೀರಾತುದಾರನಿಗೆ ನಿಷ್ಠರಾಗಿರಬೇಕೋ? ದಲಿತರ ಪರ ಇರಬೇಕೋ?
ನಾನು ಇದನ್ನು ಹೇಳಲಿಕ್ಕೆ ಇನ್ನೂ ಹೆಚ್ಚು ಅನುಭವವಿದೆ. ರಘುರಾಂ ಶೆಟ್ಟಿಯವರು ಆ ಕಾಲದಲ್ಲೆ ಇದನ್ನು ಅಲೋಚನೆ ಮಾಡಿ ಇದನ್ನ ಬದಲಾವಣೆ ಮಾಡಬೇಕೆಂದು ’ಮುಂಗಾರು’ ಪತ್ರಿಕೆ ಮಾಡಿದರು. ’ಚಿಂತನೆಯ ಮಳೆ ಹರಿಸಿ ಜನಶಕ್ತಿಯ ಬೆಳೆ ತೆಗಿಯುವ.....’ ಎಂದು ಘೋಷಣೆಯೊಂದಿಗೆ ಬೀದಿಯಲ್ಲಿ ಹೋದೆವು. ಆ ಕಾಲದಲ್ಲಿ ಬಹಳ ಉದಾತ್ತವಾದ ಉದ್ದೇಶದಿಂದ ಪ್ರಾಂಭವಾಯಿತು. ಆಮೇಲೆ ಏನಾಯಿತು.? ಒಂದೆರಡು ತಿಂಗಳಲ್ಲಿ ಸರ್ಕ್ಯೂಲೇಶನ್ ಕೆಳಗಿಳಿಯಿತು. ಅನಾರೋಗ್ಯಕರ ಸ್ಪರ್ಧೆಯನ್ನು ತಡೆಯಲಿಕ್ಕೆ ಆಗಲಿಲ್ಲ. ಅದು ಕನ್ನಡದ ಮೊದಲ ಪಬ್ಲಿಕ್ ಲಿಮಿಟೆಡ್ ಕಂಪನಿ. ಓದುಗರೇ ಷೇರುದಾರರು ಎಂಬ ಕಲ್ಪನೆಯೊಂದಿಗೆ ಪ್ರಾರಂಭವಾದದ್ದು, ಅದು ಯಶಸ್ಸು ಕಂಡಿದ್ದರೆ ಬಹುಶಃ ಇವತ್ತು ದಕ್ಷಿಣ ಕನ್ನಡ ಜಿಲ್ಲೆ ಹಿಂದೂತ್ವದ ಪ್ರಯೋಗ ಶಾಲೆಯಾಗುತ್ತಿರಲಿಲ್ಲ. ಮುಂಗಾರನ್ನು ಉಳಿಸಿಕೊಳ್ಳಲು ಆಗಲಿಲ್ಲ.
          ಇಂತಹ ಒಂದು ಪತ್ರಿಕೆಯನ್ನು ಮಾಡಲು ಸಾಧ್ಯವಿಲ್ಲ ಎಂದೇನಲ್ಲ, ಆದರೆ ಅವತ್ತು ಮುಂಗಾರು ಮಾಡಿದ ಕಾಲ ಇಂದಿಲ್ಲ. ಇವತ್ತು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಲ್ಲೂ ದುಡ್ಡಿದ್ದವರು ಒಂದಿಷ್ಟು ಜನ ಇದ್ದಾರೆ. ಇವತ್ತು ಸೋಷಿಯಲ್ ಕ್ಯಾಪಿಟಲ್ ಎಂಬುದನ್ನು ಸೋಷಿಯಲಿಜಿಸ್ಟ್ ಗಳು ಮಾತನಾಡುತ್ತಾರೆ. ಇದು ಸಾಧ್ಯವಾಗಬೇಕು. ಕೆ.ಎನ್ ಗುರುಸ್ವಾಮಿ ಅವರು ಅಬಕಾರಿ ಕಂಟ್ರ್ಯಾಕ್ಟರ್. ಅವರ ಅದೇ ಉದ್ಯಮದಲ್ಲಿ ಮುಂದುವರೆದಿದ್ದರೆ ಬಹಳಷ್ಟು ದುಡ್ಡು ಮಾಡುತ್ತಿದ್ದರು. ಆ ಕಾಲದಲ್ಲಿ ಶೂದ್ರರಿಗೆ ಪತ್ರಿಕೆ ಇರಲಿಲ್ಲ. ಆಗ ಒಂದು ಪತ್ರಿಕೆ ಮಾಡಿದರು (ಪ್ರಜಾವಾಣಿ) ೧೦ ವರ್ಷ ಪತ್ರಿಕೆ ನಷ್ಟದಲ್ಲಿ ನಡೆಯಿತು. ಇವತ್ತು ದುಡ್ಡಿದ್ದವರು ಇಲ್ಲವೇನಿಂದಿಲ್ಲ. ೧೦೦ಕೋಟಿ ರೂಗಳಿಂದ ೫೦೦ ಕೋಟಿ ಇರುವವರು, ಒಂದು ಸಾವಿರ ಎಕರೆ ಭೂಮಿ ಇಟ್ಟುಕೊಂಡಿರುವ ಕುಳಗಳು ಅಹಿಂದ ವರ್ಗಗಳಲ್ಲಿಯೇ ಇದ್ದಾರೆ. ಯಾರಾದರೂ ಮಾಧ್ಯಮದಲ್ಲಿ  ಬಂಡವಾಳ ಹೂಡಲು ತಯಾರಿದ್ದಾರಾ? ಅವರೂ ಮಾಡಿದ್ರೂ ಮುಖ್ಯಸ್ಥರಾಗಿ ಅಹಿಂದ ವರ್ಗದವರಲ್ಲದವರನ್ನು ಕೂರಿಸಿ ದೂರ ಇರುತ್ತಾರೆ. ಕೇಳಿದರೆ, ಅವರೆ ಬೇಕಪ್ಪ ನಡೆಸಲಿಕ್ಕೆ ಅಂತಾರೆ.
ಇವತ್ತು ಅನ್ನ ಭಾಗ್ಯ, ಕ್ಷೀರ ಭಾಗ್ಯ ದಂತಹ ಜನಪರ ಕಾರ್ಯಕ್ರಮಗಳಿಗೆ ಇಷ್ಟೊಂದು ವಿರೋಧ ವ್ಯಕ್ತವಾಗುತ್ತಿರುವುದು ಏಕೆ ಅನ್ನೋದನ್ನು ಯೋಚಿಸಬೇಕು. ಯಾರ್ಯಾರು ಈ ವರ್ಗಗಳ ಪರ ಮಾತನಾಡಿದ್ದಾರೋ ಅವರ ಧ್ವನಿ ಅಡಗಿಸುವ ಪ್ರಯತ್ನ ನಡೆದಿದೆ. ಅದು ದೇವರಾಜ ಅರಸು ಅವರ ವಿರುದ್ದವೂ ನಡೆದಿತ್ತು. ವಿ.ಪಿ. ಸಿಂಗ್ ಅವರು ಮಂಡಲ್ ವರದಿ ಜಾರಿಗೆ ತಂದ ತಕ್ಷಣ ಅವರು ಮಾಧ್ಯಮದ ಪಾಲಿಕೆ ಶತ್ರುಗಳಾಗಿಬಿಟ್ಟರು. ವಿ.ಪಿ ಸಿಂಗ್ ಅಹಿಂದ ವರ್ಗದವರಲ್ಲ, ಅವರೊಬ್ಬ ರಾಜ. ಅಹಿಂದ ವರ್ಗದ ಪರ ಮಾತನಾಡಲು ಆ ವರ್ಗದವೇ ಆಗಬೇಕಿಲ್ಲ. ಆ ವರ್ಗದ ಪರ ಮಾತನಾಡಿದರೆ ಸಾಕು, ಅವರ ಧ್ವನಿ ಅಡಗಿಸುವ ಕೆಲಸ ಪ್ರಾರಂಭವಾಗಿಬಿಡುತ್ತದೆ. ಬಾಬು ಜನಗಜೀವನ ರಾಂ ಅವರನ್ನು ನೆನಪಿಸಿಕೊಳ್ಳುವವರಿಲ್ಲ ಇವತ್ತು. ಹಸಿರು ಕ್ರಾಂತಿಯ ಹರಿಕಾರ. ಭಾರತ-ಪಾಕ್ ನ ಮೊದಲ ಯುದ್ಧ ನಡೆದಾಗ ರಕ್ಷಣಾ ಸಚಿವರಾಗಿದ್ದವರು. ಅವರನ್ನು ಯಾರೂ ನೆನಪಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕಾಗಿ ದಲಿತರ ಮಾಲೀಕತ್ವದ ಪತ್ರಿಕೆಗಳು ಚಾನಲ್ ಗಳು ಬರಬೇಕು ನಿಜ, ಆದರೆ ಮಾಲೀಕರಾಗಲು ದುಡ್ಡು ಬೇಕು. ಇವತ್ತು ಸಣ್ಣ ಪತ್ರಿಕೆಗಳು, ಮಾಸಿಕಗಳು ಅಲ್ಲಲ್ಲಿ ಇವೆ ದುಡ್ಡಿದ್ದವರು ಬಂದರೆ ಅಂಬೇಡ್ಕರ್ ಅವರ ಆಶಯದಂತೆ ಒಂದು ಮುಖ್ಯವಾಹಿನಿಯ ಪತ್ರಿಕೆ ಬರಬಹುದು.
ಅಮೇರಿಕಾದಲ್ಲಿ ’ಏಬೋನಿ’, ’ಚಿಕಾಗೋ ಡಿಫೆಂಡರ್’ ನಂತಹ ಕರಿಯರೆ ನಡೆಸುವ ಪತ್ರಿಕೆಗಳಿವೆ ಅಲ್ಲಿಯ ಕರಿಯರಿಗೂ ಭಾರತದ ದಲಿತರಿಗೂ ಇರುವ ವ್ಯತ್ಯಾಸವೇನೆಂದರೆ ಅಲ್ಲಿ ಒಳಪಂಗಡಗಳಿಲ್ಲ. ಭಾಷೆ ಒಂದೇ ಆಗಿದೆ. ಆ ದೇಶದಲ್ಲಿದ್ದಂತೆ ಇಲ್ಲಿಯೂ ದಲಿತರು ಅಭಿವೃದ್ಧಿ ಹೊಂದಿದ್ದಾರೆ. ಅವರಿಗೂ ಕೊಳ್ಳುವ ಸಾಮರ್ಥ್ಯ ಬಂದಿದೆ. ಇವತ್ತು ಕನ್ಸ್ಯೂಮರ್ ಗೂಡ್ಸ್‌ಗಳನ್ನು ಪರ್ಚೆಸ್ ಮಾಡುವಂತಹ ಸಾಮರ್ಥ್ಯ ಈ ಸಮುದಾಯದಲ್ಲಿ ಸ್ಪಲ್ಪ ಬಂದಿದೆ. ಟೂಥ್ ಪೇಸ್ಟ್‌ನ್ನು ದಲಿತರೂ ಬಳಸುತ್ತಿದ್ದಾರೆ. ನಾಳೆ ದಲಿತರು ಪತ್ರಿಕೆ ಮಾಡಿದರೆ ಟೂಥ್ ಪೇಸ್ಟ್ ಮಾರುವವರು ಅದಕ್ಕೆ ಜಾಹೀರಾತು ಕೊಡಲೇ ಬೇಕು.

            ಮಾಧ್ಯಮ ಕ್ಷೇತ್ರ ಸಂಪೂರ್ಣವಾಗಿ ಉದ್ಯಮವಾಗದಂತೆ ತಡೆಯಲಿಕ್ಕಾಗಿ ಸರ್ಕಾರ ಮಧ್ಯಪ್ರವೇಶ ಮಾಡಬೇಕು.ಈ ದೇಶದ ಖಾಸಗಿ ಕ್ಷೇತ್ರದಲ್ಲಿ ಉದ್ಯಮಗಳನ್ನು ಬೆಳಸಲಿಕ್ಕೆ ಸರ್ಕಾರಗಳು ಹಲವಾರು ರೀತಿಯ ನೆರವುಗಳನ್ನು ಕೊಡುತ್ತಿದೆ. ನ್ಯಾನೋ ಫ್ಯಾಕ್ಟರಿಗಾಗಿ ಗುಜರಾತ್ ನಲ್ಲಿ ಶೇ.೦.೧ ಬಡ್ಡಿದರದಲ್ಲಿ ಸಾಲ ಕೊಟ್ಟಿದೆ. ಪಂಜಾಬ್‌ನಲ್ಲಿ ಬಿರ್ಲಾ ರಿಫೈನರಿ ಪ್ರಾರಂಭಿಸಲು ಲಕ್ಷ್ಮಿ ಮಿಟ್ಟಲ್ ಗೆ ಅಲ್ಲಿನ ಸರ್ಕಾರ ೧೨೫೦ಕೋಟಿ ರೂಗಳನ್ನು  ಶೇಕಡಾ 0.1 ಬಡ್ಡಿ ದರದಲ್ಲಿ ಸಾಲ ನೀಡಿದೆ. ಇಂತಹ ದೊಡ್ಡ ಪಟ್ಟಿಯೇ ಇದೆ. ಪಿ.ಸಾಯಿನಾಥ್ ಅವರ ನ್ನು ಕೇಳಿದ್ರೆ  ಇನ್ನೂ ದೊಡ್ಡಪಟ್ಟಿಯನ್ನೆ ಕೊಡುತ್ತಾರೆ. ಇಡೀ ರೈತರಿಗೆ ಕೊಡುವ ೨ವರೆ ಲಕ್ಷ ಕೋ.ರೂ ಸಬ್ಸಿಡಿ ಏನಿದೆ ಅದನ್ನೆ ದೊಡ್ಡದು ತಿಳಿದುಕೊಂಡಿದ್ದೇವೆ. ಆದರೆ ಕಾರ್ಪೋರೇಟ್ ಸೆಕ್ಟರ್ ಗೆ ಸರ್ಕಾರ೩೬ಲಕ್ಷ ಕೋಟಿ ರೂಗಳ ತೆರಿಗೆ ವಿನಾಯಿತಿ ನೀಡಿದೆ.ರಿಲಯನ್ಸನ ವಾರ್ಷಿಕ ವರಮಾನ ೨ವರೆ ಲಕ್ಷ ಕೋ.ರೂ. ನಮ್ಮ ಕರ್ನಾಟಕದ ಬಜೆಟ್ ೧ಲಕ್ಷ ೨೦ಸಾವಿರ ಕೊಟಿ ರೂಪಾಯಿ.  ವಿಜಯ ಮಲ್ಯ ಏನು ಮಾಡಿದಾನೆ ಅಂತ ಗೊತ್ತಿದೆ. ಅವನಿಗೆ ಸಾಲ ಕೊಟ್ಟ ಬ್ಯಾಂಕಿನಿಂದ ೫-೧೦ ಸಾವಿರ ರೂ.ಸಾಲ ಮಾಡಿದ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಸಾವಿರಾರು ಕೋ.ರೂ ಮುಳುಗಿಸಿದ ಮಲ್ಯ ವಿದೇಶದಲ್ಲಿ ಮಜಾ ಮಾಡುತ್ತಿದ್ದಾನೆ. ಇದು ಇಂಡಿಯಾದ ಪರಿಸ್ಥಿತಿ.
            ಆದ್ದರಿಂದ ಮಾಧ್ಯಮ ಈ ಸಮಾಜಕ್ಕೆ ಬೇಕು ಎನ್ನುವುದಾದರೆ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಜವಾಗಿ ಅರ್ಥದಲ್ಲಿ ಉಳಿಸಿಕೊಳ್ಳಬೇಕಾದರೆ ಮಾರ್ಧಯಮದಲ್ಲಿ ಎಲ್ಲಾ ಸಮುದಾಯಗಳ ಅನುಭವ ಲೋಕಗಳು ಬರಬೇಕಾದರೆ ಈ ಪತ್ರಿಕೋದ್ಯಮ ಮಾಡುವವರಿಗೂ ಕೂಡ ಕಡಿಮೆ ಬಡ್ಡಿದರದಲ್ಲಿ ಬ್ಯಾಂಕ್‌ಗಳು ಸಾಲ ಕೊಡಬೇಕು. ಸಬ್ಸಿಡಿ ಯಾಕೆ ಕೊಡಬಾರದು? ಅದನ್ನು ಎಲ್ಲಾ ಉದ್ಯಮಗಳ ಮಟ್ಟಿಗೆ ತಂದು ನಿಲ್ಲಿಸಿದರೆ ಸ್ಪರ್ಧೆ ಮಾಡಲು ಆಗುವುದಿಲ್ಲ. ನ್ಯಾನೋ ಕಾರಿನ ಫ್ಯಾಕ್ಟರಿಗೆ ಶೇ.೦.೧ ರ ಬಡ್ಡಿದರದಲ್ಲಿ ಸಾಲ ಕೊಡುವುದಾದರೆ ಒಂದು ಪತ್ರಿಕೆ ಮಾಡಲು ಯಾಕೆ ಕೊಡಬಾರದು ಎಂಬುದು ನನ್ನ ಪ್ರಶ್ನೆ.
             ಉದ್ಯಮಿಗಳು ನೇರವಾಗಿ ಮಾಧ್ಯಮ ಕ್ಷೇತ್ರಕ್ಕೆ ಬಂದು ತಮ್ಮ ಸ್ವಾಮ್ಯಕ್ಕೆ ತೆಗೆದುಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಬಹಳ ಅಪಾಯಕಾರಿ. ನ್ಯೊಮ್ ಚಾಮಸ್ಕೀ ಅವರು ’ಮ್ಯಾನುಫ್ಯಾಕ್ಚರಿಂಗ್ ಕನ್ಸೆಂಟ್’ ಅಂತ ಹೇಳ್ತಾರೆ. ಸಮ್ಮತಿಗಳನ್ನು ಉತ್ಪಾದಿಸುವಂತಹುದು. ಇವತ್ತು ಚಾನಲ್‌ಗಳಲ್ಲಿ ಪತ್ರಿಕೆಗಳಲ್ಲಿ ಶೇ.೯೮ರಷ್ಟು ಜನತೆ  ಸರ್ಕಾರದ ವಿರುದ್ದವಾಗಿವೆ. ಶೇ ೨ ರಷ್ಟು ಪರವಾಗಿದೆ ಎಂದು ಬಿತ್ತರಿಸಲಾಗುತ್ತಿದೆ.. ಇದು ನಿಜನಾ? ಇಂತಹ ’ಸಮ್ಮತಿ ಉತ್ಪಾದನೆ’ಇಂಡಿಯಾದಲ್ಲಿ ಆಗಬಾರದು ಎಂದಾದರೆ ಪತ್ರಿಕೆಗಳನ್ನು ಪ್ರಾರಂಭ ಮಾಡುವವರಿಗೆ ಸರ್ಕಾರ ನೆರವಿಗೆ ಬರಬೇಕು. ದಲಿತ ಉದ್ಯಮಿ ಸಂಘಟನೆಗಳು ಈ ಬಗ್ಗೆ ಯೋಚನೆ ಮಾಡಬೇಕು.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೨೫ ನೇ ಜನ್ಮ ದಿನಾಚರಣೆಯ ಸಮಯದಲ್ಲಿ ಇಂತಹದ್ದೊಂದು ಚಿಂತನೆ ನಡೆಯಲಿ.. ಸಾಧ್ಯವಾದರೆ ಅಂಬೇಡ್ಕರ್ ಅವರು ಪ್ರಾರಂಭಿಸಿದ್ದ ಎಲ್ಲಾ ಪತ್ರಿಕೆಗಳ ಎಡಿಟೋರಿಯಲ್ ಗಳನ್ನು ಕನ್ನಡಕ್ಕೆ ತರುವ ಕೆಲಸ ಆಗಲಿ. ಸರ್ಕಾರ  ಇದನ್ನು ಮಾಡಿದರೆ ಸಂತೋಷದ ವಿಷಯ.
-ದಿನೇಶ್ ಅಮಿನ್ ಮಟ್ಟು

Thursday, July 21, 2016

‘ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ’ದ ಆರೋಪ

ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣದ ಚರ್ಚೆ ಆಗಾಗ ನಡೆಯುತ್ತಲೇ ಇರುತ್ತದೆ. ಫೇಸ್ ಬುಕ್ ನಲ್ಲಿ ಒಂದಷ್ಟು ಕಿಡಿಗೇಡಿಗಳು ಮಹಿಳೆಯೊಬ್ಬರ ಮೇಲೆ ಮಾನಹಾನಿಕರವಾದ ಕಮೆಂಟ್ ಮಾಡಿದಾಗ ನಾನೇ ಮುಂದೆ ನಿಂತು ಪೊಲೀಸರಿಗೆ ದೂರು ಕೊಡಿಸಿದ್ದೆ. ಅದರ ನಂತರ ನನ್ನ ಮತ್ತು ರಾಜ್ಯದ ಮುಖ್ಯಮಂತ್ರಿಗಳ ವಿರುದ್ದವೂ ಇದೇ ರೀತಿ ಅಶ್ಲೀಲ ಭಾಷೆ ಬಳಸಿ ನಿಂದಿಸಿದಾಗ ನಾನೇ ಪೊಲೀಸರಿಗೆ ದೂರು ನೀಡಿದ್ದೆ. ಈ ಎರಡೂ ಸಂದರ್ಭಗಳಲ್ಲಿ ನನ್ನ ವಿರುದ್ಧ ‘ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ’ದ ಆರೋಪ ಹೊರಿಸಲಾಯಿತು. ಪ್ರಧಾನಮಂತ್ರಿಯವರಾದ ಸಾಕ್ಷಾತ್ ನರೇಂದ್ರಮೋದಿಯವರೇ ಇಂತಹ ದೂರುಗಳನ್ನು ನೀಡಿದ್ದನ್ನು ಆಗ ಪ್ರಕರಣಗಳನ್ನು ಉಲ್ಲೇಖಿಸಿ ನಾನು ಬರೆದಿದ್ದೆ. ಅದರ ನಂತರ ಸಂಸದ ಪ್ರತಾಪ ಸಿಂಹ ಮಂಗಳೂರಿನ ಪತ್ರಕರ್ತರೊಬ್ಬರಿಗೆ ಧಮ್ಕಿ ಹಾಕಿದ್ದು ಮತ್ತು ದಾವಣಗೆರೆಯ ಸಾಮಾಜಿಕ ಕಾರ್ಯಕರ್ತನಿಗೂ ಬೆದರಿಸಿದ್ದು ವರದಿಯಾಗಿತ್ತು. ಇದ್ಯಾವುದೂ ನನ್ನ ವಿರುದ್ಧ ಆರೋಪ ಮಾಡಿರುವವರಿಗೆ ‘ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ’ ಆಗಲೇ ಇಲ್ಲ.
ಈಗ ಕಾಶ್ಮೀರದ ಸ್ಥಿತಿ ನೋಡಿ. ಅಲ್ಲಿ ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸೋಷಿಯಲ್ ಮೀಡಿಯಾದ ದಮನಕ್ಕೆ ಸರ್ಕಾರ ಟೊಂಕಕಟ್ಟಿ ನಿಂತಿದೆ. ಮೊಬೈಲ್ ಇಂಟರ್ ನೆಟ್ ಮತ್ತು ಬ್ರಾಂಡ್ ಬ್ಯಾಂಡ್ ಸರ್ವೀಸನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲಿನ ಪತ್ರಿಕಾ ಕಚೇರಿಗಳು ಮತ್ತು ಮುದ್ರಣಾಲಯಗಳ ಮೇಲೆ ಪೊಲೀಸರುದಾಳಿ ನಡೆಸುತ್ತಿದ್ದಾರೆ. ಪತ್ರಿಕೆಗಳನ್ನು ಮುಟ್ಟುಗೋಲು ಹಾಕಲಾಗುತ್ತಿದೆ. ಪತ್ರಕರ್ತರನ್ನು ಬಂಧಿಸಲಾಗುತ್ತಿದೆ. ಅವರಿಗೆ ಬೆದರಿಕೆ ಒಡ್ಡಲಾಗುತ್ತಿದೆ. ಪತ್ರಕರ್ತರ ಓಡಾಟಕ್ಕೆ ಪರವಾನಿಗೆ ಪತ್ರವನ್ನು ನಿರಾಕರಿಸಲಾಗುತ್ತಿದೆ. ಪತ್ರಕರ್ತರನ್ನೆಲ್ಲ ಸಾರಸಗಟಾಗಿ ''ದೇಶದ್ರೋಹಿ' ಗಳ ಗುಂಪಿಗೆ ಸೇರಿಸಲಾಗಿದೆ.
1977ರ ತುರ್ತುಪರಿಸ್ಥಿತಿಗಿಂತ ಭೀಕರವಾದ ಪರಿಸ್ಥಿತಿಯನ್ನು ಅಲ್ಲಿನ ಮಾಧ್ಯಮ ಕ್ಷೇತ್ರ ಎದುರಿಸುತ್ತಿದೆ. ಇದು ‘ಸಂದೇಶವನ್ನು ನಿರ್ಲಕ್ಷಿಸಿ ಸಂದೇಶವಾಹಕನ ಹತ್ಯೆ ಮಾಡುವ ಕ್ರಮ’. ರಾಜ್ಯ ಸರ್ಕಾರ ಮಾತ್ರ ಏಕಪಕ್ಷೀಯವಾಗಿ ಇಂತಹ ನಿರ್ಧಾರ ಕೈಗೊಳ್ಳುವುದು ಸಾಧ್ಯ ಇಲ್ಲ. ಇದರಲ್ಲಿ ನರೇಂದ್ರಮೋದಿ ಸರ್ಕಾರದ ಪಾತ್ರವೂ ಇದೆ. ಅಲ್ಲಿರುವುದು ಬಿಜೆಪಿ –ಪಿಡಿಪಿ ಮೈತ್ರಿಕೂಟ ಸರ್ಕಾರವಾಗಿರುವ ಕಾರಣ ಈ ಮಾಧ್ಯಮ ದಮನ ನೀತಿಗೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗುತ್ತದೆ. ಈಗಲೂ ಸೋಷಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ ಜನಪ್ರಿಯ ನಾಯಕ. ಅವರ ಸಂವಹನವೇನಿದ್ದರೂ ಅದರ ಮೂಲಕವೇ. ಆದರೆ ಅವರು ಕಾಶ್ಮೀರದಲ್ಲಿ ನಡೆಸುತ್ತಿರುವುದೇನು?
ಕಳೆದ ಕೆಲವು ವಾರಗಳಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಹಳಷ್ಟು ಆಧಾರವಿಲ್ಲದ ವರದಿಗಳು ಪ್ರಸಾರ-ಪ್ರಕಟಾ ಆಗಿವೆ. ಇದನ್ನು ಗಮನಿಸಿದ ಹಲವು ಮಂದಿ ‘ನೀವು ಕೂಡಾ ಕಾಶ್ಮೀರದ ಮಾಧ್ಯಮ ನೀತಿ’ ಅನುಸರಿಸಬೇಕು’ ಎಂದು ಪುಕ್ಕಟೆ ಸಲಹೆ ನೀಡಿದ್ದುಂಟು. ಆದರೆ ಯಾವುದಾದರೂ ಪತ್ರಿಕೆ ಇಲ್ಲವೆ ಚಾನೆಲ್ ನ ಸಂಪಾದಕರಿಗೆ ಮುಖ್ಯಮಂತ್ರಿಗಳಾಗಲಿ, ನಾನಾಗಲಿ ಇಲ್ಲವೆ ಸರ್ಕಾರದ ಯಾವುದೇ ಅಧಿಕಾರಿಯಾಗಲಿ ಪೋನ್ ಮಾಡಿ ಯಾಕೆ ಇಂತಹ ವರದಿ ಪ್ರಕಟ-ಪ್ರಸಾರವಾಗುತ್ತಿವೆ ಎಂದು ಕೇಳಿಲ್ಲ. ಒಂದಲ್ಲ ಹಲವುಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಇರುವ ತಮ್ಮ ಬದ್ದತೆಯನ್ನು ಸಾರಿದ್ದಾರೆ. ನೀವ್ಯಾಕೆ ಅಲ್ಲಿದ್ದೀರಿ ಎಂದು ಆಗಾಗ ನನ್ನನ್ನು ಕೆಲವು ಸ್ನೇಹಿತರು ಕೇಳುವ ಪ್ರಶ್ನೆಗೆ ಮುಖ್ಯಮಂತ್ರಿಯವರ ಈ ಬದ್ದತೆ ಉತ್ತರವೂ ಹೌದು.
ಡೆಕ್ಕನ್ ಹೆರಾಲ್ಟ್ ಪತ್ರಿಕೆ ಇದಕ್ಕೆ ಸಂಬಂಧಿಸಿದ ಒಂದು ವಿಚಾರಪ್ರಚೋದಕ ಸಂಪಾದಕೀಯವನ್ನು ಇಂದು ಬರೆದಿದೆ:
Media gag in Valley, back to Emergency
July 21, 2016, DHNS
Kashmir Valley has been pushed into an information black hole in a most anti-democratic and unwise exercise of arbitrary powers by the government. The state government took drastic action in the last few days to gag all media – conventional, non-conventional and social – to cut off the Valley from the world and from itself and to prevent it from being presented to the outside world. It could not have taken the action without the concurrence of the Central government. It is a virtual throwback to the Emergency days whose horrors were thought to have been buried decades ago. The comprehensive ban on news and blocking of information channels in Kashmir was the worst assault on the citizens’ basic right to know and freedom of expression since those shameful days. These rights are the same for Kashmir as for the rest of India, and the attack on them should be condemned and opposed by everyone. What is at stake in Kashmir is and will be at stake elsewhere.
The methods of enforcement of the gag orders were reminders of the actions of the worst authoritarian regimes. Mobile internet and broadband services had already been disconnected. The police raided newspaper offices and printing presses, seized newspapers and printing material and detained staff after days of resorting to methods like blocking news, denying curfew passes, physically threatening journalists and otherwise obstructing collection and dissemination of news. The government now does not take responsibility for its actions and has denied there was any gagging. But a minister had clearly fo-und fault with “certain projections” of newspapers. Kashmir is witnessing a high tide of public anger, defiance and protests after a militant was killed by the security forces some days ago. The government is responsible for mismanaging and aggravating the situation. It cannot obliterate the message and shoot the messenger for its own failure.
When legitimate channels of news are blocked, wrong news and rumours spread, causing more damage, further aggravating the situation. Authoritarian governments do not learn this simple truth. Free media provides the best insurance against untruth and wrong propaganda, and no government wins a propaganda war after gagging the media. The government only loses its credibility, violates its obligations to the people and its commitment to uphold the Constitution when it curbs freedom of expression. The world’s largest democracy cannot deny the most basic of freedoms to its people, and continue to claim to be democratic. Even its claims in Kashmir will be questioned if it denies such rights to the people. The government must apologise for the grievous mistake it made and ensure that it will not be repeated.

Wednesday, July 6, 2016

ಪಿ.ಸಾಯಿನಾಥ್ ಮಾತುಗಳ ಲೇಖನ ರೂಪ

ಕಳೆದ ವಾರ ಬೆಂಗಳೂರಿನಲ್ಲಿ ಪಿ.ಸಾಯಿನಾಥ್ ಆಡಿದ್ದ ಮಾತುಗಳ ಲೇಖನ ರೂಪ ಇಲ್ಲಿದೆ ಓದಿ.

The Sacred Waters of a Tanker

Maharashtra’s water crisis continues even if media coverage of it dries up with the onset of the rains
P Sainath (psainath@ruralindiaonline.org) is the founder-editor of the People's Archive of Rural India, and has been a rural reporter for decades. He is the author of Everybody Loves a Good Drought.
Rampant deforestation, extensive damming of the rivers, huge diversions of water for industrial projects and even elite resorts can be seen across the state. All these underlie Maharashtra’s terrible water crisis. They won’t get washed away by the monsoon, even if media coverage of it dries up with the onset of the rains.
This article was first published on the People's Archive of Rural India website

He stood poised at the edge of the Ramkunda, in prayer-like posture at this ancient bathing ghat, perhaps the holiest spot on the river Godavari. Then he went down on his haunches and bathed—in the sacred waters of a tanker. 

Welcome to Maharashtra’s water crisis—in the very source region of the mighty Godavari.

The historic Ramkunda bathing ghat went dry in April for the first time in 139 years. For over two months since then, the kunda has been kept alive by pouring water from 60-90 tankers a day into it. In short, Maharashtra is pouring tanker water into a river. The Godavari itself is in trouble, running dry in stretches where that has never happened before in living memory. By May, it was down to a feeble trickle at its source in the Brahmagiri mountain rising above the town of Trimbak in Nashik. (More often called Trimbakeshwar after the temple sanctifying the river’s source). People here hope the just-breaking monsoon will bring some respite.

One of the tankers pouring water into the river. Right: a pilgrim bathes in the water of the tanker, not the river
 “The very town that is at the source of the river was down to getting water once in three days in the lean season,” laughs Kamlakar Akolkar—who combines the roles of press photographer and purohit (priest) in Trimbak, an economy driven by religious tourism. “There’s been 20 years of deforestation,” says Akolkar. “Our green cover is gone. There are now innumerable roads, hotels, boarding houses, development, lots of construction. The town itself has around 10,000 people. But there’s a floating population of 50,000, including pilgrims, vendors and others in the tourism economy, adding to our water stress. Where two decades ago we had up to four months of rainfall, we’re now down to one-and-a-half months of rain.”

A few kilometres down, Satish Shukla, chief priest at the Ramkunda told us that “the municipal corporation destroyed us.” Shukla, a Bharatiya Janata Party corporator some years ago, is president of the Godavari Panchkoti Purohit Sangh. That’s a nearly 70-year-old association of priests who identify with the river. “The corporation broke down a stone ghat that existed for ages and made one in concrete. I wish they had not done that. Damage not done in hundreds of years occurred in the last two,” said Shukla. “The rampant concreting of everything is killing the river. Old aquifers are dead, old fountain springs are no more. They never once consulted us purohits. They just changed whatever they liked.  The natural flow of the river is gone. Lord Varuna always answered the prayers for rain by ourpurohits. Alas, not any more.” 


A crowd of pilgrims gathering at the edge of the Ramkunda. Right: Satish Shukla, president of the Godavari priests association

Lord Varuna may have turned a deaf ear to his purohits, but the government decided to play rain god to the Kumbh Mela held in Nashik. Irrigation department officials say a total of 1.3  thousand million cubic feet (TMC) of water was released for the Kumbh Mela from Gangapur, the main dam on the Godavari, and its two minor siblings Guatami and Kashyapi.  The water released for the three days of the "shani snan" (royal bath) in August-September 2015 was only one part of this. The closing event in January this year took a lot of water as well. The dirt created in the river by the holy bath required the release of still more water to clean up the mess. 

In all, 1.3 TMC was released over months to the Mela and its many allied events. That equals almost half of Nashik city’s allocation of 3.7 TMC for the entire year of 2015-16. Complaints on the matter have landed in the courts. While all this may have answered the prayers of the devout at the Mela, those of the farmers downstream went unheard. They are dependent on the timely release of water from Gangapur for their needs.


Prashant Nimse explains the damage that diversion of water to the Kumbh Mela event did to his crop

“We got just one rotation of water where we needed three. You could say one-and-a-half, but the first bit came too early, without notice,” says Prashant Nimse. He is a farmer in Nandurgaon, a village served by the left bank canal of the Gangapur dam. Nimse, who grows grapes, figs and other horticultural crops, says he only managed a decent income from the wedding hall he has built on his land. He gets a growing clientele for it as this village gets absorbed into Nashik city limits. “I survived, but those dependent entirely on farming, they were devastated.”

“The damage to the grape crop is crippling in many ways,” Vasudev Khate, another farmer downstream had told us. “The lack of water in the drought hits the harvest. Even where we manage a grape yield, it harms the quality. Remember that there’s about 100 mandays of labour per acre, per year. With 40,000 acres under that crop in trouble, it means labour is in distress, with the loss of close to 3 million workdays. Workers come here from outside, from Marathwada, including Latur, Beed, Aurangabad and Osmanabad.” The resultant loss of work exports distress back to thousands of households in Marathwada.

The rains have begun to spread in the state. Yet, many farmers, labourers and others know that the problem will not end with a good monsoon. “That will bring relief,” says photographer-purohit Akolkar,  “but the long-term crisis is growing and won’t go away.”

P. B. Misal, superintending engineer, irrigation, Nashik district, had a different take on the problem. “We never really had any perennial rivers in Maharashtra,” says Misal. “The last 20 years have seen a great depletion of ground water resources. Too much pumping for agriculture. Nashik city's population has swollen to nearly 20 lakh including a floating population of some 3 lakh. Land use patterns have changed greatly. The green fields that surrounded the city are now mostly built up.” While he sees the rains as becoming more erratic, he finds the data do not show any “secular decline” in rainfall.  Environmental experts like Prof. Madhav Gadgil say that Maharashtra did have perennial rivers. But these  “have significantly been converted into seasonal ones.”

Which brings it all back to the role of human agency in Maharashtra’s mega water crisis. Trimbakeshwar’s  water problems resemble those we found at the source of the Krishna river in Old Mahabaleshwar in Satara district of Western Maharashtra. (Where too, my colleagues and I journeyed downstream in May: Source of the rivers, scams of the rulers.)

“Remember that Nashik has become a major industrial area. And that the water sharing systems of this region have changed,” says Akolkar.  “There is a huge, unregulated paani [water] market in every area, every locality. Even excellent rainfall has little impact on this. Tourism means every foot of the town is now concreted. The water has little room to flow or breathe.”


The Gangasagar at the Trimbakeshwar temple is way below its normal levels even though it is the first catchment tank for the Godavari river


The many little streams that run down Brahmagiri into the Gangasagar tank at Trimbakeshwar  are just bald, white outlines on the side of the mountain. All of them that we could see were dry. Perhaps now, with the coming of the rains in the state, they might run live again.

Rampant deforestation, extensive damming of the rivers, huge diversions of water for  industrial and even lifestyle projects like elite resorts can be seen across the state. So too, the unrelenting concreting of the source areas of rivers, massive and unregulated extraction of groundwater and highly inequitable distribution of water between poor and better off. All these underlie Maharashtra’s terrible water crisis. One that won’t get washed away by the monsoon, even if media coverage of it dries up with the onset of the rains.
- See more at: http://www.epw.in/journal/2016/26-27/web-exclusives/sacred-waters-tanker.html#sthash.pjr1Vf39.ISeY4oz9.dpuf

Saturday, July 2, 2016

ಮುಂಗಾರು ಪತ್ರಿಕೆ: `ಓದುಗರೊಂದಿಗೆ ಸಂಪಾದಕ'

ಮುಂಗಾರು ಪತ್ರಿಕೆಯ ಸಂಪಾದಕರಾಗಿ ವಡ್ಡರ್ಸೆ ರಘುರಾಮ ಶೆಟ್ಟಿಯವರು ನಡೆಸಿದ್ದ ಹಲವಾರು ಪ್ರಯೋಗಗಳಲ್ಲಿ ಅವರು ಆಗಾಗ ಬರೆಯುತ್ತಿದ್ದ ‘ಓದುಗರೊಂದಿಗೆ ಸಂಪಾದಕ’ ಎನ್ನುವ ಅವರ ಅಂಕಣವೂ ಒಂದು. ಓದುಗರಿಂದ ಬಂದ ಪತ್ರಗಳನ್ನು ಓದಿ ಅವುಗಳಲ್ಲಿನ ಸಾಮಾನ್ಯ ದೂರುಗಳಿಗೆ ಅವರು ಪ್ರತಿಕ್ರಿಯೆ ನೀಡುತ್ತಿದ್ದರು. ತನ್ನ ಮತ್ತು ಓದುಗನ ನಡುವಿನ ಸಂವಹಣದ ಸೇತುವೆಯನ್ನು ಗಟ್ಟಿಗೊಳಿಸುತ್ತಾ ಹೋಗುವವನೇ ನಿಜವಾದ ಪತ್ರಕರ್ತ ಎನ್ನುವುದನ್ನು ನಾನು ಕಲಿತದ್ದೇ ಈ ಪ್ರಯೋಗದಿಂದ. ವಿವೇಕಾನಂದರ ಬಗ್ಗೆ ನಾನು ಬರೆದ ಅಂಕಣದ ಬಗ್ಗೆ ಕೆಲವು ಕೋಮುವಾದಿಗಳು ವಿವಾದವನ್ನು ಸೃಷ್ಟಿಸಿದಾಗ ನನ್ನ ಆಶಯವನ್ನು ಓದುಗರಿಗೆ ಇನ್ನಷ್ಟು ಸ್ಪಷ್ಟಗೊಳಿಸಲು ಮತ್ತೊಂದು ಲೇಖನಬರೆದಿದ್ದೆ. ಅಲ್ಲಿಯೂ ಈ ಮಾತನ್ನು ಪ್ರಸ್ತಾಪಿಸಿದ್ದೆ. (ಆ ಎರಡನೇ ಲೇಖನವನ್ನು ‘ ಕ್ಷಮೆಯಾಚನೆ’ ಎಂದು ಈಗ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಲಜ್ಜೆ ಇಲ್ಲದೆ ಸಮರ್ಥಿಸುತ್ತಾ ತಿರುಗುತ್ತಿರುವ ಚಕ್ರವರ್ತಿ ಸೂಲಿಬೆಲೆ ಎನ್ನುವ ಸುಳ್ಳುಕೋರ ಹೇಳಿಕೊಂಡು ಅಡ್ಡಾಡುತ್ತಿದ್ದಾನೆ)
ಬಾಬರಿ ಮಸೀದಿ ಧ್ವಂಸದ ನಂತರ ದಕ್ಷಿಣ ಕನ್ನಡ ಕೋಮುವಾದದ ಪ್ರಯೋಗಶಾಲೆಯಾಗಿ ಬದಲಾಗಿರುವುದು ಎಂದು ಬಹಳಷ್ಟು ಮಂದಿ ತಿಳಿದುಕೊಂಡಿದ್ದಾರೆ. ಆದರೆ 1985ರಲ್ಲಿಯೇ ಇದು ಶುರುವಾಗಿತ್ತು. ಸಾರಾ ಅಬೂಬಕರ್ ಮತ್ತು ಪೋಲಂಕಿ ರಾಮಮೂರ್ತಿಯವರ ಮೇಲೆ ಸಾರ್ವಜನಿಕವಾಗಿಯೇ ದಾಳಿ ನಡೆದದ್ದು ಆ ಕಾಲದಲ್ಲಿ.ಅವೆ ತಮಗೊಪ್ಪದ ವಿಚಾರಗಳನ್ನು ಬರೆಯುವವರ ಮೇಲೆ ಶಾಬ್ದಿಕ ಅತ್ಯಾಚಾರ ನಡೆಸುತ್ತಿದ್ದ ಭಕ್ತರು ಆಗಲೇ ಹುಟ್ಟಿಕೊಂಡಿದ್ದರು. ವಡ್ಡರ್ಸೆಯವರು ಇದರಿಂದ ಮಾನಸಿಕವಾಗಿ ನೊಂದು ಹೋಗಿದ್ದರು. ಇವೆಲ್ಲವೂ ಈ ಹಳೆಯ ಅಂಕಣ ಓದಿದರೆ ನಿಮಗೆ ಅರ್ಥವಾಗುತ್ತದೆ.
ಕೆಲವು ವರ್ಷಗಳ ನಂತರ ಮಹಾತ್ಮಗಾಂಧೀಜಿ ಬರೆದಿರುವ ‘ಹಿಂದ್ ಸ್ವರಾಜ್ಯ’ ಪುಸ್ತಕ ಓದಿದಾಗ ನನಗೆ ಮತ್ತೆ “ಓದುಗರೊಂದಿಗೆ ಸಂಪಾದಕ’ ಅಂಕಣ ನೆನೆಪಾಗಿತ್ತು. ಇಂತಹದ್ದೊಂದು ಅಂಕಣವನ್ನು ಬರೆಯುವಂತೆ ಪ್ರಜಾವಾಣಿ ಸಂಪಾದಕರಾದ ಕೆ.ಎನ್.ಶಾಂತಕುಮಾರ್ ಅವರಿಗೂ ಹೇಳಿದ್ದೆ. ಅವರು ಆಗ “ಓದುಗ ಸಂಪಾದಕ’ ನನ್ನು ನೇಮಿಸುವ ಬಗ್ಗೆ (ದಿ.ಹಿಂದೂ ಪತ್ರಿಕೆಯಲ್ಲಿದ್ದ ಹಾಗೆ) ಒಲವು ತೋರಿದ್ದರು. ನನ್ನ ಆಸೆ ಕೈಗೂಡಲಿಲ್ಲ, ಅವರ ಆಸೆಯಾದರೂ ಈಡೇರಲಿ.
ಇದನ್ನೆಲ್ಲ ಬರೆಯುತ್ತಿದ್ದ ಹಾಗೆ ನಾನು ಪತ್ರಕರ್ತರನ್ನು ಉದ್ದೇಶಿಸಿ ಮಾಡಿದ ನೂರಾರು ಭಾಷಣಗಳ ಟಿಪ್ಪಣಿಗಳು ನೆನೆಪಾಗುತ್ತಿವೆ. ಅವೆಲ್ಲವನ್ನು ಪ್ರಶ್ನೋತ್ತರ ರೂಪದಲ್ಲಿ ‘ಓದುಗರೊಂದಿಗೆ ಸಂಪಾದಕ’ ಎಂಬ ಶೀರ್ಷಿಕೆಯಲ್ಲಿ ಪುಸ್ತಕವನ್ನು ಪ್ರಕಟಿಸಬಾರದೇಕೆ ಎಂದು ಯೋಚಿಸುತ್ತಿದ್ದೇನೆ. ಹಾಗೆಂದಾಗ ನನ್ನ ಓದುವ ಕೋಣೆಯಲ್ಲಿ ಪ್ರಕಟಣೆಯ ಭಾಗ್ಯ ಕಾಣದೆ ರಾಶಿಬಿದ್ದಿರುವ ಸಾವಿರದಷ್ಟಿರುವ ಅಂಕಣಗಳು, ಲೇಖನಗಳು ಅಣಕಿಸುತ್ತಿವೆ. ಪ್ರಕಾಶಕರು ಕಾಡುತ್ತಿದ್ದಾರೆ, ನನಗ್ಯಾಕೋ ಮನಸ್ಸಾಗುತ್ತಿಲ್ಲ.
ಅವೆಲ್ಲ ಇರಲಿ ಮೊದಲು ಕೆಳಗಿರುವ ವಡ್ಡರ್ಸೆಯವರ ಅಂಕಣ ಓದಿ.
------------------------------------------------------------------------------

ನಿಮ್ಮೂರಿನವನಾದುದು ನನ್ನಪರಾಧವಾಗಬಾರದಲ್ಲ?
1956ರ ಮೇ ತಿಂಗಳ ಅದೊಂದು ಸುದಿನ; ಅಂದು ಜೋಗಜಲಪಾತದ ಮಹಾತ್ಮಾ ಗಾಂಧಿ ಜಲ ವಿದ್ಯುದಾಗರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಬಾರಿಗೆ ಜಲವಿದ್ಯುತ್ ಪೂರೈಕೆಯ ಸಡಗರದ ಸಮಾರಂಭವೊಂದರ ಏರ್ಪಾಡಾಗಿತ್ತು. ಅಂದಿನ ಮೈಸೂರು ಸಂಸ್ಥಾನದ ಕೊಡುಗೆಯಾದ ಜಲವಿದ್ಯುತ್ತನ್ನು, ಉದ್ಯಮಶೀಲರೆನ್ನಿಸಿಕೊಂಡ ದಕ್ಷಿಣ ಕನ್ನಡದ ಜನತೆಗೆ ವಿಧಿವತ್ತವಾಗಿ ಒಪ್ಪಿಸಲು ಅಲ್ಲಿನ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಬಂದಿದ್ದರು.
ಕುಲಶೇಖರದಲ್ಲಿ ನಿರ್ಮಿತವಾಗಿದ್ದ ವಿದ್ಯುತ್ ವಿತರಣೆ ಜಾಲದಲ್ಲಿ ಗುಂಡಿಯೊತ್ತಿದ. ಕನ್ನಡಕ್ಕೆ ಜೋಗದ ಜಲವಿದ್ಯುತ್ ಹರಿಯಗೊಟ್ಟ ಕೆಂಗಲ್ ಹನುಮಂತಯ್ಯ ಒಂದು ಮಾರ್ಮಿಕವಾದ ಮಾತನಾಡಿದ್ದರು. “ನಿಮ್ಮ ಕೃತು ಶಕ್ತಿಗೆ ಚಾಲನೆ ಕೊಡಬಲ್ಲ ವಿದ್ಯುಚ್ಛಕ್ತಿಯನ್ನು ನಾವು ಕೊಟ್ಟಿದ್ದೇವೆ. ಇನ್ನು ಮೇಲೆ ನಿಮ್ಮ ಬುದ್ಧಿಶಕ್ತಿ. ಘಟ್ಟದ ಮೆಟ್ಟಲನ್ನೇರಿ ಬಯಲು ಸೀಮೆಗೆ ಹರಿದು ಅಲ್ಲಿನ ಜನರ ಬದುಕಿಗೆ ಹೊಸ ಚೇತನ ಕೊಡಬೇಕು” ಎಂಬ ಆಶಯವನ್ನವರು ಮುಂದಿಟ್ಟಿದ್ದರು.
ಆಗ ತಾನೇ ಪತ್ರಿಕಾ ವೃತ್ತಿಗೆ ಸೇರಿದ ನಾನು, “ನವಭಾರತ” ಪತ್ರಿಕೆಗೆ ವರದಿ ಮಾಡಲು ಅಂದಿನ ಸಮಾರಂಭಕ್ಕೆ ಹೋಗಿದ್ದೆ. ಹನುಮಂತಯ್ಯನವರ ಅರ್ಥವತ್ತಾದ ಮಾತನ್ನು ಹೇಳಿ ನನ್ನ ಮೈ ನವಿರೆದ್ದಿತು. ರಾಜಕಾರಣಿಯೊಬ್ಬರಿಂದ ಸುಂದರ ಶೈಲಿಯ ಕನ್ನಡ ಭಾಷಣ ನಾನು ಕೇಳಿದ್ದು ಅದೇ ಮೊದಲು. ಅದಕ್ಕಿಂತ ಮಿಗಿಲಾಗಿ, ಕೆಂಗಲ್ ಅವರು ತಮ್ಮ ಭಾಷಣದಲ್ಲಿ ದಕ್ಷಿಣ ಕನ್ನಡದ ಉದ್ಯಮ ಶೀಲ, ವಿಚಾರವಂತ ಹಾಗೂ ಬುದ್ಧಿವಂತ ಜನ ಸಮೂಹದ ಒಂದು ಆಕರ್ಷಕ ವಾಕ್ಚಿತ್ರ ಬಿಡಿಸಿದ್ದರು. ಇನ್ನು ಕೆಲವೇ ತಿಂಗಳಲ್ಲಿ (1951 ನವೆಂಬರ್ 1) ವಿಸ್ತ್ರತ ಕನ್ನಡ ನಾಡಿಗೆ ಸೇರಲಿರುವ ದಕ್ಷಿಣ ಕನ್ನಡಿಗರ ಬುದ್ಧಿಬಲಕ್ಕೆ ಸಿಗಲಿರುವ ವಿಶಾಲ ಭೂಮಿಕೆಯ ಚಿತ್ರವನ್ನೂ ಕೆಂಗಲ್ ಬಿಡಿಸಿದ್ದರು.
ಮೇಲಂತಸ್ತಿನ ಜಿಲ್ಲೆ
ಅಂದಿನವರೆಗೆ ದೂರದ ಮದ್ರಾಸು ಪ್ರಾಂತ್ಯದ ಒಂದು ಬಿಡಿ ಭಾಗವಾಗಿದ್ದರೂ ದಕ್ಷಿಣ ಕನ್ನಡ ಜಿಲ್ಲೆ ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಮೇಲಂತಸ್ತಿನಲ್ಲೇ ಇತ್ತು. ಕನ್ನಡ ನಾಡಿಗೆ ಸೇರಿದ ಮೇಲೆ ಈ ಜಿಲ್ಲೆಯ ಮುನ್ನಡೆಗೆ ಹೊಸ ಆಯಾಮ ಬರುವುದೆಂಬುದು ಆಗ ಎಲ್ಲರ ನಿರೀಕ್ಷೆಯಾಗಿತ್ತು.
ಎಲ್ಲಾ ಕ್ಷೇತ್ರಗಳಲ್ಲಿಯೂ ಮುನ್ನಡೆಯ ದಾಪುಗಾಲು ಹಾಕುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಕನ್ನಡನಾಡಿನ ಅಭಿಮಾನದ ಕಳಶವಾಗುವುದೆಂಬ ನಿರೀಕ್ಷೆಯಲ್ಲಿ ಎದೆಯುಬ್ಬಿದವರಲ್ಲಿ ನಾನೂ ಒಬ್ಬ. ಯಾಕೆಂದರೆ ನಾಡಿನ ಇತರ ಜಿಲ್ಲೆಗಳ ಜನ ಮೆಚ್ಚುವ ಎಲ್ಲ ಗುಣಗಳೂ ನಮ್ಮಲ್ಲಿದ್ದುವು. ಆಡಳಿತದಲ್ಲಿ ಲಂಚಗುಳಿತನವೆಂಬುದು ಕಿಂಚಿತ್ತೂ ಇಲ್ಲಿರಲಿಲ್ಲ. ಸಾರ್ವಜನಿಕ ಮುಖಂಡರು ಇಲ್ಲಿ ಸ್ವಚ್ಚತೆಗೆ ಹೆಸರಾಗಿದ್ದರು. ವಿದ್ಯಾರ್ಥಿ ಸಮೂಹ ಪ್ರತಿಭೆಯ ಆಗರವಾಗಿತ್ತು. ಆದರ್ಶ ಅಧ್ಯಾಪಕರ ದೊಡ್ಡ ಪಟ್ಟಿಯೇ ಇಲ್ಲಿತ್ತು. ವಿದ್ಯಾವಂತ ಯುವಕರು ಪುಸ್ತಕ ಪ್ರಿಯರಾಗಿದ್ದರು. ವಿಚಾರವಂತಿಕೆ ಬೆಳೆಸಿಕೊಂಡಿದ್ದರು. ಚಿತ್ರ ಮಂದಿರಗಳ ಮುಂದೆ ಕ್ಯೂ ನಿಲ್ಲುವುದು ಆಪಮಾನಕಾರಿಯೆಂದು ಆಗಿನ ಯುವಕರು ತಿಳಿದಿದ್ದರು. ಕನ್ನಡ ನಾಡಿನ ಇತರ ಯಾವ ಭಾಗದಲ್ಲೂ ಇಲ್ಲದಷ್ಟು ತೀವ್ರವಾದ ಕಾರ್ಮಿಕ ಚಳುವಳಿ ಇಲ್ಲಿ ಬೇರುಬಿಟ್ಟಿತ್ತು. ಇಲ್ಲಿನ ರಾಜಕೀಯದಲ್ಲಿ ಸಮಾಜವಾದಿಗಳು ಸಕ್ರಿಯರಾಗಿದ್ದರು. ಮದ್ಯಪಾನ ಮಹಾಪರಾಧವೆಂಬ ಭಾವನೆ ಈ ಜಿಲ್ಲೆಯಲ್ಲಿ ವ್ಯಾಪಕವಾಗಿತ್ತು. ಮೋಸ ವಂಚನೆ ಮಾಡಿ ಅಥವಾ ಇನ್ನಿತರ ವಾಮಾಚಾರಗಳಿಂದ ಹಣಗಳಿಸುವವರು ಸಾರ್ವಜನಿಕರ ತಿರಸ್ಕಾರಕ್ಕೆ ಈಡಾಗುತ್ತಿದ್ದರು.
ಮೌಲ್ಯದ ನೆಲೆ ಇತ್ತು
ಇಂತ ಮೌಲ್ಯಗಳ ನೆಲೆಯಲ್ಲಿ ನಿಂತು ಮುನ್ನಡೆಯುತ್ತಿದ್ದ ಜಿಲ್ಲೆಗೆ ಸೇರಿದವನು ನಾನೆಂಬ ಹೆಮ್ಮೆ ನನಗಾಗ ಇತ್ತು. ಪತ್ರಿಕಾ ವೃತ್ತಿ ಅವಲಂಬನೆಯಲ್ಲಿ ನಾನು 1957ರಲ್ಲಿ ಬೆಂಗಳೂರಿಗೆ ಹೋದಾಗ ಅಲ್ಲಿನ ಪತ್ರಕರ್ತರ ಮುಂದೆ ನಮ್ಮ ಜಿಲ್ಲೆಯ ರಾಜಕೀಯ ಮಹತ್ವ ಮತ್ತು ಅದರ ಗುಣ ವೈಶಿಷ್ಟ್ಯಗಳ ಬಗ್ಗೆ ಉದ್ದುದ್ದ ವ್ಯಾಖ್ಯಾನ ಮಾಡುತ್ತಿದ್ದೆ. ಮೊದ-ಮೊದಲು ಬೆಂಗಳೂರಿನ ಪತ್ರಕರ್ತರಿಗೆ ಇದನ್ನು ಅಲ್ಲಗಳೆಯಲಾಗುತ್ತಿರಲಿಲ್ಲ. ಆದರೆ ಕ್ರಮೇಣ ವಿಧಾನಸಭೆಯಲ್ಲಿ ಈ ಜಿಲ್ಲೆಯ ಪ್ರತಿನಿಧಿಗಳಲ್ಲಿ ಬಹುಮಂದಿ ತೊದಲಲು ಆರಂಭಿಸಿದರು. ಸಂಸದೀಯ ಪಟ್ಟುತ್ವದ ಲೋಪ ಜಿಲ್ಲೆಯ ಬಹುಮಂದಿ ಶಾಸಕರಲ್ಲಿ ಎದ್ದು ಕಂಡಿತು. ದಿವಂಗತರಾದ ಎ.ಬಿ.ಶೆಟ್ಟಿ ಮತ್ತು ಬಿ.ವೈಕುಂಠ ಬಾಳಿಗರನ್ನು ಬಿಟ್ಟರೆ ಈ ಜಿಲ್ಲೆಯ ಬೇರೆ ಯಾರೂ ಬೆಂಗಳೂರಿನ ಪತ್ರಕರ್ತರ ಮೇಲೆ ತಮ್ಮ ಬುದ್ಧಿಬಲದ ಮುದ್ರೆಯೊತ್ತಲಿಲ್ಲ.
ಇತ್ತೀಚಿನ ವರ್ಷಗಳಲ್ಲಿ ವಿಧಾನ ಮಂಡಲದಲ್ಲಿ ಜಿಲ್ಲೆಯ ಪ್ರತಿನಿಧಿಗಳ ತೊದಲು ನುಡಿಗಳು ಹೆಚ್ಚಾದಾಗ ಬೆಂಗಳೂರಿನ ನನ್ನ ಪತ್ರಕರ್ತ ಗೆಳೆಯರು “ನಿನ್ನ ಜಿಲ್ಲೆಯ ಜನ ಏನು ಬುದ್ಧಿವಂತರಯ್ಯಾ !” ಅಂತ ಗೇಲಿ ಮಾಡುತ್ತಿದ್ದರು.
ರಾಜಕೀಯ ವ್ಯವಸ್ಥೆಯಲ್ಲಿ ಜನ ಪ್ರತಿನಿಧಿಗಳ ಗುಣಮಟ್ಟ ಕಳಪೆಯಾದಾಗ ಈ ಪ್ರದೇಶದ ರಾಜಕೀಯ ಮಹತ್ವ ಕುಂದುತ್ತದೆ. ಹೀಗೆ ರಾಜಕೀಯವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅವನತಿ ನಿಧಾನವಾಗಿ ಆಗುತ್ತಲೇ ಬಂದಿದೆ. ಯಾಕೆ ಹೀಗಾಗುತ್ತಿದೆ? ವಿಚಾರವಂತರು ಮತ್ತು ಸುಜ್ಞಾನಿಗಳನ್ನು ರಾಜಕೀಯದಲ್ಲಿ ಬೆಳೆಸುವ ಪ್ರಜ್ಞೆ ಈ ಜಿಲ್ಲೆಯಲ್ಲಿ ಯಾಕ್ಕಿಲ್ಲವಾಯಿತು? ಎಂಬ ಪ್ರಶ್ನೆಗಳು ಆಗಾಗ ನನ್ನನ್ನು ಕಾಡಿಸುತ್ತಿದ್ದವು. ಇದಕ್ಕೆ ಉತ್ತರ ಹುಡುಕುವುದು ನನ್ನ ಕೈಲಾಗದ ಕೆಲಸವಾಗಿತ್ತು. ಎಳೆಯನಾಗಿದ್ದಾಗ ಗೊತ್ತು-ಗುರಿ ಇಲ್ಲದೆ ಬದುಕಿನ ಅಂದಗೆಡಿಸಿಕೊಂಡ ನನಗೆ, ಬೆಂಗಳೂರಿನಲ್ಲಿ ಪತ್ರಿಕಾ ವೃತ್ತಿಯಲ್ಲಿ ನೆಲೆಯೂರಿ ಬೆಳೆಯ ಬೇಕಾದ ದೊಡ್ಡ ಹೊಣೆ ಇತ್ತು.
ಹೀಗೆ ಬೆಂಗಳೂರಿನಲ್ಲಿ ಪತ್ರಕರ್ತನಾಗಿ ವ್ಯಕ್ತಿತ್ವವನ್ನು ರೂಪಿಸಿಕೊಂಡ ಒಂದು ಹಂತದಲ್ಲಿ, ಸ್ವತಂತ್ರ ಬದುಕಿನ ಬಯಕೆ ಮೂಡಿತು. ಇಪ್ಪತ್ತನಾಲ್ಕು ವರ್ಷಗಳ ಕಾಲ ನಾನು ದುಡಿದು ಬೆಳೆದ ಡೆಕನ್ ಹೆರಾಲ್ಡ್- ಪ್ರಜಾವಾಣಿ ಸಂಸ್ಥೆಗೆ ರಾಜೀನಾಮೆ ಕೊಟ್ಟು 1983ರ ಸೆಪ್ಟಂಬರ್ನಲ್ಲಿ ಮುಂಗಾರು ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿದೆ. ಈ ಹೊಸ ಸಂಸ್ಥೆಯ ದಿನ ಪತ್ರಿಕೆಯನ್ನು ನನ್ನ ಜಿಲ್ಲೆಯ ಕೇಂದ್ರವಾದ ಮಂಗಳೂರಿನಿಂದಲೇ ಆರಂಭಿಸಬೇಕೆಂದು ತೀರ್ಮಾನಿಸಿದೆ. ನಾನು ಈ ಜಿಲ್ಲೆಯವನಾದರೂ ಪತ್ರಕರ್ತನಾಗಿ ನಾನು ಈ ಹೆಚ್ಚು ಪರಿಚಿತನಾಗಿರುವುದು ನಾಡಿನ ಬಯಲು ಸೀಮೆಯಲ್ಲಿ. ನನ್ನ ಓದುಗ ಬಳಗವಿರುವುದೂ ಅಲ್ಲಿಯೇ ಹೆಚ್ಚು. ಇದೆಲ್ಲ ನನಗೆಗೊತ್ತಿತ್ತು. ಆದರೂ ಮಾನವ ಚೈತನ್ಯದ ಮಹಾ ಸಾಗರದಂತಿರುವ ಈ ಕಡಲ ತೀರದ ಜಿಲ್ಲೆಯಲ್ಲಿ ಚಿಂತನೆಯ ಮಳೆ ಸುರಿಸಿ ಜನ ಶಕ್ತಿಯ ಬೆಳೆ ತೆಗೆಯಬೇಕೆಂದು ನನ್ನ ಕಲ್ಪನೆಯಾಗಿತ್ತು. ಅದಕ್ಕೆ ಹದವಾದ ಮನೋಭೂಮಿಕೆ ಮೂವತ್ತು ವರ್ಷಗಳ ಹಿಂದೆ ಇಲ್ಲಿತ್ತು.
ವಾಣಿಜ್ಯಮಯ
ಅದೆಲ್ಲಾ ಈಗ ಕಳೆದು ಹೋದ ಮಾತು. ನಿನ್ನ ಜಿಲ್ಲೆಯ ಜೀವನ ಈಗ ವಾಣಿಜ್ಯ ಮಯವಾಗಿದೆ ಎಂದು ನನಗೆ ಮೊದಲು ಹೇಳಿದವರು, ಇಲ್ಲಿನ ರೋಶನಿ ನಿಲಯದಲ್ಲಿ ಸಮಾಜ ವಿಜ್ಞಾನದ ಪ್ರಾಧ್ಯಾಪಕರಾಗಿರುವ ಡಾ|| ಜಿ.ಆರ್. ಕೃಷ್ಣ . ಇವರು ಆಂಧ್ರ ಪ್ರದೇಶದವರು. ಪ್ರಸಿದ್ಧ ರಾಜಕಾರಣಿ ಪ್ರೊ|| ಎಸ್.ಜಿ ರಂಗ ಅವರ ಸೋದರ ಸಂಬಂಧಿ. ಸಮಾಜ ಶಾಸ್ತ್ರವನ್ನ ಆಳವಾಗಿ ಅಭ್ಯಾಸ ಮಾಡಿದ ಕೆಲವೇ ಜನರಲ್ಲಿ ಇವರೊಬ್ಬರು. ತಮ್ಮ ಪಾಂಡಿತ್ಯಕ್ಕೆ ವಿಶ್ವಮನ್ನಣೆ ಪಡೆದವರು.
1984ರ ಜನವರಿಯ ಅದೊಂದು ದಿನ ನಾನವರನ್ನು ಸಂಧಿಸಿ ನನ್ನ ಮುಂಗಾರು ಯೋಜನೆಯ ಕುರಿತು ಮಾತನಾಡಿದೆ. ಕಳೆದ ಹದಿನೈರು ವರ್ಷಗಳಿಂದ ಮಂಗಳೂರಿನಲ್ಲೇ ಡಾ|| ಜಿ.ಆರ್. ಕೃಷ್ಣ, ಈ ಜಿಲ್ಲೆಯ ಜನರನ್ನು ಮತ್ತು ಅದರ ಬದುಕುನ್ನು ಇಂದು ಅವರಿಸಿರುವ ವಾಣಿಜ್ಯ ಮೌಲ್ಯಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವಂತೆ ಕಂಡಿತು. ಮಂಗಳೂರಿನಿಂದ ಮುಂಗಾರು ಹೊರಡಿಸಬೇಕೆಂಬ ನನ್ನಾಸೆಗೆ ಅವರು ತಣ್ಣೀರೆರಚಲಿಲ್ಲ. ಆದರೆ ವಾಣಿಜ್ಯ ದೃಷ್ಟಿಯೊಂದೇ ಇಲ್ಲಿ ಯಶಸ್ವಿಯಾದೀತು ಎಂಬ ಸೂಚನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜನಜೀವನ ಇಂದು ಪೂರ್ಣವಾಗಿ ವಾಣಿಜ್ಯಮಯವಾಗಿದೆ. ಈ ದೇಶದಲ್ಲಿಂದು ಮಹಾಪೀಡೆ ಎನ್ನಿಸಿಕೊಂಡಿರುವ ವಿದ್ಯೆಯ ವ್ಯಾಪಾರ ಆರಂಭವಾದುದು ಇಲ್ಲಿಯೇ. ರಾಜಕೀಯಕ್ಕೂ ವಾಣಿಜ್ಯ ಗಣನೆ ಬಂದಿದೆ. ಗಂಡು ಹೆಣ್ಣಿನ ಮಾನವೀಯ ಸಂಬಂಧವೂ ಕೂಡಾ ಇಲ್ಲಿ ವಾಣಿಜ್ಯ ವಸ್ತುವಾಗಿದೆ. ಜಿಲ್ಲೆಯ ಪ್ರೌಢ ಕಲೆಯಾದ ಯಕ್ಷಗಾನವೂ ವ್ಯಾಪಾರದ ಡೇರೆಯಲ್ಲಿ ಸಿಕ್ಕಿ ನಶಿಸುತ್ತಿದೆ. ಆದ್ದರಿಂದ ನೀವು ಹೊರಡಿಸುವ ಪತ್ರಿಕೆ ಈ ವ್ಯಾಪಾರಿ ಸೂತ್ರಕ್ಕೆ ಸಲ್ಲುವಂತಿರಬೇಕು, ಎಂದು ನನಗವರು ಹೇಳಿದ್ದರು.
ವಾಣಿಜ್ಯಮಯವಾಗಿರುವ ಜಿಲ್ಲೆಯ ಜನ ಜೀವನಕ್ಕೆ ಅವರು ಹಲವು ನಿದರ್ಶನಗಳನ್ನಿತ್ತರು. ಅವರ ಅಭಿಪ್ರಾಯದಲ್ಲಿ, ಈ ಜಿಲ್ಲೆಯಲ್ಲಿ ಕಮ್ಯೂನಿಸ್ಟ್ ಕಾರ್ಮಿಕ ಚಳವಳಿಯ ನೆಲೆ ತಪ್ಪಿದ್ದುದಕ್ಕೂ ಇದೇ ಕಾರಣ. ಇಲ್ಲಿನ ಸಭೆ ಸಮಾರಂಭಗಳು ಅಥವಾ ಶಾಲಾ ವಾರ್ಷಿಕೋತ್ಸಗಳಿಗೆ ಹಣವಂತರು ಅಥವಾ ಬ್ಯಾಂಕ್ ಅಧಿಕಾರಿಗಳನ್ನೇ ಮುಖ್ಯ ಅತಿಥಿಗಳಾಗಿ ಕರೆಯುವುದೇ ಈಗೊಂದು ಫ್ಯಾಷನ್ ಆಗಿರುವುದುನ್ನು ಪ್ರಸ್ತಾಪಿಸಿದರು. ಬುದ್ಧಿಗೆ ಇಲ್ಲೀಗ ಬೆಲೆ ಇಲ್ಲದಾಗುತ್ತಿದೆಯೆಂದರು.
ಡಾ. ಕೃಷ್ಣ ಒಬ್ಬ ಸಮಾಜ ವಿಜ್ಞಾನಿ ಅವರ ಮಾತಿಗೆ ಬಹಳ ತೂಕವಿದೆ. ಅದನ್ನು ಕಿವಿಗೊಟ್ಟು ಕೇಳುವವರಿಲ್ಲವೆಂದು ಅವರು ಕೊರಗಿದವರು. ನಿಮ್ಮ ಜಿಲ್ಲೆಯ ಜನ ಬುದ್ಧಿ ಬಲದ ನೆಲೆ ಇಲ್ಲದೆ ಕಟ್ಟುತ್ತಿರುವ ಭೌತಿಕ ಸೌಧ, ಪರಿವರ್ತನೆಯ ಬಿರುಗಾಳಿಯಲ್ಲೊಂದು ದಿನ ಬಿದ್ದು ಹೋಗಲಿದೆ ಎಂದು ಎಚ್ಚರಿಸಿದರು.
ಅನಂತರ ನಾನು ಮತ್ತು ಅವರು ಆಗಾಗ ಸೇರಿ ಪ್ರಚಲಿತ ಸಮಾಜ ಮತ್ತು ಅದರಲ್ಲಿ ಪತ್ರಿಕೆಗಳ ಪಾತ್ರ ಎನ್ನುವ ಕುರಿತು. ಚರ್ಚಿಸಿದ್ದೆವು. ಪರಿವರ್ತನಾ ಶೀಲವಾದ ಭಾರತೀಯ ಸಮಾಜದಲ್ಲಿ ಪತ್ರಿಕೆ ಒಂದು ಸಾಧನ. ಅದು ಒಂದು ತತ್ವಕ್ಕೆ ಬದ್ಧವಾಗಿರಬೇಕು. ಈ ತತ್ವ ಪ್ರತಿಪಾದನೆ ಕೆಲವರಿಗೆ ಮೆಚ್ಚಿಕೆ ಆಗಬಹುದು. ಅನೇಕರು ಇದರಿಂದ ರೊಚ್ಚಿಗೇಳಬಹುದು ಇಂತಹ ವಿಭಿನ್ನ ಪ್ರತಿಕ್ರಿಯೆಗಳಿಂದಲೂ ಪತ್ರಿಕೆ ತನ್ನ ಉದ್ದೇಶ ಸಾಧನೆ ಮಾಡಿದೆಯೆಂದು ತಿಳಿಯಬೇಕಾಗುತ್ತದೆ. ಇದರಿಂದ ಜನಸಮೂಹದಲ್ಲಿ ವಿಚಾರವಂತಿಕೆಯನ್ನು ಬೆಳೆಸಿದಂತಾಗುತ್ತದೆ. ಎಲ್ಲರಿಗೂ ಸಲ್ಲು-ಉಪಚಾರದ-ಆತ್ಮವಂಚನೆ ವಾಣಿಜ್ಯ ವಸ್ತುವಾಗಿ ಪತ್ರಿಕಾ ವೃತ್ತಿ ಉಳಿಯಬೇಕಾಗಿಲ್ಲ ಎಂಬ ತೀರ್ಮಾನಕ್ಕೆ ಬಂದೆವು.
ಅನೇಕರು ರೊಚ್ಚು
ನಮ್ಮ ಕಲ್ಪನೆಯ “ಮುಂಗಾರು” ಆರಂಭವಾಗಿ ಈಗ ಆರು ತಿಂಗಳು ಕಳೆಯಿತು. ನಾವು ಮೊದಲ ಕಲ್ಪಿಸಿದ ರೀತಿಯಲ್ಲೇ ನಮ್ಮ ವೃತ್ತಿ ನೀತಿಯನ್ನು ಉಳಿಸಿಕೊಂಡು ಬಂದಿದ್ದೇವೆ. ನಮ್ಮ ನೀತಿಯನ್ನು ಕೆಲವರು ಮೆಚ್ಚಿದ್ದರೆ, ಅನೇಕರು ರೊಚ್ಚಿ ಗೆದ್ದಿದ್ದಾರೆ. ಇಲ್ಲಿಯೂ ಕೂಡಾ ಒಂದು ಸ್ವಾರಸ್ಯದ ಸಂಗತಿಯೆಂದರೆ-ನಮ್ಮ ನೀತಿಯನ್ನು ಹೆಚ್ಚಾಗಿ ಮೆಚ್ಚಿರುವವರು ಕೊಡಗು, ಹಾಸನ, ಚಿಕ್ಕಮಂಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜನತೆ. ಓದುಗರ ಸಂಖ್ಯೆಯಲ್ಲಿ ಈ ಜಿಲ್ಲೆಗಳದು ಅರ್ಧಪಾಲು; ಉಳಿದರ್ಧ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆಗಳಲ್ಲಿಯೂ ನಮ್ಮ ನಿಲುವನ್ನು ಒಪ್ಪದವರಿದ್ದಾರೆ. ಇದನ್ನು ನಾವು ನಿರೀಕ್ಷಿಸಿಯೂ ಇದ್ದೇವೆ. ನಮ್ಮ ನೀತಿಯನ್ನು ಒಪ್ಪದಿರುವ ಅನೇಕ ಓದುಗರು ನಮ್ಮನ್ನು ಗೌರವದಿಂದ ಕಂಡಿದ್ದಾರೆ.
ಆದರೆ ನನ್ನ ಮನಸ್ಸಿಗೆ ತುಂಬಾ ನೋವನ್ನುಂಟು ಮಾಡಿರುವ ಒಂದು ಅಂಶ ಕಲ್ಯಾಣಪುರ ಹೊಳೆಯಿಂದಾಚೆಗಿನಕೆಲವರು ಓದುಗರು ನನ್ನ ಮೇಲೆ ವೈಯಕ್ತಿಕವಾಗಿ ಸುರಿದ ಬೈಗುಳದ ಮೆಳೆ. ಹೀಗೆ ನನ್ನನ್ನು ಹೀನಾಯವಾಗಿ ನಿಂದಿಸಿ ಪತ್ರ ಬರೆದವರು ಒಂದೇ ವರ್ಗಕ್ಕೆ ಸೇರಿದವರೆಂಬುದೂ ಗಮನಾರ್ಹ.
ಪ್ರಶ್ನಾವಳಿ
ಹೆಸರು ಹಾಕದೆ ವಿಳಾಸ ಕೊಡದೆ ಹೀಗೆ ಬೈದಿರುವವರಿಗೆ ವೈಯಕ್ತಿಕವಾಗಿ ಉತ್ತರ ಕೊಡುವುದು ಸಾಧ್ಯವಿಲ್ಲದ ಮಾತು. ಇದರ ಮೇಲಿಗೆ, ನಾವು ಇತ್ತೀಚಿಗೆ ಓದುಗರ ಅಭಿಪ್ರಾಯ ಸಂಗ್ರಹಕ್ಕೆ ಒಂದು ಪ್ರಶ್ನಾವಳಿಯನ್ನು ಕಳಿಸಿದ್ದೇವೆ. ಅದರಲ್ಲಿಯೂ ಕೂಡ ನಮ್ಮ ನಿಲುವನ್ನು ಉಗ್ರವಾಗಿ ಖಂಡಿಸಿದವರಲ್ಲಿ ಕಲ್ಯಾಣಪುರ ಹೊಳೆಯಿಂದಾಚೆಗಿನವರೇ ಹೆಚ್ಚು.
ಪ್ರಶ್ನಾವಳಿಗೆ ಬಂದಿರುವ ಎಲ್ಲ ಅಭಿಪ್ರಾಯಗಳನ್ನೂ ಗೌರವದಿಂದ ಕಾಣಬೇಕೆಂಬುದು ನನ್ನಿಚ್ಛೆ. ಇದರಲ್ಲಿ ಹೆಚ್ಚಿನವರು “ ಮುಂಗಾರು” ಕಾಂಗೈ ಮುಖವಾಣಿ ಎಂದು ಟೀಕಿಸಿದ್ದಾರೆ. ಬಂಗಾರಪ್ಪನ ಪ್ರಚಾರದ ಪತ್ರಿಕೆಯೆಂದು ಖಂಡಿಸಿದ್ದಾರೆ ಮಾನ್ಯ ಓದುಗರ ಈ ಆಪಾದನೆಗಳಿಗೆ ವಿವರಣೆ ಕೊಡಬೇಕಾದ ನೈತಿಕ ಹೊಣೆ ನನ್ನ ಮೇಲಿದೆ. ನಾನು ಮುಂಗಾರು ಪತ್ರಿಕೆಯ ಸಂಸ್ಥಾಪಕ ನಾಗಿರಬಹುದು. ಸಂಪಾದಕನೂ ಆಗಿದ್ದೇನೆ. ಅಂದ ಮಾತ್ರಕ್ಕೆ ಅದು ನನ್ನ ಸ್ವಂತ ಸೊತ್ತಾಗುವುದಿಲ್ಲ. ಇದು ಓದುಗರ ಪತ್ರಿಕೆ. ಓದುಗರನೊಡನೆ ಮನಬಿಚ್ಚಿ ಮಾತನಾಡ ಬೇಕಾದುದು ನನ್ನ ಕರ್ತವ್ಯ. ತತ್ವಕ್ಕೆ ಬದ್ದನಾದ ಒಬ್ಬ ಪತ್ರಕರ್ತನಾಗಿ ಯಾವುದೇ ಮುಚ್ಚು ಮರೆಯಿಲ್ಲದೆ ಈ ಕರ್ತವ್ಯವನ್ನು ನಿರ್ವಹಿಸುತ್ತೇನೆ. ಪ್ರತಿಯೊಂದು ಟೀಕೆಗೂ ಬಿಡಿ ಬಿಡಿಯಾಗಿ ಉತ್ತರ ಕೊಡಬೇಕೆಂದು ನನ್ನಾಸೆ.
(‘ಮುಂಗಾರು’ ಕಾಂಗೈ ಪಕ್ಷದ ಮುಖವಾಣಿಯೇ? ಎಂಬ ಪ್ರಶ್ನೆಗೆ ಮಂಗಳವಾರದ ಸಂಚಿಕೆಯಲ್ಲಿ ಉತ್ತರಿಸುತ್ತೇನೆ.- ಸಂ)
**********

Thursday, June 30, 2016

ಪತ್ರಕರ್ತರೆಲ್ಲ ಓದಲೇ ಬೇಕಾದ ಲೇಖನ

ಪತ್ರಕರ್ತರೆಲ್ಲ ಓದಲೇ ಬೇಕಾದ ಲೇಖನ. ಭಾರತದ ಪ್ರಧಾನ ಮಂತ್ರಿಯವರನ್ನು ಸಂದರ್ಶನ ಮಾಡುವುದು ಎಷ್ಟು ಕಷ್ಟ ಗೊತ್ತಾ? ಸಿಕ್ಕಸಿಕ್ಕಲ್ಲಿ ಮೈಕ್ ಮುಂದಿಟ್ಟರೆ ಮಾತನಾಡಲು ಅವರೇನು ಕರ್ನಾಟಕದ ಮುಖ್ಯಮಂತ್ರಿಗಳೇ? ಅರ್ಥ ಮಾಡಿಕೊಳ್ಬೇಕಪ್ಪಾ!
ಇದನ್ನು ಮುಖ್ಯವಾಗಿ ನನ್ನ ಸ್ನೇಹಿತರಾದ ಶಾಸಕ ಸುರೇಶ್ ಕುಮಾರ್ ಅವರು ಓದಬೇಕು. ಇಂದಿರಾಗಾಂಧಿಯವರ ಪತ್ರಿಕಾ ಕಾರ್ಯದರ್ಶಿಯಾಗಿದ್ದ ಎಚ್.ವೈ.ಶಾರದಾ ಪ್ರಸಾದ್ ಅವರ ಮೇಲ್ಪಂಕ್ತಿಯನ್ನು ನಾನು ಅನುಸರಿಸಬೇಕು ಎಂದು ಅವರು ಸಲಹೆ ನೀಡುತ್ತಲೇ ಇದ್ದಾರೆ. ಈಗ ಹೇಳಿ ಸ್ವಾಮಿ, ಕಾಂಗ್ರೆಸ್ ಪ್ರಧಾನಿ ಇಂದಿರಾಗಾಂಧಿಯವರ ಪತ್ರಿಕಾ ಕಾರ್ಯದರ್ಶಿಯವರನ್ನು ಅನುಸರಿಸಲೋ ಇಲ್ಲ ನಿಮ್ಮ ಪಕ್ಷದ ಪ್ರಧಾನಿ ನರೇಂದ್ರ ಮೋದಿಯವರ ಮಾಧ್ಯಮ ನಿರ್ವಹಣಾ ಅಧಿಕಾರಿಗಳ ಮೇಲ್ಪಂಕ್ತಿಯನ್ನೋ?
.ಕಳೆದ ಆಗಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅರಬ್ ರಾಷ್ಟ್ರಗಳಿಗೆ ಭೇಟಿ ನೀಡುವ ಮೊದಲು ಅಲ್ಲಿನ ಪತ್ರಕರ್ತ ಬಾಬಿ ನಕ್ವಿ ಮೋದಿಯವರನ್ನು ಸಂದರ್ಶಿಸಿದ್ದರು. ಆ ಸಂದರ್ಶನದ ಹಿಂದಿನ ‘ಸತ್ಯ’ಗಳನ್ನು ಅರ್ನಬ್ ಗೋಸ್ವಾಮಿ ಸಂದರ್ಶನದ ಹಿನ್ನೆಲೆಯಲ್ಲಿ ಬಾಬಿ ಹಂಚಿಕೊಂಡಿದ್ದಾರೆ. ಆ ಲೇಖನದ ಒಂದು ತುಣುಕು ಹೀಗಿದೆ:
"...'ಪೋಟೊ ತೆಗೆದು, ಕೈಕುಲುಕಿದ ನಂತರ ಪ್ರಧಾನ ಮಂತ್ರಿಯವರು ನಿನ್ನ ಕಡೆ ನೋಡುತ್ತಾರೆ, ಆಗ ನೀನು ಮಾತನಾಡಲು ಪ್ರಾರಂಭಿಸಬೇಕು’ ಎಂದು ಒಬ್ಬ ಅಧಿಕಾರಿ ವಿನಯದಿಂದ ಅಷ್ಟೇ ಗಟ್ಟಿ ದನಿಯಲ್ಲಿ ಹೇಳಿದ. ಅಷ್ಟರಲ್ಲಿ ನನಗೆ ಇನ್ನೊಂದು ಆಘಾತ ಕಾದಿತ್ತು. ‘ನೀನು ಕೇವಲ ಒಂದು ಪ್ರಶ್ನೆ ಮಾತ್ರ ಕೇಳಬಹುದು, ಉಳಿದ ಪ್ರಶ್ನೆಗಳಿಗೆ ಉತ್ತರವನ್ನು ಲಿಖಿತ ರೂಪದಲ್ಲಿ ಸಂದರ್ಶನದ ನಂತರ ನೀಡಲಾಗುವುದು’ ಎಂದು ಅಧಿಕಾರಿ ಮಾತು ಮುಗಿಸಿದ.
ಸ್ಕ್ರಿಪ್ಟ್ ಪ್ರಕಾರವೇ ಸಂದರ್ಶನ ನಡೆಯಿತು. ಅದರ ನಂತರ ಪಿಎಂ ತಂಡದ ಸದಸ್ಯರ ಜತೆ ಮಾತುಕತೆ ನಡೆಯಿತು. ಅಷ್ಟರಲ್ಲಿ ನಾನು ಪ್ರಧಾನಿಯವರನ್ನು ಕೇಳಿರದ ಪ್ರಶ್ನೆಗಳಿಗೆ ಸಿದ್ದಪಡಿಸಿದ ಉತ್ತರವನ್ನು ಕೈಗೆ ಕೊಟ್ಟರು.
.....ಅಂದರೆ ಉಳಿದ ಪ್ರಶ್ನೆಗಳಿಗೆ ಪ್ರಧಾನಿಯವರು ಒಬ್ಬರೇಕೂತು ಗೋಡೆ ನೋಡಿ ಉತ್ತರಿಸಿದರೇ? Full confusion!
------------------------------------------------------------------------------------------------------
MEETING THE PM

Arranging an interview with the Prime Minister can be a long drawn and cumbersome process. I had the opportunity to experience it first hand last August. 
Ahead of his visit to the UAE, I requested an interview on bilateral relations between the two countries and India's role in the Arab world. After exchanging several emails with bureaucrats for several days, I received a call from a very senior official saying: "Bobby, I have good news and bad news. Which one you want to hear first?"
I didn't know what to say. Before I could speak, he said that the "PM has agreed." Then he mentioned two other publications would also be present. I was hugely disappointed as it was no longer an exclusive interview. I had no option but to grudgingly accept it with some protest.
Then I was told to send my questions for prior approval. And then followed several requests for security clearance: name of my driver, car registration number, photographer's details and a list of his equipment etc.
Till the last moment I had no clue about the venue and time of the meeting. All I was told was that it could be anytime after his Red Fort speech on the Independence Day. After frantic calls on August 14, I was given the phone number of my point of contact in Delhi. This person, a young officer, asked me to be in the capital before noon and said the exact time and venue would be provided later.
Just before I boarded the flight on August 14, I got a strange phone call. It was from a prominent Muslim personality who is considered close to the PM. "Kar Lijiye PM Sahab Ka Interview, Bade, Bade log line Mein Bhaithen Hain Unse Milne Ke Liye."
I was shocked and couldn't figure out how he found out about my meeting as this person is not part of the government.
Next morning in Delhi, another shock awaited me. My liaison officer informed that my photographer would not be allowed and that pictures would be taken by the PM's official photographer. I decided to put my foot down and told him I can't do that. Tense conversations followed back and forth and a few hours later the photographer was allowed on one condition - that he will spend only five minutes inside.
The three of us -- my driver, my brother Saify and photographer Pankaj drove to India's most famous address. It was raining cats and dogs that day. At the first checkpoint at 7 RCR we faced another trouble. A huge flashlight almost blinded us when a heavily armed man in a raincoat approached the car. The sound of heavy downpour made it impossible to hear him. All he could understand was that we are "from Dubai", words he repeated several times to make sure he heard them right. He then went back to the security office. After a few minutes he returned and told us to move the car away from the barrier and signaled me to follow him. An officer again took our details and radioed them to his superiors inside the office-residence complex. After several minutes, he said the photographer had no security clearance. I then contacted my liaison officer again and explained the problem. Several anxious moments later, we were allowed inside and directed to the visitor parking, a few meters away from the reception hall.
After intense security checks inside, we were told to wait in another room where a sniffer dog was brought in. Soon after, we were transferred to the main building in a shuttle car driven by a SPG man.
Inside, we were taken to a room overlooking a lush green lawn where I was briefed on the "order of the interview".
"After photos and handshakes, the prime minister will look at you, and then you start your conversation," an official told me in a tone that was polite but firm. Another shocker -- that I can ask only one question and answers to my remaining questions would be provided in writing after the meeting.
After the briefing, we were introduced to the PM's team members, including a Muslim officer from Bihar ( This officer, I was told, wrote the PM's famous Silicon Valley speech).
The meeting went as per the script. After a warm handshake, we spoke in Hindi about my late night flight and his Red Fort speech earlier that day. Another journalist who was scheduled to speak next (he came from US and picked up a gift for the PM from duty free) spoke in English via a translator, a senior woman official from publicity division. An hour or so after the meeting was over, I was given printed transcripts of the conversation and answers to my questions that I couldn't ask.
Today, I wasn't surprised when I read that questions for Times Now interview were sought in advance. I am not sure if this is a standard procedure for all PMs or unique to this govt.

Sunday, June 26, 2016

ಹಳದಿ ಕಣ್ಣುಗಳಿಗೆ ಏನೆಲ್ಲಾ ಕಾಣುತ್ತೋ ಗೊತ್ತಿಲ್ಲ

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿ ಸಿದ್ದರಾಮಯ್ಯನವರು ಮೈಸೂರಿಗೆ ಹೋಗಿದ್ದಾಗ ದೇವನೂರ ಮಹದೇವ ಮನೆಗೆ ಭೇಟಿ ನೀಡಿದ್ದರು. ಅಲ್ಲಿ ಓಡಾಡುತ್ತಿದ್ದ ಮಗಳನ್ನು (ಬಹುಷ: ಮಿತಾ ಇದ್ದಿರಬಹುದು) ಕಂಡ ಸಿದ್ದರಾಮಯ್ಯನವರು ‘ಏನೇ ಹೇಳು ಮಹದೇವ, ಮನೆಯಲ್ಲೊಬ್ಬಳು ಮಗಳು ಇರ್ಬೇಕು ಕಣಯ್ಯ’ ಎಂದು ಉದ್ಘರಿಸಿದ್ದು ಪತ್ರಿಕೆಗಳಲ್ಲಿ ವರದಿಯಾಗಿತ್ತು.

ಸ್ನೇಹಿತರು ತಮ್ಮ ಮಕ್ಕಳನ್ನು ಕರೆತಂದು ಪರಿಚಯಿಸಿದಾಗೆಲ್ಲ, ಮಗಳಾಗಿದ್ದರೆ ಸಿದ್ದರಾಮಯ್ಯನವರು ಭಾವುಕರಾಗಿದ್ದನ್ನು ಕಳೆದ ಮೂರು ವರ್ಷಗಳಲ್ಲಿ ಹಲವಾರು ಬಾರಿ ಕಂಡಿದ್ದೇನೆ.ಮೇಲ್ನೋಟಕ್ಕೆ ಎದುರಿಗಿದ್ದವರಲ್ಲಿ ಭೀತಿ ಹುಟ್ಟಿಸುವವರಂತೆ ಕಾಣುವ ಸಿದ್ದರಾಮಯ್ಯನವರು ಗೌರಿ (ಲಂಕೇಶ್) ಜೋರು ದನಿಯಲ್ಲಿ ವಾಗ್ವಾದಕ್ಕಿಳಿದಾಗಲೂ ನಗುತ್ತಾ ಸಮಾಧಾನದಿಂದ ಸಂತೈಸುತ್ತಿರುವುದನ್ನೂ ಕಂಡಿದ್ದೇನೆ.
ಈ ಎಲ್ಲ ಸಂದರ್ಭಗಳಲ್ಲಿಯೂ ಮತ್ತೊಬ್ಬರ ಮಕ್ಕಳಲ್ಲಿ ಮಗಳನ್ನು ಕಾಣುವ ಮಗಳಿಲ್ಲದ ತಂದೆಯ ಹಂಬಲ ನನ್ನಕಣ್ಣಿಗೆ ಕಂಡಿದೆ. ಹಳದಿ ಕಣ್ಣುಗಳಿಗೆ ಏನೆಲ್ಲಾ ಕಾಣುತ್ತೋ ಗೊತ್ತಿಲ್ಲ.
ಅಂದಹಾಗೆ ಈ ಹಳದಿ ಕಣ್ಣುಗಳ ಜತೆ ಊರೆಲ್ಲ ತಿರುಗಾಡುವ ವಿಕೃತರು ಮನೆಯೊಳಗೆ ಹೋದಾಗ ಆ ಕೊಳಕು ಕಣ್ಣುಗಳನ್ನು ಹೊರಗಿಟ್ಟು ಹೋಗುತ್ತಾರೋ, ಇಲ್ಲವೇ ಹೊತ್ತುಕೊಂಡು ಹೋಗುತ್ತಾರೋ!

Saturday, June 18, 2016

ನಕ್ಷತ್ರದ ಧೂಳು

ಎಲ್ಲಿದೆ ಜಾತಿ? ಎಲ್ಲಿದೆ ಅಸ್ಪೃಶ್ಯತೆ? ಎಂದು ಉಡಾಫೆಯಿಂದ ಮೀಸಲಾತಿಯನ್ನು ಪ್ರಶ್ನಿಸುವವರು, ಸಾಮಾಜಿಕ ನ್ಯಾಯದ ಸಿದ್ದಾಂತವನ್ನು ಗೇಲಿಮಾಡುವವರು, ಮೀಸಲಾತಿಯ ಫಲಾನುಭವಿಗಳನ್ನು ಹಂಗಿಸುವವವರು ಕಣ್ಣೀರಾಗಿ ಹೋಗಿರುವ ರೋಹಿತ ವೇಮುಲನ ಅಮ್ಮನಲ್ಲಿ ಈ ಪ್ರಶ್ನೆಗಳನ್ನು ಕೇಳಿ ಎದೆಮುಟ್ಟಿಕೊಳ್ಳಬೇಕು. ಸಾಧ್ಯವಾದರೆ ತಮ್ಮ ಮುಖಗಳನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಬೇಕು.
ಇದು ಕೇವಲ ಒಬ್ಬ ರೋಹಿತನ ಕತೆಯೆಂದು, ಇದು ಕೇವಲ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದೊಳಗೆ ಮಾತ್ರ ನಡೆಯುತ್ತಿರುವ ಅಮಾನುಷ ನಡವಳಿಕೆಯೆಂದು ತಿಳಿದುಕೊಂಡವರು ಮೂರ್ಖರು. ದೇಶದ ವಿಶ್ವವಿದ್ಯಾಲಯಗಳ ಒಳಹೊಕ್ಕು ನೋಡಿದರೆ ಒಂದು ಕೈಯಲ್ಲಿ ವಿಷದ ಬಾಟಲಿ, ಇನ್ನೊಂದು ಕೈಯಲ್ಲಿ ನೇಣಿನ ಹಗ್ಗ ಹಿಡಿದುಕೊಂಡ ನೂರಾರು ರೋಹಿತ ವೇಮುಲರನ್ನು ಕಾಣಬಹುದು. ನಾವಿಂದು ಯೋಚಿಸಬೇಕಾಗಿರುವುದು ಅನ್ಯಾಯ-ಅವಮಾನಗಳನ್ನು ನುಂಗಿಕೊಂಡು ಉಳಿದುಕೊಂಡವರನ್ನು ಉಳಿಸಿಕೊಳ್ಳುವುದು ಹೇಗೆ ಎಂದು.

Wednesday, June 8, 2016

ಮುಂಗಾರು ಪತ್ರಿಕೆ: ವಿಧಾನಸಭೆಯೇ ಬರಲಿದೆ ಜಿಲ್ಲೆಗೆ..

ಇದು ೩೮ನೇ ಸ್ವಾತಂತ್ರ್ಯೋತ್ಸವದಂದು ಮುಂಗಾರು ಪತ್ರಿಕೆಗೆ ನಾನು ಮಾಡಿದ್ದ ನೀರುಸಾಬರ ಸಂದರ್ಶನ. ಪ್ರವಾದಿಯಂತೆ ಅಂದು ಅವರು ವ್ಯಕ್ತಪಡಿಸಿದ್ದ ಅನೇಕ ಅಭಿಪ್ರಾಯಗಳುಇಂದು ನಿಜವಾಗಿದೆ.
ಮಾತುಕತೆ ಮುಗಿದ ನಂತರ ನನ್ನೂರಿನ ಬಗ್ಗೆ ವಿಚಾರಿಸಿದ್ದರು. ನಾನು ನಮ್ಮೂರಿನ ಕುಡಿಯುವ ನೀರಿನ ಸಮಸ್ಯೆಯನ್ನು ಸ್ವಲ್ಪ ಭಾವುಕವಾಗಿಯೇ ವಿವರಿಸಿದ್ದೆ. ತಕ್ಷಣ ಅವರು PHE ಎಂಜನಿಯರ್ ಅವರನ್ನು ಕರೆಸಿ ನಮ್ಮೂರಿಗೊಂದು ಬೋರ್ ವೆಲ್ ಹಾಕಲು.ಆದೇಶಿಸಿದ್ದರು. ಅದು ನಮ್ಮೂರಿನ ಮೊದಲ ಬೋರ್ ವೆಲ್. ಈಗ ಅದು ಬತ್ತಿಹೋಗಿದೆ, ಆದರೆ ಅವರ ನೆನಪು ಮಾತ್ರ ಎಂದೂ ಬತ್ತಿ ಹೋಗದು.
ಅವರು ನಿಧನರಾದಾಗ 'ಅಲ್ಲಾ ನೀಡಿದ ವಿಚಿತ್ರ ಪವಾಡ' ಎಂಬ ದೀರ್ಘವಾದ Obituary ಬರೆದಿದ್ದೆ. ಹುಡುಕಿದರೆ ಸಿಗಬಹುದು.
ಅಂದ ಹಾಗೆ ಈ ಫೊಟೋದಲ್ಲಿರುವ ಸಂದರ್ಶಕ ನಾನೇ. ಇದಕ್ಕೆ ಸಾಕ್ಷಿ ಕೇಶವ ವಿಟ್ಲ, ಅವನೇ ಫೋಟೋ ತೆಗೆದದ್ದು.

Monday, June 6, 2016

ಮುಂಗಾರು ಇಂದಿಗೂ ಉಳಿದಿದ್ದರೆ ಅವಿಭಜಿತ ದಕ್ಷಿಣ ಕನ್ನಡ ತಥಾಕಥಿತ ‘ಹಿಂದುತ್ವದ ಪ್ರಯೋಗಶಾಲೆ’; ಖಂಡಿತ ಆಗುತ್ತಿರಲಿಲ್ಲ

ಮುಂಗಾರು ಪತ್ರಿಕೆಯಲ್ಲಿ ನಾನು ಮಾಡಿದ್ದ ವರದಿಯೊಂದನ್ನು ಉಲ್ಲೇಖಿಸಿ ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಮೂಡಿರುವ ಗೊಂದಲ ನಿವಾರಣೆಗೆ ಈ ಪ್ರಯತ್ನ. ಭಿನ್ನಾಭಿಪ್ರಾಯಕ್ಕೆ ಸ್ವಾಗತ.
ವೃತ್ತಿಯಾಗಿದ್ದ ಮಾಧ್ಯಮ ಕ್ಷೇತ್ರ ಸಂಪೂರ್ಣವಾಗಿ ಉದ್ಯಮವಾಗಿ ಬದಲಾವಣೆಯಾಗಿರುವ ವಾಸ್ತವವನ್ನು ಒಪ್ಪಿಕೊಂಡು ಇಂದಿನ ಪತ್ರಕರ್ತರು ಕೆಲಸಮಾಡಬೇಕಾದ ಪರಿಸ್ಥಿತಿ ಇದೆ.. ಈ ಬಗ್ಗೆ ಆಕ್ಷೇಪ ಇದ್ದವರು ಬೇರೆ ದಾರಿ ನೋಡಿಕೊಳ್ಳಬೇಕಾಗುತ್ತದೆ. ಇದರ ಬದಲಿಗೆ ‘’ನಾನು ಒಳಗಿದ್ದೇ ಹೋರಾಡುತ್ತೇನೆ, ಇವರನ್ನೆಲ್ಲ ಬಯಲುಮಾಡುತ್ತೇನೆ, ಇದನ್ನು ಬದಲಾಯಿಸಿಯೇ ತೀರುತ್ತೇನೆ ಎಂದು ಹೊರಟವರ ಹೋರಾಟ ತಕ್ಷಣದ ಫಲ ನೀಡಲಾರದು. ಆ ಹೋರಾಟದ ಹಾದಿ ಹಿಡಿದರೆ ಪತ್ರಕರ್ತನಾಗಿ ತಾನು ಮಾಡಬಯಸಿದ್ದನ್ನು ಕೂಡಾ ಮಾಡಲಾಗದೆ ಕೊರಗುತ್ತಾ ಇರಬೇಕು- ಇದು ನನ್ನ ಖಚಿತ ಅಭಿಪ್ರಾಯ.
‘ಏನ್ಸಾರ್, ನೀವೂ ಹೀಗೆ ಹೇಳಿದರೆ ಹೇಗೆ? ಎಂದು ನನ್ನ ಯುವಪತ್ರಕರ್ತ ಮಿತ್ರರು ನನ್ನನ್ನು ದಬಾಯಿಸಬಹುದು. ಉದ್ಯಮಿಗಳ ಹಿಡಿತದಿಂದ ಮಾಧ್ಯಮ ಕ್ಷೇತ್ರವನ್ನು ಬಿಡುಗಡೆಗೊಳಿಸುವುದು ಸುದೀರ್ಘವಾದ ಹೋರಾಟ. ಅದು ನನ್ನ ತಲೆಮಾರಿನಲ್ಲಿ ಮುಗಿಯುವ ಭರವಸೆ ನನಗಿಲ್ಲವಾದರೂ ಈ ಹೋರಾಟ ವ್ಯರ್ಥ ಎಂದು ನಾನು ಹೇಳಲಾರೆ. ಈ ಹೋರಾಟ ಮುಂದುವರಿಯಬೇಕು. ನ್ಯಾಯಾಲಯದ ಒಂದು ತೀರ್ಪು, ಜ್ಞಾನೋದಯದ ಫಲವಾಗಿ ಶಾಸಕಾಂಗ ಕೈಗೊಳ್ಳುವ ಒಂದು ಜನಪರ ತೀರ್ಮಾನ ಎಲ್ಲವನ್ನೂ ಬದಲಾಯಿಸಿಬಿಡಬಹುದೇನೋ? ಆ ಭರವಸೆ ನಮ್ಮಲಿರಲಿ.
ಆದರೆ ಆ ದಿನ ಬರುವ ವರೆಗೆ ನಾನು ಪೆನ್ ಕೈಗೆತ್ತಿಕೊಳ್ಳುವುದಿಲ್ಲ ಕೀಪ್ಯಾಡ್ ಮುಟ್ಟುವುದೇ ಇಲ್ಲ ಎಂದು ಪತ್ರಕರ್ತರು ತೀರ್ಮಾನ ಕೈಗೊಂಡರೆ ಅದು ಮೂರ್ಖತನವಾಗುತ್ತದೆ. ನಮ್ಮಂತಹವರೆಲ್ಲ ಐಕಾನ್ ಎಂದು ಸ್ವೀಕರಿಸಿರುವ ಪಿ.ಸಾಯಿನಾಥ್ ‘ Everybody loves a good drought’ ಪುಸ್ತಕದ ಲೇಖನಗಳನ್ನು ಬರೆದಿರುವುದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಎನ್ನುವುದನ್ನು ಮರೆಯಬಾರದು. ಸಾಯಿನಾಥ್ ತನ್ನದೊಂದು ಆಸಕ್ತಿಯ ಕ್ಷೇತ್ರವನ್ನು ಹುಡುಕಿಕೊಳ್ಳದೆ ಮೊದಲು ಟೈಮ್ಸ್ ಆಫ್ ಇಂಡಿಯಾದೊಳಗೆ ಸಂಪಾದಕೀಯ ವಿಭಾಗದ ತಲೆಮೇಲೆ ಕೂತಿರುವ ಜಾಹಿರಾತು ವಿಭಾಗದವರ ವಿರುದ್ಧವೇ ಬರೆಯುತ್ತೇನೆ, ಇಲ್ಲದೆ ಇದ್ದರೆ ಅದರ ಮಾಲೀಕರಾದ ಜೈನ್ ಬಳಗದ ಉದ್ಯಮದ ಬಗ್ಗೆಯೇ ತನಿಖಾ ವರದಿ ಮಾಡುತ್ತೇನೆ ಎಂದು ಹೊರಟಿದ್ದರೆ ನಮಗೊಬ್ಬ ಸಾಯಿನಾಥ್ ಸಿಗುತ್ತಿರಲಿಲ್ಲ. 
ಸಾಯಿನಾಥ್ ಕೆಲಸ ಮಾಡಿದ ಪತ್ರಿಕೆಗಳಲ್ಲೆಲ್ಲಾ ಇಂತಹ ಬಿಕ್ಕಟ್ಟುಗಳಿದ್ದವು. ಕಾಸಿಗಾಗಿ ಸುದ್ದಿ ಹಗರಣದ ಬಗ್ಗೆ ಅವರು ಬರೆದದ್ದು ಇತ್ತೀಚಿನ ವರ್ಷಗಳಲ್ಲಿ. ಅಲ್ಲಿಯ ವರೆಗೆ ಸುದ್ದಿಯ ಛದ್ಮವೇಷದಲ್ಲಿ ಪ್ರಕಟಗೊಳ್ಳುತ್ತಿರುವ ಜಾಹೀರಾತು ಬಗ್ಗೆ ಅವರಿಗೆ ಗೊತ್ತಿರಲಿಲ್ಲವೇ? ಖಂಡಿತ ಗೊತ್ತಿತ್ತು. ಆದರೆ ಅವರ ಆದ್ಯತೆ ಬೇರೆ ಇತ್ತು. ಈ ವಿವೇಚನೆ ಒಬ್ಬ ಪತ್ರಕರ್ತನಿಗೆ ಇರಬೇಕೆಂದು ನನ್ನ ಅಭಿಪ್ರಾಯ. ಇದನ್ನು ಪ್ರಾಯೋಗಿಗ ನೋಟ ಎನ್ನುತ್ತಿರೋ? ವ್ಯವಸ್ಥೆಯ ಜತೆ ರಾಜೀ ಎನ್ನುತ್ತಿರೋ ಇದು ನಿಮಗೆ ಬಿಟ್ಟದ್ದು.
ನಾನು ಪ್ರಜಾವಾಣಿಯಲ್ಲಿದ್ದಾಗ ಹೊಸಬರ ನೇಮಕದ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದೆ. ಹೆಚ್ಚಿನವರಿಗೆ ವರದಿಗಾರರಾಗಬೇಕೆಂಬ ಅದರಲ್ಲೂ ರಾಜಕೀಯ ವರದಿಗಾರರಾಗುವ ಆಸೆ. ಯಾರೊಬ್ಬರೂ ‘’ನನಗೆ ಸಾಯಿನಾಥ್ ರೀತಿಯ ಪತ್ರಕರ್ತನಾಗಬೇಕೆಂಬ ಉದ್ದೇಶ ಎಂದು ಹೇಳಿದ್ದನ್ನು ಕೇಳಿರಲಿಲ್ಲ. ಇದು ನಮ್ಮ ಸಮಸ್ಯೆ.
ಆರು ವರ್ಷಗಳ ಹಿಂದೆ ನಾನು ತೀರಾ ಅನಾರೋಗ್ಯದಿಂದ ಚೇತರಿಸಿಕೊಂಡು ಕಚೇರಿಗೆ ಬಂದಾಗ ನಮ್ಮ ಸಂಪಾದಕರು ರಾಜ್ಯದಲ್ಲಿ ಅತಿವೃಷ್ಟಿ ಪೀಡಿತ ಪ್ರದೇಶದ ಪರಿಹಾರ ಕಾರ್ಯದ ಬಗ್ಗೆ ಹೋಗಿ ವರದಿಮಾಡಿ ಎಂದರು. ಆಗಿನ್ನೂ ನಾನೂ ಸಂಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ, ಯಾರಾದರೂ ಕಿರಿಯರು ತಾವು ಹೋಗ್ತೇವೆ ಎಂದು ಕೈ ಎತ್ತಬಹುದೇ ಎಂದು ಕಾದೆ. ಯಾರೂ ಕಾಣಲಿಲ್ಲ. ಈಗ ಪತ್ರಿಕೋದ್ಯಮದ ಬಗ್ಗೆ ತಮ್ಮ ಅಂಕಣಗಳಲ್ಲಿ ಪಾಠ ಮಾಡುವ ನನ್ನ ಹಿರಿಯ ಸಹದ್ಯೋಗಿಗಳು ಕೂಡಾ ಬಾಯಿ ಬಿಟ್ಟಿರಲಿಲ್ಲ.
ಅದರ ನಂತರ ಅಸ್ಸಾಂ ಗಲಭೆಪೀಡಿತ ಪ್ರದೇಶಕ್ಕೆ ಹೋದೆ, ಉತ್ತರಪ್ರದೇಶದ ವಿಧಾನಸಭಾ ಚುನಾವಣೆಕಾಲದಲ್ಲಿ ಒಂದು ತಿಂಗಳು ಸುತ್ತಿದೆ,ರಾಜ್ಯದ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಸುಮಾರು 5000 ಕಿ.ಮೀ. ಸುತ್ತಿದೆ. ನನ್ನ ಢಂಗುರ ಬಾರಿಸಲು ಇದನ್ನು ಹೇಳುತ್ತಿಲ್ಲ. ನಾನು ಈ ವರದಿಮಾಡಲು ಹೋಗದೆ ಪ್ರಜಾವಾಣಿ ಮಾಲೀಕರು ಯಾವುದೋ ಡಿನೋಟಿಪೀಕೆಷನ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಬಗ್ಗೆಯೇ ವರದಿಮಾಡುತ್ತೇನೆಂದು ಪಟ್ಟು ಹಿಡಿದು ಕೂತಿದ್ದಲ್ಲಿ ನನಗೆ ಈ ವರದಿಗಳನ್ನು ಮಾಡಲು ಅವಕಾಶ ಸಿಗುತ್ತಿತ್ತೇ? 
ಅಂದಹಾಗೆ ಇಂತಹ ಆರೋಪ-ಅನುಮಾನಗಳು ಗಾಳಿಯಲ್ಲಿ ಸುಳಿದಾಡುತ್ತಿರುವಾಗಲೇ ನಾನು ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ವಿರುದ್ಧ ಕಟುಟೀಕೆಗಳ ಸರಮಾಲೆಯ ಅಂಕಣಗಳನ್ನು ಬರೆದೆ. ಸಂಪಾದಕರು ಅದರ ಒಂದು ಸಾಲು ಬದಲಿಸದೆ, ಸಣ್ಣ ಆಕ್ಷೇಪದ ಗೊಣಗಾಟವನ್ನೂ ಮಾಡದೆ ನನಗೆ ಸ್ವಾತಂತ್ರ್ಯ ಕೊಟ್ಟಿದ್ದರು.
ನಾನು ಪ್ರಾಯೋಗಿಕವಾಗಿ ನೋಡಲು ಹೋಗಿ ವ್ಯವಸ್ಥೆಯ ಜತೆ ರಾಜಿಮಾಡಿಕೊಂಡೆ ಎಂದು ಹೇಳುತ್ತಿರಾ? ತೀರ್ಮಾನ ನಿಮಗೆ ಬಿಟ್ಟದ್ದು. ನನ್ನ ತೀರ್ಮಾನದ ಹಿಂದೆ ನಾನು ಪ್ರಾರಂಭದಲ್ಲಿಯೇ ಕಲಿತ ಪಾಠ ಮತ್ತು ಕಟು ವಾಸ್ತವದ ಅರಿವು ಇತ್ತು ಎಂದಷ್ಟೇ ನಾನು ಹೇಳಬಲ್ಲೆ. 
ಮುಂಗಾರು ಪತ್ರಿಕೆಗೆ ಹೊಟೇಲ್ ಉದ್ಯಮಿ ರಾಂಪಣ್ಣ ಕೂಡಾ ಒಬ್ಬ ನಿರ್ದೇಶಕರಾಗಿದ್ದರು. ಅವರ ಮನೆಯಲ್ಲಿ ನಡೆದ ಭೂತದ ಕೋಲದ ಪೋಟೊ ಮುಂಗಾರು ಪತ್ರಿಕೆಯಲ್ಲಿ ಪ್ರಕಟವಾಗಬೇಕೆಂದು ಅವರ ಬಯಕೆಯಾಗಿತ್ತು. ಇದಕ್ಕಾಗಿ ಆಗಿನ ನಮ್ಮ ಸಂಪಾದಕೀಯ ಬಳಗದಲ್ಲಿ ಒಂದು ದೊಡ್ಡ ‘ಸೈದ್ಧಾಂತಿಕ ಯುದ್ಧ’ವೇ ನಡೆದಿತ್ತು. ತಿರುಗಿನೋಡಿದಾಗ ಆ ಯುದ್ಧದಲ್ಲಿ ಪಾಲ್ಗೊಂಡವರಿಗೂ ಅಂದಿನ ಜಗಳ ಬಾಲಿಷ ಅನಿಸಬಹುದು. ಮುಂಗಾರು ಇಂದಿಗೂ ಉಳಿದಿದ್ದರೆ ಅವಿಭಜಿತ ದಕ್ಷಿಣ ಕನ್ನಡ ತಥಾಕಥಿತ ‘ಹಿಂದುತ್ವದ ಪ್ರಯೋಗಶಾಲೆ’; ಖಂಡಿತ ಆಗುತ್ತಿರಲಿಲ್ಲ ಎನ್ನುವುದು ನನ್ನ ನಂಬಿಕೆ. ವೃತ್ತಿಯ ಪ್ರಾರಂಭದ ದಿನಗಳಲ್ಲಿ ನಾನು ಬೆರಗುಕಣ್ಣುಗಳಿಂದ ನೋಡುತ್ತಿದ್ದ, ಗುರುವೆಂದು ಈಗಲೂ ತಿಳಿದುಕೊಂಡಿರುವ ಎನ್.ಎಸ್. ಶಂಕರ್ ಅವರ ಅಭಿಪ್ರಾಯ ಬೇರೆ ಇರಬಹುದೇನೋ? ಅದನ್ನು ತಿಳಿದುಕೊಳ್ಳುವ ಆಸೆ ನನಗೂ ಇದೆ.
ಇದನ್ನೆಲ್ಲ ಬರೆಯುತ್ತಲೇ ಹೋಗಬಹುದು, ಮತ್ತೊಮ್ಮೆ ಈ ಬಗ್ಗೆ ಮಾತಾಡೋಣ. ಭವಿಷ್ಯದ ಬಗ್ಗೆ ಭರವಸೆ ಇಟ್ಟುಕೊಂಡು ಮುನ್ನಡೆಯುವ. ಬೀದಿಗಳಲ್ಲಿ ಹುಚ್ಚು ನಾಯಿಗಳು ಬೊಗಳುತ್ತಲೇ ಇರಲಿ.

Sunday, June 5, 2016

ಮುಂಗಾರು ಪತ್ರಿಕೆ: (17-08-1986)

ಇದು ನಾನು ಸುಮಾರು ಮೂರುದಶಕಗಳ ಹಿಂದೆ ಮುಂಗಾರು ಪತ್ರಿಕೆಗೆ ಮಾಡಿದ ವರದಿ. ಹಳೆಯ ಕಡತಗಳನ್ನು ಕೆದಕಿದಾಗ ಸಿಕ್ಕ ವರದಿ ಹಳೆಯ ನೆನಪುಗಳನ್ನು ಮೆಲುಕು ಹಾಕುವಂತೆ ಮಾಡಿತು.

ಈ ವರದಿ ನೋಡಿ ಕೆಂಡಾಮಂಡಲವಾದ ವಡ್ಡರ್ಸೆಯವರು ನನಗೆ ನೋಟೀಸ್ ನೀಡಿದ್ದು ಮಾತ್ರವಲ್ಲ ಕೆಲವು ದಿನ ಮಾತನಾಡಿರಲಿಲ್ಲ.

ಕಾರಣ ಇಷ್ಟೆ: ಮುಂಗಾರು ಪತ್ರಿಕೆಗೆ ದುಡ್ಡು ಹಾಕಿದವರಲ್ಲಿ ಕೆಲವರು ಅಬಕಾರಿ ಕಂಟ್ರಾಕ್ಟರ್ ಗಳಿದ್ದರು. ಪತ್ರಿಕೆ ನಡೆಸಲಿಕ್ಕಾಗದೆ ಆಗಲೇ ಆರ್ಥಿಕ ಸಂಕಷ್ಟದಲ್ಲಿದ್ದ ವಡ್ಡರ್ಸೆಯವರ ಮೇಲೆ ಆ ಕಂಟ್ರಾಕ್ಟರ್ ಗಳು ಈ ವರದಿ ನೋಡಿ ಕೋಪ ಮಾಡಿಕೊಂಡಿದ್ದರು. ಪತ್ರಿಕೆಯ ನೆರವಿಗೆ ಬರ್ತಿಲ್ಲ ಎನ್ನುವ ಕಾರಣಕ್ಕೆ ಹೀಗೆಲ್ಲ ಬರೆಸಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನುವುದು ಅವರ ಆರೋಪವಾಗಿತ್ತು. ಇನ್ನೊಂದೆಡೆ 'ನಮ್ಮವ' ನೊಬ್ಬ ನಮ್ಮ ವಿರುದ್ದವೇ ಬರೆದನಲ್ಲಾ ಎಂದು ಆ ಅಬಕಾರಿ ಕಂಟ್ರಾಕ್ಟರ್ ಗಳು ನನ್ನ ವಿರುದ್ಧ ಗರಂ ಆಗಿದ್ದರು. ನಡುವೆ ಸಿಕ್ಕ ನಾನು ಪಟ್ಚ.
ನಿಜಸಂಗತಿ ಏನೆಂದರೆ ಆಗ ನಮಗಿದ್ದ ಸಂಪಾದಕೀಯ ಸ್ವಾತಂತ್ರ್ಯ ದಲ್ಲಿ ಎಷ್ಟೋ ತನಿಖಾ ವರದಿಗಳು ಕೂಡಾ ವಡ್ಡರ್ಸೆಯವರ ಗಮನಕ್ಕೆ ಬರದೆ ಅಚ್ಚಾಗುತ್ತಿತ್ತು. ಇದು ಆ ರೀತಿ ಪ್ರಕಟವಾದ ವರದಿ.
ಆ ಕಾಲದಲ್ಲಿ ನನಗೂ ಕೋಪ ಬಂದಿತ್ತು. ಆದರೆ ಈಗ? ನಾವು ಸ್ವಲ್ಪ ಕಣ್ಣು ತೆರೆದು ಪ್ರಾಯೋಗಿಕವಾಗಿ ಯೋಚಿಸಿ ವಡ್ಡರ್ಸೆಯವರನ್ನು ಅರ್ಥಮಾಡಿಕೊಳ್ಳಬೇಕಿತ್ತು ಎಂದು ಅನಿಸುತ್ತಿದೆ.

ಇದೇ ರೀತಿ ಇಂಧೂದರ,ಎನ್.ಎಸ್. ಶಂಕರ್, ಕೆ.ರಾಮಯ್ಯ,ಪುಟ್ಟಸ್ವಾಮಿ ಮೊದಲಾದ ಪ್ರಾರಂಭಿಕ ಮುಂಗಾರು ಬಂಡಾಯಗಾರರಿಗೂ ಅನಿಸುತ್ತಿರಬಹುದೇ?

Wednesday, April 13, 2016

ಜಾತಿ ಗಣತಿಯ ವಿವಾದದ ಧೂಳು ಝಾಡಿಸುತ್ತಾ...

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಕೆಲವು ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿದ್ದ ನಾನು ಮಾತನಾಡಲು ಮಾಡಿಕೊಂಡ ಟಿಪ್ಪಣಿಗಳು ಇವು. ಈ ಸಮೀಕ್ಷೆ ಬಗ್ಗೆ ಸದುದ್ದೇಶ ಮತ್ತು ದುರುದ್ದೇಶದಿಂದ ಎತ್ತಿರುವ ಕೆಲವು ಪ್ರಶ್ನೆಗಳಿಗಾದರೂ ಉತ್ತರಿಸಲು ಇದು ನೆರವಾಗಬಹುದು
.1. ಜಾತಿ ಗಣತಿಗೆ ಅವಕಾಶ ಇದೆಯೇ?
ಮೊದಲನೆಯದಾಗಿ, ಸಾಮಾಜಿಕ ನ್ಯಾಯದ ಹೋರಾಟದ ಭಾಗವಾದ ಜಾತಿ ಆಧರಿತ ಮೀಸಲಾತಿ ಮತ್ತು ಜಾತಿ ಗುರುತಿಸಲು ನೆರವಾಗುವ ಜಾತಿಗಣತಿಗೆ ಸಂಬಂಧಿಸಿದ ಸರ್ಕಾರದ ನಿರ್ಧಾರಗಳ ಹಿಂದೆ ನಿರ್ಣಾಯಕ ಪಾತ್ರವನ್ನು ವಹಿಸುತ್ತಾ ಬಂದಿರುವುದು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಹಾಗೂ ಈ ಮೂರು ಕಂಬಗಳ ಮೇಲೆ ನಿಂತಿರುವ ಸಂವಿಧಾನ.
ಜಾತಿ, ವರ್ಣ, ಧರ್ಮ, ಲಿಂಗ, ಹುಟ್ಟಿದ ಸ್ಥಳ ಮತ್ತು ವಾಸಸ್ಥಾನಗಳನ್ನು ಮೀರಿ ಭಾರತೀಯರೆಲ್ಲರೂ ಸಮಾನರು ಎಂದು ಸಾರಿರುವ ಸಂವಿಧಾನವೇ ನಾಲ್ಕು ವರ್ಗಗಳಿಗೆ ನಿರ್ದಿಷ್ಟ ಕಾರಣಗಳಿಗಾಗಿ ‘ಸಮಾನತೆ’ಯಿಂದ ವಿನಾಯಿತಿಯನ್ನು ನೀಡಿದೆ. ಈ ನಾಲ್ಕು ವರ್ಗಗಳು ಯಾವುದು? ಮತ್ತು ಅವುಗಳ ಮುನ್ನಡೆಗೆ ಏನು ಮಾಡಬೇಕೆಂಬುದನ್ನು ಸಂವಿಧಾನದ 15 (3), 15 (4) 16 (4) ಮತತು 46ನೇ ಪರಿಚ್ಛೇದ ಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
ಸಂವಿಧಾನದ 15(3)ನೇ ಪರಿಚ್ಛೇದದ ಪ್ರಕಾರ ಜಾತಿ ಧರ್ಮಗಳ ತಾರತಮ್ಯ ಮಾಡದೆ ಮಹಿಳೆ ಮತ್ತು ಮಕ್ಕಳಿಗಾಗಿ ವಿಶೇಷ ಸವಲತ್ತುಗಳನ್ನು ನೀಡಬಹುದಾಗಿದೆ. ಪರಿಚ್ಛೇದ 15 (4)ರ ಪ್ರಕಾರ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುನ್ನ
ಡೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಪರಿಚ್ಛೇದ 16 (4) ರ ಪ್ರಕಾರ ಸರ್ಕಾರಿ ಇಲಾಖೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಪಡೆಯದಿರುವ ಹಿಂದುಳಿದ ವರ್ಗಗಳಿಗೆ ನೇಮಕಾತಿಯಲ್ಲಿ ಆದ್ಯತೆ ಕಲ್ಪಿಸಬಹುದಾಗಿದೆ. ದುರ್ಬಲ ವರ್ಗಗಳಿಗೆ ಮುಖ್ಯವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶೈಕ್ಷಣಿಕ ಮತ್ತು ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ವಿಶೇಷ ಗಮನ ನೀಡುವುದರ ಜತೆಗೆ ಸಾಮಾಜಿಕ ನ್ಯಾಯ ಮತ್ತು ಎಲ್ಲ ಬಗೆಯ ಶೋಷಣೆಗಳಿಂದ ಅವರನ್ನು ರಕ್ಷಿಸಲು ಕ್ರಮ ಕೈಗೊಳ್ಳಬೇಕೆಂದು ಸಂವಿಧಾನದ 46ನೇ ಪರಿಚ್ಛೇದ ಹೇಳಿದೆ.
ಈಗಿನ ಮೀಸಲಾತಿಗೆ ಆಧಾರವಾಗಿರುವ ಆಯೋಗಗಳ ಜಾತಿ ಗಣತಿಯ ವೈಜ್ಞಾನಿಕತೆಯನ್ನು ನಿರಂತರವಾಗಿ ಸುಪ್ರೀಂಕೋರ್ಟ್ ಪ್ರಶ್ನಿಸುತ್ತಾ ಬಂದಿದೆ. ಮಂಡಲ್ ವರದಿ ಅನುಷ್ಠಾನವನ್ನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯಿಂದ, ಯುಪಿಎ ಸರ್ಕಾರ ನೀಡಿದ ಉನ್ನತ ಶಿಕ್ಷಣದಲ್ಲಿನ ಮೀಸಲಾತಿ ವಿರುದ್ಧದ ಅರ್ಜಿಯ ವಿಚಾರಣೆ ವರೆಗೆ ಎಲ್ಲ ಪ್ರಕರಣಗಳಲ್ಲಿಯೂ ಸುಪ್ರೀಂ ಕೋರ್ಟ್ ಮೀಸಲಾತಿಗೆ ಆಧಾರವಾಗಿರುವ ಜಾತಿ ಮಾಹಿತಿಯನ್ನು ಪ್ರಶ್ನಿಸಿದೆ.
‘ವೈಜ್ಞಾನಿಕವಾಗಿ ಸಂಗ್ರಹಿಸಿರುವ ಜಾತಿ ಗಣತಿ ಬೇಕು ಮತ್ತು ಹಿಂದುಳಿದ ವರ್ಗಗಳ ಗುಂಪಿಗೆ ಯಾವ ಜಾತಿಯ ಸೇರ್ಪಡೆಯಾಗಬೇಕು, ಬೇರ್ಪಡೆಯಾಗಬೇಕು ಎನ್ನುವುದನ್ನು ತೀರ್ಮಾನಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಾಶ್ವತ ಹಿಂದುಳಿದ ಆಯೋಗಗಳನ್ನು ರಚಿಸಬೇಕು’ ಎಂದು ಸುಪ್ರೀಂ ಕೋರ್ಟ್ ಇಂದಿರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ವರದಿ ಪ್ರಕರಣ) 23 ವರ್ಷಗಳ ಹಿಂದೆ ನೀಡಿದ್ದ ತೀರ್ಪಿನಲ್ಲಿ ಹೇಳಿತ್ತು.
ಜಾತಿ ಗಣತಿ ಯಾಕೆ ಬೇಕು?
ಸಂವಿಧಾನ ವಿಶೇಷವಾಗಿ ಗುರುತಿಸಿರುವ ವರ್ಗಗಳ ಪೈಕಿ ಮಹಿಳೆ, ಮಕ್ಕಳು ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ಲೆಕ್ಕ ಹತ್ತುವರ್ಷಗಳಿಗೊಮ್ಮೆ ನಡೆಯುವ ಜನಗಣತಿಯಲ್ಲಿ ಸಿಗುತ್ತದೆ. ಆದರೆ ಸಂವಿಧಾನ ಹೇಳಿರುವ ಹಿಂದುಳಿದ ವರ್ಗಗಳು ಯಾವುದು? ಅದರ ರೂಪ,ಗಾತ್ರ, ಸ್ಥಿತಿಗತಿ ಏನು? ಜನಗಣತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಹೊರತುಪಡಿಸಿ ಹಿಂದೂ ಧರ್ಮಕ್ಕೆ ಸೇರಿರುವ ಉಳಿದೆಲ್ಲ ಜಾತಿಗಳನ್ನು ‘ಹಿಂದೂ’ ಹೆಸರಿನಡಿಯಲ್ಲಿಯೇ ಸೇರಿಸಲಾಗುತ್ತದೆ. ಆದರೆ ಕೇಂದ್ರ ಮತ್ತು ರಾಜ್ಯಗಳಲ್ಲಿ ಹಿಂದುಳಿದ ಜಾತಿಗಳಿಗೆ ಪ್ರ‍ತ್ಯೇಕವಾದ ಮೀಸಲಾತಿ ಕಲ್ಪಿಸಲಾಗಿದೆ, ಯೋಜನೆಗಳನ್ನು ರೂಪಿಸಲಾಗಿದೆ. ಇದಕ್ಕೆ ಅರ್ಹ ಫಲಾನುಭವಿಗಳನ್ನು ಗುರುತಿಸುವುದು ಹೇಗೆ? ಜಾತಿ ಗಣತಿ ಅಲ್ಲದೆ ಬೇರೆ ಮಾರ್ಗ ಇದೆಯೇ?
ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವಾರು ಯೋಜನೆಗಳು ಜಾತಿ ಆಧಾರಿತವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಕುರುಬ,ನೇಕಾರ,ಈಡಿಗ, ಕ್ಷೌರಿಕ, ಮುಸ್ಲಿಮ್, ಕ್ರಿಶ್ಚಿಯನ್ ಹೀಗೆ ವಿವಿಧ ಬಗೆಯ ಜಾತಿ ಮತ್ತು ಧರ್ಮ ನಿರ್ದಿಷ್ಠ ಯೋಜನೆಗಳನ್ನು ಎಲ್ಲ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸುತ್ತಾ ಬಂದಿವೆ.
ಒಂದೊಂದು ಜನವರ್ಗದ ಸಮಸ್ಯೆಗಳು ಒಂದೊಂದು ಬಗೆಯವು. ಪರಿಶಿಷ್ಟ ಜಾತಿ ಜನರ ಪಾಲಿಗೆ ಅಸ್ಪೃಶ್ಯತೆ ಎನ್ನುವುದೇ ದೊಡ್ಡ ಸಮಸ್ಯೆಯಾದರೆ, ಪರಿಶಿಷ್ಟ ಪಂಗಡಕ್ಕೆ ಅಸ್ಪೃಶ್ಯತೆಗಿಂತಲೂ ಪ್ರತ್ಯೇಕತೆ ಮತ್ತು ನಿರ್ಲಕ್ಷ್ಯದ ಸಮಸ್ಯೆ. ಹಿಂದುಳಿದ ಜಾತಿ ಜನರ ಸಮಸ್ಯೆ ಅಸ್ಪೃಶ್ಯತೆ ಅಲ್ಲ ಅವಕಾಶ ಮತ್ತು ಪ್ರಾತಿನಿಧ್ಯದ ಸಮಸ್ಯೆ. ಅಲ್ಪಸಂಖ್ಯಾತರನ್ನು ಭೀತಿಗೀಡುಮಾಡಿರುವುದು ಕೋ
ಮುವಾದ. ಮಹಿಳೆಯರ ಪಾಲಿಗೆ ಲಿಂಗತಾರತಮ್ಯವೇ ದೊಡ್ಡ ಸಮಸ್ಯೆ.
ನೇಕಾರರಿಗೆ ಕೈಮಗ್ಗದ ಸುಧಾರಣೆಗೆ ಪ್ಯಾಕೇಜ್ ಬೇಕು, ಮಡಿವಾಳರಿಗೆ ದೋಬಿಘಾಟ್ ನಿರ್ಮಾಣವಾಗಬೇಕು. ಕ್ಷೌರಿಕರಿಗೆ ಸಲೂನ್ ಗಳನ್ನು ತೆರೆಯಲು ಆರ್ಥಿಕ ನೆರವು ಬೇಕು, ಕುರುಬರಿಗೆ ಕುರಿಸಾಕಾಣಿಕೆಗೆ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಮೀನುಗಾರರಲ್ಲಿ ಮೀನುಗಾರಿಕೆಯ ಸಮಸ್ಯೆಗಳಿವೆ. ಜಾತಿವಾರು ಆರ್ಥಿಕ-ಶೈಕ್ಷಣಿಕ ಸಮೀಕ್ಷೆಯ ಮೂಲಕ ಪಡೆಯುವ ಮಾಹಿತಿ ಇಲ್ಲದೆ ಇವರ ಸಮಸ್ಯೆಗಳನ್ನು ಬಗೆಹರಿಸುವುದು ಹೇಗೆ, ಇವರ ಬೇಡಿಕೆಗಳನ್ನು ಈಡೇರಿಸುವುದು ಹೇಗೆ?
ಇವರನ್ನೆಲ್ಲ ಒಂದೇ ಗುಂಪು ಮಾಡಿ ಇವರೆಲ್ಲರೂ ಶೋಷಿತರು, ಅವಕಾಶ ವಂಚಿತರು ಎನ್ನುವ ವರ್ಗದಡಿಯಲ್ಲಿ ಕೂಡಿಹಾಕಿ ರಾಷ್ಟ್ರಮಟ್ಟದ ಒಂದು ಸಾಮಾನ್ಯ ಯೋಜನೆಯ ಮೂಲಕ ಇವರ ಅಭಿವೃದ್ಧಿ ಮಾಡಲು ಸಾಧ್ಯ ಇಲ್ಲ. ಅರಮನೆ ಮೈದಾನದಲ್ಲಿ ಶೋಷಿತರೆಲ್ಲರ ಸಭೆ ಕರೆದು ಸಮಸ್ಯೆಗಳನ್ನೆಲ್ಲ ಚರ್ಚಿಸಲು ಸಾಧ್ಯ ಇಲ್ಲ. ಇಲ್ಲದೆ ಇದ್ದರೆ ಹಿಂದೂ, ಮುಸ್ಲಿಮ್, ದಲಿತ ಸಮಾವೇಶ ನಡೆಸಿಯೂ ಈ ವರ್ಗಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದು. ಯಾಕೆಂದರೆ ಇಲ್ಲಿರುವುದು ಜಾತಿನಿರ್ದಿಷ್ಟ ಸಮಸ್ಯೆಗಳು.
ಆದರೆ ಸ್ವತಂತ್ರ ಭಾರತದಲ್ಲಿ ವೈಜ್ಞಾನಿಕ ರೀತಿಯಲ್ಲಿ ಸಮಗ್ರ ಸ್ವರೂಪದ ಜಾತಿಗಣತಿ ನಡೆದೇ ಇಲ್ಲವಾದ ಕಾರಣ ಧರ್ಮ ಮತ್ತು ಜಾತಿ ನಿರ್ದಿಷ್ಟವಾದ ಎಲ್ಲ ಜನಕಲ್ಯಾಣ ಕಾರ್ಯಕ್ರಮಗಳು ವಿಶ್ವಾಸಾರ್ಹ ಅಲ್ಲದ ತಪ್ಪುಗಳಿಂದ ಕೂಡಿದ ಜಾತಿ ಮಾಹಿತಿಯ ಆಧಾರದಲ್ಲಿ ಅನುಷ್ಠಾನಗೊಂಡು ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ.
ಸಾಚಾರ್ ವರದಿ ಜಾರಿಯಾಗುವ ಮೊದಲು ಮುಸ್ಲಿಮರು ರಾಜಕೀಯ ಓಲೈಕೆಯಿಂದಾಗಿ ಮಿತಿಮೀರಿ ಬೆಳೆದುಬಿಟ್ಟಿದ್ದಾರೆ. ಸರ್ಕಾರದ ಬಜೆಟ್ ಹಣದ ಬಹುಪಾಲು ಮುಸ್ಲಿಮರ ಪಾಲಾಗುತ್ತಿದೆ ಎನ್ನುವ ಅಪಪ್ರಚಾರ ವ್ಯಾಪಕವಾಗಿ ನಡೆದಿತ್ತು. ಆದರೆ ಮುಸ್ಲಿಮರ ಸಾಮಾಜಿಕ-ಆರ್ಥಿಕ-ಶೈಕ್ಷಣಿಕೆ ಸಮೀಕ್ಷೆ ನಡೆಸಿದ ಸಾಚಾರ್ ಸಮಿತಿ ಬಯಲುಗೊಳಿಸಿದ ಸತ್ಯವೇ ಬೇರೆ. ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಸ್ಲಿಮರು ದಲಿತರಿಗಿಂತಲೂ ನಿಕೃಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಸಾಚಾರ ವರದಿ ಹೇಳಿತ್ತು.
ಜಾತಿ ಗಣತಿಯಿಂದ ಜಾತೀಯತೆ ಹೆಚ್ಚಾಗುವುದಿಲ್ಲವೇ?
1931ರಿಂದ ಇಲ್ಲಿಯ ವರೆಗೆ ಜಾತಿ ಗಣತಿ ನಡೆದೇ ಇಲ್ಲ. ಹಾಗಿದ್ದರೆ ಜಾತಿ ನಾಶವಾಗಬೇಕಿತ್ತಲ್ಲವೇ? ಯಾಕೆ ಅದು ಹೆಚ್ಚಾಯಿತು? ಕಳೆದ 65 ವರ್ಷಗಳಿಂದ ಹಿಂದು,ಮುಸ್ಲಿಮ್,ಕ್ರಿಶ್ಚಿಯನ್ ಬೌದ್ಧ ,ಜೈನ ಹೀಗೆ ಧರ್ಮಗಣತಿ ಅರ್ಥಾತ್ ಕೋಮುಗಣತಿ ನಡೆಯುತ್ತಿದೆ. ದೇಶವನ್ನು ತಲ್ಲಣಕ್ಕೀಡು ಮಾಡುತ್ತಿರುವ ಕೋಮುವಾದಕ್ಕೆ ಈ ಧರ್ಮ ಇಲ್ಲವೆ ಕೋಮು ಗಣತಿ ಕಾರಣವೆಂದು ಹೇಳಬಹುದೇ?
ಕಳೆದ 60 ವರ್ಷಗಳಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಗಣತಿ ನಡೆಯುತ್ತಿದೆ. ಇದರಿಂದಾಗಿ ದಲಿತರಲ್ಲಿ ಜಾತೀಯತೆ ಹೆಚ್ಚಾಗಿ ಅದರಿಂದಾಗಿ ದಲಿತರ ಶೋಷಣೆ ಮತ್ತು ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಬಹುದೇ? ಮುಸ್ಲಿಮರ ಸಾಮಾಜಿಕ, ಆರ್ಥಿಕ ಸ್ಥಿತಿಗತಿಯನ್ನು ತೆರೆದಿಟ್ಟ ಸಾಚಾರ್ ವರದಿಯಿಂದಾಗಿ ಮುಸ್ಲಿಮರಲ್ಲಿ ಕೋಮುವಾದ ಬೆಳೆಯಿತೆಂದು ಹೇಳಬಹುದೇ?
ಜಾತಿ ಬೇಡ ಎನ್ನುವುದು ಒಂದು ಪುರೋಗಾಮಿ ನಿಲುವು, ಜಾತಿ ಇಲ್ಲ ಎನ್ನುವುದು ಆತ್ಮವಂಚನೆ. ನಮ್ಮದು ಆತ್ಮವಂಚಕ ಸಮಾಜ. ಇಲ್ಲಿ ಜಾತಿ ಇದೆ ಎನ್ನುವುದನ್ನು ಒಪ್ಪಿಕೊಳ್ರಯ್ಯಾ ಎನ್ನುವವರನ್ನು ಜಾತಿವಾದಿಗಳೆಂದು ಗೇಲಿಮಾಡಲಾಗುತ್ತಿದ್ದೆ. ಅಯ್ಯೋ ಎಲ್ಲಿದೆ ಜಾತಿ ಎಂದು ಉಡಾಫೆಯ ದನಿಯಲ್ಲಿ ಮಾತನಾಡುತ್ತಾ ಒಳಗಡೆ ಜಾತಿ ಎನ್ನುವ ರೋಗವನ್ನು ಕಟ್ಟಿಕೊಂಡಿರುವವರನ್ನು ಜಾತ್ಯತೀತರೆಂದು ಬಣ್ಣಿಸಲಾಗುತ್ತದೆ.
ಜಾತಿ ಮತ್ತು ಜಾತೀಯತೆ ಮೊದಲಿನಿಂದಲೂ ಇತ್ತು. ಆದರೆ ಈ ಪಟ್ಟಭದ್ರ ಜಾತಿಯನ್ನು ಯಾರೂ ಪ್ರಶ್ನಿಸದೆ ಇದಕ್ಕೆ ಶರಣಾಗಿ ಒಪ್ಪಿಕೊಂಡಿದ್ದಾಗ ಯಾರಿಗೂ ಜಾತಿ ಕಾಣಿಸುತ್ತಿರಲಿಲ್ಲ. ಜಾತಿಯಿಂದ ನೊಂದವರು ನೋವುಣ್ಣುತ್ತಿರುವವರು ಅದನ್ನು ಪ್ರಶ್ನಿಸಿದ ಕೂಡಲೇ ಜಾತಿ ಕಾಣಿಸತೊಡಗಿದೆ. ಪ್ರಶ್ನಿಸುತ್ತಿರುವವರು ಜಾತಿವಾದಿಗಳಾಗಿ ಕಾಣಿಸತೊಡಗಿದ್ದಾರೆ.
ಜಾತಿ ಎಂದರೆ ಏನು? ಎಲ್ಲಿಂದ ಬಂತು? ಹೇಗೆ ಹುಟ್ಟಿಕೊಂಡಿತು ಎನ್ನುವುದರ ಬಗ್ಗೆ ಹಲವಾರು ವ್ಯಾಖ್ಯಾನಗಳಿವೆ. ಇವುಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಪಾದಿಸಿದ ಸಿದ್ಧಾಂತ ಮಹತ್ವದ್ದು. ಅವರ ಪ್ರಕಾರ ಜಾತಿ ಎನ್ನುವುದು ತಲೆಮರೆಸಿಕೊಂಡ ವರ್ಗ.
‘ಜಾತಿ ಪ್ರಶ್ನಾತೀತವೂ ಅಲ್ಲ, ದೋಷಾತೀತವೂ ಅಲ್ಲ. ಜಾತಿ ಕೂಡಾ ತನ್ನ ಒಡಲಲ್ಲಿ ವರ್ಗವನ್ನು ಬೆಚ್ಚಗೆ ಕಾಯ್ದುಕೊಂಡು ಬರುತ್ತದೆ.ತನ್ನ ಶ್ರಮ ಮತ್ತು ಪ್ರಯತ್ನದ ಮೂಲಕ ಒಂದು ವರ್ಗದಿಂದ ಮತ್ತೊಂದು ವರ್ಗಕ್ಕೆ ಏರುವ ಮತ್ತು ಇಳಿಯುವ ಸಾಧ್ಯತೆಯನ್ನು ನಿರಾಕರಿಸುವುದೇ ಜಾತಿಯ ಉದ್ದೇಶ ಎಂದು ಅಂಬೇಡ್ಕರ್ ಅಭಿಪ್ರಾಯಪಡುತ್ತಾರೆ.
ಇದರಿಂದಾಗಿ ಒಬ್ಬ ಕ್ಷೌರಿಕ, ನೇಕಾರ,ಕುರುಬ, ಈಡಿಗ ತನ್ನ ಜಾತಿ ಕಸುಬನ್ನು ತೊರೆದು ಬೇರೆ ವೃತ್ತಿ ಮಾಡಿದರೂ ಆತನನ್ನು ಆತ ಹುಟ್ಟಿದ ಜಾತಿಯಿಂದಲೇ ನೋಡಲಾಗುತ್ತದೆ. ಜಾತಿ ಅವನ ಚರ್ಮಕ್ಕೆ ಅಂಟಿರುತ್ತದೆ. ಅದೇ ರೀತಿ ಒಬ್ಬ ಮೇಲ್ಜಾತಿಯವ ಬ್ಯೂಟಿಪಾರ್ಲರ್, ಬಾರ್ ಎಂಡ್ ರೆಸ್ಟೋರೆಂಟ್ ಇಟ್ಟುಕೊಂಡರೂ ಅವರು ಜಾತಿಯ ಶ್ರೇಣಿಯಿಂದ ಕೆಳಗಿಳಿಯುವುದಿಲ್ಲ.
ಜಾತಿ ಎನ್ನವುದು ಒಂದು ರಾಜಕೀಯ ಪಕ್ಷ ಇಲ್ಲವೇ ಯುವಕ ಸಂಘ ಅಲ್ಲ. ಜಾತಿವ್ಯವಸ್ಥೆಯ ಸದಸ್ಯತ್ವ ಮುಕ್ತವಾಗಿಲ್ಲ. ಹುಟ್ಟಿನ ಆಧಾರದಲ್ಲಿ ಜಾತಿಯ ಸದಸ್ಯತ್ವ ನಿರ್ಧಾರವಾಗುತ್ತದೆ. ಅದರ ಸದಸ್ಯರಾದವರು ಅದರಿಂದ ಬಿಡುಗಡೆ ಪಡೆಯುವ ಹಾಗಿಲ್ಲ.
ಜಾತಿಯ ಮುಖ್ಯ ಲಕ್ಷಣವೇ ತಾರತಮ್ಯ. ಪ್ರತಿಯೊಂದು ಜಾತಿಗೂ ಒಂದು ಶ್ರೇಣಿ ಇದೆ. ಈ ಶ್ರೇಣಿಕೃತ ವ್ಯವಸ್ಥೆಯೇ ಜಾತಿ. ಎಲ್ಲರೂ ಎಲ್ಲರನ್ನು ಮುಟ್ಟಲಾಗದ, ಜತೆಯಲ್ಲಿ ಕೂತು ಊಟ ಮಾಡಲಾಗದ ಎಲ್ಲರೂ ಎಲ್ಲ ಉದ್ಯೋಗ ಮಾಡಲಾಗದ, ಎಲ್ಲರೂ ಎಲ್ಲ ಮನೆಯನ್ನು ಪ್ರವೇಶಿಸಲಾಗದ ವ್ಯವಸ್ಥೆಯೇ ಜಾತಿ. ನಿರ್ದಿಷ್ಟ ಜಾತಿಯಲ್ಲಿ ಹುಟ್ಟಿದ ಕಾರಣಕ್ಕೆ ಒಬ್ಬ ಉತ್ತಮನಾಗುತ್ತಾನೆ, ಇನ್ನೊಬ್ಬ ಅಧಮನಾಗುತ್ತಾನೆ. ಹಿಂದಿನ ಕಾಲದಲ್ಲಿ ಜಾತಿ ಎನ್ನುವುದು ಶ್ರೇಣಿಕೃತ ವ್ಯವಸ್ಥೆಗಷ್ಟೇ ಕಾರಣವಾಗಿದ್ದರೆ ಈಗ ಅದು ಸಾರ್ವಜನಿಕ ಮತ್ತು ಖಾಸಗಿ ಸವಲತ್ತುಗಳನ್ನು ಹಂಚುವ ವಿತರಣಾ ವ್ಯವಸ್ಥೆಯಾಗಿದೆ.
ಜಾತಿ ಗಣತಿಯಿಂದ ಜಾತಿ ನಾಶ ಸಾಧ್ಯವೇ?
ಸಂಪೂರ್ಣ ಸಾಧ್ಯ ಇಲ್ಲದೆ ಇದ್ದರೂ ಜಾತಿ ನಾಶದ ಹಾದಿಯಲ್ಲಿ ಇದೊಂದು ಉತ್ತಮ ಪ್ರಯತ್ನ ಎಂದು ಹೇಳಬಹುದು. ಇದೊಂದು ವಿಚಿತ್ರವಾದ ವಾದವೆಂದು ಮೇಲ್ನೋಟಕ್ಕೆ ಅನಿಸಬಹುದು. ಜಾತಿಯ ಎರಡು ಅನಿಷ್ಠ ಲಕ್ಷಣಗಳೆಂದರೆ ಅಸ್ಪೃಶ್ಯತೆ ಮತ್ತು ಅಸಮಾನತೆ. ಅಸ್ಪೃಶ್ಯತೆ ಆಚರಣೆಯನ್ನು ಕಾನೂನಿನ ಮೂಲಕ ನಿಷೇಧಿಸಲಾಗಿದೆ. ಅಂತಿಮವಾಗಿ ಈ ಮಾನವ ವಿರೋಧಿ ನಡವಳಿಕೆ ಕೂಡಾ ಮನುಷ್ಯನ ಮನಪರಿರ್ತನೆಯಿಂದ ಆಗುವಂತಹದ್ದು. ಇಲ್ಲದೆ ಹೋದರೆ ಈಗಿನಂತೆ ಗೋಚರ ಅಸ್ಪೃಶ್ಯತೆ ಕಡಿಮೆಯಾಗಿ, ಅಗೋಚರ ಅ
ಸ್ಪೃಶ್ಯತೆ ಹೆಚ್ಚಾಗುತ್ತದೆ.
ಜಾತಿಯ ಇನ್ನೊಂದು ಅನಿಷ್ಠ ಲಕ್ಷಣವಾದ ಅಸಮಾನತೆಯನ್ನು ಆರ್ಥಿಕ ಸಬಲೀಕರಣದ ಮೂಲಕ ನಿವಾರಿಸಲು ಸಾಧ್ಯ. ಇದರಿಂದ ಜಾತಿ ಸಂಪೂರ್ಣವಾಗಿ ನಾಶವಾಗದೆ ಇದ್ದರೂ ಅದರ ಪರಿಣಾಮ ಮತ್ತು ಪ್ರಭಾವ ಕಡಿಮೆಯಾಗಬಹುದು.
ಉದಾಹರಣೆಗೆ, ಹಳ್ಳಿಯಲ್ಲಿರುವ ಒಬ್ಬ ಸಾಮಾನ್ಯ ದಲಿತ ಮತ್ತು ಐಎ ಎಸ್-ಐಪಿಎಸ್ ದಲಿತನನ್ನು ಒಂದೇ ದೃಷ್ಟಿಕೋನದಲ್ಲಿ ಸಮಾಜ ನೋಡುವುದಿಲ್ಲ.ಐಎಎಸ್-ಐಪಿಎಸ್ ದಲಿತ ಅಧಿಕಾರಿಯನ್ನು ಯಾವುದೇ ಮುಜುಗರ ಇಲ್ಲದೆ ಬ್ರಾಹ್ಮಣರು ಸೇರಿದಂತೆ ಮೇಲ್ಜಾತಿ ಹೆಣ್ಣುಮಕ್ಕಳು ಮದುವೆಯಾಗಿಬಿಡುತ್ತಾರೆ. (ಉದಾಹರಣೆಯ ಅಗತ್ಯ ಇಲ್ಲ ಎಂದೆನಿಸುತ್ತದೆ). ಆದರೆ ಹಳ್ಳಿಯಲ್ಲಿರುವ ಒಬ್ಬ ಬಡ ದಲಿತ ಯುವಕ ಮೇಲ್ಜಾತಿಯ ಯುವತಿಯನ್ನು ಪ್ರೀತಿಸಿ ಮದುವೆಯಾದರೂ ಆತನನ್ನು ಸಾಯಿಸಿಬಿಡುತ್ತಾರೆ. (ಇದಕ್ಕೂ ಉದಾಹರಣೆ ಬೇಡ ಎಂದೆನಿಸುತ್ತದೆ).
ಬಡತನ ಮತ್ತು ಶ್ರೀಮಂತಿಕೆಗೆ ಜಾತಿ ಇಲ್ಲ ಎನ್ನುವುದು ಎಷ್ಟು ನಿಜವೋ, ಶ್ರೀಮಂತಿಕೆ ಮತ್ತು ಬಡತನಕ್ಕೆ ಜಾತಿ ಕೂಡಾ ಕಾರಣ ಎನ್ನುವುದು ಅಷ್ಟೇ ನಿಜ. ಬಿಪಿಎಲ್ ವರ್ಗಕ್ಕೆ ಸೇರಿರುವ ಕುಟುಂಬಗಳ ಸಮೀಕ್ಷೆ ನಡೆಸಿದರೆ ಅವರಲ್ಲಿ ಬಹುಸಂಖ್ಯೆಯಲ್ಲಿ ದಲಿತ,ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರುವ ಕುಟುಂಬಗಳೇ ಹೆಚ್ಚಿರುವುದನ್ನು ಕಾಣಬಹುದು.
ಜಾತಿ ವ್ಯವಸ್ಥೆಯನ್ನು ಯಾರು ನಾಶ ಮಾಡಬೇಕು? ಜಾತಿಯಿಂದಾಗಿ ಅನ್ಯಾಯ, ಅವಮಾನ,ಹಿಂಸೆ, ಉಪವಾಸ ಅನುಭವಿಸಿದವರೋ ಇಲ್ಲವೇ ಜಾತಿಯ ಬಲದಿಂದ ಶ್ರಮ ಇಲ್ಲದ ಆದಾಯ, ಅರ್ಹತೆ ಇಲ್ಲದೆ ಸ್ಥಾನಮಾನ, ಮತ್ತು ಜನಬೆಂಬಲ ಇಲ್ಲದ ಅಧಿಕಾರ ಪಡೆದವರೋ? ಜಾತಿಯನ್ನು ಯಾರಾದರೂ ಅಪರಾಧ ಎಂದು ಪರಿಗಣಿಸುವುದಾದರೆ ಅದನ್ನು ತೊಡೆದುಹಾಕುವ ಪ್ರಯತ್ನವನ್ನುಮೊದಲು ಜಾತಿಯ ಅಪರಾಧಿಗಳು ಮಾಡಬೇಕೇ ಹೊರತು ಜಾತಿ ವ್ಯವಸ್ಥೆಗೆ ಬಲಿಯಾದವರಲ್ಲ.ಜಾತೀಯತೆಗೆ ಬಲಿಯಾದವರು ಜಾತಿ ಬಿಡುತ್ತೇನೆ ಎಂದರೂ ಜಾತಿ ಅವರನ್ನು ಬಿಡುವುದಿಲ್ಲ, ಕಳೆದುಕೊಂಡವರು ತ್ಯಾಗ ಮಾಡಲಿಕ್ಕಾಗುವುದಿಲ್ಲ ಪಡೆದುಕೊಂಡವರು ಮಾಡಬೇಕು.
ಜಾತೀಯತೆ ಅಳಿಯುವುದು ಜಾತಿ ಕುರುಡಿನಿಂದಲ್ಲ, ಕಣ್ತೆರೆದು ಅದಕ್ಕೆ ಮುಖಾಮುಖಿಯಾಗುವ ಮೂಲಕ. ಜಾತಿಯನ್ನು ಕಣ್ಣುಬಿಟ್ಟು, ಭಯಬಿಟ್ಟು ,ಎದೆಗೆ ಕಿವಿಕೊಟ್ಟು ಎದುರಿಸಬೇಕು. ತಿಳಿದುಕೊಳ್ಳಬೇಕು. ಇದನ್ನು ಮಾಡುತ್ತಲೇ ಅದರ ನಾಶಕ್ಕೆ ಪ್ರಯತ್ನ ಮಾಡಬೇಕು.ಜಾತಿ ಎನ್ನುವುದು ಒಂದು ರೋಗ. ರೋಗಕ್ಕೆ ಚಿಕಿತ್ಸೆ ನೀಡಬೇಕಾದರೆ ಮೊದಲು ರೋಗಿ ರೋಗ ಇದೆ ಎನ್ನುವುದನ್ನು ಒಪ್ಪಿಕೊಳ್ಳಬೇಕು. ಅದೇ ರೀತಿ ಜಾತಿರೋಗವನ್ನು ಸಮಾಜ ಒಪ್ಪಿಕೊಳ್ಳಬೇಕು. ಮೀಸಲಾತಿ ಎನ್ನುವುದು ಔಷಧಿಯಾದರೆ ಜಾತಿ ಗಣತಿ ಎಂದರೆ ರೋಗ ನಿದಾನ, ಡಯಗ್ನಾಸಿಸ್. ಮೇಲ್ಜಾತಿ ಮನಸ್ಸುಗಳು ಮೇಲರಿಮೆಯ ಶ್ರೇಷ್ಟತೆಯ ವ್ಯಸನದಿಂದ ಮುಕ್ತರಾಗಬೇಕು, ಅದೇ ರೀತಿ ತಳಸಮುದಾಯದ ಮನಸ್ಸುಗಳು ಕೀಳರಿಮೆಯ ದೈನೇಸಿ ಭಾವದಿಂದ ಬಿಡುಗಡೆ ಹೊಂದಬೇಕು.
ಜಾತಿ ಗಣತಿಯಿಂದ ಮೀಸಲಾತಿಯ ಬೇಡಿಕೆ ಹೆಚ್ಚಾಗುವುದೇ?
ಖಂಡಿತ ಹೆಚ್ಚಾಗುವುದಿಲ್ಲ. ಮೀಸಲಾತಿಗೆ ಅರ್ಹವಾದ ಜಾತಿಗಳು ತಿಪ್ಪರಲಾಗ ಹಾಕಿದರೂ ಒಟ್ಟು ಮೀಸಲಾತಿಯ ಪ್ರಮಾಣ ಶೇಕಡಾ 50 ಅನ್ನು ಮೀರಿಲ್ಲ. ಹಾಗೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿಬಿಟ್ಟಿದೆ. ಆದರೆ ಜಾತಿಗಣತಿಯಿಂದ ಮೀಸಲಾತಿಯ ದುರುಪಯೋಗವನ್ನು ತಡೆಯಬಹುದಾಗಿದೆ. ಇದರ ಉದ್ದೇಶ ಮೀಸಲಾತಿಯನ್ನು ವಿಸ್ತರಿಸುವುದಲ್ಲ, ಮೀಸಲಾತಿಯ ದುರುಪಯೋಗವನ್ನು ತಡೆದು ಅದರ ಲಾಭ ಅರ್ಹರಿಗೆ ತಲುಪುವಂತೆ ಮಾಡುವುದು.
ಮೀಸಲಾತಿ ದುರುಪಯೋಗದ ಹಲವಾರು ಪ್ರಕರಣಗಳು ಇತ್ತೀಚೆಗೆ ವ್ಯಾಪಕವಾಗಿ ಚರ್ಚೆಗೀಡಾಗಿವೆ. 2009ರ ಅಕ್ಟೋಬರ್ 27ರಂದು ಹಿಂದಿನ ಬಿಜೆಪಿ ಸರ್ಕಾರ ವೀರಶೈವ/ಲಿಂಗಾಯತ ಉಪಜಾತಿಗಳಾದ ಕುಡುಒಕ್ಕಲ, ಲಾಳಗೊಂಡ, ಹೂಗಾರ, ಆದಿಬಣಜಿಗ, ಬಣಗಾರ, ಗಾಣಿಗ, ನಗರ್ತ, ವೀರಶೈವ ಜಂಗ, ವೀರಶೈವ ಬೇಡುವ ಜಂಗಮ, ಶಿವಚಾರ ನಗರ್ತ, ಆದಿವೀರಶೈವ, ವೀರಶೈವ ಪಂಚಮಸಾಲಿ, ಕುರುಹಿನಶೆಟ್ಟಿ/ನೇಕಾರ/ಜಾಡ, ವೀರಶೈವ ಸಿಂಪಿ, ರೆಡ್ಡಿ ,ಸಾದರ, ಆರಾಧ್ಯ, ಗುರುವ/ಗುರವ ಈ 19 ಉಪಜಾತಿಗಳನ್ನು ಪ್ರವರ್ಗ -3 (ಬಿ) ಪಟ್ಟಿಗೆ ಸೇರಿಸಿತು.
3(ಬಿ)ಯಲ್ಲಿ ಕ್ರಿಶ್ಚಿಯನ್, ಜೈನ (ದಿಗಂಬರ), ಮರಾಠ ಜಾತಿಗಳಲ್ಲದೆ ಲಿಂಗಾಯತ ಉಪಜಾತಿಗಳಾದ ಹೆಳವ, ಅಂಬಿಗ,ಬೋಯಿ, ಗಂಗಾಮತ, ಸುಣಗಾರ, ಅಗಸ, ಮಡಿವಾಳ, ಕುಂಬಾರ,ಕುರುಬ, ಭಜಂತ್ರಿ, ಭಂಡಾರಿ, ಹಡಪದ,ನಾಯಿಂದ, ಅಕ್ಕಸಾಲಿ, ಬಡಿಗೇರ, ಕಮ್ಮಾರ, ಪಾಂಚಾಳ, ಮೇದಾರ,ಉಪ್ಪಾರ, ಗೌಳಿ ಮೊದಲಾದ ಜಾತಿಗಳಿವೆ. ಇದಕ್ಕೆ ವಿರೋಧ ವ್ಯಕ್ತವಾದ ಕಾರಣ ಯಾವುದೇ ಕಾರಣವನ್ನು ನೀಡದೆ ಸರ್ಕಾರ ತನ್ನ ಆದೇಶವನ್ನು ಹಿಂದಕ್ಕೆ ಪಡೆಯಿತು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ‘ಬುಡ್ಗಜಂಗಮ’ ಎಂಬ ಅಲೆಮಾರಿ ಜಾತಿಯ ಹೆಸರಿನಲ್ಲಿ ‘ಬೇಡುವ ಜಂಗಮ’ರು ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದು ಸಾಮಾನ್ಯವಾಗಿ ಬಿಟ್ಟಿದೆ.
ರಾಜ್ಯದಲ್ಲಿ ಈಗಿರುವ ಮೀಸಲಾತಿ ನೀತಿ ಪ್ರಕಾರ ಹಿಂದುಳಿದ ಜಾತಿಗಳಿಗೆ ಶೇಕಡಾ 32ರಷ್ಟು ಮೀಸಲಾತಿ ಇದೆ. ಈ ಹಿಂದುಳಿದ ಜಾತಿಗಳಲ್ಲಿ ಲಿಂಗಾಯತ ಮತ್ತು ಒಕ್ಕಲಿಗ ಉಪಜಾತಿಗಳೂ ಇವೆ ಎನ್ನುವುದು ಗಮನಾರ್ಹ. ಹಿಂದೂಗಳಲ್ಲಿರುವ ಅನೇಕ ಜಾತಿಗಳು ಲಿಂಗಾಯತ ಉಪಜಾತಿಗಳಲ್ಲಿವೆ. ಆದರೆ ಲಿಂಗಾಯತರಲ್ಲಿರುವ ಈ ಹಿಂದುಳಿದ ಉಪಜಾತಿಗಳಿಗೆ ಹಿಂದೂಗಳಲ್ಲಿರುವ ಉಪಜಾತಿಗಳಿಗೆ ಇರುವ ಪ್ರಮಾಣದ ಮೀಸಲಾತಿ ಇಲ್ಲ.
ಪ್ರವರ್ಗ 2(ಎ)ಯಲ್ಲಿ ಹಿಂದೂ ಧರ್ಮಕ್ಕೆ ಸೇರಿರುವ 103 ಉಪಜಾತಿಗಳಿಗೆ ಶೇಕಡಾ 15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಲಿಂಗಾಯತರಲ್ಲಿರುವ ಇದೇ ಜಾತಿಗಳಿಗೆ ಪ್ರವರ್ಗ 3(ಬಿ)ಯಲ್ಲಿ ಶೇಕಡಾ ಐದರಷ್ಟು ಮೀಸಲಾತಿ ಮಾತ್ರ ಇದೆ. ಜಾತಿ ಗಣತಿನಡೆಯಬೇಕಾಗಿರುವುದು ಮೀಸಲಾತಿ ಹೆಚ್ಚಳಕ್ಕಲ್ಲ, ಅದರ ದುರುಪಯೋಗವನ್ನು ತಡೆಯಲು ಎನ್ನುವುದು ಗಮನಾರ್ಹ.
ಜಾತಿ ಗಣತಿ ಕೋಮುವಾದಿಗಳಿಗೆ ನೆರವಾಗಬಹುದೇ?
ಜಾತಿ ಗಣತಿ ಎನ್ನುವುದು ಆರ್ ಎಸ್ ಎಸ್‍ ನ ಹಿಂದೂ ರಾಷ್ಟ್ರ ಸ್ಥಾಪನೆಯ ಪ್ರಯತ್ನಕ್ಕೆ ನೆರವಾಗಬಹುದು ಎಂದು ಕೆಲವರು ಕಳವಳ ವ್ಯಕ್ತಪಡಿಸುತ್ತಾರೆ. ನಮ್ಮ ತಥಾಕಥಿತ ಹಿಂದೂ ರಾಷ್ಟ್ರವಾದಿಗಳು ಜಾತಿಯ ಪ್ರಶ್ನೆ ಎದುರಾದಾಗ ಓಡಿಹೋಗುತ್ತಾರೆ. ಯಾಕೆಂದರೆ ಜಾತಿಯ ಜತೆ ಎದುರಾಗುವ ಅಸ್ಪೃಶ್ಯತೆ, ಅಸಮಾನತೆ, ಪಂಕ್ತಿಭೇದ, ಮೂಡನಂಬಿಕೆ, ಕಂದಾಚಾರಗಳ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ. ಇದಕ್ಕಾಗಿ ಅವರು ಜಾತಿಯ ಹುಣ್ಣನ್ನು ಒಳಗೆ ಕೊಳೆಯಲು ಬಿಟ್ಟು ಮೇಲೆ ಧರ್ಮದ ಮುಲಾಮು ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಜಾತಿ ಗಣತಿ ನಡೆದರೆ ಈ ಹಿಂದೂಗಳಲ್ಲಿ ಕಳೆದುಕೊಂಡವರು ಯಾರು? ಪಡೆದುಕೊಂಡವರು ಯಾರು? ಎಂಬ ಲೆಕ್ಕ ಸಿಕ್ಕಿದರೆ ಬಯಲಾಗುವುದು ಯಾರ ಮುಖಗಳು ಎನ್ನುವುದನ್ನು ಬಿಡಿಸಿ ಹೇಳಬೇಕೇ?
ಜಾತಿ ಗಣತಿಯಿಂದ ಏನು ಲಾಭ?
ಈಗಾಗಲೇ ಹೇಳಿದ ಹಾಗೆ ಸರ್ಕಾರಿ ಸೌಲಭ್ಯಗಳ ಸದ್ಬಳಕೆ ಮತ್ತು ಮೀಸಲಾತಿ ದುರುಪಯೋಗ ತಡೆಯುವ ಜತೆಗೆ ಈಗಿನ ಸರ್ಕಾರಿ ಮೀಸಲಾತಿಗಿಂತ ಆಚೆಗೆ ನೋಡಲು ಈ ಜಾತಿ ಗಣತಿ ನೆರವಾಗಬಹುದು. ಜಾತಿ ಗಣತಿ ನಡೆದರೆ ಪ್ರತಿಯೊಬ್ಬರ ಉದ್ಯೋಗದ ವಿವರ ಕೂಡಾ ಲಭ್ಯ ಇರುವುದರಿಂದ ಖಾಸಗಿ ಕ್ಷೇತ್ರಗಳಲ್ಲಿರುವ ಉದ್ಯೋಗಿಗಳ ಜಾತಿ-ಧರ್ಮದ ಬಹುಮುಖ್ಯ ಮಾಹಿತಿ ಲಭ್ಯವಾಗುತ್ತದೆ. ಇಲ್ಲಿಯ ವರೆಗೆ ಖಾಸಗಿ ಕಂಪೆನಿಗಳು ಈ ಮಾಹಿತಿಯನ್ನು ಒದಗಿಸಲು ನಿರಾಕರಿಸುತ್ತಾ ಬಂದಿವೆ.
ಸರ್ಕಾರ ಬಹುತೇಕ ತನ್ನ ಸೇವೆಗಳನ್ನು ಖಾಸಗಿಕರಣಗೊಳಿಸಿರುವುದರಿಂದ ಸರ್ಕಾರಿ ಉದ್ಯೋಗಗಳ ಸಂಖ್ಯೆ ಕ್ಷೀಣಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ಮೀಸಲಾತಿಯನ್ನು ಖಾಸಗಿ ಕ್ಷೇತ್ರಕ್ಕೆ ವಿಸ್ತರಿಸದೆ ನಿರುದ್ಯೋಗ ನಿವಾರಣೆ, ಉದ್ಯೋಗದ ಸಮಾನ ಅವಕಾಶ ಸಾಧ್ಯ ಇಲ್ಲ.
ಖಾಸಗಿ ಎನ್ನುವುದು ಎಷ್ಟು ಖಾಸಗಿ ಎನ್ನುವ ಪ್ರಶ್ನೆಯನ್ನು ಕೂಡಾ ನಾವು ಕೇಳಬೇಕಾಗಿದೆ. ಸರ್ಕಾರ ನೀಡುವ ಅಗ್ಗದ ದರದಲ್ಲಿ ಭೂಮಿ, ಕಡಿಮೆ ಬಡ್ಡಿದರದಲ್ಲಿ ಸಾಲ, ಟ್ಯಾಕ್ಸ್ ಹಾಲಿಡೇ, ವಿದ್ಯುತ್, ನೀರು, ತೆರಿಗೆ ವಿನಾಯಿತಿ, ಸಬ್ಸಿಡಿ ಬೆಂಬಲ ಇಲ್ಲದೆ ಖಾಸಗಿ ಕ್ಷೇತ್ರದ ಬಂಡವಾಳ ಬೆಳೆಯಲು ಸಾಧ್ಯವೇ ಇಲ್ಲ.
ಈ ಖಾಸಗಿ ಕಂಪೆನಿಗಳಲ್ಲಿ ಷೇರುಗಳಲ್ಲಿ ತಮ್ಮ ಅಲ್ಪ ಉಳಿತಾಯವನ್ನು ಹೂಡುತ್ತಿರುವವರು ಸಾಮಾನ್ಯ ಜನರು. ಹರ್ಷದ್ ಮೆಹ್ತಾನ ವಂಚನೆಯಿಂದ, ಸತ್ಯ ಕಂಪ್ಯೂಟರ್ ನ ಮೋಸಕ್ಕೆ ಬಲಿಯಾದವರು ಅದರ ಷೇರುಗಳನ್ನು ಖರೀದಿಸಿದ್ದ ಸಾಮಾನ್ಯ ಜನ.
ಭಾರತದಲ್ಲಿ ಮೀಸಲಾತಿ ಸರ್ಕಾರಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದರೆ ಅನೇಕ ದೇಶಗಳಲ್ಲಿ ಉದಾಹರಣೆಗೆ ಅಮೆರಿಕಾ, ಉತ್ತರ ಐರ್ಲಾಂಡ್, ದಕ್ಷಿಣ ಆಫ್ರಿಕಾ, ಮಲೇಷಿಯಾ ಮೊದಲಾದ ದೇಶಗಳಲ್ಲಿ ಮೀಸಲಾತಿಯಂತಹ ದೃಡ ಸಂಕಲ್ಪ (Affirmative Action) ನೀತಿಗಳು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಜಾರಿಯಲ್ಲಿವೆ.
ಸರ್ಕಾರದ ವಿವಿಧ ಸವಲತ್ತುಗಳನ್ನು ಅನುಭವಿಸುವ ಸಾರ್ವಜನಿಕ ಹಣಕಾಸು ಸಂಸ್ಥೆಗಳಿಂದ ಸಾಲಪಡೆಯುವ ಎಲ್ಲ ಕೈಗಾರಿಕೆಗಳು, ವಸತಿ, ಶಿಕ್ಷಣ, ರಾಜಕೀಯ ಪಕ್ಷಗಳು ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ Affirmative Action ಜಾರಿಯಲ್ಲಿದೆ. ಇದು ಕೇವಲ ಔಪಚಾರಿಕ ಮಟ್ಟದಲ್ಲಿ ಉಳಿಯದೆ ಇವುಗಳ ಚಾಲನೆ ಮತ್ತು ಕಾರ್ಯಗತಕ್ಕೆ ಸಂಬಂದಪಟ್ಟ ಕಾನೂನುಗಳು ಮತ್ತು ಸಂಸ್ಥೆಗಳಿರುವುದನ್ನು ಕಾಣಬಹುದು.
ಅಮೆರಿಕಾದಲ್ಲಿ Equal Opportunity (employment) Laws , Equal Employment Opportunity Commission, ದಕ್ಷಿಣ ಆಫ್ರಿಕಾದಲ್ಲಿ The Promotion of Equality and Prevention of Unfair Discrimination Act 2000 ನೆದರ್ ಲ್ಯಾಂಡಿನಲ್ಲಿ ‍‍‍Fair Employment Act ಗಳಿವೆ.
ಜಾತಿ ಸಮೀಕ್ಷೆಯಿಂದ ಮೇಲ್ಜಾತಿಯವರಿಗೆ ಏನು ಲಾಭ?
ಮೊದಲನೆಯದಾಗಿ ಈಗ ನಡೆಯುತ್ತಿರುವ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಬಳಕೆಯಲ್ಲಿ ಜಾತಿ ಗಣತಿ ಎಂದು ಹೇಳಿದರೂ ಇದಕ್ಕೆ ಅಷ್ಟು ಸೀಮಿತವಾದ ಅರ್ಥ ಇಲ್ಲ. ಇದು ರಾಜ್ಯದಲ್ಲಿರುವ ಒಟ್ಟು ಜನಸಂಖ್ಯೆಯ, ಎಲ್ಲ ಜಾತಿ-ಧರ್ಮಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ.
ಸಾಮಾನ್ಯವಾಗಿ ಮೀಸಲಾತಿಯ ಬಗ್ಗೆ ಚರ್ಚೆ ನಡೆದಾಗೆಲ್ಲ ಮೇಲ್ಜಾತಿಯವರಲ್ಲಿ ಬಡವರಿಲ್ಲವೇ ಎಂಬ ಪ್ರಶ್ನೆ ತೂರಿ ಬರುತ್ತದೆ. ಈ ಪ್ರಶ್ನೆ ಬಹಳ ಪ್ರಸ್ತುತವಾದುದು ಕೂಡಾ. ಖಂಡಿತ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರಲ್ಲಿ ಮಾತ್ರವಲ್ಲ, ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರಲ್ಲಿಯೂ ಬಡವರಿದ್ದಾರೆ. ಆದರೆ ಈ ಬಗ್ಗೆ ಸರ್ಕಾರದಲ್ಲಿ ಯಾವ ಮಾಹಿತಿಯೂ ಇಲ್ಲ.
ಈಗಿನ ಆರ್ಥಿಕ-ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಂಡಾಗ ದಲಿತ-ಹಿಂದುಳಿದ-ಅಲ್ಪಸಂಖ್ಯಾತರಲ್ಲಿರುವ ಬಡವರ ಸಂಖ್ಯೆ ಮಾತ್ರವಲ್ಲ, ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗರಲ್ಲಿನ ಬಡವರ ಸಂಖ್ಯೆ ಮತ್ತು ಅವರ ಸ್ಥಿತಿಗತಿಯ ಮಾಹಿತಿ ಲಭ್ಯವಾಗುತ್ತದೆ. ಅದರ ಆಧಾರದಲ್ಲಿ ಮೇಲ್ಜಾತಿಗಳಲ್ಲಿರುವ ಬಡವರ ಅಭಿವೃದ್ಧಿಗಾಗಿಯೂ ಕಾರ್ಯಕ್ರಮಗಳನ್ನು ರೂಪಿಸುವಂತೆ ಒತ್ತಡ ಹೇರಲು ಸಾಧ್ಯವಿದೆ.